Homeಮುಖಪುಟಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ...

ಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ ದಂಪತಿ

- Advertisement -
- Advertisement -

ಕೇರಳದ ಕಾಸರಗೋಡಿನ ಮುಸ್ಲಿಂ ದಂಪತಿಗಳು ಮೂರು ದಶಕಗಳ ನಂತರ ವಿಶೇಷ ವಿವಾಹ ಕಾಯ್ದೆಯಡಿ ಮರುಮದುವೆಗೆ ನೋಂದಣಿ ಮಾಡಿಕೊಂಡಿದ್ದು, ಇದನ್ನು ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ.

ಮಲಪ್ಪುರಂ ಜಿಲ್ಲೆಯ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಅಡಿಯಲ್ಲಿನ ಫತ್ವಾ ಮತ್ತು ಸಂಶೋಧನಾ ಮಂಡಳಿಯು ಈ ನಿರ್ಧಾರವನ್ನು ಖಂಡಿಸಿದೆ.

“ಇಸ್ಲಾಮಿಕ್ ನಂಬಿಕೆಗಳನ್ನು ಅನುಸರಿಸುತ್ತಿರುವ ದಂಪತಿಗಳು ಈಗ ತಮ್ಮ ಸಂಪತ್ತಿನ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೂಢಿಗಳನ್ನು ಮೀರಲು ವಿವಾಹಕ್ಕೆ ಮರು-ನೋಂದಣಿ ಮಾಡಿಕೊಳ್ಳುತ್ತಿದ್ದಾರೆ” ಎಂದು ಮಂಡಳಿ ಹೇಳಿಕೆ ನೀಡಿದೆ.

“ಇಸ್ಲಾಂನಲ್ಲಿನ ಉತ್ತರಾಧಿಕಾರದ ಕಾನೂನಿನ ಪ್ರಕಾರ, ಮೃತ ತಂದೆಗೆ ಕೇವಲ ಹೆಣ್ಣು ಮಕ್ಕಳಿದ್ದರೆ, ಆಸ್ತಿಯ ಮೂರನೇ ಎರಡರಷ್ಟು ಭಾಗವನ್ನು ತಂದೆಯ ಸಹೋದರಿಯರು ಮತ್ತು ಸಹೋದರರ ನಡುವೆ ಹಂಚಬೇಕು. ತಮ್ಮ ಆಸ್ತಿಯಲ್ಲಿ ಒಡಹುಟ್ಟಿದವರಿಗೆ ಯಾವುದೇ ಭಾಗ ಸಿಗಬಾರದು ಎಂಬ ಸಂಕುಚಿತ ಮನೋಭಾವದಿಂದ ವಕೀಲ ಶುಕ್ಕೂರ್ ಅವರು ಮರುಮದುವೆಯಾಗುತ್ತಿದ್ದಾರೆ” ಎಂದಿದೆ.

ವಕೀಲ ಮತ್ತು ಹಕ್ಕುಗಳ ಹೋರಾಟಗಾರ ಸಿ ಶುಕ್ಕೂರ್ ಮತ್ತು ಅವರ ಪತ್ನಿ ಶೀನಾ ಶುಕ್ಕೂರ್ ಅವರು ತಮ್ಮ ಮೂವರು ಪುತ್ರಿಯರ ಸಮ್ಮುಖದಲ್ಲಿ ಕಾಸರಗೋಡಿನಲ್ಲಿ ಬುಧವಾರ ಮರುವಿವಾಹದ ನೋಂದಣಿ ಮಾಡಿಕೊಂಡರು.

ಹೆಣ್ಣುಮಕ್ಕಳಿಗೆ ಪೋಷಕರ ಸಂಪತ್ತಿನ ಮೂರನೇ ಎರಡರಷ್ಟು ಪಾಲು ನೀಡುವ ಇಸ್ಲಾಮಿಕ್ ಉತ್ತರಾಧಿಕಾರದ ಮಾನದಂಡಗಳನ್ನು ತಿದ್ದುಪಡಿ ಮಾಡುವ ಅಗತ್ಯತೆಯ ಸಂದೇಶವನ್ನು ಸಾರಲು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಯ್ಕೆ ಮಾಡಿಕೊಂಡಿರುವ ಈ ದಂಪತಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆಂದು ವರದಿಯಾಗಿದೆ.

ದಂಪತಿಯು ವಿಶೇಷ ವಿವಾಹ ಕಾಯಿದೆಯಡಿ ಮರುಮದುವೆಯಾಗಿರುವುದಕ್ಕೆ ಮೂವರು ಹೆಣ್ಣುಮಕ್ಕಳು ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿರಿ: ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ಶುಕ್ಕೂರ್ ವಕ್ಕೀಲ್ ಅವರು 2022ರ ಚಲನಚಿತ್ರ ‘ನ್ನ ಥಾನ್ ಕೇಸ್ ಕೊಡು’ನಲ್ಲಿ ನಟಿಸಿದ್ದಾರೆ. 51 ವರ್ಷದ ಡಾ ಶೀನಾ ಶುಕ್ಕೂರ್ ಅವರು ಕೊಟ್ಟಾಯಂ ಮೂಲದ ಎಂಜಿ ವಿಶ್ವವಿದ್ಯಾಲಯಕ್ಕೆ (ಎಂಜಿಯು) ಕುಲಪತಿಯಾಗಿದ್ದರು.

ಇಸ್ಲಾಮಿಕ್ ಕಾನೂನು ವ್ಯವಸ್ಥೆಯಾದ ‘ಶರಿಯಾ’ ಅಡಿಯಲ್ಲಿ ಈ ಮೊದಲು ‘ನಿಕಾಹ್’ ಆಗಿದ್ದರೆ, ಎರಡನೆಯ ಬಾರಿಗೆ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ನಡೆದಿದೆ. 1954ರಲ್ಲಿ ಸಂಸತ್ತು ಅಂಗೀಕರಿಸಿದ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ವಿವಾಹವನ್ನು ನೋಂದಣಿ ಮಾಡಿಕೊಳ್ಳಲಾಗಿದೆ.

ಇಸ್ಲಾಮಿಕ್ ಕಾನೂನಿನಡಿಯಲ್ಲಿ 1994 ರಲ್ಲಿ ವಿವಾಹವಾದ ಶುಕ್ಕೂರ್ ಮತ್ತು ಶೀನಾ, ವಿಶೇಷ ವಿವಾಹ ಕಾಯ್ದೆಯಡಿ ಮಾರ್ಚ್ 8, 2023ರಂದು ತಮ್ಮ ವಿವಾಹವನ್ನು ಮತ್ತೆ ನೋಂದಾಯಿಸಿದ್ದಾರೆ. ಲಿಂಗ ತಾರತಮ್ಯದ ಬಗ್ಗೆ ಕೇರಳದಲ್ಲಿ ಹೊಸ ಚರ್ಚೆಯನ್ನು ಈ ವಿವಾಹ ಹುಟ್ಟುಹಾಕಿದೆ.

ಗಂಡು ಸಂತಾನವಿಲ್ಲದ ಕಾರಣ, ತಮ್ಮ ಮೂವರು ಹೆಣ್ಣು ಮಕ್ಕಳಿಗೆ ಉತ್ತರಾಧಿಕಾರದ ಕಾನೂನಿನ ಅಡಚಣೆಯನ್ನು ನಿವಾರಿಸಲು ದಂಪತಿಗಳು ಮರುಮದುವೆಗೆ ನಿರ್ಧರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...