Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...