Homeಮುಖಪುಟಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

- Advertisement -
- Advertisement -

ಗುರುವಾರ ಬೆಳಿಗ್ಗೆ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ಪ್ರಾರಂಭವಾಗುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರದಕ್ಷಿಣೆ ಹಾಕಿದರು.

‘ಕ್ರಿಕೆಟ್ ಮೂಲಕ ಸ್ನೇಹ’ ಎಂಬ ಸಂದೇಶವನ್ನು ಒಳಗೊಂಡಿರುವ ರಥದಂತಹ ವಾಹನವನ್ನು ಈ ಇಬ್ಬರು ನಾಯಕರು ಏರಿದ್ದರು.

ಮೋದಿ ಅವರು ತಮ್ಮ ಹೆಸರಿನಲ್ಲೇ ಇರುವ ಕ್ರೀಡಾಂಗಣದ ಸುತ್ತಲೂ ಪ್ರದಕ್ಷಿಣೆ ಹೋದರು. ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಮೋದಿಯವರ ಚಿತ್ರವನ್ನು ಮೋದಿಯವರಿಗೆಯೇ ಉಡುಗೊರೆಯಾಗಿ ನೀಡಿದರು. ಈ ಕ್ರೀಡಾಂಗಣವನ್ನು ನವೀಕರಿಸಿ ಮರುನಾಮಕರಣ ಮಾಡಿದ ನಂತರ ಮೋದಿಯವರು ಇಲ್ಲಿಗೆ ನೀಡಿರುವ ಮೊದಲ ಭೇಟಿ ಇದಾಗಿತ್ತು.

ಕೆಲವು ವಿಶ್ಲೇಷಕರ ಪ್ರಕಾರ, “ಈ ಘಟನೆಯು ಕ್ರಿಕೆಟ್ ಪಂದ್ಯಕ್ಕಿಂತ ಹೆಚ್ಚಾಗಿ ರಾಜಕೀಯ ರ್‍ಯಾಲಿಯಂತೆ ತೋರುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು 80,000 ಟಿಕೆಟ್‌ಗಳನ್ನು ಬಿಜೆಪಿ ಖರೀದಿಸಿದೆ ಎಂದು ಗುಜರಾತಿ ಪತ್ರಿಕೆ ದಿವ್ಯಾ ಭಾಸ್ಕರ್ ವರದಿ ಮಾಡಿದೆ. ಈ ಕ್ರೀಡಾಂಗಣದಲ್ಲಿ ಸುಮಾರು 1,30,000 ಜನರು ಕುಳಿತುಕೊಳ್ಳಬಹುದು.”

ಪಂದ್ಯಕ್ಕೆ ಟಿಕೆಟ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಗುಜರಾತ್‌ನ ನಾಲ್ವರು ಬಿಜೆಪಿ ಶಾಸಕರು ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ತಾನೊಬ್ಬನೇ 12,000 ಟಿಕೆಟ್ ಖರೀದಿಸಿದ್ದೇನೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಟಿಕೆಟ್‌ಗಳನ್ನು ಮಾರಾಟ ಮಾಡುವ ‘ಬುಕ್‌ಮೈಷೋ’ಅನ್ನು ‘ದಿ ವೈರ್’ ಸಂಪರ್ಕಿಸಿದ್ದು, ಪ್ರತಿಕ್ರಿಯೆ ನೀಡಲು ಬುಕ್‌ಮೈಷೋ ನಿರಾಕರಿಸಿದೆ.

ಗುಜರಾತ್‌ನ ಕಾಂಗ್ರೆಸ್ ಶಾಸಕ ಅರ್ಜುನ್ ಮೊದ್ವಾಡಿಯಾ ಪ್ರತಿಕ್ರಿಯಿಸಿದ್ದು, “ಕ್ರಿಕೆಟ್ ಪಂದ್ಯವನ್ನು ಈ ರೀತಿಯಲ್ಲಿ ರಾಜಕೀಯಗೊಳಿಸಲು ಬಿಸಿಸಿಐ ಅನುಮತಿ ನೀಡಿದೆ” ಎಂದು ಟೀಕಿಸಿದ್ದಾರೆ.

“ಕ್ರಿಕೆಟ್‌ನಂತಹ ಶ್ರೇಷ್ಠ ಕ್ರೀಡೆಯನ್ನು ರಾಜಕೀಯ ರಂಗಕ್ಕೆ ಇಳಿಸುವುದು ಹಾಸ್ಯಾಸ್ಪದವಾಗಿದೆ” ಎಂದು ಅವರು ‘ದಿ ವೈರ್‌’ಗೆ ತಿಳಿಸಿದ್ದಾರೆ. ಈ ರೀತಿಯಾಗಿ ಟಿಕೆಟ್ ಅನ್ನು ಖರೀದಿಸುವ ಮೂಲಕ ಭಾರತೀಯ ಜನತಾ ಪಕ್ಷವು ಕ್ರಿಕೆಟ್‌ ಪಂದ್ಯವನ್ನು ರಾಜಕೀಯಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಬಂದಿದ್ದ ಕ್ರಿಕೆಟ್‌ ಅಭಿಮಾನಿಗಳು ಈ ನಿರ್ದಿಷ್ಟ ಪಂದ್ಯಕ್ಕಾಗಿ ಟಿಕೆಟ್ ಪಡೆಯಲು ಪರದಾಡಬೇಕಾಯಿತು ಎಂದು ವರದಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಟಿಕೆಟ್ ಪಡೆಯಲು ಸಾಧ್ಯವಾಯಿತು ಎಂದು ‘ಎಬಿಸಿ ನ್ಯೂಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಒತ್ತಡ ಸೃಷ್ಟಿಯಾದ ನಂತರವೇ ಆಸ್ಟ್ರೇಲಿಯನ್ನರಿಗೆ ಇನ್ನೂ ಕೆಲವು ಟಿಕೆಟ್‌ಗಳು ಲಭ್ಯವಾದವು. “ಆಸೀಸ್ ಅಭಿಮಾನಿಗಳಿಗೆ ಟಿಕೆಟ್ ಖರೀದಿಸಲು ಕ್ರೀಡಾಂಗಣದಲ್ಲಿ ಬಾಕ್ಸ್ ಆಫೀಸ್ ಅನ್ನು ತೆರೆಯಲಾಗುತ್ತಿದೆ” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿತು.

ವಿಐಪಿಗಳ ಭೇಟಿಗೆ ಮುಂಚಿತವಾಗಿ, ಅಹಮದಾಬಾದ್‌ನ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಈ ಕುರಿತು ಆಸ್ಟ್ರೇಲಿಯಾದಲ್ಲಿ ಪ್ರಶ್ನೆಗಳು ಎದ್ದಿದ್ದು, ನಮ್ಮ ದೇಶವು ಭಾರತದ ಆಡಳಿತ ಪಕ್ಷವನ್ನು ಈ ರೀತಿ ಏಕೆ ಅನುಮೋದಿಸುತ್ತಿದೆ ಎಂಬ ಕೇಳುತ್ತಿರುವುದಾಗಿ ವರದಿಗಳಾಗಿವೆ.

“ಅಸಹಿಷ್ಣುತೆಯನ್ನು ನಾವ್ಯಾಕೆ ಸಹಿಸಿಕೊಳ್ಳುತ್ತಿದ್ದೇವೆ?” ಎಂದು ಕ್ರಿಕೆಟ್ ಬರಹಗಾರ ಗಿಡಿಯಾರ್‌ ಹೈ ಅವರು ‘ಆಸ್ಪ್ರೇಲಿಯನ್‌’ ವೆಬ್‌ಸೈಟ್‌ನಲ್ಲಿ ಬರೆದಿರುವ ಲೇಖನ ಹಲವಾರು ಮಹತ್ವದ ಸಂಗತಿಗಳನ್ನು ಉಲ್ಲೇಖಿಸಿದೆ. ವಿಶೇಷವಾಗಿ 2002ರ ಗುಜರಾತ್ ಗಲಭೆಗಳ ಸಮಯದಲ್ಲಿ ಮೋದಿಯವರ ಆಡಳಿತ ವೈಖರಿಯ ಬಗ್ಗೆ ಗಿರಿಯಾರ್‌‌ ಪ್ರಸ್ತಾಪಿಸಿದ್ದಾರೆ.

ಮೋದಿಯವರು ಭೇಟಿ ನೀಡುವ ಇತರ ಕಾರ್ಯಕ್ರಮಗಳಂತೆ ಈ ಪಂದ್ಯವು ಹೇಗೆ ಪಿಆರ್‌ ಕಸರತ್ತಾಗಿ ಕಂಡು ಬಂದಿತು ಎಂಬುದನ್ನು ‘ಎಬಿಸಿ ನ್ಯೂಸ್‌’ ವರದಿ ಪ್ರಸ್ತಾಪಿಸಿದೆ.

ಆಸ್ಟ್ರೇಲಿಯಾದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಧಾನ ಮಂತ್ರಿಯ ಮುಖವನ್ನು ಇಷ್ಟೊಂದು ಪ್ರಮುಖವಾಗಿ ಪ್ರದರ್ಶಿಸುವುದನ್ನು ನೋಡುವುದು ಕೇಳರಿಯದ ಸಂಗತಿಯಾಗಿದೆ. ವಾಸ್ತವವಾಗಿ ಅನೇಕ ಕ್ರೀಡಾಭಿಮಾನಿಗಳು (ಈ ಘಟನೆಯಿಂದ) ಅಸಮಾಧಾನಗೊಂಡಿರಬಹುದು ಎನ್ನಲಾಗುತ್ತಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...