Homeಮುಖಪುಟನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

ನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

- Advertisement -
- Advertisement -

ಭಾರತದ ಬಗ್ಗೆ ಅಪಪ್ರಚಾರ ಮಾಡುವುದೇ ‘ದಿ ನ್ಯೂಯಾರ್ಕ್ ಟೈಮ್ಸ್‌’ ಪತ್ರಿಕೆಯ ಏಕೈಕ ಉದ್ದೇಶವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕುಗ್ಗಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಪ್ರಕಟಿಸಿರುವ ಲೇಖನಕ್ಕೆ ಸಂಬಂಧಿಸಿದಂತೆ ಅನುರಾಗ್ ಪ್ರತಿಕ್ರಿಯಿಸಿದ್ದಾರೆ.

“ಭಾರತದ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮೋದಿಯವರಿಂದ ಅಂತಿಮ ದಾಳಿ ಆರಂಭವಾಗಿದೆ” ಎಂಬ ಶೀರ್ಷಿಕೆಯಲ್ಲಿ ‘ದಿ ಕಾಶ್ಮೀರ್ ಟೈಮ್ಸ್‌’ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ಅವರು ಲೇಖನ ಬರೆದಿದ್ದು, ಬುಧವಾರ ಅದು ಪ್ರಕಟವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ದಮನಕಾರಿ ಮಾಧ್ಯಮ ನೀತಿಗಳು ಕಾಶ್ಮೀರಿ ಪತ್ರಿಕೋದ್ಯಮವನ್ನು ನಾಶಪಡಿಸುತ್ತಿವೆ, ಸರ್ಕಾರದ ಮುಖವಾಣಿಗಳಾಗಿ ಕಾರ್ಯನಿರ್ವಹಿಸುವಂತೆ ಮಾಧ್ಯಮಗಳನ್ನು ಬೆದರಿಸಲಾಗುತ್ತಿದೆ. ಸುಮಾರು 13 ಮಿಲಿಯನ್ ಜನರಿರುವ ನಮ್ಮ ಪ್ರದೇಶದಲ್ಲಿ ಮಾಹಿತಿ ಹರಿವಿನ ಮೇಲೆ ತಡೆ ನೀಡಲಾಗುತ್ತಿದೆ ಎಂದು ಭಾಸಿನ್ ಬರೆದಿದ್ದಾರೆ.

ಭಾರತದಾದ್ಯಂತ ಈ ‘ಗೊಂದಲಕಾರಿ ಮಾದರಿ’ಯನ್ನು ಅನ್ವಯಿಸಲು ಮೋದಿ ಮುಂದಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಠಾಕೂರ್‌, “ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಇತರ ಮೂಲಭೂತ ಹಕ್ಕುಗಳಂತೆ ಪರಮಪೂಜ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಆದರೆ ಠಾಕೂರ್ ಅವರ ಪ್ರತಿಪಾದನೆಗೆ ವ್ಯತಿರಿಕ್ತವಾಗಿ ಅಂಕಿಅಂಶಗಳಿವೆ. 2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 140ನೇ ಸ್ಥಾನದಿಂದ ಕಳೆದ ವರ್ಷ 150ನೇ ಸ್ಥಾನಕ್ಕೆ ಕುಸಿದಿದೆ.

“ಕಾಶ್ಮೀರದಲ್ಲಿ ಮಾಹಿತಿ ಹರಿವಿನ ಮೇಲೆ ನಿರ್ಬಂಧ ಹೇರಲಾಗಿದೆ ಎಂಬುದು ಕಾಲ್ಪನಿಕ” ಎಂದು ವಾದಿಸಿರುವ ಠಾಕೂರ್‌, “ನ್ಯೂಯಾರ್ಕ್ ಟೈಮ್ಸ್ ಬಹಳ ಹಿಂದೆಯೇ ಭಾರತದ ಬಗ್ಗೆ ಏನನ್ನಾದರೂ ಪ್ರಕಟಿಸುವಾಗ ತಟಸ್ಥತೆಯ ಎಲ್ಲಾ ಸೋಗುಗಳನ್ನು ಕೈಬಿಟ್ಟಿದೆ” ಎಂದು ದೂರಿದ್ದಾರೆ.

“ಇದೇ ರೀತಿಯ ಮನಸ್ಥಿತಿಯನ್ನು ಹೊಂದಿರುವ ಇತರ ಕೆಲವು ವಿದೇಶಿ ಮಾಧ್ಯಮ ಸಂಸ್ಥೆಗಳು ಭಾರತ ಮತ್ತು ಮೋದಿಯವರ ಬಗ್ಗೆ ಸುಳ್ಳುಗಳನ್ನು ಹರಡುತ್ತಿವೆ. ಈ ಸಂಸ್ಥೆಗಳು ಭಾರತ ಮತ್ತು ಪ್ರಧಾನಿ ವಿರುದ್ಧ ದ್ವೇಷ ಕಾರುತ್ತಿವೆ” ಎಂದಿದ್ದಾರೆ.

ಇದನ್ನೂ ಓದಿರಿ: ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

“ಇಂತಹ ಸುಳ್ಳುಗಳು ಹೆಚ್ಚು ಕಾಲ ಉಳಿಯುವುದಿಲ್ಲ. ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜನರು ಬಹಳ ಪ್ರಬುದ್ಧರಾಗಿದ್ದೇವೆ. ಇಂತಹ ಅಜೆಂಡಾ ಚಾಲಿತ ಮಾಧ್ಯಮಗಳಿಂದ ನಾವು ಪ್ರಜಾಪ್ರಭುತ್ವದ ಪಾಠವನ್ನು ಕಲಿಯಬೇಕಾಗಿಲ್ಲ. ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ನ್ಯೂಯಾರ್ಕ್ ಟೈಮ್ಸ್‌ ಹರಡಿದ ಸುಳ್ಳುಗಳು ಖಂಡನೀಯ” ಎಂದು ತಿಳಿಸಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ನಿಷ್ಕ್ರಿಯತೆಯನ್ನು ಎತ್ತಿಹಿಡಿದು ಬಿಬಿಸಿ ಬಿಡುಗಡೆ ಮಾಡಿದ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಬಿಜೆಪಿ ಸರ್ಕಾರ ವಿರೋಧಿಸಿದ ವಾರಗಳ ನಂತರ ಅನುರಾಗ್ ಹೇಳಿಕೆಗಳು ಹೊರಬಿದ್ದಿವೆ.

ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ, ಕಳೆದ ಫೆಬ್ರವರಿಯಲ್ಲಿ ಭಾರತೀಯ ತೆರಿಗೆ ಅಧಿಕಾರಿಗಳು ಬಿಬಿಸಿ ಮಾಧ್ಯಮದ ಕಚೇರಿಗಳ ಮೇಲೆ ನವದೆಹಲಿ ಮತ್ತು ಮುಂಬೈನಲ್ಲಿ ದಾಳಿ ಮಾಡಿದ್ದರು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಅನುಗುಣವಾಗಿಲ್ಲ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...