Homeಕರ್ನಾಟಕಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

- Advertisement -
- Advertisement -

”ಏನಮ್ಮ ನಿನ್ನ ಹೆಸರು, ಹಣೆಗೆ ಯಾಕೆ ಕುಂಕುಮ ಹಾಕಿಲ್ಲ? ಹಣ ಕೊಟ್ಟು ಬಲವಂತವಾಗಿ ಮತಾಂತರ ಮಾಡಿದ್ದಾರೆ ಅಲ್ಲವಾ? ವೈಷ್ಣವಿ ಎಂಬುದಾಗಿ ಅಂಗಡಿ ಹೆಸರನ್ನು ಯಾಕೆ ಇಟ್ಟುಕೊಂಡಿದ್ದೀಯಾ? ಯಾರೊ ಕಾಸು ಕೊಡುತ್ತಾರೆ ಅಂತ ಸುಜಾತ ಅಂತ ಹೆಸರು ಇಟ್ಟುಕೊಂಡಿದ್ದೀಯಾ? ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್ ಸೆನ್ಸ್ ಇಲ್ಲ. ತಂದೆ ಹೆಸರು ಬದಲಾಯಿಸುತ್ತೀಯಾ ನೀನು? ಅದನ್ನೆಲ್ಲ ಇಟ್ಟುಕೊಳ್ಳುವುದಕ್ಕೆ ಯೋಗ್ಯತೆ ಇಲ್ಲ ನಿನಗೆ..”- ಹೀಗೆ ಕೋಲಾರ ಸಂಸದ ಮುನಿಸ್ವಾಮಿಯವರು ದುಡಿಯುವ ಮಹಿಳೆಯೊಬ್ಬರನ್ನು ನಿಂದಿಸಿದ್ದಾರೆ.

ಸಾಂವಿಧಾನಿಕ ಮೌಲ್ಯಗಳನ್ನು ಮರೆತು ಮುನಿಸ್ವಾಮಿ ವರ್ತಿಸಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಮುನಿಸ್ವಾಮಿಯವರ ಹೇಳಿಕೆಯನ್ನು ಹಂಚಿಕೊಂಡು ಬುದ್ಧಿಮಾತು ಹೇಳುತ್ತಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಈ ಘಟನೆ ನಡೆದಿರುವುದನ್ನು ಉಲ್ಲೇಖಿಸಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ವಕೀಲರಾದ ಅಖಿಲಾ ವಿದ್ಯಾಸಂದ್ರ ಈ ಕುರಿತು ಪೋಸ್ಟ್ ಮಾಡಿದ್ದು, “ಇಂತಹ ಅಧಿಕ ಪ್ರಸಂಗ ಮೆರೆಯಲು ಈ ಸಂಸದನಿಗೆ ಅಧಿಕಾರ ಕೊಟ್ಟವರು ಯಾರು? ಪ್ರತಿಸಲ ಮುಖ ತೊಳೆದಾಗ ಹರಿದು ಚರಂಡಿನೀರಿನೊಂದಿಗೆ ಮಿಳಿತವಾಗುವ ಕುಂಕುಮದಲ್ಲಿದೆಯೇ ಆಕೆಯ ಗಂಡನ ಜೀವ? ತಲೆಯೊಳಗೆ ಮತಿಯಿಲ್ಲದ ಕೂಪಮಂಡೂಕಗಳಿವು. ಆ ಸ್ವಾವಲಂಬಿ ಮಹಿಳೆಯರನ್ನು ಅವಮಾನಗೊಳಿಸಲೆಂದೇ ಅಂತಾರಾಷ್ಟ್ರೀಯ ಮಹಿಳಾ ದಿನದ ಆ ಕಾರ್ಯಕ್ರಮಕ್ಕೆ ಹೋಗಿದ್ದೇನು ಈ ‘ಮನು’ಜ? ಛೀ ಧಿಕ್ಕಾರವಿರಲಿ ಈತನ ವ್ಯಕ್ತಿತ್ವಕ್ಕೆ” ಎಂದಿದ್ದಾರೆ.

ಲೇಖಕಿ ಮಮತಾ ಅರಸೀಕೆರೆ ಪ್ರತಿಕ್ರಿಯಿಸಿ, “ಹಣೆಗೆ ಕುಂಕುಮ ಇಟ್ಟುಕೊಂಡಿಲ್ಲ ಎಂದು ಸಂಸದರೊಬ್ಬರು ಮಹಿಳೆಯರೊಬ್ಬರನ್ನು ದಬಾಯಿಸಿದ್ದಾರೆ. ನಿನ್ನ ಗಂಡ ಬದುಕಿದ್ದಾನೆ ತಾನೆ ಕುಂಕುಮ ಇಟ್ಟುಕೊ ಅಂದಿದ್ದಾರೆ. ಈ ಅಂಶಗಳೆಲ್ಲ ವೈಯಕ್ತಿಕ ವಿಷಯಗಳು. ಭಾರತೀಯ ಸಂಸ್ಕೃತಿ ಹೆಸರಲ್ಲಿ ಹೇರುವ ಪ್ರವೃತ್ತಿ ಸಲ್ಲದು. ಅದರಲ್ಲೂ ಹೆಣ್ಣುಮಕ್ಕಳೆಂದರೆ ಸಾಕು ಅವರನ್ನೇ ಸತತ ಗಮನಿಸುವ, ಕಾಯ್ದುಕೊಂಡಿದ್ದು ಯಾವುದಾದರೂ ವಿಷಯವನ್ನೆತ್ತಿ ತಿವಿಯುವ ಈ ಪುರುಷರ ಮನಃಸ್ಥಿತಿ ಅದ್ಯಾವಾಗ ಬದಲಾಗುವುದೊ ತಿಳಿಯದು. ಬಾಹ್ಯ ಲಕ್ಷಣಗಳು , ಸಂಕೇತಗಳ ಮೂಲಕ ಮಹಿಳೆಯರನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ನಡೆಗಳನ್ನು ಯಾವತ್ತೂ ವಿರೋಧಿಸಬೇಕು” ಎಂದು ತಿಳಿಸಿದ್ದಾರೆ.

ಮುಂದುವರಿದು, “ಸಂಸ್ಕೃತಿ ಹೆಸರಲ್ಲಿ ಮಾಡುವ ಅನಾಚಾರಗಳನ್ನು ಮೊದಲು ಬದಲಾಯಿಸಲಿ. ಅಷ್ಟಕ್ಕೂ ಸಂಸ್ಕೃತಿ ಉಳಿಸುವ ಜವಾಬುದಾರಿಕೆಯನ್ನು ಯಾರು ಯಾರಿಗೂ ಕೊಟ್ಟಿಲ್ಲ. ದಬಾಯಿಸುವ ಹಕ್ಕು ಯಾರಿಗೂ ಇಲ್ಲ. ದಬಾಯಿಸಲು, ಬದಲಾಯಿಸಲು, ಬೇಕಾದಷ್ಟು ಸಮಾಜ ಬಾಹಿರ ಅಪಸವ್ಯಗಳಿವೆ. ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳ ಬಗ್ಗೆ ಖಂಡತುಂಡವಾಗಿ ಮಾತನಾಡಲಿ ನೋಡುವ. ಅಂತಹ ಕಡೆಯೆಲ್ಲಾ ಈ ಜೋರು ಮನೋಭಾವ ಮಾಡಿ ತೋರಿಸಲಿ. ಹೊರಗೊಂದು ಒಳಗೊಂದು ಪ್ರವೃತ್ತಿಯನ್ನು ಬಿಟ್ಟು ನಡೆ ನುಡಿ ಸಮತೋಲದಲ್ಲಿಟ್ಟುಕೊಂಡಿರಲಿ ಸಾಕು ಈ ಪುರುಷವರ್ಗಗಳೆಲ್ಲ” ಎಂದಿದ್ದಾರೆ.

ಅಸ್ತಿತ್ವ ಲೀಗಲ್ ಟ್ರಸ್ಟ್ ಸಂಸ್ಥಾಪಕರು ಹಾಗೂ ವಕೀಲರಾದ ಅಂಜಲಿ ರಾಮಣ್ಣ ಪ್ರತಿಕ್ರಿಯಿಸಿ, “ಸಿರಿವಂತರು ಅವರ ಧಿರಿಸಿಗೆ match ಆಗಲ್ಲ ಅಂತ ಕುಂಕುಮ ಇಟ್ಟುಕೊಂಡಿರಲ್ಲ. ಮಧ್ಯಮದವರು matching ಬೊಟ್ಟು ಇಟ್ಟುಕೊಂಡಿರುತ್ತಾರೆ. ದುಡಿಯುವ ಮಹಿಳೆಯರು ಕುಂಕುಮ, ಬಳೆ ಏನೂ ತೊಟ್ಟಿರುವುದಿಲ್ಲ, ಅವರ ಕೈ ಬಿರುಕುಗಳಿಂದ, ಹಣೆ ಧೂಳಿನಿಂದ, ಕೂದಲು ಬಿಸಿಲಿನಿಂದ ತುಂಬಿರುತ್ತದೆ. ಇವರೆಲ್ಲರ ಗಂಡಂದಿರು ಪೂರ್ತಿ ಆಯುಷ್ಯ ಬದುಕಿದವರನ್ನು ಕಂಡಿದ್ದೇನೆ. ಸಂಸದ ಮುನಿಸ್ವಾಮಿ ಮಹಾಶಯರು ಚಿತ್ರಗುಪ್ತನ ಕೆಲಸ ಬಿಟ್ಟು ಜನರ ಜವಾಬ್ದಾರಿ ನೋಡುವುದು ಒಳಿತು” ಎಂದು ಬುದ್ಧಿ ಹೇಳಿದ್ದಾರೆ.

ಲೇಖಕಿ ಭಾರತಿ ಹೆಗಡೆಯವರು ಪ್ರತಿಕ್ರಿಯಿಸಿ, “ಪರವಾಗಿಲ್ಲ ಸಂಸದರೇ‌. ಇದು ಬಹಳ ಬೇಗ ಕಣ್ಣಿಗೆ ಬೀಳತ್ತೆ. ಹಾಸಿ ಹೊದೆಯಷ್ಟಿರುವ ಬಡತನ, ನೀರಿನ ಸಮಸ್ಯೆ, ಹೆಚ್ಚುತ್ತಾ ಇರೋ ಹೆಣ್ಣಿನ ಮೇಲಿನ ದೌರ್ಜನ್ಯ ಅತ್ಯಾಚಾರಗಳು, ಇದ್ಯಾವುದೂ ತಮ್ಮ ಗಮನಕ್ಕೆ ಬರೋದಿಲ್ಲ. ಕುಂಕುಮ ಇಟ್ಗೊಳೋದು ಬಿಡೋದು ಅವರವರ ವೈಯಕ್ತಿಕ ನಿಲುವು. ಅದಕ್ಕಾಗಿ ಸರ್ವಾಜನಿಕವಾಗಿ ಒಬ್ಬ ಮಹಿಳೆಯನ್ನು ನಿಂದಿಸಿದ ತಮ್ಮ ಕುರಿತು ಏನೆನ್ನಬೇಕು?” ಎಂದು ಪ್ರಶ್ನಿಸಿದ್ದಾರೆ.

ಪ್ರಕಾಶಕಿ ಅಕ್ಷತಾ ಹುಂಚದಕಟ್ಟೆ ಘಟನೆಯನ್ನು ಖಂಡಿಸಿದ್ದು, “ಈ ಮನಃಸ್ಥಿತಿಗೆ ಧಿಕ್ಕಾರ ಹೇಳುತ್ತಲೇ. ಇದರ ಮೂಲ ಹುಡುಕಿ ಅದನ್ನು ಸಂಪೂರ್ಣ ತೊಲಗಿಸುವ ಪ್ರಯತ್ನ ಮಾಡದೇ ಹೋದರೆ ಇಂಥ ಮನಃಸ್ಥಿತಿಗಳು ಮತ್ತೆ ಮತ್ತೆ ಎದ್ದು ನಮಗೆ ಜಾಡಿಸುವ ಸಂಭವ ಸೃಷ್ಟಿಯಾಗುತ್ತಲೇ ಇರುತ್ತದೆ. ಇದು ನನ್ನ ಪ್ರಕಾರ ಈ ಮಹನೀಯರ ಹೆಗಲ ಮೇಲಿಟ್ಟು ಬೇರೆಯವರು ಗುರಿ ಇಟ್ಟು ಹೊಡೆದ ಪಿಸ್ತೂಲ್. ಹೆಗಲು ಕೊಟ್ಟವರನ್ನು ಧಿಕ್ಕರಿಸುತ್ತಲೇ , ಬೇರೆಯವರ ಹೆಗಲ ಮೇಲೆ ತಮ್ಮ ಸಿದ್ಧಾಂತದ ಗುರಿಯನ್ನು ಇಟ್ಟು ಹೊಡೆವ ಮನಸ್ಥಿತಿಯನ್ನು ಸಂಪೂರ್ಣ ಧಿಕ್ಕರಿಸಬೇಕಾಗಿದೆ. ಮಹಿಳೆಯರ ಸ್ವಯಂ ಅಸ್ಮಿತೆಯನ್ನು ಒಪ್ಪದ ಎಲ್ಲ ಜಾತಿ ಧರ್ಮದ ಮೂಲಭೂತವಾದಿ ಮನಃಸ್ಥಿತಿಗಳಿಗೆ ಧಿಕ್ಕಾರ ಹೇಳಬೇಕಾಗಿದೆ” ಎಂದಿದ್ದಾರೆ.

ಪ್ರೊ.ಪುರುಷೋತ್ತಮ ಬಿಳಿಮಲೆಯವರು ಹೀಗೆ ಪೋಸ್ಟ್ ಮಾಡಿದ್ದಾರೆ:

ಅಯ್ಯಾ ಮುನಿಸ್ವಾಮೀ,
ಬಡ ಮಹಿಳೆಯರ ಕುಂಕುಮ ಬೆವರಲ್ಲಿ ಕರಗಿ ಹೋಗುತ್ತೆ.
ಕುಂಕುಮ ತರಲು ಮತ್ತೆ ಗಂಡನಿಗೆ ಹೇಳಬೇಕು,
ನಿನ್ನ ಕುಂಕುಮ ನಿನ್ನ ಹಣೆಯಲಿ ಭದ್ರವಾಗಿರಲಿ
ಕಂಡ ಕಂಡವರಿಗೆಲ್ಲ ನಾಮ ಹಾಕಲು ಬೇಕಾಗಬಹುದು ನಿನಗೆ
ದುಡಿವ ಮಹಿಳೆಯ ಬಳೆಗಳು ಕೆಲಸದ ನಡುವೆ ಒಡೆದು ಚೂರಾಗುತ್ತವೆ.
ಮತ್ತೆ ಕೊಳ್ಳಲು ಊರ ಜಾತ್ರೆಗೆ ಕಾಯಬೇಕು.
ಹಬ್ಬದಲಿ ಬಳೆಮಾರುವನಿಗೆ ತಡೆ ಒಡ್ಡಲಾಗಿದೆಯಂತೆ
ಈಗ ನಿನ್ನ ಬಳೆಗಳ ನೀನೇ ಇಟ್ಟುಕೋ
ಜಾತಿ ಮತಗಳ ಹೆಸರಿನಲಿ ಜನಗಳಿಗೆ ತೊಡಿಸಲು ಬೇಕಾಗಬಹುದು ನಿನಗೆ
ತಾಯಂದಿರ ಹೊಟ್ಟೆ ಬೆನ್ನಿಗಂಟಿದ್ದು ನಿನಗೆ ಕಾಣಲಿಲ್ಲ
ಎಣ್ಣೆಯಿಲ್ಲದೆ ಅವರ ನೆತ್ತಿ ಒಣಗಿದ್ದು ನಿನಗೆ ಗೊತ್ತಿಲ್ಲ
ಗುಡಿಸಲುಗಳು ಸೋರುತ್ತಿರುವುದ ನೀನು ನೋಡಲಿಲ್ಲ,
ಮಕ್ಕಳು ಶಾಲೆಕಾಣದ ಬಗೆಗೆ ನಿನಗೆ ಅರಿವು ಮೂಡಲಿಲ್ಲ.
ವಯಸಾದರೂ ನಿನಗೆ ತಾಯಿಯ ಮುಖ ದರ್ಶನವಾಗಲೇ ಇಲ್ಲ.

ಕವಿತಾ ಕವಿ ಎಂಬವರು ಪ್ರತಿಕ್ರಿಯಿಸಿ, “ನನ್ನಂಥವರನ್ನು ಕೇಳಬೇಕಿತ್ತು. ಗ್ರಹಚಾರ ಬಿಡಿಸ್ತಿದ್ದೆ. ಜನಪ್ರತಿನಿಧಿಯಾಗಿರುವುದು ಜನಸೇವೆ ಮಾಡಲೆಂದೇ ಹೊರತು ದಬ್ಬಾಳಿಕೆ ನಡೆಸಲು ಅಲ್ಲ. ಮೊದಲು ನಿಮ್ಮನ್ನು ಗಾದಿಗೇರಿಸಿದ ಸಂವಿಧಾನ ಓದಿ. ನಂತರ ಮತ ಕೇಳಲು ಬನ್ನಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...