Homeಕರ್ನಾಟಕಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

ಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

- Advertisement -
- Advertisement -

ಸಮಾನತೆಯ ತತ್ವ ಸಾರಿದ ಬಸವಾದಿ ಶರಣರ ಆಶಯಗಳನ್ನು ಜನಮಾನಸಕ್ಕೆ ಮುಟ್ಟಿಸುವ ಉದ್ದೇಶವಷ್ಟೇ ಅಲ್ಲದೆ ’ಲಿಂಗಾಯತ ಸ್ವತಂತ್ರ ಧರ್ಮ’ ಆಗಬೇಕು, ಅದಕ್ಕೆ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂದು ರಾಜ್ಯದ ವಿವಿಧ ಮಠಾಧೀಶರು ಮತ್ತು ಬಸವಪರ ಸಂಘಟನೆಗಳ ನೇತೃತ್ವದಲ್ಲಿ ಹಿಂದಿನಿಂದಲೂ ಹೋರಾಟಗಳು ನಡೆಯುತ್ತಿವೆ. 2017ರಲ್ಲಿ ಮಾತೆ ಮಹಾದೇವಿ ಅವರ ನೇತೃತ್ವದಲ್ಲಿ ಮೊದಲು ಬೀದರ್‌ದಿಂದ ಆರಂಭವಾದ ಹೋರಾಟ ರಾಜ್ಯವಷ್ಟೇ ಅಲ್ಲದೆ ಮಹಾರಾಷ್ಟ್ರ, ದೆಹಲಿಗಳಲ್ಲಿಯೂ ನಡೆದು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು

ಕಾಯಕ ಸಮುದಾಯಗಳು ಕೂಡಿ ಕಟ್ಟಿದ ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವಲ್ಲ; ಇದೊಂದು ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಧರ್ಮ. ಹೀಗಾಗಿ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂಬ ಪ್ರಬಲ ಒತ್ತಾಯವನ್ನು ಲಿಂಗಾಯತ ಸಮುದಾಯ ಹಲವು ವರ್ಷಗಳಿಂದ ಮಾಡುತ್ತಿದೆ. ಈ ಹೋರಾಟಗಳ ಪ್ರತಿಫಲವಾಗಿ 2013-18ರವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚಿಸಿದ್ದ ಅಂದಿನ ಸಿಎಂ ಸಿದ್ದರಾಮಯ್ಯ ಅವರು ನ್ಯಾ. ನಾಗಮೋಹನ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು; ಆ ಮಟ್ಟಕ್ಕೆ ಲಿಂಗಾಯತ ಸಮುದಾಯ ಯಶಸ್ಸು ಕಂಡಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ಒಪ್ಪಿರಲಿಲ್ಲ. ಅಲ್ಲಿಂದ ಲಿಂಗಾಯತ ಧರ್ಮ ಮಾನ್ಯತೆ ಹೋರಾಟ ಮುಂದುವರಿಯಲಿಲ್ಲ. ನಂತರ ರಾಜ್ಯದಲ್ಲಿ ಸರ್ಕಾರ ಬದಲಾಯಿತು.

ಮಾತೆ ಮಹಾದೇವಿ

ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತ ಸಮುದಾಯ ಸೇರಿದಂತೆ ದೇಶದ ನಾನಾ ರಾಜ್ಯಗಳ ಲಿಂಗಾಯತರನ್ನು ಒಗ್ಗೂಡಿಸಿ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಹೋರಾಟ ಆರಂಭಿಸಬೇಕೆಂಬ ಉದ್ದೇಶದಿಂದ ಜಾಗತಿಕ ಲಿಂಗಾಯತ ಮಹಾಸಭಾ ರಚನೆಯಾಯಿತು. ಅದರ ವತಿಯಿಂದ, ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಳ್ಳುವುದಕ್ಕಾಗಿ, ಮುಂದಿನ ಹೋರಾಟದ ದಿಕ್ಕುದೆಸೆ ಕಂಡುಕೊಳ್ಳುವುದಕ್ಕಾಗಿ ಹಾಗೂ ಸಮುದಾಯದ ಜಾಗೃತಿಗಾಗಿ ಮಾರ್ಚ್ 4, 5ರಂದು ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಹಮ್ಮಿಕೊಳ್ಳಲಾಗಿತ್ತು.

ದೇಶದ ನಾನಾ ಭಾಗಗಳಿಂದ ಲಿಂಗಾಯತ ಸಮುದಾಯದವರನ್ನು ಆಹ್ವಾನಿಸಿ ಧರ್ಮ ಮಾನ್ಯತೆಯ ಹೋರಾಟ, ಮೀಸಲಾತಿ, ಜನಗಣತಿ ಸೇರಿದಂತೆ ಇತರೆ ವಿಷಯಗಳನ್ನು ಕುರಿತು ಚರ್ಚಿಸುವುದು ಅಧಿವೇಶನದ ಘನ ಉದ್ದೇಶವಾಗಿತ್ತು.

ಇದನ್ನೂ ಓದಿ: ಒಕ್ಕಲಿಗ-ಲಿಂಗಾಯಿತರ ಮೀಸಲಾತಿ ಹೆಚ್ಚಳ; ಮೂಗಿಗೆ ತುಪ್ಪ ಸವರಿದ ಸರ್ಕಾರ

ರಾಷ್ಟ್ರೀಯ ಲಿಂಗಾಯತ ಅಧಿವೇಶನವನ್ನು ಎರಡುಮೂರು ವರ್ಷಗಳ ಹಿಂದೆಯೇ ಮಾಡಬೇಕಿತ್ತು. ಆದರೆ ಕೋವಿಡ್ ಕಾರಣ ಸಾಧ್ಯವಾಗದಿದ್ದರಿಂದ ಈ ವರ್ಷ ಮಾರ್ಚ್ 4-5ರಂದು ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದರ್ ಹೇಳಿದರು. ಅಧಿವೇಶನವು ಎರಡು ದಿನಗಳ ಕಾಲ ಬಸವಕಲ್ಯಾಣದ ಥೇರ ಮೈದಾನದಲ್ಲಿ ನಡೆಸಲು ಅನುಮತಿ ಪಡೆಯಲಾಗಿತ್ತು. ಎಲ್ಲಾ ಸಿದ್ಧತೆಗಳು ನಡೆದಿದ್ದವು.

ಅಧಿವೇಶನದ ಮುನ್ನಾ ದಿನವೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಜಾಗತಿಕ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಎರಡು ದಿನದ ಅಧಿವೇಶನದ ಮುನ್ನಾ ದಿನ ಅಂದರೆ ಮಾರ್ಚ್ 3ರಂದು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯನ್ನು ಏಕಾಏಕಿ ನಿಗದಿಗೊಳಿಸಿ ಅದೇ ಸ್ಥಳದಲ್ಲಿ ಆಯೋಜಿಸಲಾಯಿತು. ಪೂರ್ವ ನಿಯೋಜಿತವಾಗಿದ್ದ ಲಿಂಗಾಯತ ಮಹಾ ಅಧಿವೇಶನವನ್ನು ಅದೇ ಜಾಗದಲ್ಲಿ ನಡೆಸಲು ಒಂದಿಷ್ಟು ಮುಜುಗರವೂ ಉಂಟಾಯಿತು. ಬೃಹತ್ ವೇದಿಕೆ ಸೇರಿದಂತೆ ಬೇರೆ ರಾಜ್ಯಗಳಿಂದ ಅಧಿವೇಶನಕ್ಕೆ ಆಗಮಿಸುವ ವಿವಿಧ ಮಠಾಧೀಶರಿಗೆ, ಲಿಂಗಾಯತ ಅನುಯಾಯಿಗಳ ವಾಸ್ತವ್ಯಕ್ಕೆ ವಿವಿಧ ಕಾಲೇಜು, ಅನುಭವ ಮಂಟಪ ಸೇರಿದಂತೆ ನಾನಾ ಕಡೆ ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಬಿಜೆಪಿಯ ಕಾರ್ಯಕ್ರಮ ನಿಗದಿಯಾದ ಕಾರಣ ಹಲವರಿಗೆ ಅನುಮಾನ ಹುಟ್ಟಿಸಿತು.

ಅಧಿವೇಶನ ಮುನ್ನಾ ದಿನವೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವೇದಿಕೆ ಮೇಲಿದ್ದ ಬಿಜೆಪಿ ಕಾರ್ಯಕ್ರಮ ಆಯೋಜಿಸಿದ ಹಿಂದಿನ ಮರ್ಮವೇನು ಎಂಬುದು ಹಲವರಿಗೆ ಒಳಗೊಳಗೆ ಅನುಮಾನ ಕಾಡಿತು.

ಮಾರ್ಚ್ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವಕಲ್ಯಾಣದ ಅನುಭವ ಮಂಟಪದಿಂದ ಯಾತ್ರೆಗೆ ಚಾಲನೆ ನೀಡಿ, ಬೃಹತ್ ರೋಡ್ ಶೋ ಹಾಗೂ ಬಹಿರಂಗ ಸಮಾವೇಶ ನಡೆಸಿದರು. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರು ಭಾಗವಹಿಸಿದ್ದರು. ವಿಜಯ ಸಂಕಲ್ಪ ಯಾತ್ರೆ ನೆಪದಲ್ಲಿ ಲಿಂಗಾಯತ ಸಮುದಾಯವನ್ನು ಸೆಳೆಯುವ ಪ್ರಯತ್ನ ಈ ಕಾರ್ಯಕ್ರಮದಲ್ಲಿ ನಡೆಯಿತು. ಲಿಂಗಾಯತರ ’ಜನಪ್ರಿಯ’ ನಾಯಕ ಎಂದು ಗುರುತಿಸಿಕೊಂಡಿದ್ದ ಬಿಎಸ್‌ವೈ ಅವರಿಗೆ ದಿಢೀರನೆ ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿಗೆ ಲಿಂಗಾಯತ ಸಮುದಾಯದ ಸಿಟ್ಟನ್ನು ಶಮನಗೊಳಿಸುವುದು ಅತ್ಯಗತ್ಯವಾಗಿತ್ತು. ಅದಕ್ಕಾಗಿ ಈ ವೇದಿಕೆ ಸಜ್ಜಾಗಿತ್ತು. ಈ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರಿಂದ ಮಾತನಾಡಿಸಿ, ’ನನಗೆ ಯಾರೂ ಕುರ್ಚಿಯಿಂದ ಕೆಳಗಿಳಿಸಲಿಲ್ಲ, ನಾನೇ ಸ್ವಇಚ್ಛೆಯಿಂದ ಇಳಿದಿದ್ದೇನೆ, ಆದರೆ ಬಿಜೆಪಿ ಪಕ್ಷ ಸಂಘಟಿಸಲು ಉಸಿರಿರುವವರೆಗೆ ಶ್ರಮಿಸುವೆ’ ಎಂಬ ಸಂದೇಶವನ್ನು ರವಾನಿಸಲಾಗಿದೆ. ಇದರಿಂದ ಲಿಂಗಾಯತ ಸಮುದಾಯದ ಕೋಪ ಇಳಿಸಿದ್ದು ಅಷ್ಟೇ ಅಲ್ಲದೆ ಬಸವಕಲ್ಯಾಣದಲ್ಲಿ ಬಿಜೆಪಿ ಭದ್ರಕೋಟೆಯಾಗಿ ಕಟ್ಟಲು ಸಹಕಾರಿಯಾಗಿದೆ ಎಂದು ಮಾತನಾಡಿಕೊಳ್ಳಲಾಗುತ್ತಿದೆ.

ಬಸವಕಲ್ಯಾಣದ ಥೇರ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇದಿಕೆ ಕಾರ್ಯಕ್ರಮ ಮುಗಿದ ಮರುದಿನವೇ ಅದೇ ಸ್ಥಳ ಹಾಗೂ ಅದೇ ವೇದಿಕೆಯಲ್ಲಿ ಲಿಂಗಾಯತ ಅಧಿವೇಶನ ಜರುಗಿತು. ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ನಾಯಕರ ಅಬ್ಬರದ ಬ್ಯಾನರ್ ಮತ್ತು ಧ್ವಜಗಳು ಕಲ್ಯಾಣ ನೆಲದಲ್ಲಿ ರಾರಾಜಿಸುತ್ತಿದ್ದವು. ಅವುಗಳ ಮಧ್ಯೆ ಲಿಂಗಾಯತ ಅಧಿವೇಶನದ ಧ್ವಜಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಬಸವಾದಿ ಶರಣರ ಭಾವಚಿತ್ರಗಳು ಎದ್ದು ಕಾಣುತ್ತಿದ್ದವು.

ಜಾನಪದ ವಿದ್ವಾಂಸ ಗೋ.ರು. ಚನ್ನಬಸಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಈ ಅಧಿವೇಶನ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಪಡೆಯಲು ಮುಂದಿನ ಹೋರಾಟ ಏನು? ಮೀಸಲಾತಿ ಹೇಗೆ ಸಿಗುತ್ತದೆ? ಕೇಂದ್ರಕ್ಕೆ ಶಿಫಾರಸ್ಸು ಮಾಡುವುದು ಸೇರಿದಂತೆ ವೀರಶೈವ-ಲಿಂಗಾಯತ ಗೊಂದಲ ಕುರಿತು ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆದವು.

ಬಾಲಾಜಿ ಕುಂಬಾರ ಚಟ್ನಾಳ

ಬಾಲಾಜಿ ಕುಂಬಾರ ಚಟ್ನಾಳ
ಬೀದರ್‌ನಲ್ಲಿ ವಾಸವಿರುವ ಬಾಲಾಜಿ ಕುಂಬಾರ ಚಟ್ನಾಳರವರು ಶಿಕ್ಷಕರು ಮತ್ತು ಯುವ ಬರಹಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...