Homeಕರ್ನಾಟಕ5 & 8ನೇ ತರಗತಿ 'ಬೋರ್ಡ್ ಪರೀಕ್ಷೆ’ ರದ್ದು; ಕರ್ನಾಟಕ ಹೈಕೋರ್ಟ್ ತೀರ್ಪು

5 & 8ನೇ ತರಗತಿ ‘ಬೋರ್ಡ್ ಪರೀಕ್ಷೆ’ ರದ್ದು; ಕರ್ನಾಟಕ ಹೈಕೋರ್ಟ್ ತೀರ್ಪು

- Advertisement -
- Advertisement -

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ಪರಿಚಯಿಸುವುದಾಗಿ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ರಾಜ್ಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅನ್ವಯಿಸಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ರೂಪಿಸಲಿದೆ. ಈ ಸಂಬಂಧ ಹೊರಡಿಸಲಾಗಿರುವ ಸುತ್ತೋಲೆಗೆ ಹೈಕೋರ್ಟ್ ತಡೆ ನೀಡಿದೆ.

ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಮತ್ತು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘದಿಂದ ಈ ಸುತ್ತೋಲೆಯನ್ನು ಪ್ರಶ್ನಿಸಲಾಗಿತ್ತು.

ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠವು ಶುಕ್ರವಾರ ವಿಚಾರಣೆ ನಡೆಸಿ, ಸಾರ್ವಜನಿಕ ಶಿಕ್ಷಣ ಆಯುಕ್ತರು ಮತ್ತು ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿದ 12.12.2022, 13.12.2022 ಮತ್ತು 04.01.2023ರ ಸುತ್ತೋಲೆಗಳನ್ನು ರದ್ದುಗೊಳಿಸಿತು.

ಈ ಸುತ್ತೋಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಉದ್ದೇಶಗಳಿಗೆ ವಿರುದ್ಧವಾಗಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

“ಇಂತಹ ಸುತ್ತೋಲೆಗಳು ಕೇವಲ ಕಾಯಿದೆ ಅಥವಾ ನಿಯಮಗಳಿಗೆ ಪೂರಕವಾಗಬಹುದು. ಆದರೆ ಯಾವುದೇ ಸಂದರ್ಭದಲ್ಲಾದರೂ ನಿಯಮಗಳನ್ನು ಬದಲಿಸಲು ಸಾಧ್ಯವಿಲ್ಲ. ಇಂತಹ ಸುತ್ತೋಲೆಗಳನ್ನು ಹೊರಡಿಸಿದ ಸಂದರ್ಭಗಳಲ್ಲಿ ಕಾಯಿದೆಯ ಸೆಕ್ಷನ್ 38 (4) ಅಡಿಯಲ್ಲಿ ಪರಿಗಣಿಸಿದಂತೆ ನಿಗದಿತ ಕಾರ್ಯವಿಧಾನಗಳು ಮತ್ತು ಪ್ರಕ್ರಿಯೆಯನ್ನು ಅನುಸರಿಸಬೇಕಾಗುತ್ತದೆ” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಸುತ್ತೋಲೆಗಳನ್ನು ರದ್ದುಗೊಳಿಸಿದ ಹೈಕೋರ್ಟ್ ತನ್ನ ತೀರ್ಪಿನಲ್ಲಿ, “ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಮೌಲ್ಯಮಾಪನ ವಿಧಾನವು ಹೊಸ ಸ್ವರೂಪವಾಗಿದೆ” ಎಂದಿದ್ದು, “ರಿಟ್ ಅರ್ಜಿಗಳನ್ನು ಅನುಮತಿಸಿದೆ”.

“ರಾಜ್ಯ ಸರ್ಕಾರವು ಕಾರ್ಯವಿಧಾನವನ್ನು ಅನುಸರಿಸಿಲ್ಲ. ಸುತ್ತೋಲೆಗಳನ್ನು ಹೊರಡಿಸುವ ಮೊದಲು ರಾಜ್ಯ ಶಾಸಕಾಂಗಗಳ ಮುಂದೆ ಸಮಸ್ಯೆಯನ್ನು ಚರ್ಚಿಸಿಲ್ಲ” ಎಂದು ಹೈಕೋರ್ಟ್ ಹೇಳಿದೆ.

“ರಾಜ್ಯ ಸರ್ಕಾರವು ಆರ್‌ಟಿಇ ಕಾಯಿದೆಯ ಅಡಿಯಲ್ಲಿ ಕೆಲವು ಮೌಲ್ಯಮಾಪನ ಕಾರ್ಯವಿಧಾನಗಳನ್ನು ಸೂಚಿಸಲು ಸುತ್ತೋಲೆಯನ್ನು ಹೊರಡಿಸಿದೆ. ನಿಯಮಗಳು ಮತ್ತು ನಿಬಂಧನೆಗಳನ್ನು ಮಾಡಲು, ಕಾಯಿದೆಯ ನಿಬಂಧನೆಗಳನ್ವಯ ಕ್ರಮ ಕೈಗೊಳ್ಳುವ ಸರ್ಕಾರ ಅಧಿಕಾರವನ್ನು ಹೊಂದಿದೆ. ಹಾಗೆ ಮಾಡುವಾಗ ಅದು ಅಗತ್ಯವಾಗಿ ಕಾಯಿದೆಯ ಅಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸಬೇಕು. ಕಾಯಿದೆಯ ಸೆಕ್ಷನ್ 38(4)ರ ಪ್ರಕಾರ ನಿಯಮ ಅಥವಾ ಅಧಿಸೂಚನೆಯನ್ನು ರಾಜ್ಯ ಶಾಸಕಾಂಗಗಳ ಮುಂದೆ ಮಂಡಿಸಿದ ನಂತರ ಹೊರಡಿಸಬೇಕು” ಎಂದು ಕೋರ್ಟ್ ಗಮನಿಸಿದೆ.

ಇದನ್ನೂ ಓದಿರಿ: ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ರಾಜ್ಯ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್, “ಸರ್ಕಾರವು ಯಾವುದೇ ನಿಯಮ ಅಥವಾ ಅಧಿಸೂಚನೆಯನ್ನು ಹೊರಡಿಸುತ್ತಿಲ್ಲ. ರಾಜ್ಯ ಪಠ್ಯಕ್ರಮದ ಅಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕೆಲವು ಮೌಲ್ಯಮಾಪನಗಳನ್ನು ಮಾತ್ರ ರೂಪಿಸುತ್ತಿದೆ. ಆದ್ದರಿಂದ ಕಾಯಿದೆಯ ಪ್ರಕ್ರಿಯೆ ಮತ್ತು ಕಾರ್ಯವಿಧಾನವನ್ನು ಅನುಸರಿಸುವ ಪ್ರಶ್ನೆಯೇ ಬರುವುದಿಲ್ಲ. ನಿರ್ದಿಷ್ಟವಾಗಿ ಹೇಳುವುದಾದರೆ ಸೆಕ್ಷನ್ 38 ಅಥವಾ ಕಾಯಿದೆಯ ಯಾವುದೇ ಇತರ ನಿಬಂಧನೆಗಳು ಇದಕ್ಕೆ ಅನ್ವಯಿಸುವುದಿಲ್ಲ” ಎಂದು ವಾದಿಸಿದರು.

ಆದಾಗ್ಯೂ, ಅಂತಹ ವಾದಗಳು ದೋಷಪೂರಿತವಾಗಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು.

ಆದರೆ ಸುತ್ತೋಲೆಗಳ ಹಿಂದಿನ ಉದ್ದೇಶವನ್ನು ತೀರ್ಪಿನಲ್ಲಿ ಶ್ಲಾಘಿಸಲಾಗಿದೆ. “ರಾಜ್ಯ ಸರ್ಕಾರದ ಆದೇಶದ ಉದ್ದೇಶವು ಶ್ಲಾಘನೀಯ. ರಾಜ್ಯದ ಮೂಲೆ ಮೂಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಶಾಲೆಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವಾಗ, ಒಂದನೇ ತರಗತಿಯಿಂದ 9 ನೇ ತರಗತಿಯವರೆಗೆ ಶಾಲಾ ಮಕ್ಕಳ ಮೌಲ್ಯಮಾಪನ ಕಾರ್ಯವಿಧಾನವನ್ನು ತರುವುದು ಅವಶ್ಯಕ. ಆದರೆ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿದ ರೀತಿ ಅನುಚಿತವಾಗಿ ಕಂಡು ಬಂದಿದೆ” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...