Homeಕರ್ನಾಟಕಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

- Advertisement -
- Advertisement -

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೇಸರಿ ಪಾಳಯವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿಗೆ ಸೇರದೆ ಇದ್ದರೂ ಕೇಸರಿ ಪಕ್ಷಕ್ಕೆ ತಮ್ಮ ಒಲವು ತೋರಿರುವುದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ.

ಸುಮಲತಾ ಅವರು ಕಾಂಗ್ರೆಸ್‌ ಸೇರುತ್ತಾರೋ, ಬಿಜೆಪಿ ಸೇರುತ್ತಾರೋ ಎಂಬ ಚರ್ಚೆಗಳು ಶುರುವಾಗಿದ್ದವು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರೇ ಹೆಚ್ಚಿನ ಮಟ್ಟದಲ್ಲಿ ಸುಮಲತಾ ಅವರನ್ನು ಬೆಂಬಲಿಸಿದ್ದರು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಅಲ್ಲದೆ ಮಂಡ್ಯದಲ್ಲಿ ಬಿಜೆಪಿಗೆ ತಳಮಟ್ಟದ ನೆಲೆ ಇಲ್ಲ ಎಂಬ ವಾಸ್ತವ ಸಂಗತಿಗಳು ಮುಂದಿರುವಾಗ ಸಮಲತಾ ಅವರು ಕಮಲವನ್ನು ಹಿಡಿದುಕೊಂಡಿದ್ದಾರೆ.

ಈಗ ಎದ್ದಿರುವ ಪ್ರಶ್ನೆ- ಸುಮಲತಾ ಅವರ ರಾಜಕೀಯ ಭವಿಷ್ಯ ಮುಂದೇನಾಗಲಿದೆ? ಮಂಡ್ಯದ ಜನತೆ ಈ ನಿರ್ಧಾರವನ್ನು ಹೇಗೆ ಸ್ವೀಕರಿಸಲಿದ್ದಾರೆ? ಬಿಜೆಪಿಗೆ ಇದರಿಂದ ಏನಾದರೂ ಉಪಯೋಗವಾಗಲಿದೆಯೇ? – ಇವೆಲ್ಲವಕ್ಕೂ ನಕರಾತ್ಮಕ ಉತ್ತರಗಳನ್ನೇ ಮಂಡ್ಯ ರಾಜಕಾರಣವನ್ನು ಬಲ್ಲವರು ಹೇಳುತ್ತಿದ್ದಾರೆ.

ವಕೀಲರಾದ ಬಿ.ಟಿ.ವಿಶ್ವನಾಥ್ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ, “ಹಳೆ ಮೈಸೂರು ಭಾಗದಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳುವುದಕ್ಕಾಗಿ ಬಿಜೆಪಿಯವರು ಸುಮಲತಾ ಅವರನ್ನು ಬೆಂಬಲಿಸಿದ್ದರು. ಪರೋಕ್ಷವಾಗಿ ಸುಮಲತಾ ಅವರು ಬಿಜೆಪಿಯ ಮುಖವೆಂಬಂತೆಯೇ ಇದ್ದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರ ವಿರುದ್ಧ ಆಡಳಿತವಿರೋಧಿ ಅಲೆ ಇತ್ತು. ದೇವೇಗೌಡರ ಕುಟುಂಬದ ವಿರುದ್ಧವೂ ಅಸಮಾಧಾನ ಮನೆಮಾಡಿತ್ತು. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದೆ ಇದ್ದಿದ್ದರಿಂದ ಸುಮಲತಾ ಅವರಿಗೆ ಎಲ್ಲ ಪಕ್ಷದ ಹಿನ್ನೆಲೆಯವರೂ ಕಳೆದ ಚುನಾವಣೆಯಲ್ಲಿ ಬೆಂಬಲ ನೀಡಿದರು. ಈಗ ಸುಮಲತಾ ಅವರು ನೇರವಾಗಿಯೇ ತಮ್ಮನ್ನು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ” ಎಂದರು.

“ಬಿಜೆಪಿ ತನ್ನೆಲ್ಲ ಶಕ್ತಿ ಸಾಮರ್ಥ್ಯವನ್ನು ಮಂಡ್ಯ ಜಿಲ್ಲೆಯಲ್ಲಿ ಪರೀಕ್ಷೆಗೆ ಒಡ್ಡಿದೆ. ಆದರೆ ಕಾರ್ಯಕರ್ತರ ಪಡೆ ತಳಮಟ್ಟದಲ್ಲಿ ಬಿಜೆಪಿಗೆ ಇಲ್ಲಿ ಇಲ್ಲ. ಮೇಲುನೋಟಕ್ಕೆ ಬಿಜೆಪಿಯ ಆರ್ಭಟ ಎದ್ದುಕಾಣುತ್ತಿದೆ. ಆದರೆ ರೈತ ಸಮುದಾಯಕ್ಕೆ ಬಿಜೆಪಿ ಆಶಾದಾಯಕವಾಗಿ ಕಾಣುತ್ತಿಲ್ಲ. ಹೀಗಾಗಿ ಸುಮಲತಾ ಸೇರ್ಪಡೆಯಿಂದ ದೊಡ್ಡಮಟ್ಟದ ಲಾಭ ಬಿಜೆಪಿಗೆ ಆಗುತ್ತದೆ ಎಂದು ಕಾಣುತ್ತಿಲ್ಲ” ಎಂದು ಅಭಿಪ್ರಾಯಪಟ್ಟರು.

“ಕಳೆದ ಚುನಾವಣೆ ಸಂದರ್ಭದಲ್ಲಿ ‘ಸ್ವಾಭಿಮಾನಿ ತಂಡ’ ಎಂಬ ಹೆಸರಲ್ಲಿ ಕೆಲವು ಮುಖಂಡರು ಗುರುತಿಸಿಕೊಂಡಿದ್ದರು. ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಅವಕಾಶಗಳು ಇರಲಿಲ್ಲ. ಸುಮಲತಾ ಅವರು ಯಾವುದೇ ಪಕ್ಷದ ಬ್ಯಾನರ್‌ ಇಲ್ಲದೆ ಚುನಾವಣೆಗೆ ನಿಂತಿದ್ದರಿಂದ ಈ ಸ್ವಾಭಿಮಾನಿ ಮುಖಂಡರು ಸುಮಲತಾ ಪರ ನಿಂತರು. ಈಗ ಈ ಸ್ವಾಭಿಮಾನಿಗಳು ಬಿಜೆಪಿಯ ಜೊತೆ ಹೋಗಬೇಕಾಗುತ್ತದೆ. ಈ ನಿರ್ಧಾರದಿಂದ ಹಿಂದೆ ಸರಿಯುವವರ ಸಂಖ್ಯೆಯೇ ದೊಡ್ಡದಿದೆ. ಸುಮಲತಾ ಅವರೇ ಸ್ವಯಂಕೃತವಾಗಿ ಸಮಸ್ಯೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ” ಎಂದು ತಿಳಿಸಿದರು.

“ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿಯನ್ನು ಸುಮಲತಾ ಅವರು ಮಾಡಿದಂತೆ ಕಾಣುತ್ತಿಲ್ಲ. ಹೆದ್ದಾರಿ ನಿರ್ಮಾಣವಾದ ಮೇಲಂತೂ ಮಂಡ್ಯ ಜಿಲ್ಲೆಯಲ್ಲಿ ವ್ಯಾಪಾರ ವ್ಯವಹಾರಗಳು ಸ್ಥಗಿತವಾಗುತ್ತಿವೆ. ಹೆದ್ದಾರಿ ಬದಿಯಲ್ಲಿನ ಹೋಟೆಲ್‌ಗಳು ಮುಚ್ಚುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದ ಯುವಕರು ಉದ್ಯೋಗ ಅರಸಿ ಬೆಂಗಳೂರಿಗೆ ಗುಳೇ ಹೋಗುವುದು ನಿಂತಿಲ್ಲ” ಎಂದು ವಿಷಾದಿಸಿದರು.

ಸುಮಲತಾ ಅವರ ನಿರ್ಧಾರವನ್ನು ಖಂಡಿಸಿರುವ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು, “ಮಂಡ್ಯ ಲೋಕಸಭಾ ಸದಸ್ಯರೂ, ಸಿನಿಮಾ ನಟರೂ ಆದ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲಿಸಲು ತೀರ್ಮಾನಿಸಿರುವುದು ಮಂಡ್ಯ ಜಿಲ್ಲೆಯ ಜನತೆಗೆ ಬಗೆದ ದ್ರೋಹವಾಗಿದೆ, ಇದನ್ನು ಜಿಲ್ಲೆಯ ಜನತೆ ಕ್ಷಮಿಸುವುದಿಲ್ಲ, ಲಾಭಕ್ಕಾಗಿ ಕೋಮುವಾದಿಯಾದ ಸುಮಲತಾ ಅವರ ನಡೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಡ್ಯ ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ” ಎಂದಿದ್ದಾರೆ.

“ಸುಮಲತಾ ಅವರು ಪಕ್ಷೇತರ ಎಂಬ ಹೆಸರಿನ ನಾಟಕ ಮಾಡಿ ಜಿಲ್ಲೆಯ ಜನರ, ಪ್ರಗತಿಪರರ, ಪ್ರಗತಿಪರ ಸಂಘಟನೆಗಳ ಹಾಗೂ ಬದುಕಿನುದ್ದಕ್ಕೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುತ್ತಿರುವ ವ್ಯಕ್ತಿಗಳ ಮತ ಪಡೆದು ಈಗ ಅಧಿಕಾರ ಮತ್ತು ಅಂತಸ್ತಿಗಾಗಿ ಬಿಜೆಪಿ ಎಂಬ ಫ್ಯಾಸಿಸ್ಟ್ ಪಕ್ಷವನ್ನು ಬೆಂಬಲಿಸುವುದು ಅವರನ್ನು ನಂಬಿ ಬೆಂಬಲಿಸಿದ ಎಲ್ಲರ ಬೆನ್ನಿಗೂ ಚೂರಿ ಹಾಕುವ ಕೆಲಸವಾಗಿದೆ” ಎಂದು ಟೀಕಿಸಿದ್ದಾರೆ.

“ಅಂಬರೀಶ್ ಅವರ ಹೆಸರಿನಲ್ಲಿ ಮತಯಾಚಿಸಿದ ಸುಮಲತಾ ಅಂಬರೀಶ್ ಅವರು ಎಲ್ಲಾ ಜಾತಿ ಧರ್ಮಗಳನ್ನು ಮೀರಿದ ಜಾತ್ಯತೀತ ಕಲಾವಿದರಾಗಿದ್ದರು ಮತ್ತು ಅವರು ಬಿಜೆಪಿಯ ಆಮಿಷಗಳಿಗೆ ಎಂದೂ ಬಲಿಯಾಗಿರಲಿಲ್ಲ ಎಂಬುದು ಸುಮಲತಾ ಅವರಿಗೆ ನೆನಪಾಗಲಿಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವವರಾರು? ಇಲ್ಲಿದೆ ಪೂರ್ಣ ಸಮೀಕ್ಷೆ

“ಬಿಜೆಪಿ ಒಂದು ಮಹಿಳಾ ವಿರೋಧಿ, ಮನುವಾದಿ ರಾಜಕೀಯ ಪಕ್ಷ. ಜಿಲ್ಲೆಯ ಜನರಿಗೆ ಬದುಕು ಕಲ್ಪಿಸಿದ ಟಿಪ್ಪು ಅವರಿಗೆ ಪ್ರತಿಕ್ಷಣವೂ ಅವಮಾನ ಮಾಡುತ್ತಾ ಜಿಲ್ಲೆಯ ಒಕ್ಕಲಿಗರನ್ನು ಬ್ರಿಟಿಷರ ಏಜೆಂಟರು ಎಂದು ಬಿಂಬಿಸಿ ಅವಮಾನ ಮಾಡುತ್ತಿರುವ ಪಕ್ಷ. ಇಂತಹ ಪಕ್ಷಕ್ಕೆ ಕೇವಲ ಅಧಿಕಾರ ಮತ್ತು ಅಂತಸ್ತಿನ ಕಾರಣಕ್ಕೆ ಬೆಂಬಲಿಸುತ್ತಿರುವ ನಿಮ್ಮ ವಿವೇಚನೆಗೆ ಗೆದ್ದಲು ಹಿಡಿದಿದೆಯೆ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಸ್ಥಳೀಯ ಪತ್ರರೊಬ್ಬರು, “ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಹೆಚ್ಚಿನ ವೋಟು ಹಾಕಿದರು. ರೈತಸಂಘದವರು ಬೆಂಬಲಿಸಿದ್ದರು. ಈಗ ಬಿಜೆಪಿಗೆ ಹೋಗಿದ್ದಾರೆ. ಬಿಜೆಪಿಗೆ ಇಲ್ಲಿ ನೆಲೆ ಇಲ್ಲ. ಇದನ್ನು ಜನರು ಹೇಗೆ ನೋಡುತ್ತಾರೆಂದು ಕಾದು ನೋಡಬೇಕು” ಎಂದರು.

“ಕಳೆದ ಚುನಾವಣೆಯಲ್ಲಿ ಅನುಕಂಪದ ಅಲೆ ಇತ್ತು. ಜೆಡಿಎಸ್ ವಿರೋಧಿ ನಿಲುವು ಹೆಚ್ಚಾಗಿತ್ತು. ಕಾಂಗ್ರೆಸ್, ಬಿಜೆಪಿ, ರೈತಸಂಘದವರ ಬೆಂಬಲದಿಂದ ಸುಮಲತಾ ಗೆದ್ದರೇ ಹೊರತು ವೈಯಕ್ತಿಕ ವರ್ಚಸ್ಸಿನಿಂದಲ್ಲ. ಹಾಗೆ ನೋಡಿದರೆ ಸುಮಲತಾ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆಂದು ನಿರೀಕ್ಷಿಸಲಾಗಿತ್ತು” ಎಂದು ಹೇಳಿದರು.

“ಅಂಬರೀಶ್ ಅವರನ್ನು ಸಚಿವ ಸ್ಥಾನದಿಂದ ತೆಗೆದದ್ದು ನೋವು ತಂದಿದೆ ಎಂದು ಸುಮಲತಾ ಸಮಜಾಯಿಸಿ ನೀಡುತ್ತಿದ್ದಾರೆ. ಇದನ್ನು ಕಳೆದ ಚುನಾವಣೆಯಲ್ಲಿಯೇ ಹೇಳಿದ್ದರೆ ಕಾಂಗ್ರೆಸ್‌ನ ಮತಗಳು ಸುಮಲತಾ ಅವರಿಗೆ ಬೀಳುತ್ತಿರಲಿಲ್ಲ. ಈಗ ಈ ಮಾತುಗಳನ್ನು ಆಡಿದರೆ ಅವರ ರಾಜಕೀಯದ ಮೇಲೆ ವ್ಯತಿರಿಕ್ತ ಪರಿಣಾಮವೇ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...