Homeಕರ್ನಾಟಕಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರಿಗೆ ಸಂಘ ಪರಿವಾರದ ಬೆಂಬಲಿಗರು ಆನ್‌ಲೈನ್‌ನಲ್ಲಿ ಸರಣಿ ಕೊಲೆ ಬೆದರಿಕೆಯೊಡ್ಡಿದ್ದಾರೆ. ಕೆಲವರು ಪತ್ರಕರ್ತನ ಮೇಲೆ ಹಿಂಸಾಚಾರ ನಡೆಸಲು ಪ್ರಚೋದನೆ ನೀಡುತ್ತಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಜುಬೇರ್ ಅವರ ವಿರುದ್ಧ ʼಅಖ್ಲಾಕ್‌ʼ ರೀತಿಯ ದಾಳಿ ಸೇರಿದಂತೆ ವಿವಿಧ ಬೆದರಿಕೆಗಳನ್ನು ಒಡ್ಡಲಾಗಿದೆ. ಝುಬೈರ್‌ ಕುಟುಂಬದ ಮಹಿಳೆಯರನ್ನು ನಿಂದಿಸಿದ ವ್ಯಕ್ತಿಯನ್ನು ಎದುರು ಹಾಕಿಕೊಂಡ ಬಳಿಕ ಜುಬೇರ್ ಅವರಿಗೆ ಈ ಬೆದರಿಕೆಗಳು ಬರಲು ಆರಂಭವಾಗಿವೆ.

ಇನ್ನೊಂದೆಡೆ, ಸುಪ್ರೀಂ ಕೋರ್ಟ್‌ನ ವಕೀಲ ಶಶಾಂಕ್ ಶೇಖರ್ ಝಾ ಅವರು ”ತಾನು ಜುಬೇರ್ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಟ್ಟೀಟ್ ಮಾಡಿದ್ದಾರೆ.

ಜುಬೈರ್ ವಿರುದ್ಧ ಬೆದರಿಕೆ ಹಾಕಿದವರಲ್ಲಿ ಬಲಪಂಥೀಯ ಅಂಕಣಕಾರ ಹರ್ಷಿಲ್ ಮೆಹ್ತಾ ಮತ್ತು ಮಾಜಿ ಒಪಿಂಡಿಯಾ ಸಂಪಾದಕ ಅಜೀತ್ ಭಾರ್ತಿ ಸೇರಿದ್ದಾರೆ.

”ಈ ಬಾರಿ ಅವರು (ಜುಬೈರ್) ಸಂಪೂರ್ಣವಾಗಿ ಸುನ್ನತಿಯಾಗುತ್ತಾರೆ, ಅವರಿಗೆ ಮೂತ್ರ ವಿಸರ್ಜನೆಗೆ ಪೈಪ್ ಅಗತ್ಯವಿದೆ” ಎಂದು ಅಜೀತ್ ಭಾರ್ತಿ ಟ್ವೀಟ್ ಮಾಡಿದ್ದಾರೆ. ಕೆಲವು ಬಳಕೆದಾರರು ಒಂಟಿ ತೋಳದ ದಾಳಿಗಳನ್ನು ಮತ್ತು “ಅಖ್ಲಾಕ್” ನಂತೆ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. 2015ರಲ್ಲಿ ಉತ್ತರ ಪ್ರದೇಶದ ದಾದ್ರಿ ಜಿಲ್ಲೆಯಲ್ಲಿ ದನದ ಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಮೊಹಮ್ಮದ್ ಅಖ್ಲಾಕ್ ಅವರನ್ನು ಗುಂಪೊಂದು ಹೊಡೆದು ಕೊಂದಿತ್ತು.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಈ ಬಗ್ಗೆ ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಪ್ರತೀಕ್ ಸಿನ್ಹಾ ಪ್ರತಿಕ್ರಿಯಿಸಿದ್ದು, ”ಇನ್ನೂ ನಾವು ನಮ್ಮ ವಕೀಲರೊಂದಿಗೆ ಸಮಾಲೋಚಿಸುತ್ತಿದ್ದೇವೆ ಮತ್ತು ಸರಿಯಾದ ಕಾನೂನು ಕ್ರಮವನ್ನು ಕಂಡುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

”ಈ ಹಿಂದೆ, ನನಗೆ ನಿಂದನೆಯ ಸುರಿಮಳೆ ಬಂದಾಗ ಅವುಗಳನ್ನು ನಿರ್ಲಕ್ಷಿಸಿ, ನಕ್ಕು ಸುಮ್ಮನಾಗುತ್ತಿದ್ದೆ. ಆದರೆ ಇತ್ತಿಚೆಗೆ ತಮಿಳುನಾಡಿಗೆ ಬಿಹಾರದಿಂದ ವಲಸೆ ಬಂದ ಕಾರ್ಮಿಕರ ಮೇಲೆ ಕೊಲೆ ದಾಳಿ ನಡೆದಿವೆ ಎನ್ನುವ ಸುಳ್ಳು ಸುದ್ದಿಯನ್ನು ಭೇದಿಸಿದ ಮೇಲೆ ನಿರಂತರವಾಗಿ “ದೈಹಿಕವಾಗಿ ಹಾನಿ ಮಾಡುವ ಮತ್ತು ನನ್ನನ್ನು ಮುಗಿಸುವ” ಕುರಿತಾದ ಟ್ವೀಟ್‌ಗಳೇ ಹೆಚ್ಚಾಗಿವೆ. ಈ ಹಿಂದೆ ತಮಿಳುನಾಡಿನಿಂದ ಬೆದರಿಕೆಗಳು ಬಂದಿದ್ದವು, ಆದರೆ ಈ ಬಾರಿ ಬೆದರಿಕೆಗಳು ಹೆಚ್ಚು ಸ್ಪಷ್ಟವಾಗಿವೆ” ಎಂದು ಜುಬೈರ್ ದಿ ವೈರ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯಿಸಿದ್ದು, ”ಯಾವುದೇ ಜೀವ ಬೆದರಿಕೆ ಇರುವ ಬಗ್ಗೆ ನಮಗೆ ತಿಳಿದಿಲ್ಲ, ಅಂತಹ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಒಂದುವೇಳೆ ಜುಬೈರ್ ನಮ್ಮನ್ನು ಸಂಪರ್ಕಿಸಿದರೆ, ಪ್ರಕರಣದ ಆಧಾರದ ಮೇಲೆ ಭದ್ರತೆಯನ್ನು ನೀಡಲು ನಾವು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕೆಲ ವಾರಗಳಿಂದ ಬಲಪಂಥೀಯ ಸಾಮಾಜಿಕ ಮಾಧ್ಯಮ ಪುಟಗಳು, ಬಿಜೆಪಿ ನಾಯಕರು ಮತ್ತು ಕೆಲವು ಮುಖ್ಯವಾಹಿನಿಯ ಸುದ್ದಿ ವಾಹಿನಿಗಳು, ಬಿಹಾರದಿಂದ ವಲಸೆ ಬಂದಿರುವ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಹತ್ಯೆ ಮಾಡಲಾಗುತ್ತಿದೆ ಎಂದು ತಪ್ಪಾಗಿ ಹೇಳಿದ್ದರು. ಕೆಲವು ನಕಲಿ ವಿಡಿಯೋಗಳನ್ನು ಹಂಚಿಕೊಳ್ಳಲಾಗಿತ್ತು.

ಆದರೆ, ಈ ಸುಳ್ಳು ಸುದ್ದಿಯನ್ನು ಭೇದಿಸಿದ  ಸತ್ಯ-ಪರೀಕ್ಷಕ (ಫ್ಯಾಕ್ಟ್‌ ಚೆಕ್ಕರ್) ಜುಬೈರ್ ಅವರು, ತಮಿಳುನಾಡಿನ ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ದಿ ಮತ್ತು ಈ ಸುಳ್ಳು ಸುದ್ದಿ ಜೊತೆಗೆ ಹರಿದಾಡುತ್ತಿರುವ ವೀಡಿಯೊಗಳಿಗೂ ಸಂಬಂಧವಿಲ್ಲ ಎಂದು ವರದಿ ಮಾಡಿದ್ದರು.

ಇದೀಗ ಸುಳ್ಳು ಸುದ್ದಿ ಪ್ರಚಾರ ಮಾಡಿದ ಉತ್ತರ ಪ್ರದೇಶ ಬಿಜೆಪಿ ವಕ್ತಾರ ಪ್ರಶಾಂತ್ ಉಮ್ರಾವ್, ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್, ಬಲಪಂಥೀಯ ವೆಬ್‌ಸೈಟ್ ಆಪ್ಇಂಡಿಯಾದ ಸಂಪಾದಕ ನೂಪುರ್ ಶರ್ಮಾ ಮತ್ತು ಸಿಇಒ ರಾಹುಲ್ ರೌಶನ್ ಮತ್ತು ಕೆಲವು ಯೂಟ್ಯೂಬರ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...