Homeಮುಖಪುಟವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

- Advertisement -
- Advertisement -

ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳ ಬಗ್ಗೆ ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ದೇಶದ ಎಲ್ಲಾ ಬಿಜೆಪಿಯೇತರ ಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ ಒಂದು ದಿನದ ನಂತರ “ಉತ್ತರ ಭಾರತದ ಬಿಜೆಪಿ ನಾಯಕರು” “ಸುಳ್ಳು ಸುದ್ದಿ” ಹರಡಲು ಆರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಬಿಜೆಪಿ ವಿರುದ್ಧ ಕಿಡಿಕಾರಿದರು.

ತಮಿಳುನಾಡಿನಲ್ಲಿ ಉತ್ತರ ಭಾರತದ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ”ಬಿಜೆಪಿ ವಿರೋಧಿ ಪಕ್ಷಗಳು ಒಂದಾಗುವ ಅಗತ್ಯದ ಬಗ್ಗೆ ನಾನು ಮಾತನಾಡಿದ ಒಂದು ದಿನದ ನಂತರ ಉತ್ತರ ಭಾರತದ ಬಿಜೆಪಿ ನಾಯಕರಿಂದ ನಕಲಿ ವೀಡಿಯೊಗಳ ಹರಡುವಿಕೆ ಪ್ರಾರಂಭವಾಯಿತು, ಇದು ಅವರ ರಹಸ್ಯ ಉದ್ದೇಶವನ್ನು ಬಹಿರಂಗಪಡಿಸುತ್ತದೆ. ಈ ಸುಳ್ಳುಗಳನ್ನು ಹರಡುವುದರ ಹಿಂದಿನ ಸ್ಪಷ್ಟ ಉದ್ದೇಶ ಏನು ಎಂಬುದನ್ನು ಸೂಚಿಸುತ್ತದೆ” ಎಂದು ಸ್ಟಾಲಿನ್ ಅವರು ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ಗುರುವಾರ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

”ಪಾಟ್ನಾದಲ್ಲಿ ಜೆಡಿಯು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲಿನ ದಾಳಿಯ “ವದಂತಿಗಳನ್ನು” ಹರಡುತ್ತಿದೆ. ಎರಡು ರಾಜ್ಯಗಳ ನಡುವೆ ಬಿರುಕು ಮೂಡಿಸಲು ಮತ್ತು ವಿರೋಧ ಪಕ್ಷಗಳನ್ನು ಸೋಲಿಸಲು ಈ ರೀತಿ ಬಿಜೆಪಿ ಸುಳ್ಳುಗಳನ್ನು ಹರಿಬಿಡುತ್ತಿದೆ ಎಂದು ಆರೋಪಿಸಿದೆ” ಎಂದರು.

”ಬಿಜೆಪಿಯು ವಲಸಿಗರ ಮೇಲೆ ದಾಳಿ ನಡೆಸಲಾಗಿದೆ ಎಂಬ ವದಂತಿಗಳನ್ನು ಹರಡಿತು. ಇದರಿಂದ ತಮಿಳುನಾಡು ಮತ್ತು ಬಿಹಾರದ ನಡುವೆ ಬಿರುಕು ಉಂಟುಮಾಡಲು ಪ್ರಯತ್ನಿಸಿತು ಆದರೆ ಏನಾಯಿತು? ಹಲ್ಲೆ ನಡೆದಿದೆ ಎನ್ನುವ ವಿಚಾರವೇ ಸುಳ್ಳು. ಈ ಬಗ್ಗೆ ತನಿಖೆ ನಡೆಸಲು ಬಿಹಾರದ ತಂಡವೊಂದು ತಮಿಳುನಾಡಿಗೆ ಭೇಟಿ ನೀಡಿತ್ತು ಮತ್ತು ಅವರ ಸರ್ಕಾರವೂ ಅದನ್ನು ಪರಿಶೀಲಿಸಿದೆ. ಆದರೆ ಒಂದೇ ಒಂದು ಘಟನೆ ಕೂಡ ವರದಿಯಾಗಿಲ್ಲ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅ.ಕಾ.ಲಾಲನ್ ಸಿಂಗ್ ಹೇಳಿದ್ದಾರೆ” ಎಂದು ಸ್ಟಾಲಿನ್ ವಿವರಿಸಿದರು.

”ಈ ನಕಲಿ ವರದಿಗಳ ಹರಿದಾಡಿದಾಗ, ನಾನು ಡಿಜಿಪಿ ಬಳಿ ವಿಚಾರಿಸಿದ್ದೇನೆ. ಅವರು ಅಂತಹ ಯಾವದೇ ಘಟನೆ ನಡೆದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಆನಂತರ ನಾನು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಿ ಇಲ್ಲಿಯ ವಾಸ್ತವತೆ ಬಗ್ಗೆ ತಿಳಿಸಿದ್ದೇನೆ. ಆದರೂ ಬಿಹಾರದ ಅಧಿಕಾರಿಗಳ ನಿಯೋಗವು ತಮಿಳುನಾಡಿಗೆ ಭೇಟಿ ನೀಡಿ, ಇಲ್ಲಿನ ಶಾಂತಿಯುತ ವಾತಾವರಣದಿಂದ ತೃಪ್ತರಾಗಿ ಮರಳಿದೆ. ತಮಿಳುನಾಡು ಹೊರಗಿನವರನ್ನು ಸ್ವಾಗತಿಸಲು ಹೆಸರುವಾಸಿಯಾಗಿದೆ” ಎಂದು ಗುರುವಾರ ತಮ್ಮ ಹೇಳಿಕೆಯಲ್ಲಿ ಸ್ಟಾಲಿನ್ ತಿಳಿಸಿದ್ದಾರೆ.

”ತಮಿಳುನಾಡು ಮತ್ತು ತಮಿಳರು ಏಕತೆ ಮತ್ತು ಭ್ರಾತೃತ್ವವನ್ನು ಗೌರವಿಸುತ್ತಾರೆ. ನಮ್ಮ ಧ್ಯೇಯವಾಕ್ಯವೆಂದರೆ ‘ಎಲ್ಲಾ ಪಟ್ಟಣಗಳು ನಮ್ಮದು, ಮತ್ತು ಎಲ್ಲರೂ ನಮ್ಮ ಬಂಧುಗಳು..’ ಇಲ್ಲಿ ವಾಸಿಸುವ ಉತ್ತರ ಭಾರತೀಯ ಸಹೋದರರಿಗೆ ಇದು ಚೆನ್ನಾಗಿ ತಿಳಿದಿದೆ” ಎಂದು ಸ್ಟಾಲಿನ್ ಹೇಳಿದರು.

”ಬಿಜೆಪಿ ನಕಲಿ ಸುದ್ದಿ ಹರುಡುತ್ತಿದೆ” ಎಂದು ಸ್ಟಾಲಿನ್ ಅವರು ಗುರುವಾರ ಮೊದಲ ಬಾರಿಗೆ ಪಕ್ಷದ ಹೆಸರು ಬಳಸಿ ನೇರವಾಗಿ ಆರೋಪಿಸಿದ್ದಾರೆ. ಏಕೆಂದರೆ ಮಂಗಳವಾರ, ಇದೇ ವಿಚಾರವಾಗಿ ನಾಗರ್‌ಕೋಯಿಲ್‌ನಲ್ಲಿ ನಡೆದ ಡಿಎಂಕೆ ಕುಲಪತಿ ಎಂ ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡುವಾಗ, ಕೆಲವು ಶಕ್ತಿಗಳು ”ಜಾತಿ ಮತ್ತು ಕೋಮು ಗಲಭೆಗಳನ್ನು” ಪ್ರಚೋದಿಸುವ ಮೂಲಕ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿಯ ಹೆಸರು ಹೇಳದೆ ಮಾತನಾಡಿದ್ದರು. ಆದರೆ ಇದೇ ಮೊದಲ ಬಾರಿಗೆ ಸ್ಟಾಲಿನ್ ಅವರು ಬಿಜೆಪಿ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ.

ಮಾರ್ಚ್ 1ರಂದು ಚೆನ್ನೈನಲ್ಲಿ ಡಿಎಂಕೆ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ, ಸ್ಟಾಲಿನ್ ಅವರು ‘2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಭಾರತದ ಎಲ್ಲಾ ವಿರೋಧ ಪಕ್ಷಗಳ ಬೇಷರತ್ ಒಗ್ಗಟ್ಟಿಗೆ ಕರೆ’ ನೀಡಿದ್ದರು. ಅವರ ಈ ಹೇಳಿಕೆಯ ನಂತರ ಬಿಜೆಪಿ ನಾಯಕರು, ತಮಿಳುನಾಡಿನಲ್ಲಿ ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳನ್ನು ಹರಡಲು ಪ್ರಾರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿ ಹರಿಬಿಟ್ಟ ಸುಳ್ಳು ಸುದ್ದಿಯ ಬಳಿಕ, ಬಿಹಾರ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಡಿ ಬಾಲಮುರುಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತಮಿಳುನಾಡಿಗೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಿ ಇರೈ ಅನ್ಬು ಅವರನ್ನು ಭೇಟಿ ಮಾಡಿದರು. ತಿರುಪುರ್ ಮತ್ತು ಕೊಯಮತ್ತೂರಿನಲ್ಲಿ ಬಿಹಾರದಿಂದ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...