Homeಕರ್ನಾಟಕಬಿಜೆಪಿಗೆ ಬಿಗ್ ಶಾಕ್: ಕಮಲ ತೊರೆದು 'ಕೈ' ಸೇರಿದ ಎಂಎಲ್‌ಸಿ ಪುಟ್ಟಣ್ಣ

ಬಿಜೆಪಿಗೆ ಬಿಗ್ ಶಾಕ್: ಕಮಲ ತೊರೆದು ‘ಕೈ’ ಸೇರಿದ ಎಂಎಲ್‌ಸಿ ಪುಟ್ಟಣ್ಣ

- Advertisement -
- Advertisement -

ವಿಧಾನಪರಿಷತ್ ಬಿಜೆಪಿ ಸದಸ್ಯ ಪುಟ್ಟಣ್ಣ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪುಟ್ಟಣ್ಣ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ”ಬಿಜೆಪಿ ಆಡಳಿತದ ವೈಖರಿಯನ್ನು ಗಮನಿಸಿ ಅವರ ಕ್ಷೇತ್ರದಲ್ಲಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಪುಟ್ಟಣ್ಣ ಅವರು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ” ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ”ಪುಟ್ಟಣ್ಣ ನಾಲ್ಕು ಬಾರಿ ಎಂಎಲ್ ಸಿ ಆಗಿದ್ದರು. ನಾಲ್ಕನೇ ಬಾರಿಯ ಅವಧಿ ಮುಗಿಯಲು ಇನ್ನೂ ಸಾಕಷ್ಟು ಅವಧಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ. ಬಿಜೆಪಿ ಭ್ರಷ್ಟಾಚಾರ, ಕೋಮುವಾದ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ತಿಲಾಂಜಲಿ ಇಟ್ಟು ಜನರ ಭಾವನೆಗಳನ್ನು ಹಿಂದುತ್ವದ ಆಧಾರದಲ್ಲಿ ಕೆರಳಿಸುತ್ತಿದ್ದಾರೆ. ಇದರಿಂದ ಬೇಸೆತ್ತು ಬಿಜೆಪಿ ತೊರೆಯುತ್ತಿದ್ದಾರೆ” ಎಂದರು.

”ಸುಮಾರು 20 ವರ್ಷ ವಿಧಾನಪರಿಷತ್ ನಲ್ಲಿ ಸದಸ್ಯರಾಗಿದ್ದರು. ವಿಧಾನಪರಿಷತ್ ಉಪಸಭಾಪತಿಯಾಗಿಯೂ ಕೆಲಸ ಮಾಡಿದ್ದಾರೆ. ಪುಟ್ಟಣ್ಣ ಪಕ್ಷ ಸೇರ್ಪಡೆಯಿಂದ ಪಕ್ಷದ ಶಕ್ತಿ ಹೆಚ್ಚಾಗುತ್ತದೆ. ಇದು ಧೈರ್ಯದ ತೀರ್ಮಾನ” ಎಂದರು.

ಇದನ್ನೂ ಓದಿ: ಕಲಬುರಗಿ: ಪ್ರಧಾನಿ ಮೋದಿ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಹರಿಸಿದ ಬಿಜೆಪಿ ಶಾಸಕ

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ”ಪುಟ್ಟಣ್ಣ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಶಿಕ್ಷಕ ಸಮುದಾಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದು ಹೇಳಿದರು.

2019ರಲ್ಲಿ ಪುಟ್ಟಣ್ಣ ಅವರು ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ್ದರು. ವಿಧಾನಪರಿಷತ್‌ನ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದಿದ್ದರು. ಗುರುವಾರ ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪುಟ್ಟಣ್ಣ ಮಾತನಾಡಿ, ”ಇವತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನಾಲ್ಕು ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಆಗಿದ್ದೇನೆ. ಶಿಕ್ಷಣ ಕ್ಷೇತ್ರ, ಶಿಕ್ಷಕರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ನಾನು ಏನು ಅಂದುಕೊಂಡು ಬಿಜೆಪಿ ಸೇರಿದ್ದೇನೋ ಅದು ಮಾಡಲು ಸಾಧ್ಯವಾಗಲಿಲ್ಲ, ಅಲ್ಲಿ ಸತ್ತಂತ ಪರಿಸ್ಥಿತಿ ಇತ್ತು. ಸರ್ಕಾರ ಶಿಕ್ಷಣ ಕ್ಷೇತ್ರದ ಯಾವ ಸಮಸ್ಯೆಯನ್ನೂ ‌ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

ಫ್ರೀಡಂ ಪಾರ್ಕ್ ನಲ್ಲಿ ಶಿಕ್ಷಕರ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಬಿಜೆಪಿ ಪಕ್ಷ ಸೇರಿ ತಪ್ಪು ಮಾಡಿದೆ ಎಂದು ಆತ್ಮಸಾಕ್ಷಿ ಹೇಳುತ್ತಿತ್ತು. ಇವಾಗ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ ಎಂದರು.

ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ವಿರೋಧ ವ್ಯಕ್ತ:

ರಾಜಾಜಿನಗರ ಕ್ಷೇತ್ರದ ಕೆಲವು ಟಿಕೆಟ್ ಆಕಾಂಕ್ಷಿಗಳು ಮತ್ತು ಕೆಲವು ನಾಯಕರು ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಬಾರದು ಎಂದು ಗಲಾಟೆ ಮಾಡಿದ್ದಾರೆ. ಟಿಕೆಟ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ, ಮನೋಹರ್ ವಿರೋಧ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಳಿ ಪುಟ್ಟಣ್ಣಗೆ ಟಿಕೆಟ್ ನೀಡದಂತೆ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...