Homeಅಂಕಣಗಳುಮೋದಿ-ಷಾರನ್ನು ಎದುರಿಸಲು ನಡೆಯಬೇಕಿರುವುದು ಭಿನ್ನ ಬಗೆಯ ರಾಜಕೀಯ ಆಂದೋಲನ

ಮೋದಿ-ಷಾರನ್ನು ಎದುರಿಸಲು ನಡೆಯಬೇಕಿರುವುದು ಭಿನ್ನ ಬಗೆಯ ರಾಜಕೀಯ ಆಂದೋಲನ

- Advertisement -
- Advertisement -

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉರುಳಿತು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ರಾಜಕೀಯ ಎತ್ತ ಸಾಗಿದೆ ಎಂಬುದನ್ನು ಕುರಿತು ಮತದಾರ ಯೋಚಿಸುವ ಕಾಲ ಈಗ ಸನ್ನಿಹಿತವಾಗಿದೆ.

ಭಾರತದ ರಾಜಕೀಯ ಹೊಲಸಾಗಿದೆ. ದ್ವೇಷ ಭಾವನೆಯಿಂದ ಕೂಡಿದ ಕೇಂದ್ರ ಸರ್ಕಾರ ಬರ್ಬರ ಕಾನೂನುಗಳನ್ನು ರಚಿಸುತ್ತಿದೆ. ಇದ್ದ ಕಾನೂನುಗಳನ್ನು ತಿರುಚಿ ಬರೆಯುತ್ತಿದೆ; ಸರ್ಕಾರದ ಧೋರಣೆಯನ್ನು ಪ್ರಶ್ನಿಸುವ ವಿಚಾರವಾದಿಗಳ ಮೇಲೆ ಕಟ್ಟಲೆ ಹೇರಿ, ಸರ್ಕಾರದ ಧೋರಣೆಯನ್ನು ಪ್ರಶ್ನಿಸುವವರನ್ನು ನಕ್ಸಲರೆಂದು ಪರಿಗಣಿಸಿ ಗೂಂಡಾ ಕಾಯ್ದೆ ಹೊರಿಸುವ ಸಂಭವವಿದೆ.

ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಕ್ರಿಮಿನಲ್ ಕೇಸ್‍ಗಳನ್ನು ಹೊತ್ತವರು, ರಿಯಲ್ ಎಸ್ಟೇಟ್ ದಂಧೆ ಮಾಡುವವರು, ಪಕ್ಷಗಳನ್ನು ಕಬ್ಜಾ ಮಾಡುವವರು, ಪಕ್ಷವನ್ನು ನಾಶ ಮಾಡುವ ಪ್ರವೃತ್ತಿಯವರು ಇದ್ದಾರೆ. ಅಶಿಸ್ತು ತಾರಕಕ್ಕೇರಿದೆ. ಸಮಯಸಾಧಕರು, ಮೀರ್‍ಸಾದಿಕ್‍ಗಳು ರಾಜಕೀಯ ದಾಳ ಉರುಳಿಸಿ, ತಮ್ಮ ಪಕ್ಷದ ಪತನಕ್ಕೆ ಸಂಚು ಮಾಡಲು ಮುಂದಾಗಿದ್ದಾರೆ. ಜಾತಿಯ ಆಧಾರದ ಮೇಲೆ ಶಾಸಕರನ್ನು ಆರಿಸಿಕೊಂಡ ದೇವೇಗೌಡರು, ಸಿದ್ದರಾಮಯ್ಯ ಮುಂತಾದವರಿಗೆ ಚಳ್ಳೇ ಹಣ್ಣು ತಿನ್ನಿಸಿದ ದುಷ್ಟ ಶಾಸಕರು ಸರಿಯಾಗಿಯೇ ಬುದ್ಧಿ ಕಲಿಸಿದ್ದಾರೆ.

ರಾಜಕೀಯ ಪಕ್ಷದಲ್ಲಿದ್ದುಕೊಂಡು ಶಿಸ್ತಿನಿಂದ, ಶ್ರದ್ಧೆಯಿಂದ, ಪ್ರಾಮಾಣಿಕವಾಗಿ ನಡೆದುಕೊಳ್ಳುವ ಅನೇಕ ಯೋಗ್ಯ ನಿಷ್ಠಾವಂತ ಕಾರ್ಯಕರ್ತರು ಎಲ್ಲ ಪಕ್ಷಗಳಲ್ಲಿ ಇದ್ದರೂ, ಅವರನ್ನು ಕಡೆಗಣಿಸಿ ಅವರು ತಮ್ಮ ಜಾತಿಯವರೆಂಬ ಕಾರಣಕ್ಕಾಗಿ, ಲಕ್ಷಾಂತರ ರೂಗಳನ್ನು ಪಕ್ಷಕ್ಕೋ, ಕಿಸೆಗೆ ಬಿಡುವುದಕ್ಕೋ ಕೊಟ್ಟವರಿಗೆ ಮಾತ್ರ ಸೀಟು ಸಿಗುತ್ತಿದೆ. ಈ ಜನ ಸಂಸ್ಥೆಗೆ ಏಕೆ ವಿಧೇಯರಾಗಿರಬೇಕು? ಇಂತಹವರಿಗೆ ಸೀಟನ್ನು ಮಾರುವುದು ಪರಿಪಾಠವಾಗಿರುವಾಗ ಅವರು ಸಂಸ್ಥೆಯವರ ಘನತೆ ಗೌರವಗಳ ಬಗೆಗೆ ಯಾಕೆ ಯೋಚಿಸುತ್ತಾರೆ? ನಾವು ಬಂದಿರುವುದೇ ದೋಚುವುದಕ್ಕೆ, ಸ್ವಾರ್ಥ ಸಾಧನೆಗೆ ಎನ್ನುವ ಜನರ ದೃಷ್ಟಿಯಲ್ಲಿ ರಾಜಕೀಯ ಪಕ್ಷ ಒಂದು ಮಾರಾಟ ಸಂಸ್ಥೆ, ತಮ್ಮ ಅಭ್ಯುದಯಕ್ಕಾಗಿ ನೆರವಾಗುವ ಒಂದು ಚಿಮ್ಮು ಹಲಗೆ!

ದೇವೇಗೌಡರಂತಹ ಒಬ್ಬ ನಾಯಕರಿಗೆ ತಮ್ಮ ಪಕ್ಷ ಪ್ರೈವೇಟ್ ಪಾರ್ಟನರ್‍ಷಿಪ್ಪಿನ ಒಂದು ಉದ್ಯಮ. ಶಾಸನಸಭೆಗೆ 30-40 ಜನ ತಮ್ಮ ಪಾರ್ಟಿಯಿಂದ ಶಾಸಕರಾಗಿ ಗೆದ್ದು ಬಂದರೆ ಸಾಕು. ಈ ಅಲ್ಪ ಸಂಖ್ಯೆಯ ಶಾಸಕರನ್ನು ಇಟ್ಟುಕೊಂಡು ಉಳಿದ ಪಾರ್ಟಿಗಳ ಜೊತೆಗೆ ವ್ಯವಹಾರ ಕುದುರಿಸುತ್ತಾರೆ. ಅಧಿಕಾರ ಪಡೆದುಕೊಳ್ಳುತ್ತಾರೆ. ತಮ್ಮ ಮಗನಿಗೋ, ಸೊಸೆಗೋ, ಮೊಮ್ಮಗನಿಗೋ ಪಟ್ಟಕಟ್ಟಲು ಅದನ್ನು ಬಳಸಿಕೊಳ್ಳುತ್ತಾರೆ.

ಯಡಿಯೂರಪ್ಪನವರಿಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿತು. ತಮ್ಮ ಮಗನ ಅಧಿಕಾರ ಹೋಯಿತು. ದೇವೇಗೌಡರಿಂದ ವ್ಯಾಪಾರ ಆರಂಭವಾಯಿತು. ಬಿಜೆಪಿ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುವುದಾಗಿ ಬೋರಂಟಿ ಬಿಟ್ಟರು. ಯಡಿಯೂರಪ್ಪನವರು ನಿಮ್ಮ ಸಹಕಾರ ಬೇಕಾಗಿಲ್ಲ. ನಮಗೆ ಬಹುಮತ ಸಿಕ್ಕರೆ ನಿಮ್ಮ ಹಂಗೇನು? ಎಂದರು. ಗೌಡರು ತಮ್ಮ ವರಸೆ ತೋರಿಸಿಯೇ ಬಿಟ್ಟರು. ‘ನಾನು ನಿಮಗೆ ನಿಮ್ಮ ಒಳ್ಳೆಯ ಕೆಲಸಕ್ಕೆ ಮಾತ್ರ ಬೆಂಬಲ ಕೊಡುತ್ತೇನೆ’ ಎಂದು ನಾನು ಹೇಳಿದ್ದು ಎಂದು ತಮ್ಮ ಹಿಂದಿನ ನಿಲುವಿಗೆ ಹೊಸ ವ್ಯಾಖ್ಯಾನ ಮಾಡಿದರು.

ಇನ್ನು ಅಧಿಕಾರಾರೂಢ ಭಾಜಪ ಸರ್ಕಾರದ ಬಗ್ಗೆ ಹೇಳುವುದಾದರೆ, ಅದು ಸರ್ವಾಧಿಕಾರಿ ಮನೋಭಾವದ ಸಂಸ್ಥೆ. Hidden Agenda ಇರುವ ಸಂಸ್ಥೆ. ಹಿಂದುತ್ವ ಪ್ರತಿಪಾದಕರ ಸಂಸ್ಥೆ. ಬಿಜೆಪಿಯೆಂಬುದು ತನ್ನ ಟೆಂಟಕಲ್ಸನ್ನು ಬೆಳೆಸಿಕೊಂಡು ಆಕ್ಟೋಪಸ್‍ನಂತೆ ಇಡೀ ಭಾರತವನ್ನು ತನ್ನದಾಗಿಸಿಕೊಳ್ಳುವ ಮಹತ್ವಾಕಾಂಕ್ಷೆಯುಳ್ಳ ಸಂಸ್ಥೆ. ಒದೀತೀನಿ, ಅದಕ್ಕೆ ತಯಾರಾಗಿ ಎಂದು ಅವರ ಆಡಳಿತ ನೀತಿಯನ್ನು ಒಪ್ಪದವರಿಗೆ ಗೃಹಮಂತ್ರಿ ಅಮಿತ್ ಶಾ ಅಬ್ಬರಿಸಿ ಹೇಳಿದ್ದಾರೆ.

ಚಾಣಕ್ಯನಂತೆ ತನಗಾಗದವರನ್ನು ಮುಗಿಸುವುದು ಹೇಗೆ? ಅವರನ್ನು ಮಣಿಸುವುದು ಹೇಗೆ? ಎಂದೆಲ್ಲ ಯೋಜನೆ ಮಾಡುವುದರಲ್ಲಿ ಯೋಜನೆ ರೂಪಿಸುವುದರಲ್ಲಿ ಮಗ್ನರಾಗಿದ್ದಾರೆ ಮೋದಿ, ಅಮಿತ್ ಶಾ.

ಕರ್ನಾಟಕದಲ್ಲಿ ಪ್ರಥಮ ಪ್ರಯತ್ನದಲ್ಲೇ ದಂತಭಗ್ನರಾದ ಯಡಿಯೂರಪ್ಪನವರು ಮತ್ತೆ ಅಧಿಕಾರಕ್ಕೆ ಬರಲು ಹರಸಾಹಸ ಮಾಡಿದರು. ಆಡಳಿತ ಪಕ್ಷದ ಶಾಸಕರನ್ನು ಖರೀದಿಸುವ, ಪಕ್ಷಾಂತರಿಗೊಳಿಸುವ ತನ್ನ ಮಾತೃಸಂಸ್ಥೆಯನ್ನು ತೊರೆದು ಹೊರಬರುವ ಎಲ್ಲಾ ತಂತ್ರಗಳನ್ನೂ ಮಾಡಿ, ಅದರಲ್ಲಿ ಜಯಶಾಲಿಗಳೂ ಆದರು. ಭಾಜಪದ ಈ ಹುನ್ನಾರವನ್ನು ಶಾಸಕ ಕೃಷ್ಣ ಭೈರೇಗೌಡರು, ಇತ್ತೀಚೆಗೆ ನಡೆದ ಅಸೆಂಬ್ಲಿ ಅಧಿವೇಶನದಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟರು. ಮೋದಿ, ಶಾ ಅವರು ಪಶ್ಚಿಮ ಬಂಗಾಳದಲ್ಲಿ, ಕೇರಳದಲ್ಲಿ ಬಿಜೆಪಿಯನ್ನು ಸ್ಥಾಪಿಸಲು ಮಾಡಿರುವ ತಂತ್ರವೂ ಇಂತಹುದೆ. ದೇಶದ ದಕ್ಷಿಣ ಭಾಗದ ರಾಜ್ಯಗಳಾದ ಆಂಧ್ರ, ರಾಯಲಸೀಮಾ, ಕೇರಳ, ಕರ್ನಾಟಕ, ತಮಿಳುನಾಡುಗಳನ್ನು ಸಂಪೂರ್ಣವಾಗಿ ಬಿಜೆಪಿಮಯ ಮಾಡುವುದು ಹೇಗೆ ಎಂದು ಸಂಚು ನಡೆಸುತ್ತಿದ್ದಾರೆ. ತಮಿಳುನಾಡು ಇವರ ತಂತ್ರಕ್ಕೆ ಸೊಪ್ಪು ಹಾಕಿಲ್ಲ. ಎಲ್ಲ ರಾಜಕೀಯ ಪಕ್ಷಗಳನ್ನು ಹೇಳಹೆಸರಿಲ್ಲದಂತೆ ಮಾಡಿ, ಭಾರತದಲ್ಲಿ ಬಿಜೆಪಿ ಸಾಮ್ರಾಜ್ಯವನ್ನು ಕಟ್ಟಬೇಕೆಂಬ ಕನಸನ್ನು ಕಾಣುತ್ತಿದ್ದಾರೆಯೇ ಮೋದಿ?

ಈ ಪ್ರಯತ್ನವನ್ನು ತಡೆಗಟ್ಟಿ ಪ್ರಜಾಪ್ರಭುತ್ವವನ್ನು ರೂಢಿಸಿಕೊಳ್ಳುವುದು ಇಂದಿನ ಆದ್ಯ ಅಗತ್ಯತೆ.

ಆದರೆ ದೇಶದ ಪರಿಸ್ಥಿತಿಯನ್ನು ಅವಲೋಕಿಸಿದರೆ ಇತರ ರಾಜಕೀಯ ಪಕ್ಷಗಳು ಸೊರಗಿರುವಂತೆ ಕಾಣುತ್ತದೆ. ನಾಯಕತ್ವದ ಅಭಾವ ಎದ್ದು ಕಾಣುತ್ತದೆ. ಜನ ಜಡರಾಗಿದ್ದಾರೆ. ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದಿದೆಯೆಂಬ ಅರಿವು ಜನತೆಗೆ ಬಂದಿಲ್ಲ. ಚುನಾವಣೆಯನ್ನು ಒಂದು ಪ್ರಹಸನ ಎಂದುಕೊಂಡು ಬಿಟ್ಟಿದ್ದಾರೆ ಜನ. ಹಣ ಹೆಂಡಕ್ಕೆ ಮತ ಮಾರಾಟವಾಗುತ್ತದೆ. ಪ್ರಜೆಗಳಿಗೆ ದೇಶದ ಭವಿಷ್ಯವನ್ನು ರೂಪಿಸಬೇಕಾದವರು ನಾವು ಎಂಬ ಅರಿವಿಲ್ಲವಾಗಿದೆ. ಇದರ ಪೂರ್ಣ ಲಾಭವನ್ನು ಮೋದಿ ಪಡೆದುಕೊಳ್ಳುತ್ತಿದ್ದಾರೆ.

ಪ್ರಜಾಪ್ರಭುತ್ವವನ್ನು ಸುರಕ್ಷಿತಗೊಳಿಸಲು ವಿಚಾರವಂತರು, ಪ್ರಜ್ಞಾವಂತರು, ಹೊಸ ಮನ್ವಂತರವನ್ನು ಕಾಣಬೇಕು ಎಂದು ಆಶಿಸುವ ಜನ ಒಂದಾಗಿ ಸಂಘಟಿತರಾಗಬೇಕು. ದೇಶದ ತುಂಬಾ ರಾಜಕೀಯ ಸಮ್ಮೇಳನಗಳನ್ನು ನಡೆಸಿ ಇಂದಿನ ರಾಜಕೀಯವನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು. ನಮಗೆ ಎಂತಹ ರಾಷ್ಟ್ರ ಬೇಕು, ಎಂತಹ ವ್ಯವಸ್ಥೆ ಬೇಕು ಎಂಬುದನ್ನು ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೆ ಜನ ಜಾಗೃತಿ ಮೂಡಿಸುವ ಮೂಲಕ ಮನವರಿಕೆ ಮಾಡಿಸಬೇಕು. ಈ ಕೆಲಸವನ್ನು ರಾಜಕೀಯ ಪಕ್ಷಗಳಿಗೆ ಬಿಟ್ಟುಕೊಟ್ಟು ಪ್ರಜೆ ನಿಷ್ಕ್ರಿಯನಾದರೆ ಭಾರತ ಹಿಟ್ಲರ್‍ನ ಜರ್ಮನಿಯಾಗುವ ಸಂಭವವಿದೆ.

Eternal Vigilance is The Price of Liberty

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...