Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...