Homeಮುಖಪುಟ‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ...

‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ಮೀಡಿಯಾ ಎಂದೇ ಖ್ಯಾತವಾಗಿರುವ ‘ಒಪಿ ಇಂಡಿಯಾ ಇಂಡಿಯಾ’ದ ಮುಖ್ಯ ಸಂಪಾದಕಿ ನೂಪುರ್ ಜೆ ಶರ್ಮಾ ಮತ್ತು ವೆಬ್‌ಸೈಟ್‌ನ ಸಿಇಒ ರಾಹುಲ್ ರೋಷನ್ ವಿರುದ್ಧ ಚೆನ್ನೈನ ತಿರುನಿನ್ರವೂರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಮಿಳುನಾಡಿನಲ್ಲಿ ಹಿಂದಿ ಮಾತನಾಡುವ, ವಿಶೇಷವಾಗಿ ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಕೊಲ್ಲಲಾಗುತ್ತಿದೆ ಎಂದು ‘ಒಪಿ ಇಂಡಿಯಾ’ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸಿದ್ದಾರೆ.

ಅಂತಹ ದಾಳಿಗಳಿಗೆ ಸಾಕ್ಷಿಗಳೆಂದು ಹರಿಬಿಡಲಾಗಿರುವ ಹಲವಾರು ವೀಡಿಯೊಗಳ ಅಸಲಿ ಸತ್ಯವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್ ನ್ಯೂಸ್’ ಬಯಲಿಗೆಳೆದಿದೆ.

ತಮಿಳುನಾಡು ಕಾರ್ಮಿಕ ಕಲ್ಯಾಣ ಮತ್ತು ಕೌಶಲ್ಯ ಅಭಿವೃದ್ಧಿ ಸಂಸ್ಥೆಯು ಈ ವಾರದ ಆರಂಭದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಂತಹ ದಾಳಿಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದಲ್ಲದೆ ಬಿಹಾರ ರಾಜ್ಯ ಸರ್ಕಾರವು ಈ ಕುರಿತು ತನಿಖೆ ಮಾಡಲು ತಂಡವೊಂದನ್ನು ಕಳಿಸಿತ್ತು. ಈ ಆರೋಪಗಳಲ್ಲಿ ಸತ್ಯವಿಲ್ಲ ಎಂಬುದನ್ನು ತಂಡವು ಕಂಡುಕೊಂಡಿದೆ.

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಸೂರ್ಯಪ್ರಕಾಶ್ ಅವರು ನೀಡಿದ ದೂರಿನ ಆಧಾರದ ಮೇಲೆ ನೂಪುರ್ ಜೆ ಶರ್ಮಾ ಮತ್ತು ಒಪಿ ಇಂಡಿಯಾ ಸಿಇಒ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕನಿಷ್ಠ 15 ವಲಸೆ ಕಾರ್ಮಿಕರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಮತ್ತು ಕೊಲೆಯಾದ ಕಾರ್ಮಿಕರ ಶವಗಳನ್ನು ಬಿಹಾರದ ಹಲವು ಜಿಲ್ಲೆಗಳಿಗೆ ಹಿಂತಿರುಗಿಸಲಾಗುತ್ತಿದೆ ಎಂದು ಒಪಿಇಂಡಿಯಾ ಹೇಳಿಕೊಂಡಿತ್ತು. ಈ ಆರೋಪಗಳನ್ನು ಮಾಡುತ್ತಿರುವ ಬಿಹಾರಿ ಕಾರ್ಮಿಕರೊಂದಿಗೆ ಮಾತನಾಡಿರುವುದಾಗಿ ಒಪಿ ಇಂಡಿಯಾ ಬಿಂಬಿಸಿಕೊಂಡಿತ್ತು. ಇದೇ ರೀತಿಯ ವರದಿಗಳನ್ನು ಪ್ರಕಟಿಸಿರುವ ‘ದೈನಿಕ್ ಭಾಸ್ಕರ್’ ಮಾಧ್ಯಮದ ವರದಿಗಳನ್ನು ಒಪಿಇಂಡಿಯಾ ವೆಬ್‌ಸೈಟ್ ಉಲ್ಲೇಖಿಸಿದೆ.

ತಾಲಿಬಾನಿ ಶೈಲಿಯ ದಾಳಿಯನ್ನು ಬಿಹಾರಿಗಳು ತಮಿಳುನಾಡಿನಲ್ಲಿ ಎದುರಿಸುತ್ತಾರೆ ಎಂದು ಪ್ರಮುಖ ಹಿಂದಿ ದಿನಪತ್ರಿಕೆ ‘ದೈನಿಕ್ ಭಾಸ್ಕರ್‌‌’ ಆರೋಪಿಸಿತ್ತು. ತಮಿಳುನಾಡಿನ ದಕ್ಷಿಣ ಭಾಗದಲ್ಲಿ 15 ಮಂದಿ ಬಿಹಾರಿಗಳಿಗೆ ಜೀವ ಬೆದರಿಕೆ ಇದೆ  ಎಂದು ವ್ಯಕ್ತಿಯೊಬ್ಬರು ಹೇಳಿರುವುದಾಗಿ ವರದಿ ಉಲ್ಲೇಖಿಸಿತ್ತು.

ವರದಿಯೊಂದಿಗೆ ವಿಡಿಯೊ ಲಗತ್ತಿಸಲಾಗಿದ್ದು, ಎರಡು ಗುಂಪಿನ ಪುರುಷರ ನಡುವೆ ವಾಗ್ವಾದಗಳು ನಡೆಯುತ್ತಿರುವುದನ್ನು ಅಲ್ಲಿ ಕಾಣಬಹುದಿತ್ತು. ವರದಿ ಪ್ರಕಟವಾದ ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೊತೆಯಲ್ಲಿ ಕಳವಳ ವ್ಯಕ್ತಪಡಿಸಿವ ಘಟನೆಯೂ ನಡೆದಿದೆ.

ದೈನಿಕ್ ಭಾಸ್ಕರ್‌ ವರದಿಗೆ ಸಂಬಂಧಿಸಿದಂತೆ ಆಲ್ಟ್‌ನ್ಯೂಸ್‌ ವರದಿ ಮಾಡಿದ್ದು, “ವ್ಯಯಕ್ತಿಕ ಅಂದರೆ ವಿವಾಹೇತರ ಸಂಬಂಧದ ಕಾರಣ ನಡೆದಿರುವ ಕೊಲೆಗಳನ್ನು ಬಿಹಾರಿ ಕಾರ್ಮಿಕರ ಕೊಲೆಗೆ ಥಳುಕು ಹಾಕಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

ಮುಖ್ಯವಾಗಿ ವೈರಲ್ ಆದ ಐದು ವಿಡಿಯೊಗಳನ್ನು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, ಇಲ್ಲಿನ ನಾಲ್ಕು ವಿಡಿಯೊಗಳು ದಾಳಿಯ ಉದ್ದೇಶವನ್ನು ಹೊಂದಿಲ್ಲ. ವಲಸೆ ಕಾರ್ಮಿಕರಿಗೆ ಸಂಬಂಧಪಡದ ಬೇರ್‍ಯಾವುದೋ ಹಳೆಯ ವಿಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಬಯಲಿಗೆಳೆದಿದೆ.

ಆಲ್ಟ್ ನ್ಯೂಸ್ ಪರಿಶೀಲಿಸಿದ ಎರಡು ವೀಡಿಯೊಗಳು ತಮಿಳುನಾಡಿನ ಹೊರಗೆ ನಡೆದ ಘಟನೆಗಳಿಗೆ ಸಂಬಂಧಿಸಿವೆ. ಐದನೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೈಲೇಂದ್ರ ಬಾಬು ಅವರು ಹೇಳಿಕೆ ನೀಡಿದ್ದು, “ನಕಲಿ” ಎಂದು ಸ್ಪಷ್ಟಪಡಿಸಿದ್ದಾರೆ.

ಸ್ವತಂತ್ರ ಮಾಧ್ಯಮವಾದ ‘ಆಲ್ಟ್‌ನ್ಯೂಸ್’ ಮಾಡಿರುವ ವರದಿಗಳಿಗೆ ತಮಿಳುನಾಡಿನ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ‘ತಮಿಳುನಾಡಿನ ಕುರಿತು ಹಬ್ಬಿಸಲಾಗುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸರವಾಗಿತ್ತು. ಆಲ್ಟ್‌ನ್ಯೂಸ್ ಸತ್ಯಗಳನ್ನು ಬಯಲಿಗೆಳೆದು ತಮಿಳು ಜನತೆಯ ಮೇಲಿನ ಅಪವಾದಗಳಿಗೆ ಉತ್ತರ ಕೊಟ್ಟಿದೆ’ ಎಂಬ ಶ್ಲಾಘನೆಯನ್ನು ಟ್ವೀಟರ್‌ನಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಜೊತೆಗೆ ‘ಆಲ್ಟ್‌ನ್ಯೂಸ್‌’ಗೆ ಸ್ವಯಂಪ್ರೇರಣೆಯಿಂದ ದೇಣಿಗೆಯನ್ನೂ ತಮಿಳುನಾಡಿನ ಜನತೆ ನೀಡಲಾರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...