Homeಮುಖಪುಟತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

- Advertisement -
- Advertisement -

ತಮಿಳುನಾಡಿನಲ್ಲಿ ಬುಧವಾರವೂ ಬಿಜೆಪಿಯ ಪಕ್ಷಾಂತರ ಪರ್ವ ಮುಂದುವರಿದಿದ್ದು, ಐಟಿ ವಿಭಾಗದ ಪದಾಧಿಕಾರಿ ಸೇರಿದಂತೆ ಪಕ್ಷದ 13 ಪದಾಧಿಕಾರಿಗಳು ಕೇಸರಿ ಪಕ್ಷವನ್ನು ತೊರೆದಿದ್ದಾರೆ.

ಬಿಜೆಪಿ ಪಕ್ಷದ ಪಶ್ಚಿಮ ಚೆನ್ನೈ ಘಟಕದಲ್ಲಿ ಐಟಿ ವಿಭಾಗದ ಮುಖ್ಯಸ್ಥರಾಗಿದ್ದ ಓರತಿ ಅನ್ಬರಸು ಮತ್ತು ಇತರ 12 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಸೇರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ Orathi Anbarasu ಅವರ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನಲೆಯಲ್ಲಿ ಪಕ್ಷದ ಐಟಿ ವಿಭಾಗದ ಮುಖ್ಯಸ್ಮರಾಗಿದ್ದ ಸಿಟಿ ಆರ್ ನಿರ್ಮಲ್ ಕುಮಾರ್ ಅವರು ಕೇಸರಿ ಪಕ್ಷಕ್ಕೆ ರಾಜೀನಾಮೆ ನೀಡಿ ಎಐಎಡಿಎಂಕೆ ಸೇರಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿಯಿಂದ 13 ಜನರು ಪಕ್ಷ ತೊರೆದಿದ್ದಾರೆ.

ಈ 13 ಜನರು ಕೂಡ ಈಗ ತಮ್ಮ “ನಾಯಕ” ಮತ್ತು ಮಾಜಿ ರಾಜ್ಯ ಐಟಿ ವಿಭಾಗದ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಅವರ ರಾಜಕೀಯ ಮಾರ್ಗವನ್ನು ಅನುಸರಿಸಿದ್ದಾರೆ. ನಿರ್ಮಲ್ ಕುಮಾರ್ ಅವರು ಬಿಜೆಪಿಯನ್ನು ತೊರೆದು ಎಐಎಡಿಎಂಕೆಗೆ ಸೇರಿದ್ದರು. ಪಕ್ಷದ ಇತರ ಕೆಲವು ಪದಾಧಿಕಾರಿಗಳು ಸಹ ಬಿಜೆಪಿ ತೊರೆದು ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಗೆ ಸೇರ್ಪಡೆಗೊಂಡರು, ಇದು ಎರಡು ಮಿತ್ರಪಕ್ಷಗಳ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ‘ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ’: ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

”ದೀರ್ಘಕಾಲದಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಸ್ನಾನಮಾನ ನಿರೀಕ್ಷೆ ಮಾಡಿಲ್ಲ ಎಂಬುದು ಜನರಿಗೆ ಗೊತ್ತಿದ. ಆದರ ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಘಟನೆಗಳನ್ನು ಪರಿಗಣಿಸಿ ಪಕ್ಷದಲ್ಲಿನ “ಪಿತೂರಿಗಳಿಗೆ” ಬಲಿಯಾಗಲು ಬಯಸುವುದಿಲ್ಲ ಆದ್ದರಿಂದ ಬಿಜೆಪಿಯನ್ನು ತೊರೆಯುತ್ತಿದ್ದೇನೆ” ಎಂದು ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಓರತಿ ಅನ್ಸರಸು ಅವರು ಹೇಳಿದ್ದಾರೆ.

ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ”ಬಿಜೆಪಿಯಲ್ಲಿನ ಬೆಳವಣಿಗೆಗಳನ್ನು ಇತರ ಪಕ್ಷಗಳು ಸೂಕ್ಷ್ಮವಾಗಿ ಗಮನಿಸುತ್ತಿರುವುದರಿಂದ, ಕೆಲವು ಎರಡನೇ ಅಥವಾ ಮೂರನೇ ಹಂತದ ನಾಯಕರು ಪಕ್ಷವನ್ನು ತೊರೆಯುವ ವಿಷಯವು ದೊಡ್ಡ ಆಯಾಮವನ್ನು ಪಡೆದುಕೊಂಡಿದೆ” ಎಂದು ಹೇಳಿದರು.

”ಕೆಲವು ದೊಡ್ಡ ನಾಯಕರು ಬಿಜೆಪಿ ತೊರೆದು ಮೂರು ತಿಂಗಳ ನಂತರ ದೊಡ್ಡ ನಾಯಕರು ಪಕ್ಷಕ್ಕೆ ಬರುವ ಸಾಧ್ಯತೆಗಳಿವೆ ಎಂದರು. ನಾನು ಅಣ್ಣಾಮಲೈ ಹೆಸರಿನ ಹಿಂದೆ ಎಂಪಿ ಅಥವಾ ಎಂಎಲ್‌ಎ ಟ್ಯಾಗ್ ಹೊಂದಲು ಬಿಜೆಪಿಗೆ ಸೇರಿಲ್ಲ, ಪಕ್ಷದ ಬೆಳವಣಿಗೆಗಾಗಿ ಸೇರಿದ್ದಾನೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...