Homeಮುಖಪುಟಅದಾನಿ ಗ್ರೂಪ್‌ ಹಿಡಿತಕ್ಕೆ ಆಹಾರ ವಲಯ ಒಪ್ಪಿಸಲು ಯತ್ನ: ಕಾಂಗ್ರೆಸ್ ಆರೋಪ

ಅದಾನಿ ಗ್ರೂಪ್‌ ಹಿಡಿತಕ್ಕೆ ಆಹಾರ ವಲಯ ಒಪ್ಪಿಸಲು ಯತ್ನ: ಕಾಂಗ್ರೆಸ್ ಆರೋಪ

- Advertisement -
- Advertisement -

2021ರಲ್ಲಿ ಕೇಂದ್ರ ಸರ್ಕಾರ ಹಿಂತೆಗೆದುಕೊಂಡ ಕೃಷಿ ಕಾನೂನುಗಳು, ಅದಾನಿ ಗುಂಪಿಗೆ ಲಾಭ ಮಾಡಲೆಂದೇ ಜಾರಿಗೆ ಬಂದಿದ್ದವು ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ.

ಮೋದಿ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಿರುವ ಸರಣಿಯ ಭಾಗವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಟ್ವೀಟ್ ಮಾಡಿದ್ದು, “ಭಾರತದ ಆಹಾರಧಾನ್ಯಗಳ ವಲಯವನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸಲು ಸರ್ಕಾರವು ಪಟ್ಟ ಶ್ರಮಕ್ಕೆ ಈ ವಿಷಯ ಸಂಬಂಧಿಸಿದೆ. ರೈತರ ಪ್ರತಿರೋಧದಿಂದಾಗಿ ತಾತ್ಕಾಲಿಕವಾಗಿ ಈ ಪಿತೂರಿ ವಿಫಲವಾಯಿತು. 2020-21ರ ಆಂದೋಲನದಿಂದಾಗಿ ಕೃಷಿಗೆ ಸಂಬಂಧಿಸಿದ ಕರಾಳ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕಾಯಿತು” ಎಂದು ತಿಳಿಸಿದ್ದಾರೆ.

“ಕೃಷಿ ಕಾನೂನುಗಳ ದೊಡ್ಡ ಫಲಾನುಭವಿಗಳಲ್ಲಿ ಅದಾನಿ ಅಗ್ರಿ ಲಾಜಿಸ್ಟಿಕ್ಸ್ ಒಂದಾಗಿತ್ತು. ಇದು ಭಾರತೀಯ ಆಹಾರ ನಿಗಮದ ಸಿಲೋ ಒಪ್ಪಂದಗಳ ಪ್ರಮುಖ ಫಲಾನುಭವಿ ಅದಾಗಿ ಗುಂಪಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ 3.5 ಲಕ್ಷ ಮೆಟ್ರಿಕ್ ಟನ್ ಸ್ಟೋರೇಜ್‌ಅನ್ನು ತೆರೆಯುತ್ತಿರುವುದು ಇತ್ತೀಚಿನ ಕೊಡುಗೆಯಾಗಿದೆ” ಎಂದು ದೂರಿದ್ದಾರೆ.

“ಹಿಮಾಚಲ ಪ್ರದೇಶದಲ್ಲಿ ಸೇಬು ಖರೀದಿಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲು ಅದಾನಿ ಫಾರ್ಮ್-ಪಿಕ್‌ಗೆ ಅನುಮತಿ ನೀಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಕಳೆದ 70 ವರ್ಷಗಳಲ್ಲಿ ಕಷ್ಟಪಟ್ಟು ನಿರ್ಮಿಸಲಾದ ಭಾರತದ ಸಾರ್ವಜನಿಕ ವಲಯವು ಈಗ ನಿಮ್ಮ ಕಾರ್ಪೊರೇಟ್ ಸ್ನೇಹಿತರ ಪುಷ್ಟೀಕರಣಕ್ಕಾಗಿ ಕುಸಿಯುತ್ತಿದೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅಸೆಂಬ್ಲಿ ಅಂಗೀಕರಿಸಿದ ಆನ್‌ಲೈನ್ ಜೂಜಾಟ ನಿಷೇಧದ ಮಸೂದೆಯನ್ನು ಹಿಂದಿರುಗಿಸಿದ ತಮಿಳುನಾಡು ರಾಜ್ಯಪಾಲ ರವಿ

‘ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ’ವು ಕೇಂದ್ರ ಉಗ್ರಾಣ ನಿಗಮದ ನಿಲುವನ್ನು ಬೆಂಬಲಿಸಿದೆ ಎಂಬುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ಮುಂದ್ರಾ ಬಂದರಿನ ಸಮೀಪವಿರುವ ಎರಡು ಪ್ರಮುಖ ಸಿಡಬ್ಲುಸಿ ಗೋದಾಮುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಅದಾನಿ ಪ್ರಯತ್ನಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಸಹಾಯ ಮಾಡಿದೆ ಎಂದಿದ್ದಾರೆ.

“ಕರಾಳ ಕೃಷಿ ಕಾನೂನುಗಳ ಹಿಂದಿನ ಉದ್ದೇಶ ಭಾರತದ ಕೃಷಿ ವಲಯವನ್ನು ನಿಮ್ಮ ಕೆಲವು ನಿಕಟ ಕಾರ್ಪೊರೇಟ್ ಆಪ್ತರಿಗೆ ಹಸ್ತಾಂತರಿಸುವುದಾಗಿತ್ತು ಎಂದು ಇಡೀ ದೇಶಕ್ಕೆ ತಿಳಿದಿದೆ” ಎಂದು ರಮೇಶ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...