Homeಕರ್ನಾಟಕ5 & 8ನೇ ತರಗತಿ 'ಬೋರ್ಡ್ ಪರೀಕ್ಷೆ’ ರದ್ದು; ಕರ್ನಾಟಕ ಹೈಕೋರ್ಟ್ ತೀರ್ಪು

5 & 8ನೇ ತರಗತಿ ‘ಬೋರ್ಡ್ ಪರೀಕ್ಷೆ’ ರದ್ದು; ಕರ್ನಾಟಕ ಹೈಕೋರ್ಟ್ ತೀರ್ಪು

- Advertisement -
- Advertisement -

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ಪರಿಚಯಿಸುವುದಾಗಿ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ರಾಜ್ಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅನ್ವಯಿಸಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ರೂಪಿಸಲಿದೆ. ಈ ಸಂಬಂಧ ಹೊರಡಿಸಲಾಗಿರುವ ಸುತ್ತೋಲೆಗೆ ಹೈಕೋರ್ಟ್ ತಡೆ ನೀಡಿದೆ.

ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಮತ್ತು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘದಿಂದ ಈ ಸುತ್ತೋಲೆಯನ್ನು ಪ್ರಶ್ನಿಸಲಾಗಿತ್ತು.

ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠವು ಶುಕ್ರವಾರ ವಿಚಾರಣೆ ನಡೆಸಿ, ಸಾರ್ವಜನಿಕ ಶಿಕ್ಷಣ ಆಯುಕ್ತರು ಮತ್ತು ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿದ 12.12.2022, 13.12.2022 ಮತ್ತು 04.01.2023ರ ಸುತ್ತೋಲೆಗಳನ್ನು ರದ್ದುಗೊಳಿಸಿತು.

ಈ ಸುತ್ತೋಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಉದ್ದೇಶಗಳಿಗೆ ವಿರುದ್ಧವಾಗಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

“ಇಂತಹ ಸುತ್ತೋಲೆಗಳು ಕೇವಲ ಕಾಯಿದೆ ಅಥವಾ ನಿಯಮಗಳಿಗೆ ಪೂರಕವಾಗಬಹುದು. ಆದರೆ ಯಾವುದೇ ಸಂದರ್ಭದಲ್ಲಾದರೂ ನಿಯಮಗಳನ್ನು ಬದಲಿಸಲು ಸಾಧ್ಯವಿಲ್ಲ. ಇಂತಹ ಸುತ್ತೋಲೆಗಳನ್ನು ಹೊರಡಿಸಿದ ಸಂದರ್ಭಗಳಲ್ಲಿ ಕಾಯಿದೆಯ ಸೆಕ್ಷನ್ 38 (4) ಅಡಿಯಲ್ಲಿ ಪರಿಗಣಿಸಿದಂತೆ ನಿಗದಿತ ಕಾರ್ಯವಿಧಾನಗಳು ಮತ್ತು ಪ್ರಕ್ರಿಯೆಯನ್ನು ಅನುಸರಿಸಬೇಕಾಗುತ್ತದೆ” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಸುತ್ತೋಲೆಗಳನ್ನು ರದ್ದುಗೊಳಿಸಿದ ಹೈಕೋರ್ಟ್ ತನ್ನ ತೀರ್ಪಿನಲ್ಲಿ, “ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಮೌಲ್ಯಮಾಪನ ವಿಧಾನವು ಹೊಸ ಸ್ವರೂಪವಾಗಿದೆ” ಎಂದಿದ್ದು, “ರಿಟ್ ಅರ್ಜಿಗಳನ್ನು ಅನುಮತಿಸಿದೆ”.

“ರಾಜ್ಯ ಸರ್ಕಾರವು ಕಾರ್ಯವಿಧಾನವನ್ನು ಅನುಸರಿಸಿಲ್ಲ. ಸುತ್ತೋಲೆಗಳನ್ನು ಹೊರಡಿಸುವ ಮೊದಲು ರಾಜ್ಯ ಶಾಸಕಾಂಗಗಳ ಮುಂದೆ ಸಮಸ್ಯೆಯನ್ನು ಚರ್ಚಿಸಿಲ್ಲ” ಎಂದು ಹೈಕೋರ್ಟ್ ಹೇಳಿದೆ.

“ರಾಜ್ಯ ಸರ್ಕಾರವು ಆರ್‌ಟಿಇ ಕಾಯಿದೆಯ ಅಡಿಯಲ್ಲಿ ಕೆಲವು ಮೌಲ್ಯಮಾಪನ ಕಾರ್ಯವಿಧಾನಗಳನ್ನು ಸೂಚಿಸಲು ಸುತ್ತೋಲೆಯನ್ನು ಹೊರಡಿಸಿದೆ. ನಿಯಮಗಳು ಮತ್ತು ನಿಬಂಧನೆಗಳನ್ನು ಮಾಡಲು, ಕಾಯಿದೆಯ ನಿಬಂಧನೆಗಳನ್ವಯ ಕ್ರಮ ಕೈಗೊಳ್ಳುವ ಸರ್ಕಾರ ಅಧಿಕಾರವನ್ನು ಹೊಂದಿದೆ. ಹಾಗೆ ಮಾಡುವಾಗ ಅದು ಅಗತ್ಯವಾಗಿ ಕಾಯಿದೆಯ ಅಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸಬೇಕು. ಕಾಯಿದೆಯ ಸೆಕ್ಷನ್ 38(4)ರ ಪ್ರಕಾರ ನಿಯಮ ಅಥವಾ ಅಧಿಸೂಚನೆಯನ್ನು ರಾಜ್ಯ ಶಾಸಕಾಂಗಗಳ ಮುಂದೆ ಮಂಡಿಸಿದ ನಂತರ ಹೊರಡಿಸಬೇಕು” ಎಂದು ಕೋರ್ಟ್ ಗಮನಿಸಿದೆ.

ಇದನ್ನೂ ಓದಿರಿ: ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ರಾಜ್ಯ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್, “ಸರ್ಕಾರವು ಯಾವುದೇ ನಿಯಮ ಅಥವಾ ಅಧಿಸೂಚನೆಯನ್ನು ಹೊರಡಿಸುತ್ತಿಲ್ಲ. ರಾಜ್ಯ ಪಠ್ಯಕ್ರಮದ ಅಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕೆಲವು ಮೌಲ್ಯಮಾಪನಗಳನ್ನು ಮಾತ್ರ ರೂಪಿಸುತ್ತಿದೆ. ಆದ್ದರಿಂದ ಕಾಯಿದೆಯ ಪ್ರಕ್ರಿಯೆ ಮತ್ತು ಕಾರ್ಯವಿಧಾನವನ್ನು ಅನುಸರಿಸುವ ಪ್ರಶ್ನೆಯೇ ಬರುವುದಿಲ್ಲ. ನಿರ್ದಿಷ್ಟವಾಗಿ ಹೇಳುವುದಾದರೆ ಸೆಕ್ಷನ್ 38 ಅಥವಾ ಕಾಯಿದೆಯ ಯಾವುದೇ ಇತರ ನಿಬಂಧನೆಗಳು ಇದಕ್ಕೆ ಅನ್ವಯಿಸುವುದಿಲ್ಲ” ಎಂದು ವಾದಿಸಿದರು.

ಆದಾಗ್ಯೂ, ಅಂತಹ ವಾದಗಳು ದೋಷಪೂರಿತವಾಗಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು.

ಆದರೆ ಸುತ್ತೋಲೆಗಳ ಹಿಂದಿನ ಉದ್ದೇಶವನ್ನು ತೀರ್ಪಿನಲ್ಲಿ ಶ್ಲಾಘಿಸಲಾಗಿದೆ. “ರಾಜ್ಯ ಸರ್ಕಾರದ ಆದೇಶದ ಉದ್ದೇಶವು ಶ್ಲಾಘನೀಯ. ರಾಜ್ಯದ ಮೂಲೆ ಮೂಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಶಾಲೆಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವಾಗ, ಒಂದನೇ ತರಗತಿಯಿಂದ 9 ನೇ ತರಗತಿಯವರೆಗೆ ಶಾಲಾ ಮಕ್ಕಳ ಮೌಲ್ಯಮಾಪನ ಕಾರ್ಯವಿಧಾನವನ್ನು ತರುವುದು ಅವಶ್ಯಕ. ಆದರೆ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿದ ರೀತಿ ಅನುಚಿತವಾಗಿ ಕಂಡು ಬಂದಿದೆ” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...