Homeಮುಖಪುಟನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

ನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

- Advertisement -
- Advertisement -

ಭಾರತದ ಬಗ್ಗೆ ಅಪಪ್ರಚಾರ ಮಾಡುವುದೇ ‘ದಿ ನ್ಯೂಯಾರ್ಕ್ ಟೈಮ್ಸ್‌’ ಪತ್ರಿಕೆಯ ಏಕೈಕ ಉದ್ದೇಶವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕುಗ್ಗಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಪ್ರಕಟಿಸಿರುವ ಲೇಖನಕ್ಕೆ ಸಂಬಂಧಿಸಿದಂತೆ ಅನುರಾಗ್ ಪ್ರತಿಕ್ರಿಯಿಸಿದ್ದಾರೆ.

“ಭಾರತದ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮೋದಿಯವರಿಂದ ಅಂತಿಮ ದಾಳಿ ಆರಂಭವಾಗಿದೆ” ಎಂಬ ಶೀರ್ಷಿಕೆಯಲ್ಲಿ ‘ದಿ ಕಾಶ್ಮೀರ್ ಟೈಮ್ಸ್‌’ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ಅವರು ಲೇಖನ ಬರೆದಿದ್ದು, ಬುಧವಾರ ಅದು ಪ್ರಕಟವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ದಮನಕಾರಿ ಮಾಧ್ಯಮ ನೀತಿಗಳು ಕಾಶ್ಮೀರಿ ಪತ್ರಿಕೋದ್ಯಮವನ್ನು ನಾಶಪಡಿಸುತ್ತಿವೆ, ಸರ್ಕಾರದ ಮುಖವಾಣಿಗಳಾಗಿ ಕಾರ್ಯನಿರ್ವಹಿಸುವಂತೆ ಮಾಧ್ಯಮಗಳನ್ನು ಬೆದರಿಸಲಾಗುತ್ತಿದೆ. ಸುಮಾರು 13 ಮಿಲಿಯನ್ ಜನರಿರುವ ನಮ್ಮ ಪ್ರದೇಶದಲ್ಲಿ ಮಾಹಿತಿ ಹರಿವಿನ ಮೇಲೆ ತಡೆ ನೀಡಲಾಗುತ್ತಿದೆ ಎಂದು ಭಾಸಿನ್ ಬರೆದಿದ್ದಾರೆ.

ಭಾರತದಾದ್ಯಂತ ಈ ‘ಗೊಂದಲಕಾರಿ ಮಾದರಿ’ಯನ್ನು ಅನ್ವಯಿಸಲು ಮೋದಿ ಮುಂದಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಠಾಕೂರ್‌, “ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಇತರ ಮೂಲಭೂತ ಹಕ್ಕುಗಳಂತೆ ಪರಮಪೂಜ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಆದರೆ ಠಾಕೂರ್ ಅವರ ಪ್ರತಿಪಾದನೆಗೆ ವ್ಯತಿರಿಕ್ತವಾಗಿ ಅಂಕಿಅಂಶಗಳಿವೆ. 2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 140ನೇ ಸ್ಥಾನದಿಂದ ಕಳೆದ ವರ್ಷ 150ನೇ ಸ್ಥಾನಕ್ಕೆ ಕುಸಿದಿದೆ.

“ಕಾಶ್ಮೀರದಲ್ಲಿ ಮಾಹಿತಿ ಹರಿವಿನ ಮೇಲೆ ನಿರ್ಬಂಧ ಹೇರಲಾಗಿದೆ ಎಂಬುದು ಕಾಲ್ಪನಿಕ” ಎಂದು ವಾದಿಸಿರುವ ಠಾಕೂರ್‌, “ನ್ಯೂಯಾರ್ಕ್ ಟೈಮ್ಸ್ ಬಹಳ ಹಿಂದೆಯೇ ಭಾರತದ ಬಗ್ಗೆ ಏನನ್ನಾದರೂ ಪ್ರಕಟಿಸುವಾಗ ತಟಸ್ಥತೆಯ ಎಲ್ಲಾ ಸೋಗುಗಳನ್ನು ಕೈಬಿಟ್ಟಿದೆ” ಎಂದು ದೂರಿದ್ದಾರೆ.

“ಇದೇ ರೀತಿಯ ಮನಸ್ಥಿತಿಯನ್ನು ಹೊಂದಿರುವ ಇತರ ಕೆಲವು ವಿದೇಶಿ ಮಾಧ್ಯಮ ಸಂಸ್ಥೆಗಳು ಭಾರತ ಮತ್ತು ಮೋದಿಯವರ ಬಗ್ಗೆ ಸುಳ್ಳುಗಳನ್ನು ಹರಡುತ್ತಿವೆ. ಈ ಸಂಸ್ಥೆಗಳು ಭಾರತ ಮತ್ತು ಪ್ರಧಾನಿ ವಿರುದ್ಧ ದ್ವೇಷ ಕಾರುತ್ತಿವೆ” ಎಂದಿದ್ದಾರೆ.

ಇದನ್ನೂ ಓದಿರಿ: ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

“ಇಂತಹ ಸುಳ್ಳುಗಳು ಹೆಚ್ಚು ಕಾಲ ಉಳಿಯುವುದಿಲ್ಲ. ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜನರು ಬಹಳ ಪ್ರಬುದ್ಧರಾಗಿದ್ದೇವೆ. ಇಂತಹ ಅಜೆಂಡಾ ಚಾಲಿತ ಮಾಧ್ಯಮಗಳಿಂದ ನಾವು ಪ್ರಜಾಪ್ರಭುತ್ವದ ಪಾಠವನ್ನು ಕಲಿಯಬೇಕಾಗಿಲ್ಲ. ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ನ್ಯೂಯಾರ್ಕ್ ಟೈಮ್ಸ್‌ ಹರಡಿದ ಸುಳ್ಳುಗಳು ಖಂಡನೀಯ” ಎಂದು ತಿಳಿಸಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ನಿಷ್ಕ್ರಿಯತೆಯನ್ನು ಎತ್ತಿಹಿಡಿದು ಬಿಬಿಸಿ ಬಿಡುಗಡೆ ಮಾಡಿದ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಬಿಜೆಪಿ ಸರ್ಕಾರ ವಿರೋಧಿಸಿದ ವಾರಗಳ ನಂತರ ಅನುರಾಗ್ ಹೇಳಿಕೆಗಳು ಹೊರಬಿದ್ದಿವೆ.

ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ, ಕಳೆದ ಫೆಬ್ರವರಿಯಲ್ಲಿ ಭಾರತೀಯ ತೆರಿಗೆ ಅಧಿಕಾರಿಗಳು ಬಿಬಿಸಿ ಮಾಧ್ಯಮದ ಕಚೇರಿಗಳ ಮೇಲೆ ನವದೆಹಲಿ ಮತ್ತು ಮುಂಬೈನಲ್ಲಿ ದಾಳಿ ಮಾಡಿದ್ದರು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಅನುಗುಣವಾಗಿಲ್ಲ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...