Homeಮುಖಪುಟಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ...

ಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ ದಂಪತಿ

- Advertisement -
- Advertisement -

ಕೇರಳದ ಕಾಸರಗೋಡಿನ ಮುಸ್ಲಿಂ ದಂಪತಿಗಳು ಮೂರು ದಶಕಗಳ ನಂತರ ವಿಶೇಷ ವಿವಾಹ ಕಾಯ್ದೆಯಡಿ ಮರುಮದುವೆಗೆ ನೋಂದಣಿ ಮಾಡಿಕೊಂಡಿದ್ದು, ಇದನ್ನು ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ.

ಮಲಪ್ಪುರಂ ಜಿಲ್ಲೆಯ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಅಡಿಯಲ್ಲಿನ ಫತ್ವಾ ಮತ್ತು ಸಂಶೋಧನಾ ಮಂಡಳಿಯು ಈ ನಿರ್ಧಾರವನ್ನು ಖಂಡಿಸಿದೆ.

“ಇಸ್ಲಾಮಿಕ್ ನಂಬಿಕೆಗಳನ್ನು ಅನುಸರಿಸುತ್ತಿರುವ ದಂಪತಿಗಳು ಈಗ ತಮ್ಮ ಸಂಪತ್ತಿನ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೂಢಿಗಳನ್ನು ಮೀರಲು ವಿವಾಹಕ್ಕೆ ಮರು-ನೋಂದಣಿ ಮಾಡಿಕೊಳ್ಳುತ್ತಿದ್ದಾರೆ” ಎಂದು ಮಂಡಳಿ ಹೇಳಿಕೆ ನೀಡಿದೆ.

“ಇಸ್ಲಾಂನಲ್ಲಿನ ಉತ್ತರಾಧಿಕಾರದ ಕಾನೂನಿನ ಪ್ರಕಾರ, ಮೃತ ತಂದೆಗೆ ಕೇವಲ ಹೆಣ್ಣು ಮಕ್ಕಳಿದ್ದರೆ, ಆಸ್ತಿಯ ಮೂರನೇ ಎರಡರಷ್ಟು ಭಾಗವನ್ನು ತಂದೆಯ ಸಹೋದರಿಯರು ಮತ್ತು ಸಹೋದರರ ನಡುವೆ ಹಂಚಬೇಕು. ತಮ್ಮ ಆಸ್ತಿಯಲ್ಲಿ ಒಡಹುಟ್ಟಿದವರಿಗೆ ಯಾವುದೇ ಭಾಗ ಸಿಗಬಾರದು ಎಂಬ ಸಂಕುಚಿತ ಮನೋಭಾವದಿಂದ ವಕೀಲ ಶುಕ್ಕೂರ್ ಅವರು ಮರುಮದುವೆಯಾಗುತ್ತಿದ್ದಾರೆ” ಎಂದಿದೆ.

ವಕೀಲ ಮತ್ತು ಹಕ್ಕುಗಳ ಹೋರಾಟಗಾರ ಸಿ ಶುಕ್ಕೂರ್ ಮತ್ತು ಅವರ ಪತ್ನಿ ಶೀನಾ ಶುಕ್ಕೂರ್ ಅವರು ತಮ್ಮ ಮೂವರು ಪುತ್ರಿಯರ ಸಮ್ಮುಖದಲ್ಲಿ ಕಾಸರಗೋಡಿನಲ್ಲಿ ಬುಧವಾರ ಮರುವಿವಾಹದ ನೋಂದಣಿ ಮಾಡಿಕೊಂಡರು.

ಹೆಣ್ಣುಮಕ್ಕಳಿಗೆ ಪೋಷಕರ ಸಂಪತ್ತಿನ ಮೂರನೇ ಎರಡರಷ್ಟು ಪಾಲು ನೀಡುವ ಇಸ್ಲಾಮಿಕ್ ಉತ್ತರಾಧಿಕಾರದ ಮಾನದಂಡಗಳನ್ನು ತಿದ್ದುಪಡಿ ಮಾಡುವ ಅಗತ್ಯತೆಯ ಸಂದೇಶವನ್ನು ಸಾರಲು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಯ್ಕೆ ಮಾಡಿಕೊಂಡಿರುವ ಈ ದಂಪತಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆಂದು ವರದಿಯಾಗಿದೆ.

ದಂಪತಿಯು ವಿಶೇಷ ವಿವಾಹ ಕಾಯಿದೆಯಡಿ ಮರುಮದುವೆಯಾಗಿರುವುದಕ್ಕೆ ಮೂವರು ಹೆಣ್ಣುಮಕ್ಕಳು ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿರಿ: ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ಶುಕ್ಕೂರ್ ವಕ್ಕೀಲ್ ಅವರು 2022ರ ಚಲನಚಿತ್ರ ‘ನ್ನ ಥಾನ್ ಕೇಸ್ ಕೊಡು’ನಲ್ಲಿ ನಟಿಸಿದ್ದಾರೆ. 51 ವರ್ಷದ ಡಾ ಶೀನಾ ಶುಕ್ಕೂರ್ ಅವರು ಕೊಟ್ಟಾಯಂ ಮೂಲದ ಎಂಜಿ ವಿಶ್ವವಿದ್ಯಾಲಯಕ್ಕೆ (ಎಂಜಿಯು) ಕುಲಪತಿಯಾಗಿದ್ದರು.

ಇಸ್ಲಾಮಿಕ್ ಕಾನೂನು ವ್ಯವಸ್ಥೆಯಾದ ‘ಶರಿಯಾ’ ಅಡಿಯಲ್ಲಿ ಈ ಮೊದಲು ‘ನಿಕಾಹ್’ ಆಗಿದ್ದರೆ, ಎರಡನೆಯ ಬಾರಿಗೆ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ನಡೆದಿದೆ. 1954ರಲ್ಲಿ ಸಂಸತ್ತು ಅಂಗೀಕರಿಸಿದ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ವಿವಾಹವನ್ನು ನೋಂದಣಿ ಮಾಡಿಕೊಳ್ಳಲಾಗಿದೆ.

ಇಸ್ಲಾಮಿಕ್ ಕಾನೂನಿನಡಿಯಲ್ಲಿ 1994 ರಲ್ಲಿ ವಿವಾಹವಾದ ಶುಕ್ಕೂರ್ ಮತ್ತು ಶೀನಾ, ವಿಶೇಷ ವಿವಾಹ ಕಾಯ್ದೆಯಡಿ ಮಾರ್ಚ್ 8, 2023ರಂದು ತಮ್ಮ ವಿವಾಹವನ್ನು ಮತ್ತೆ ನೋಂದಾಯಿಸಿದ್ದಾರೆ. ಲಿಂಗ ತಾರತಮ್ಯದ ಬಗ್ಗೆ ಕೇರಳದಲ್ಲಿ ಹೊಸ ಚರ್ಚೆಯನ್ನು ಈ ವಿವಾಹ ಹುಟ್ಟುಹಾಕಿದೆ.

ಗಂಡು ಸಂತಾನವಿಲ್ಲದ ಕಾರಣ, ತಮ್ಮ ಮೂವರು ಹೆಣ್ಣು ಮಕ್ಕಳಿಗೆ ಉತ್ತರಾಧಿಕಾರದ ಕಾನೂನಿನ ಅಡಚಣೆಯನ್ನು ನಿವಾರಿಸಲು ದಂಪತಿಗಳು ಮರುಮದುವೆಗೆ ನಿರ್ಧರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...