Homeಮುಖಪುಟ‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ...

‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ಮೀಡಿಯಾ ಎಂದೇ ಖ್ಯಾತವಾಗಿರುವ ‘ಒಪಿ ಇಂಡಿಯಾ ಇಂಡಿಯಾ’ದ ಮುಖ್ಯ ಸಂಪಾದಕಿ ನೂಪುರ್ ಜೆ ಶರ್ಮಾ ಮತ್ತು ವೆಬ್‌ಸೈಟ್‌ನ ಸಿಇಒ ರಾಹುಲ್ ರೋಷನ್ ವಿರುದ್ಧ ಚೆನ್ನೈನ ತಿರುನಿನ್ರವೂರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಮಿಳುನಾಡಿನಲ್ಲಿ ಹಿಂದಿ ಮಾತನಾಡುವ, ವಿಶೇಷವಾಗಿ ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಕೊಲ್ಲಲಾಗುತ್ತಿದೆ ಎಂದು ‘ಒಪಿ ಇಂಡಿಯಾ’ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸಿದ್ದಾರೆ.

ಅಂತಹ ದಾಳಿಗಳಿಗೆ ಸಾಕ್ಷಿಗಳೆಂದು ಹರಿಬಿಡಲಾಗಿರುವ ಹಲವಾರು ವೀಡಿಯೊಗಳ ಅಸಲಿ ಸತ್ಯವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್ ನ್ಯೂಸ್’ ಬಯಲಿಗೆಳೆದಿದೆ.

ತಮಿಳುನಾಡು ಕಾರ್ಮಿಕ ಕಲ್ಯಾಣ ಮತ್ತು ಕೌಶಲ್ಯ ಅಭಿವೃದ್ಧಿ ಸಂಸ್ಥೆಯು ಈ ವಾರದ ಆರಂಭದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಂತಹ ದಾಳಿಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದಲ್ಲದೆ ಬಿಹಾರ ರಾಜ್ಯ ಸರ್ಕಾರವು ಈ ಕುರಿತು ತನಿಖೆ ಮಾಡಲು ತಂಡವೊಂದನ್ನು ಕಳಿಸಿತ್ತು. ಈ ಆರೋಪಗಳಲ್ಲಿ ಸತ್ಯವಿಲ್ಲ ಎಂಬುದನ್ನು ತಂಡವು ಕಂಡುಕೊಂಡಿದೆ.

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಸೂರ್ಯಪ್ರಕಾಶ್ ಅವರು ನೀಡಿದ ದೂರಿನ ಆಧಾರದ ಮೇಲೆ ನೂಪುರ್ ಜೆ ಶರ್ಮಾ ಮತ್ತು ಒಪಿ ಇಂಡಿಯಾ ಸಿಇಒ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕನಿಷ್ಠ 15 ವಲಸೆ ಕಾರ್ಮಿಕರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಮತ್ತು ಕೊಲೆಯಾದ ಕಾರ್ಮಿಕರ ಶವಗಳನ್ನು ಬಿಹಾರದ ಹಲವು ಜಿಲ್ಲೆಗಳಿಗೆ ಹಿಂತಿರುಗಿಸಲಾಗುತ್ತಿದೆ ಎಂದು ಒಪಿಇಂಡಿಯಾ ಹೇಳಿಕೊಂಡಿತ್ತು. ಈ ಆರೋಪಗಳನ್ನು ಮಾಡುತ್ತಿರುವ ಬಿಹಾರಿ ಕಾರ್ಮಿಕರೊಂದಿಗೆ ಮಾತನಾಡಿರುವುದಾಗಿ ಒಪಿ ಇಂಡಿಯಾ ಬಿಂಬಿಸಿಕೊಂಡಿತ್ತು. ಇದೇ ರೀತಿಯ ವರದಿಗಳನ್ನು ಪ್ರಕಟಿಸಿರುವ ‘ದೈನಿಕ್ ಭಾಸ್ಕರ್’ ಮಾಧ್ಯಮದ ವರದಿಗಳನ್ನು ಒಪಿಇಂಡಿಯಾ ವೆಬ್‌ಸೈಟ್ ಉಲ್ಲೇಖಿಸಿದೆ.

ತಾಲಿಬಾನಿ ಶೈಲಿಯ ದಾಳಿಯನ್ನು ಬಿಹಾರಿಗಳು ತಮಿಳುನಾಡಿನಲ್ಲಿ ಎದುರಿಸುತ್ತಾರೆ ಎಂದು ಪ್ರಮುಖ ಹಿಂದಿ ದಿನಪತ್ರಿಕೆ ‘ದೈನಿಕ್ ಭಾಸ್ಕರ್‌‌’ ಆರೋಪಿಸಿತ್ತು. ತಮಿಳುನಾಡಿನ ದಕ್ಷಿಣ ಭಾಗದಲ್ಲಿ 15 ಮಂದಿ ಬಿಹಾರಿಗಳಿಗೆ ಜೀವ ಬೆದರಿಕೆ ಇದೆ  ಎಂದು ವ್ಯಕ್ತಿಯೊಬ್ಬರು ಹೇಳಿರುವುದಾಗಿ ವರದಿ ಉಲ್ಲೇಖಿಸಿತ್ತು.

ವರದಿಯೊಂದಿಗೆ ವಿಡಿಯೊ ಲಗತ್ತಿಸಲಾಗಿದ್ದು, ಎರಡು ಗುಂಪಿನ ಪುರುಷರ ನಡುವೆ ವಾಗ್ವಾದಗಳು ನಡೆಯುತ್ತಿರುವುದನ್ನು ಅಲ್ಲಿ ಕಾಣಬಹುದಿತ್ತು. ವರದಿ ಪ್ರಕಟವಾದ ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೊತೆಯಲ್ಲಿ ಕಳವಳ ವ್ಯಕ್ತಪಡಿಸಿವ ಘಟನೆಯೂ ನಡೆದಿದೆ.

ದೈನಿಕ್ ಭಾಸ್ಕರ್‌ ವರದಿಗೆ ಸಂಬಂಧಿಸಿದಂತೆ ಆಲ್ಟ್‌ನ್ಯೂಸ್‌ ವರದಿ ಮಾಡಿದ್ದು, “ವ್ಯಯಕ್ತಿಕ ಅಂದರೆ ವಿವಾಹೇತರ ಸಂಬಂಧದ ಕಾರಣ ನಡೆದಿರುವ ಕೊಲೆಗಳನ್ನು ಬಿಹಾರಿ ಕಾರ್ಮಿಕರ ಕೊಲೆಗೆ ಥಳುಕು ಹಾಕಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

ಮುಖ್ಯವಾಗಿ ವೈರಲ್ ಆದ ಐದು ವಿಡಿಯೊಗಳನ್ನು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, ಇಲ್ಲಿನ ನಾಲ್ಕು ವಿಡಿಯೊಗಳು ದಾಳಿಯ ಉದ್ದೇಶವನ್ನು ಹೊಂದಿಲ್ಲ. ವಲಸೆ ಕಾರ್ಮಿಕರಿಗೆ ಸಂಬಂಧಪಡದ ಬೇರ್‍ಯಾವುದೋ ಹಳೆಯ ವಿಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಬಯಲಿಗೆಳೆದಿದೆ.

ಆಲ್ಟ್ ನ್ಯೂಸ್ ಪರಿಶೀಲಿಸಿದ ಎರಡು ವೀಡಿಯೊಗಳು ತಮಿಳುನಾಡಿನ ಹೊರಗೆ ನಡೆದ ಘಟನೆಗಳಿಗೆ ಸಂಬಂಧಿಸಿವೆ. ಐದನೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೈಲೇಂದ್ರ ಬಾಬು ಅವರು ಹೇಳಿಕೆ ನೀಡಿದ್ದು, “ನಕಲಿ” ಎಂದು ಸ್ಪಷ್ಟಪಡಿಸಿದ್ದಾರೆ.

ಸ್ವತಂತ್ರ ಮಾಧ್ಯಮವಾದ ‘ಆಲ್ಟ್‌ನ್ಯೂಸ್’ ಮಾಡಿರುವ ವರದಿಗಳಿಗೆ ತಮಿಳುನಾಡಿನ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ‘ತಮಿಳುನಾಡಿನ ಕುರಿತು ಹಬ್ಬಿಸಲಾಗುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸರವಾಗಿತ್ತು. ಆಲ್ಟ್‌ನ್ಯೂಸ್ ಸತ್ಯಗಳನ್ನು ಬಯಲಿಗೆಳೆದು ತಮಿಳು ಜನತೆಯ ಮೇಲಿನ ಅಪವಾದಗಳಿಗೆ ಉತ್ತರ ಕೊಟ್ಟಿದೆ’ ಎಂಬ ಶ್ಲಾಘನೆಯನ್ನು ಟ್ವೀಟರ್‌ನಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಜೊತೆಗೆ ‘ಆಲ್ಟ್‌ನ್ಯೂಸ್‌’ಗೆ ಸ್ವಯಂಪ್ರೇರಣೆಯಿಂದ ದೇಣಿಗೆಯನ್ನೂ ತಮಿಳುನಾಡಿನ ಜನತೆ ನೀಡಲಾರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...