Homeಕರ್ನಾಟಕಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

ಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

- Advertisement -
- Advertisement -

ಸಮಾನತೆಯ ತತ್ವ ಸಾರಿದ ಬಸವಾದಿ ಶರಣರ ಆಶಯಗಳನ್ನು ಜನಮಾನಸಕ್ಕೆ ಮುಟ್ಟಿಸುವ ಉದ್ದೇಶವಷ್ಟೇ ಅಲ್ಲದೆ ’ಲಿಂಗಾಯತ ಸ್ವತಂತ್ರ ಧರ್ಮ’ ಆಗಬೇಕು, ಅದಕ್ಕೆ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂದು ರಾಜ್ಯದ ವಿವಿಧ ಮಠಾಧೀಶರು ಮತ್ತು ಬಸವಪರ ಸಂಘಟನೆಗಳ ನೇತೃತ್ವದಲ್ಲಿ ಹಿಂದಿನಿಂದಲೂ ಹೋರಾಟಗಳು ನಡೆಯುತ್ತಿವೆ. 2017ರಲ್ಲಿ ಮಾತೆ ಮಹಾದೇವಿ ಅವರ ನೇತೃತ್ವದಲ್ಲಿ ಮೊದಲು ಬೀದರ್‌ದಿಂದ ಆರಂಭವಾದ ಹೋರಾಟ ರಾಜ್ಯವಷ್ಟೇ ಅಲ್ಲದೆ ಮಹಾರಾಷ್ಟ್ರ, ದೆಹಲಿಗಳಲ್ಲಿಯೂ ನಡೆದು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು

ಕಾಯಕ ಸಮುದಾಯಗಳು ಕೂಡಿ ಕಟ್ಟಿದ ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವಲ್ಲ; ಇದೊಂದು ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಧರ್ಮ. ಹೀಗಾಗಿ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂಬ ಪ್ರಬಲ ಒತ್ತಾಯವನ್ನು ಲಿಂಗಾಯತ ಸಮುದಾಯ ಹಲವು ವರ್ಷಗಳಿಂದ ಮಾಡುತ್ತಿದೆ. ಈ ಹೋರಾಟಗಳ ಪ್ರತಿಫಲವಾಗಿ 2013-18ರವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚಿಸಿದ್ದ ಅಂದಿನ ಸಿಎಂ ಸಿದ್ದರಾಮಯ್ಯ ಅವರು ನ್ಯಾ. ನಾಗಮೋಹನ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು; ಆ ಮಟ್ಟಕ್ಕೆ ಲಿಂಗಾಯತ ಸಮುದಾಯ ಯಶಸ್ಸು ಕಂಡಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ಒಪ್ಪಿರಲಿಲ್ಲ. ಅಲ್ಲಿಂದ ಲಿಂಗಾಯತ ಧರ್ಮ ಮಾನ್ಯತೆ ಹೋರಾಟ ಮುಂದುವರಿಯಲಿಲ್ಲ. ನಂತರ ರಾಜ್ಯದಲ್ಲಿ ಸರ್ಕಾರ ಬದಲಾಯಿತು.

ಮಾತೆ ಮಹಾದೇವಿ

ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತ ಸಮುದಾಯ ಸೇರಿದಂತೆ ದೇಶದ ನಾನಾ ರಾಜ್ಯಗಳ ಲಿಂಗಾಯತರನ್ನು ಒಗ್ಗೂಡಿಸಿ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಹೋರಾಟ ಆರಂಭಿಸಬೇಕೆಂಬ ಉದ್ದೇಶದಿಂದ ಜಾಗತಿಕ ಲಿಂಗಾಯತ ಮಹಾಸಭಾ ರಚನೆಯಾಯಿತು. ಅದರ ವತಿಯಿಂದ, ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಳ್ಳುವುದಕ್ಕಾಗಿ, ಮುಂದಿನ ಹೋರಾಟದ ದಿಕ್ಕುದೆಸೆ ಕಂಡುಕೊಳ್ಳುವುದಕ್ಕಾಗಿ ಹಾಗೂ ಸಮುದಾಯದ ಜಾಗೃತಿಗಾಗಿ ಮಾರ್ಚ್ 4, 5ರಂದು ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಹಮ್ಮಿಕೊಳ್ಳಲಾಗಿತ್ತು.

ದೇಶದ ನಾನಾ ಭಾಗಗಳಿಂದ ಲಿಂಗಾಯತ ಸಮುದಾಯದವರನ್ನು ಆಹ್ವಾನಿಸಿ ಧರ್ಮ ಮಾನ್ಯತೆಯ ಹೋರಾಟ, ಮೀಸಲಾತಿ, ಜನಗಣತಿ ಸೇರಿದಂತೆ ಇತರೆ ವಿಷಯಗಳನ್ನು ಕುರಿತು ಚರ್ಚಿಸುವುದು ಅಧಿವೇಶನದ ಘನ ಉದ್ದೇಶವಾಗಿತ್ತು.

ಇದನ್ನೂ ಓದಿ: ಒಕ್ಕಲಿಗ-ಲಿಂಗಾಯಿತರ ಮೀಸಲಾತಿ ಹೆಚ್ಚಳ; ಮೂಗಿಗೆ ತುಪ್ಪ ಸವರಿದ ಸರ್ಕಾರ

ರಾಷ್ಟ್ರೀಯ ಲಿಂಗಾಯತ ಅಧಿವೇಶನವನ್ನು ಎರಡುಮೂರು ವರ್ಷಗಳ ಹಿಂದೆಯೇ ಮಾಡಬೇಕಿತ್ತು. ಆದರೆ ಕೋವಿಡ್ ಕಾರಣ ಸಾಧ್ಯವಾಗದಿದ್ದರಿಂದ ಈ ವರ್ಷ ಮಾರ್ಚ್ 4-5ರಂದು ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದರ್ ಹೇಳಿದರು. ಅಧಿವೇಶನವು ಎರಡು ದಿನಗಳ ಕಾಲ ಬಸವಕಲ್ಯಾಣದ ಥೇರ ಮೈದಾನದಲ್ಲಿ ನಡೆಸಲು ಅನುಮತಿ ಪಡೆಯಲಾಗಿತ್ತು. ಎಲ್ಲಾ ಸಿದ್ಧತೆಗಳು ನಡೆದಿದ್ದವು.

ಅಧಿವೇಶನದ ಮುನ್ನಾ ದಿನವೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಜಾಗತಿಕ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಎರಡು ದಿನದ ಅಧಿವೇಶನದ ಮುನ್ನಾ ದಿನ ಅಂದರೆ ಮಾರ್ಚ್ 3ರಂದು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯನ್ನು ಏಕಾಏಕಿ ನಿಗದಿಗೊಳಿಸಿ ಅದೇ ಸ್ಥಳದಲ್ಲಿ ಆಯೋಜಿಸಲಾಯಿತು. ಪೂರ್ವ ನಿಯೋಜಿತವಾಗಿದ್ದ ಲಿಂಗಾಯತ ಮಹಾ ಅಧಿವೇಶನವನ್ನು ಅದೇ ಜಾಗದಲ್ಲಿ ನಡೆಸಲು ಒಂದಿಷ್ಟು ಮುಜುಗರವೂ ಉಂಟಾಯಿತು. ಬೃಹತ್ ವೇದಿಕೆ ಸೇರಿದಂತೆ ಬೇರೆ ರಾಜ್ಯಗಳಿಂದ ಅಧಿವೇಶನಕ್ಕೆ ಆಗಮಿಸುವ ವಿವಿಧ ಮಠಾಧೀಶರಿಗೆ, ಲಿಂಗಾಯತ ಅನುಯಾಯಿಗಳ ವಾಸ್ತವ್ಯಕ್ಕೆ ವಿವಿಧ ಕಾಲೇಜು, ಅನುಭವ ಮಂಟಪ ಸೇರಿದಂತೆ ನಾನಾ ಕಡೆ ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಬಿಜೆಪಿಯ ಕಾರ್ಯಕ್ರಮ ನಿಗದಿಯಾದ ಕಾರಣ ಹಲವರಿಗೆ ಅನುಮಾನ ಹುಟ್ಟಿಸಿತು.

ಅಧಿವೇಶನ ಮುನ್ನಾ ದಿನವೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವೇದಿಕೆ ಮೇಲಿದ್ದ ಬಿಜೆಪಿ ಕಾರ್ಯಕ್ರಮ ಆಯೋಜಿಸಿದ ಹಿಂದಿನ ಮರ್ಮವೇನು ಎಂಬುದು ಹಲವರಿಗೆ ಒಳಗೊಳಗೆ ಅನುಮಾನ ಕಾಡಿತು.

ಮಾರ್ಚ್ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವಕಲ್ಯಾಣದ ಅನುಭವ ಮಂಟಪದಿಂದ ಯಾತ್ರೆಗೆ ಚಾಲನೆ ನೀಡಿ, ಬೃಹತ್ ರೋಡ್ ಶೋ ಹಾಗೂ ಬಹಿರಂಗ ಸಮಾವೇಶ ನಡೆಸಿದರು. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರು ಭಾಗವಹಿಸಿದ್ದರು. ವಿಜಯ ಸಂಕಲ್ಪ ಯಾತ್ರೆ ನೆಪದಲ್ಲಿ ಲಿಂಗಾಯತ ಸಮುದಾಯವನ್ನು ಸೆಳೆಯುವ ಪ್ರಯತ್ನ ಈ ಕಾರ್ಯಕ್ರಮದಲ್ಲಿ ನಡೆಯಿತು. ಲಿಂಗಾಯತರ ’ಜನಪ್ರಿಯ’ ನಾಯಕ ಎಂದು ಗುರುತಿಸಿಕೊಂಡಿದ್ದ ಬಿಎಸ್‌ವೈ ಅವರಿಗೆ ದಿಢೀರನೆ ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿಗೆ ಲಿಂಗಾಯತ ಸಮುದಾಯದ ಸಿಟ್ಟನ್ನು ಶಮನಗೊಳಿಸುವುದು ಅತ್ಯಗತ್ಯವಾಗಿತ್ತು. ಅದಕ್ಕಾಗಿ ಈ ವೇದಿಕೆ ಸಜ್ಜಾಗಿತ್ತು. ಈ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರಿಂದ ಮಾತನಾಡಿಸಿ, ’ನನಗೆ ಯಾರೂ ಕುರ್ಚಿಯಿಂದ ಕೆಳಗಿಳಿಸಲಿಲ್ಲ, ನಾನೇ ಸ್ವಇಚ್ಛೆಯಿಂದ ಇಳಿದಿದ್ದೇನೆ, ಆದರೆ ಬಿಜೆಪಿ ಪಕ್ಷ ಸಂಘಟಿಸಲು ಉಸಿರಿರುವವರೆಗೆ ಶ್ರಮಿಸುವೆ’ ಎಂಬ ಸಂದೇಶವನ್ನು ರವಾನಿಸಲಾಗಿದೆ. ಇದರಿಂದ ಲಿಂಗಾಯತ ಸಮುದಾಯದ ಕೋಪ ಇಳಿಸಿದ್ದು ಅಷ್ಟೇ ಅಲ್ಲದೆ ಬಸವಕಲ್ಯಾಣದಲ್ಲಿ ಬಿಜೆಪಿ ಭದ್ರಕೋಟೆಯಾಗಿ ಕಟ್ಟಲು ಸಹಕಾರಿಯಾಗಿದೆ ಎಂದು ಮಾತನಾಡಿಕೊಳ್ಳಲಾಗುತ್ತಿದೆ.

ಬಸವಕಲ್ಯಾಣದ ಥೇರ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇದಿಕೆ ಕಾರ್ಯಕ್ರಮ ಮುಗಿದ ಮರುದಿನವೇ ಅದೇ ಸ್ಥಳ ಹಾಗೂ ಅದೇ ವೇದಿಕೆಯಲ್ಲಿ ಲಿಂಗಾಯತ ಅಧಿವೇಶನ ಜರುಗಿತು. ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ನಾಯಕರ ಅಬ್ಬರದ ಬ್ಯಾನರ್ ಮತ್ತು ಧ್ವಜಗಳು ಕಲ್ಯಾಣ ನೆಲದಲ್ಲಿ ರಾರಾಜಿಸುತ್ತಿದ್ದವು. ಅವುಗಳ ಮಧ್ಯೆ ಲಿಂಗಾಯತ ಅಧಿವೇಶನದ ಧ್ವಜಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಬಸವಾದಿ ಶರಣರ ಭಾವಚಿತ್ರಗಳು ಎದ್ದು ಕಾಣುತ್ತಿದ್ದವು.

ಜಾನಪದ ವಿದ್ವಾಂಸ ಗೋ.ರು. ಚನ್ನಬಸಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಈ ಅಧಿವೇಶನ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಪಡೆಯಲು ಮುಂದಿನ ಹೋರಾಟ ಏನು? ಮೀಸಲಾತಿ ಹೇಗೆ ಸಿಗುತ್ತದೆ? ಕೇಂದ್ರಕ್ಕೆ ಶಿಫಾರಸ್ಸು ಮಾಡುವುದು ಸೇರಿದಂತೆ ವೀರಶೈವ-ಲಿಂಗಾಯತ ಗೊಂದಲ ಕುರಿತು ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆದವು.

ಬಾಲಾಜಿ ಕುಂಬಾರ ಚಟ್ನಾಳ

ಬಾಲಾಜಿ ಕುಂಬಾರ ಚಟ್ನಾಳ
ಬೀದರ್‌ನಲ್ಲಿ ವಾಸವಿರುವ ಬಾಲಾಜಿ ಕುಂಬಾರ ಚಟ್ನಾಳರವರು ಶಿಕ್ಷಕರು ಮತ್ತು ಯುವ ಬರಹಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...