Homeಮುಖಪುಟನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

ನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

- Advertisement -
- Advertisement -

ಭಾರತದ ಬಗ್ಗೆ ಅಪಪ್ರಚಾರ ಮಾಡುವುದೇ ‘ದಿ ನ್ಯೂಯಾರ್ಕ್ ಟೈಮ್ಸ್‌’ ಪತ್ರಿಕೆಯ ಏಕೈಕ ಉದ್ದೇಶವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕುಗ್ಗಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಪ್ರಕಟಿಸಿರುವ ಲೇಖನಕ್ಕೆ ಸಂಬಂಧಿಸಿದಂತೆ ಅನುರಾಗ್ ಪ್ರತಿಕ್ರಿಯಿಸಿದ್ದಾರೆ.

“ಭಾರತದ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮೋದಿಯವರಿಂದ ಅಂತಿಮ ದಾಳಿ ಆರಂಭವಾಗಿದೆ” ಎಂಬ ಶೀರ್ಷಿಕೆಯಲ್ಲಿ ‘ದಿ ಕಾಶ್ಮೀರ್ ಟೈಮ್ಸ್‌’ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ಅವರು ಲೇಖನ ಬರೆದಿದ್ದು, ಬುಧವಾರ ಅದು ಪ್ರಕಟವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ದಮನಕಾರಿ ಮಾಧ್ಯಮ ನೀತಿಗಳು ಕಾಶ್ಮೀರಿ ಪತ್ರಿಕೋದ್ಯಮವನ್ನು ನಾಶಪಡಿಸುತ್ತಿವೆ, ಸರ್ಕಾರದ ಮುಖವಾಣಿಗಳಾಗಿ ಕಾರ್ಯನಿರ್ವಹಿಸುವಂತೆ ಮಾಧ್ಯಮಗಳನ್ನು ಬೆದರಿಸಲಾಗುತ್ತಿದೆ. ಸುಮಾರು 13 ಮಿಲಿಯನ್ ಜನರಿರುವ ನಮ್ಮ ಪ್ರದೇಶದಲ್ಲಿ ಮಾಹಿತಿ ಹರಿವಿನ ಮೇಲೆ ತಡೆ ನೀಡಲಾಗುತ್ತಿದೆ ಎಂದು ಭಾಸಿನ್ ಬರೆದಿದ್ದಾರೆ.

ಭಾರತದಾದ್ಯಂತ ಈ ‘ಗೊಂದಲಕಾರಿ ಮಾದರಿ’ಯನ್ನು ಅನ್ವಯಿಸಲು ಮೋದಿ ಮುಂದಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಠಾಕೂರ್‌, “ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಇತರ ಮೂಲಭೂತ ಹಕ್ಕುಗಳಂತೆ ಪರಮಪೂಜ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಆದರೆ ಠಾಕೂರ್ ಅವರ ಪ್ರತಿಪಾದನೆಗೆ ವ್ಯತಿರಿಕ್ತವಾಗಿ ಅಂಕಿಅಂಶಗಳಿವೆ. 2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 140ನೇ ಸ್ಥಾನದಿಂದ ಕಳೆದ ವರ್ಷ 150ನೇ ಸ್ಥಾನಕ್ಕೆ ಕುಸಿದಿದೆ.

“ಕಾಶ್ಮೀರದಲ್ಲಿ ಮಾಹಿತಿ ಹರಿವಿನ ಮೇಲೆ ನಿರ್ಬಂಧ ಹೇರಲಾಗಿದೆ ಎಂಬುದು ಕಾಲ್ಪನಿಕ” ಎಂದು ವಾದಿಸಿರುವ ಠಾಕೂರ್‌, “ನ್ಯೂಯಾರ್ಕ್ ಟೈಮ್ಸ್ ಬಹಳ ಹಿಂದೆಯೇ ಭಾರತದ ಬಗ್ಗೆ ಏನನ್ನಾದರೂ ಪ್ರಕಟಿಸುವಾಗ ತಟಸ್ಥತೆಯ ಎಲ್ಲಾ ಸೋಗುಗಳನ್ನು ಕೈಬಿಟ್ಟಿದೆ” ಎಂದು ದೂರಿದ್ದಾರೆ.

“ಇದೇ ರೀತಿಯ ಮನಸ್ಥಿತಿಯನ್ನು ಹೊಂದಿರುವ ಇತರ ಕೆಲವು ವಿದೇಶಿ ಮಾಧ್ಯಮ ಸಂಸ್ಥೆಗಳು ಭಾರತ ಮತ್ತು ಮೋದಿಯವರ ಬಗ್ಗೆ ಸುಳ್ಳುಗಳನ್ನು ಹರಡುತ್ತಿವೆ. ಈ ಸಂಸ್ಥೆಗಳು ಭಾರತ ಮತ್ತು ಪ್ರಧಾನಿ ವಿರುದ್ಧ ದ್ವೇಷ ಕಾರುತ್ತಿವೆ” ಎಂದಿದ್ದಾರೆ.

ಇದನ್ನೂ ಓದಿರಿ: ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

“ಇಂತಹ ಸುಳ್ಳುಗಳು ಹೆಚ್ಚು ಕಾಲ ಉಳಿಯುವುದಿಲ್ಲ. ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜನರು ಬಹಳ ಪ್ರಬುದ್ಧರಾಗಿದ್ದೇವೆ. ಇಂತಹ ಅಜೆಂಡಾ ಚಾಲಿತ ಮಾಧ್ಯಮಗಳಿಂದ ನಾವು ಪ್ರಜಾಪ್ರಭುತ್ವದ ಪಾಠವನ್ನು ಕಲಿಯಬೇಕಾಗಿಲ್ಲ. ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ನ್ಯೂಯಾರ್ಕ್ ಟೈಮ್ಸ್‌ ಹರಡಿದ ಸುಳ್ಳುಗಳು ಖಂಡನೀಯ” ಎಂದು ತಿಳಿಸಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ನಿಷ್ಕ್ರಿಯತೆಯನ್ನು ಎತ್ತಿಹಿಡಿದು ಬಿಬಿಸಿ ಬಿಡುಗಡೆ ಮಾಡಿದ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಬಿಜೆಪಿ ಸರ್ಕಾರ ವಿರೋಧಿಸಿದ ವಾರಗಳ ನಂತರ ಅನುರಾಗ್ ಹೇಳಿಕೆಗಳು ಹೊರಬಿದ್ದಿವೆ.

ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ, ಕಳೆದ ಫೆಬ್ರವರಿಯಲ್ಲಿ ಭಾರತೀಯ ತೆರಿಗೆ ಅಧಿಕಾರಿಗಳು ಬಿಬಿಸಿ ಮಾಧ್ಯಮದ ಕಚೇರಿಗಳ ಮೇಲೆ ನವದೆಹಲಿ ಮತ್ತು ಮುಂಬೈನಲ್ಲಿ ದಾಳಿ ಮಾಡಿದ್ದರು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಅನುಗುಣವಾಗಿಲ್ಲ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...