Homeಮುಖಪುಟನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

ನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

- Advertisement -
- Advertisement -

ಭಾರತದ ಬಗ್ಗೆ ಅಪಪ್ರಚಾರ ಮಾಡುವುದೇ ‘ದಿ ನ್ಯೂಯಾರ್ಕ್ ಟೈಮ್ಸ್‌’ ಪತ್ರಿಕೆಯ ಏಕೈಕ ಉದ್ದೇಶವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕುಗ್ಗಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಪ್ರಕಟಿಸಿರುವ ಲೇಖನಕ್ಕೆ ಸಂಬಂಧಿಸಿದಂತೆ ಅನುರಾಗ್ ಪ್ರತಿಕ್ರಿಯಿಸಿದ್ದಾರೆ.

“ಭಾರತದ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮೋದಿಯವರಿಂದ ಅಂತಿಮ ದಾಳಿ ಆರಂಭವಾಗಿದೆ” ಎಂಬ ಶೀರ್ಷಿಕೆಯಲ್ಲಿ ‘ದಿ ಕಾಶ್ಮೀರ್ ಟೈಮ್ಸ್‌’ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ಅವರು ಲೇಖನ ಬರೆದಿದ್ದು, ಬುಧವಾರ ಅದು ಪ್ರಕಟವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ದಮನಕಾರಿ ಮಾಧ್ಯಮ ನೀತಿಗಳು ಕಾಶ್ಮೀರಿ ಪತ್ರಿಕೋದ್ಯಮವನ್ನು ನಾಶಪಡಿಸುತ್ತಿವೆ, ಸರ್ಕಾರದ ಮುಖವಾಣಿಗಳಾಗಿ ಕಾರ್ಯನಿರ್ವಹಿಸುವಂತೆ ಮಾಧ್ಯಮಗಳನ್ನು ಬೆದರಿಸಲಾಗುತ್ತಿದೆ. ಸುಮಾರು 13 ಮಿಲಿಯನ್ ಜನರಿರುವ ನಮ್ಮ ಪ್ರದೇಶದಲ್ಲಿ ಮಾಹಿತಿ ಹರಿವಿನ ಮೇಲೆ ತಡೆ ನೀಡಲಾಗುತ್ತಿದೆ ಎಂದು ಭಾಸಿನ್ ಬರೆದಿದ್ದಾರೆ.

ಭಾರತದಾದ್ಯಂತ ಈ ‘ಗೊಂದಲಕಾರಿ ಮಾದರಿ’ಯನ್ನು ಅನ್ವಯಿಸಲು ಮೋದಿ ಮುಂದಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಠಾಕೂರ್‌, “ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಇತರ ಮೂಲಭೂತ ಹಕ್ಕುಗಳಂತೆ ಪರಮಪೂಜ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಆದರೆ ಠಾಕೂರ್ ಅವರ ಪ್ರತಿಪಾದನೆಗೆ ವ್ಯತಿರಿಕ್ತವಾಗಿ ಅಂಕಿಅಂಶಗಳಿವೆ. 2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 140ನೇ ಸ್ಥಾನದಿಂದ ಕಳೆದ ವರ್ಷ 150ನೇ ಸ್ಥಾನಕ್ಕೆ ಕುಸಿದಿದೆ.

“ಕಾಶ್ಮೀರದಲ್ಲಿ ಮಾಹಿತಿ ಹರಿವಿನ ಮೇಲೆ ನಿರ್ಬಂಧ ಹೇರಲಾಗಿದೆ ಎಂಬುದು ಕಾಲ್ಪನಿಕ” ಎಂದು ವಾದಿಸಿರುವ ಠಾಕೂರ್‌, “ನ್ಯೂಯಾರ್ಕ್ ಟೈಮ್ಸ್ ಬಹಳ ಹಿಂದೆಯೇ ಭಾರತದ ಬಗ್ಗೆ ಏನನ್ನಾದರೂ ಪ್ರಕಟಿಸುವಾಗ ತಟಸ್ಥತೆಯ ಎಲ್ಲಾ ಸೋಗುಗಳನ್ನು ಕೈಬಿಟ್ಟಿದೆ” ಎಂದು ದೂರಿದ್ದಾರೆ.

“ಇದೇ ರೀತಿಯ ಮನಸ್ಥಿತಿಯನ್ನು ಹೊಂದಿರುವ ಇತರ ಕೆಲವು ವಿದೇಶಿ ಮಾಧ್ಯಮ ಸಂಸ್ಥೆಗಳು ಭಾರತ ಮತ್ತು ಮೋದಿಯವರ ಬಗ್ಗೆ ಸುಳ್ಳುಗಳನ್ನು ಹರಡುತ್ತಿವೆ. ಈ ಸಂಸ್ಥೆಗಳು ಭಾರತ ಮತ್ತು ಪ್ರಧಾನಿ ವಿರುದ್ಧ ದ್ವೇಷ ಕಾರುತ್ತಿವೆ” ಎಂದಿದ್ದಾರೆ.

ಇದನ್ನೂ ಓದಿರಿ: ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

“ಇಂತಹ ಸುಳ್ಳುಗಳು ಹೆಚ್ಚು ಕಾಲ ಉಳಿಯುವುದಿಲ್ಲ. ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜನರು ಬಹಳ ಪ್ರಬುದ್ಧರಾಗಿದ್ದೇವೆ. ಇಂತಹ ಅಜೆಂಡಾ ಚಾಲಿತ ಮಾಧ್ಯಮಗಳಿಂದ ನಾವು ಪ್ರಜಾಪ್ರಭುತ್ವದ ಪಾಠವನ್ನು ಕಲಿಯಬೇಕಾಗಿಲ್ಲ. ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ನ್ಯೂಯಾರ್ಕ್ ಟೈಮ್ಸ್‌ ಹರಡಿದ ಸುಳ್ಳುಗಳು ಖಂಡನೀಯ” ಎಂದು ತಿಳಿಸಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ನಿಷ್ಕ್ರಿಯತೆಯನ್ನು ಎತ್ತಿಹಿಡಿದು ಬಿಬಿಸಿ ಬಿಡುಗಡೆ ಮಾಡಿದ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಬಿಜೆಪಿ ಸರ್ಕಾರ ವಿರೋಧಿಸಿದ ವಾರಗಳ ನಂತರ ಅನುರಾಗ್ ಹೇಳಿಕೆಗಳು ಹೊರಬಿದ್ದಿವೆ.

ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ, ಕಳೆದ ಫೆಬ್ರವರಿಯಲ್ಲಿ ಭಾರತೀಯ ತೆರಿಗೆ ಅಧಿಕಾರಿಗಳು ಬಿಬಿಸಿ ಮಾಧ್ಯಮದ ಕಚೇರಿಗಳ ಮೇಲೆ ನವದೆಹಲಿ ಮತ್ತು ಮುಂಬೈನಲ್ಲಿ ದಾಳಿ ಮಾಡಿದ್ದರು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಅನುಗುಣವಾಗಿಲ್ಲ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...