Homeಮುಖಪುಟಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: BRS ನಾಯಕಿಗೆ ಸೀತಾರಾಮ್ ಯೆಚೂರಿ ಬೆಂಬಲ

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: BRS ನಾಯಕಿಗೆ ಸೀತಾರಾಮ್ ಯೆಚೂರಿ ಬೆಂಬಲ

- Advertisement -
- Advertisement -

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವಂತೆ ಕೋರಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ. ಕವಿತಾ ನೇತೃತ್ವದಲ್ಲಿ ಮಾರ್ಚ್ 10, 2023ರಂದು ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಈ ಸಂದರ್ಭದಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕೂಡ ಭಾಗಿಯಾಗಿದ್ದರು.

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಅವರು, ಅಬಕಾರಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗುವ ಒಂದು ದಿನ ಮುಂಚಿತವಾಗಿ ಮಾರ್ಚ್ 10ರಂದು ಉಪಹಾಸ ಸತ್ಯಾಗ್ರಹ ನಡೆಸಿದರು. ಮಾರ್ಚ್ 13ರಿಂದ ಪ್ರಾರಂಭವಾಗುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವಂತೆ ಆಗ್ರಹಿಸಿದರು.

ನವದೆಹಲಿಯ ಜಂತರ್ ಮಂತರ್‌ನಲ್ಲಿ ಆರು ಗಂಟೆಗಳ ಧರಣಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಪಿಐ-ಎಂ ನಾಯಕ ಸೀತಾರಾಮ್ ಯೆಚೂರಿ, ಈ ಸಂಸತ್ತಿನ ಅಧಿವೇಶನದಲ್ಲಿ ಮೋದಿ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಿದರು.

ಮುಷ್ಕರದಲ್ಲಿ ಶ್ಯಾಮ್ ರಜಾಕ್ (ಆರ್‌ಜೆಡಿ), ಸೀಮಾ ಶುಕ್ಲಾ (ಎಸ್‌ಪಿ), ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಮತ್ತು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸತ್ಯವತಿ ರಾಥೋಡ್ ಮತ್ತು ಆಂಧ್ರಪ್ರದೇಶದ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಹೇಶ್ ಜೋಶಿ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ

ಸಂಜಯ್ ಸಿಂಗ್ ಮತ್ತು ಚಿತ್ರ ಸರ್ವರಾ (ಎಎಪಿ), ನರೇಶ್ ಗುಜ್ರಾಲ್ (ಅಕಾಲಿದಳ), ಅಂಜುಮ್ ಜಾವೇದ್ ಮಿರ್ಜಾ (ಪಿಡಿಪಿ), ಶಮಿ ಫಿರ್ದೌಸ್ (ಎನ್‌ಸಿ), ಸುಶ್ಮಿತಾ ದೇವ್ (ಟಿಎಂಸಿ), ಕೆಸಿ ತ್ಯಾಗಿ (ಜೆಡಿಯು), ಸೀಮಾ ಮಲಿಕ್ (ಎನ್‌ಸಿಪಿ), ನಾರಾಯಣ ಕೆ ( ಸಿಪಿಐ, ಶ್ಯಾಮ್ ರಜಾಕ್ (ಆರ್‌ಎಲ್‌ಡಿ), ಪ್ರಿಯಾಂಕಾ ಚತುರ್ವೇದಿ (ಶಿವಸೇನೆ) ಮತ್ತು ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಮುಷ್ಕರದ ಕೊನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

”ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ನೀಡಲು ಈ ಮಸೂದೆಯನ್ನು ಜಾರಿಗೆ ತರುವುದು ಮುಖ್ಯವಾಗಿದೆ. ಸಂಸತ್ತಿನಲ್ಲಿ ಈ ಮಸೂದೆ ಅಂಗೀಕಾರವಾಗುವವರೆಗೆ ನಮ್ಮ ಪಕ್ಷವು ಈ ಪ್ರತಿಭಟನೆಯಲ್ಲಿ ಕವಿತಾ ಅವರಿಗೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ಉದ್ಘಾಟನಾ ಭಾಷಣದಲ್ಲಿ ಯೆಚೂರಿ ಹೇಳಿದರು.

”2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಸಂಸತ್ತಿಗೆ ಪ್ರವೇಶಿಸಿದಾಗ ಮಹಿಳಾ ಮೀಸಲಾತಿ ಮಸೂದೆ ತಮ್ಮ ಸರ್ಕಾರದ ಆದ್ಯತೆ ಎಂದು ಹೇಳಿದ್ದರು. ಈಗ ಅವರು ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳು ಕಳೆದಿವೆ, ಆದರೂ ಈ ಮಸೂದೆಯನ್ನು ಸಂಸತ್ತಿನಲ್ಲಿ ಮತ್ತೆ ಮಂಡಿಸಲಾಗಿಲ್ಲ” ಎಂದು ಅವರು ಹೇಳಿದರು.

ಸಾಕಷ್ಟು ಹೋರಾಟಗಳು ನಡೆದ ಬಳಿಕ ಸರ್ಕಾರವು ಪಂಚಾಯತ್‌ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿತು. ”ನೀವು ಪಂಚಾಯತ್‌ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬಹುದಾದರೆ, ಸಂಸತ್ತಿನಲ್ಲಿ ಏಕೆ ನೀಡಬಾರದು?” ಎಂದು ಯೆಚೂರಿ ಪ್ರಶ್ನಿಸಿದರು. ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಮಾನ ಅವಕಾಶ ನೀಡದ ಹೊರತು ದೇಶವು ಪ್ರಗತಿಯಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.

ಪ್ರಸ್ತುತ ಸಂಸತ್ತಿನ ಅಧಿವೇಶನದಲ್ಲಿ ಈ ಮಸೂದೆಯನ್ನು ತರುವುದು ಮುಖ್ಯವಾಗಿದೆ ಮತ್ತು ಈ ಪ್ರತಿಭಟನೆಯಲ್ಲಿ ಸಿಪಿಐ-ಎಂ ಬಿಆರ್‌ಎಸ್ ಪಕ್ಷದ ಜೊತೆಗೆ ನಿಲ್ಲುತ್ತದೆ ಎಂದು ಯಚೂರಿ ಅವರು ಹೇಳಿದರು.

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಮಾರ್ಚ್ 13ರಂದು ಪ್ರಾರಂಭವಾಗಿ ಏಪ್ರಿಲ್ 6ರಂದು ಕೊನೆಗೊಳ್ಳಲಿದೆ.

”ಭಾರತ ಅಭಿವೃದ್ಧಿ ಹೊಂದಬೇಕಾದರೆ ರಾಜಕೀಯದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಬೇಕು, ರಾಜಕೀಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು. ಹಾಗಾಗಿ 27 ವರ್ಷಗಳಿಂದ ಬಾಕಿ ಇರುವ ಈ ಮಸೂದೆಯನ್ನು ಜಾರಿಗೆ ತರುವುದು ಮುಖ್ಯವಾಗಿದೆ” ಎಂದು ಕವಿತಾ ಹೇಳಿದರು.

“ಸುಸ್ಮಾ ಸ್ವರಾಜ್, ಸೋನಿಯಾ ಗಾಂಧಿ ಮತ್ತು ಬೃಂದಾ ಕಾರಟ್ ಅವರಂತಹ ನಾಯಕರು ಮಸೂದೆ ಜಾರಿಗಾಗಿ ಹೋರಾಟಗಳನ್ನು ನಡೆಸಿದರು. 1996ರಿಂದ ಅನೇಕ ರಾಜಕೀಯ ಪಕ್ಷಗಳು ಈ ಮಸೂದೆಯನ್ನು ತರಲು ಪ್ರಯತ್ನಿಸಿದವು, ಆದರೆ ಅದನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಲಿಲ್ಲ” ಎಂದು ಅವರು ಹೇಳಿದರು.

“ಈ ಆಂದೋಲನವನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವೆನಿಸುತ್ತದೆ. ಮಸೂದೆಯನ್ನು ಮಂಡಿಸಿ ಅಂಗೀಕರಿಸುವವರೆಗೆ ನಾವು ಈ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ನಾನು ಭಾರತದ ಮಹಿಳೆಯರಿಗೆ ಭರವಸೆ ನೀಡುತ್ತೇನೆ” ಎಂದರು.

”ಇಂದು ಇಲ್ಲಿ ಕೇವಲ ಉಪವಾಸ ಸತ್ಯಾಗ್ರಹ ಕೇವಲ ಪ್ರಾರಂಭವಾಗಿದೆ, ಇದು ದೇಶಾದ್ಯಂತ ಈ ವಿಚಾರವಾಗಿ ಪ್ರತಿಭಟನೆಗಳು ಮುಂದುವರಿಯುತ್ತದೆ. ಕೇಂದ್ರದಲ್ಲಿ ಪೂರ್ಣ ಬಹುಮತದ ಸರ್ಕಾರವಿರುವುದರಿಂದ ಮಸೂದೆ ಅಂಗಿಕಾರಕ್ಕೆ ಸುಲಭವಾಗಲಿದೆ. ಬಿಜೆಪಿ ಸರ್ಕಾರವು ಈ ಮಸೂದೆಯನ್ನು ಅಂಗೀಕರಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಾವು ಎಲ್ಲಾ ರಾಜಕೀಯ ಪಕ್ಷಗಳನ್ನು ಒಟ್ಟಿಗೆ ಸೇರಿಸುತ್ತೇವೆ ಮತ್ತು ಸಂಸತ್ತಿನಲ್ಲಿ ನಿಮ್ಮನ್ನು ಬೆಂಬಲಿಸಲು ಪ್ರಯತ್ನಿಸುತ್ತೇವೆ” ಎಂದು ಕವಿತಾ ಹೇಳಿದರು.

ಆರ್‌ಜೆಡಿ ನಾಯಕ ಶ್ಯಾಮ್ ರಜಾಕ್ ಮಾತನಾಡಿ, ”ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯವಿಲ್ಲದೆ ಭಾರತೀಯ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾಧ್ಯವಿಲ್ಲ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಶೇ.33ಕ್ಕಿಂತ ಹೆಚ್ಚಿರಬೇಕು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...