Homeಕರ್ನಾಟಕದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

ದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ತುಮಕೂರಿನಲ್ಲಿ ಆಯೋಜಿಸಿದೆ. ಮಂಗಳವಾರ ಕೇರಳದ ಶಾಸಕಿ, ಮಾಜಿ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಅವರು ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆಯ ಹಕ್ಕೊತ್ತಾಯ ಜಾಥಾ ಮತ್ತು ಬೃಹತ್‌ ಸಮಾವೇಶಕ್ಕೆ ಚಾಲನೆ ನೀಡಿದರು.

”ಎಲ್ಲ ಮಹಿಳೆಯರ ಐಕ್ಯತೆ ಚಿರಾಯುವಾಗಲಿ, ನಾವೆಲ್ಲರೂ ಒಂದಾಗಿ ನ್ಯಾಯಕ್ಕಾಗಿ, ಮಾನವ ಹಕ್ಕುಗಳಿಗಾಗಿ ಹೋರಾಡುತ್ತೇವೆ” ಎಂದು ಘೋಷಣೆ ಕೂಗುತ್ತಾ ಕೆಕೆ ಶೈಲಜಾರವರು ಸಮಾವೇಶಕ್ಕೆ ಚಾಲನೆ ನೀಡಿದರು. ‘ಸಂವಿಧಾನವೇ ಉಸಿರು ಬಹುತ್ವವೇ ಬದುಕು’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಈ ಸಮಾವೇಶವನ್ನು ಆಯೋಜಿಸಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ ಆರೋಪ; ಕೇರಳದ ಏಷ್ಯಾನೆಟ್ ನ್ಯೂಸ್‌ ಕಚೇರಿ ಮೇಲೆ ಪೊಲೀಸ್ ರೈಡ್‌

ಸಮಾವೇಶ ಉದ್ಘಾಟಿಸಿದ ಬಳಿಕ ಮಾತನಾಡಿದ  ಶೈಲಜಾ ಟೀಚರ್, ”ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಹರಣವಾಗುತ್ತಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದರು.

ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ನಿಯಂತ್ರಿಸುವ ಧಾರ್ಮಿಕ ಮೂಲಭೂತವಾದಿಗಳು ಶೈಲಜಾ ಟೀಚರ್ ಕಳವಳ

”ಇಂದು ಮನುಸ್ಮೃತಿಯ ಪರವಾದ ಆಡಳಿತ ನಡೆಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ನಿರಂತರವಾಗಿ ಕಿತ್ತುಕೊಳ್ಳಲಾಗುತ್ತಿದೆ. ಇಂದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಆಡಳಿತ ನಡೆಯುತ್ತಿದೆ. ಧಾರ್ಮಿಕ ಮೂಲಭೂತವಾದ ನಮ್ಮ ದೇಶದ ಬಹಳ ದೊಡ್ಡ ಶತ್ರುವಾಗಿದೆ. ಬಿಲ್ಕಿಸ್‌ಬಾನು ಪ್ರಕರಣದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಗುಜರಾತ್‌ ಸರ್ಕಾರ ಇಂತಹ ಕೊಲೆಗಡುಕರು ಮತ್ತು ಅತ್ಯಾಚಾರಿಗಳನ್ನು ಸನ್ನಡತೆ ಆಧಾರದ ಮೇಲೆ ಅವರನ್ನು ಉತ್ತಮ ವ್ಯಕ್ತಿಗಳು ಎಂದು ಬಿಡುಗಡೆ ಮಾಡಿದೆ. ಹೀಗಾಗಿ ಅವರು ಇಂದು ಮುಕ್ತವಾಗಿ ಎಲ್ಲೆಡೆ ತಿರುಗಾಡಿಕೊಂಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

”ಭಾರತದಲ್ಲಿ ಇಂದು ಮಕ್ಕಳ ಸಾವುಗಳು, ಶಿಶು ಮರಣ, ಹೆರಿಗೆಯ ಸಂದರ್ಭದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಾವುಗಳು ಸಂಭವಿಸುತ್ತಿವೆ. ನಿರಂತರ ಹೋರಾಟದ ಫಲವಾಗಿ ಶಿಶು ಮತ್ತು ತಾಯಿ ಮರಣದ ಪ್ರಕರಣಗಳು ಕಡಿಮೆ ಆಗಿವೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯ. ಊಳಿಗಮಾನ್ಯ ಮತ್ತು ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧವಾಗಿ ತಮ್ಮ ಎಲ್ಲ ಬಗೆಯ ಹಕ್ಕುಗಳಿಗಾಗಿ ತಮಗೆ ಬೇಕಾಗಿರುವ ಶಿಕ್ಷಣ, ಮತದಾನ, ಸಮಾನತೆ, ಸಮಾನವಾದ ಅವಕಾಶಗಳ ಹಕ್ಕಿಗಾಗಿ ಮಹಿಳೆಯರು ಹೋರಾಟ ಮಾಡಿದ ಫಲವಾಗಿ ನಾವು ಇಲ್ಲಿ ಸೇರಿ ಚರ್ಚಿಸಲು ಸಾಧ್ಯವಾಗಿದೆ” ಎಂದರು.

”ಆಸ್ತಿ ಉಳ್ಳವರಾಗಿರಲಿ ಅಥವಾ ಇಲ್ಲದವರಾಗಿರಲಿ ಎಲ್ಲ ಮಹಿಳೆಯರು ಸಮಾನವಾಗಿರಬೇಕು. ಸಮಾನವಾದಂತಹ ಹಕ್ಕುಗಳಿರಬೇಕು. ಶಿಕ್ಷಣ, ಉದ್ಯೋಗ ಮತ್ತು ಮತದಾನಕ್ಕೆ ಪ್ರಬಲ ಹೋರಾಟ ನಡೆಯಿತು” ಎಂಬುದನ್ನು ಮರೆಯಲಾಗದು” ಎಂದು ಹೇಳಿದರು.

”ಭಾರತದ ಸಂವಿಧಾನ ಅತ್ಯದ್ಭುತ ಸಂವಿಧಾನವಾಗಿದೆ. ಇಡೀ ಪ್ರಪಂಚದಲ್ಲಿರುವಂತಹ ಅತ್ಯುತ್ತಮ ಪ್ರಜಾತಾಂತ್ರಿಕ ಮೌಲ್ಯಗಳನ್ನು ಇಟ್ಟುಕೊಂಡು ನಮ್ಮ ಸಂವಿಧಾನ ರಚನೆಯಾಗಿದೆ. ಇಂತಹ ಸಂವಿಧಾನ ಇಂದು ಅಪಾಯದಲ್ಲಿದ್ದು ಇದನ್ನು ಸಂರಕ್ಷಣೆ ಮಾಡಬೇಕಾಗಿದೆ” ಎಂದು ಶೈಲಜಾ ಎಚ್ಚರಿಸಿದರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ವಿದ್ಯಾ ಕುಮಾರಿ ಅವರು, ”ಮಹಿಳೆ ಉನ್ನತ ಉದ್ಯೋಗದಲ್ಲಿದ್ದಾರೆ, ಸಾಧನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಗೌರವ ಸಿಗಬಾರದು. ನಮ್ಮ ಸಮಾಜದ ಎಲ್ಲ ಮಹಿಳೆಯರಿಗೂ ಗೌರವ ಸಿಗುವಂತಾಗಬೇಕು. ಕುಟುಂಬ ನಿರ್ವಹಣೆ ಎಂಬುದು ಸುಲಭದ ಮಾತಲ್ಲ. ಅದಕ್ಕಾಗಿ ಇಡೀ ಬದುಕನ್ನು ಸವೆಸುವ ಎಲ್ಲ ಮಹಿಳೆಯರನ್ನು ಇಡೀ ಸಮಾಜ ಗೌರವಿಸಬೇಕು. ಆಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ” ಎಂದು ಹೇಳಿದರು.

ಈ ಮೆರವಣಿಗೆ ಉದ್ಘಾಟನೆಗೂ ಮುನ್ನ ಒಕ್ಕೂಟದ ಸಂಗಾತಿಗಳೆಲ್ಲರೂ ಸೇರಿ ‘ತೂರಬೇಡಿ ಗಾಳಿಗೆ ಹೆಣ್ತನದ ಘನತೆ’ ಆಶಯ ಗೀತೆ ಹಾಡಿದರು. ಟೌನ್‌ಹಾಲ್‌ ಸರ್ಕಲ್‌ನಿಂದ ಅಮಾನಿಕೆರೆ ಗಾಜಿನಮನೆಯವರೆಗೂ ವಿದ್ಯಾರ್ಥಿಗಳು, ಮಹಿಳೆಯರು, ಬಾಲ್ಯ ವಿವಾಹ, ಅತ್ಯಾಚಾರ, ಕೌಟುಂಬಿಕ ಹಿಂಸೆಯ ವಿರೋಧಿಸಿ ಬರೆದಿದ್ದ ಪ್ಲಕಾರ್ಡ್ಸ್‌ ಹಿಡಿದು ಮೆರವಣಿಗೆ ನಡೆಸಿದರು. ನಾನಾ ಶಾಲಾ ಮಕ್ಕಳು ಕೋಲಾಟ, ನೃತ್ಯದ ಮೂಲಕ ಅರಿವು ಮೂಡಿಸಿದರೆ, ‘ಒಂದಲ್ಲ ಒಂದು ದಿನ ಈ ನೆಲದ ಹೆಣ್ಣುಗಳು ಮೆರವಣಿಗೆ ಹೊರಡುತ್ತಾರೆ’ ಎಂದು ಹಾಡುತ್ತಾ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಜಾಥಾದಲ್ಲಿ ಹಿರಿಯ ಪತ್ರಕರ್ತೆ ಡಾ. ವಿಜಯಾ, ಸಾಮಾಜಿಕ ಹೋರಾಟಗಾರ್ತಿ ಅಕ್ಕೈಪದ್ಮಸಾಲಿ, ಸಾಹಿತಿ ಬಾ ಹ ರಮಾಕುಮಾರಿ, ಕರ್ನಾಟಕ ರಾಜ್ಯ ಮಹಿಳಾ ಅಲೆಮಾರಿ ಬುಡಕಟ್ಟು ಅಭಿವೃದ್ಧಿ ಮಹಾಸಭಾದ ಹಂದಿಜೋಗಿ ರಾಮಕ್ಕ, ಪೌರಕಾರ್ಮಿಕ ಸಂಘಟನೆಯ ಶ್ವೇತಾ, ಬೀಡಿ ಕಾರ್ಮಿಕರ ಸಂಘದ ಶಹತಾಜ್‌, ಆಸಿಡ್‌ ವಾರಿಯರ್‌ ಜಯಲಕ್ಷ್ಮಿ ಚಿಕ್ಕನಾಯಕನಹಳ್ಳಿ ಹಾಗೂ ಲಿಂಗಾಂತರಿ ಸಮುದಾಯದ ದೀಪಿಕಾ ಭಾಗಿಯಾಗಿದ್ದರು.

ಇದನ್ನೂ ಓದಿ: ಕೆಲಸದ ಅವಧಿ ಹೆಚ್ಚಳ: ಐತಿಹಾಸಿಕ ಹೋರಾಟದ ಆಶಯ, ಯಶಸ್ಸು ಎರಡನ್ನೂ ಈ ಕಾನೂನು ನುಂಗಿ ಹಾಕಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...