Homeಮುಖಪುಟವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

ವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

- Advertisement -
- Advertisement -

ರಾಜ್ಯಸಭಾ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಕಚೇರಿಯಲ್ಲಿರುವ ಎಂಟು ಅಧಿಕಾರಿಗಳನ್ನು ಸಂಸತ್ತಿನ ಮೇಲ್ಮನೆಯ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾಯಿ ಸಮಿತಿಗಳು ಮತ್ತು ಇತರ ಸಂಸದೀಯ ಸಮಿತಿಗಳಿಗೆ ನೇಮಕ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಜಗದೀಪ್ ಧನಕರ್ ಅವರು ತಮ್ಮ ಕಚೇರಿಯ ಸಿಬ್ಬಂದಿಗಳನ್ನು 12 ಸಂಸದೀಯ ಸ್ಥಾಯಿ ಸಮಿತಿಗಳು ಮತ್ತು ಎಂಟು ಇಲಾಖಾ ಸ್ಥಾಯಿ ಸಮಿತಿಗಳಿಗೆ  ನೇಮಿಸಿರುವ ನಿರ್ಧಾರವನ್ನು ಟೀಕಾಕಾರರು ಮತ್ತು ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದ್ದಾರೆ. ಇದು ‘ಸಾಂಸ್ಥಿಕ ವಿಧ್ವಂಸಕತೆ’ ಮತ್ತು ‘ಕಾನೂನುಬಾಹಿರ’ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ್ದು, ಜಗದೀಪ್ ಧನಕರ್ ಅವರ ಕಚೇರಿಯ ಸಿಬ್ಬಂದಿಗಳಾದ, ವಿಶೇಷ ಕರ್ತವ್ಯದ ಅಧಿಕಾರಿ (OSD) ರಾಜೇಶ್ ಎನ್ ನಾಯಕ್, ಖಾಸಗಿ ಕಾರ್ಯದರ್ಶಿ (PS) ಸುಜೀತ್ ಕುಮಾರ್, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಂಜಯ್ ವರ್ಮಾ ಮತ್ತು OSD ಅಭ್ಯುದಯ್ ಸಿಂಗ್ ಶೇಖಾವತ್, ಅವರ OSDಗಳಾದ ಅಖಿಲ್ ಚೌಧರಿ, ದಿನೇಶ್ ಡಿ, ಕೌಸ್ತುಭ್ ಸುಧಾಕರ್ ಭಲೇಕರ್ ಮತ್ತು PS ಅದಿತಿ ಚೌಧರಿ ಅವರನ್ನು ರಾಜ್ಯಸಭಾ ಅಧ್ಯಕ್ಷರ ಕಚೇರಿಯಿಂದ ಸ್ಥಾಯಿ ಸಮಿತಿಗಳಿಗೆ ನೇಮಕ ಮಾಡಲಾಗಿದೆ.

2021ರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮಾಡಿದ್ದು ಈಗ ಮುನ್ನೆಲೆಗೆ ಬಂದಿದೆ. ”ಜಗದೀಪ್ ಧನಕರ್ ಅವರ ಕುಟುಂಬದ ಸದಸ್ಯರೆಲ್ಲರನ್ನು ಬಂಗಾಳ ರಾಜಭವನದಲ್ಲಿ ವಿಶೇಷ ಕರ್ತವ್ಯ ಅಥವಾ ಒಎಸ್‌ಡಿಗಳನ್ನಾಗಿ ನೇಮಿಸಲಾಗಿದೆ” ಎಂದು ಅವರು ದೂರಿದ್ದರು. ಆಗ ಜಗದೀಪ್ ಧನಕರ್ ಅವರು ಬಂಗಾಳದ ರಾಜ್ಯಪಾಲರಾಗಿದ್ದರು.

“ಇಂತಹ ಕ್ರಮವು ಈ ಹಿಂದೆ ಯಾವತ್ತೂ ಘಟಿಸಿರಲಿಲ್ಲ” ಎಂದು ಹೆಸರು ಹೇಳಲಿಚ್ಛಿಸದ ರಾಜ್ಯಸಭಾ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಇದೇ ಆರೋಪವನ್ನು ಮಾಡಿ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರೂ ಟ್ವೀಟ್‌ ಮಾಡಿದ್ದಾರೆ.

”ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸ್ಥಾಯಿ ಸಮಿತಿಗಳಲ್ಲಿ ತಮ್ಮ ಸಿಬ್ಬಂದಿಯನ್ನು ನೇಮಿಸುತ್ತಾರೆ.
ಹೌದು ಇದು ಅಭೂತಪೂರ್ವ (ಹಿಂದೆಂದೂ ಘಟಿಸಿರಲಿಲ್ಲ). ಆದರೆ ನೀಡಿರುವ ವಿವರಣೆಯೂ ಸೂಕ್ತವಾಗಿಲ್ಲ. ಅಸ್ತಿತ್ವದಲ್ಲಿರುವ ರಾಜ್ಯಸಭೆಯ ಸೆಕ್ರೆಟರಿಯಟ್‌ ಸಿಬ್ಬಂದಿಯ ಮೇಲೆ ಅಧ್ಯಕ್ಷರಿಗಿರುವ ವಿಶ್ವಾಸದ ಕೊರತೆಯನ್ನು ಇದು ತೋರಿಸುವುದಿಲ್ಲವೇ?” ಎಂದು ದಿಗ್ವಿಜಯ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಅವರು ಟ್ವೀಟ್‌ ಮಾಡಿದ್ದು, “ಇದು ಕಾನೂನುಬಾಹಿರ ಕ್ರಮ” ಎಂದು ಕರೆದಿದ್ದಾರೆ. “ಮಂಗಳವಾರ ರಾಜ್ಯಸಭಾ ಸೆಕ್ರೆಟರಿಯೇಟ್ ಬಿಡುಗಡೆ ಮಾಡಿದ ಆದೇಶದ ಪ್ರಕಾರ ರಾಜ್ಯಸಭಾ ವ್ಯಾಪ್ತಿಯಲ್ಲಿ ಬರುವ 20 ಸಮಿತಿಗಳಿಗೆ ಉಪಾಧ್ಯಕ್ಷ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರ ವೈಯಕ್ತಿಕ ಸಿಬ್ಬಂದಿಯ 8 ಸದಸ್ಯರನ್ನು ನೇಮಿಸಲಾಗಿದೆ. ಇದು ನಮಗೆ ಅಚ್ಚರಿ ಮೂಡಿಸಿದೆ” ಎಂದು ಟೀಕಿಸಿದ್ದಾರೆ. ಸಂಪೂರ್ಣವಾಗಿ ಅಕ್ರಮ ಮತ್ತು ಅಧಿಕಾರ ದುರುಪಯೋಗ ಧನಕರ್‌ ಅವರಿಂದ ನಡೆದಿದೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ನ ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ಪ್ರತಿಕ್ರಿಯಿಸಿ, “ಉಪರಾಷ್ಟ್ರಪತಿಯವರು ಕೌನ್ಸಿಲ್ ಆಫ್ ಸ್ಟೇಟ್ಸ್ ಎಕ್ಸ್-ಆಫಿಶಿಯೋ ಅಧ್ಯಕ್ಷರಾಗಿದ್ದಾರೆ. ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಅವರು ವೈಯಕ್ತಿಕ ಸಿಬ್ಬಂದಿಯನ್ನು ಹೇಗೆ ನೇಮಿಸಲು ಸಾಧ್ಯ? ಇದು ಸಾಂಸ್ಥಿಕ ವಿಧ್ವಂಸಕತೆಗೆ ಸಮಾನವಾಗುವುದಿಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...