Homeಮುಖಪುಟತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

ತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

- Advertisement -
- Advertisement -

ಚುನಾವಣೋತ್ತರ ಹಿಂಸಾಚಾರಗಳ ಕುರಿತು ತಿಳಿಯಲು ಹೋಗಿದ್ದ ಕಾಂಗ್ರೆಸ್ ಮತ್ತು ಎಡಪಕ್ಷದ ನಾಯಕರ ಮೇಲೆ ತ್ರಿಪುರಾದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

“ಅಗರ್ತಲಾದಿಂದ 30 ಕಿಮೀ ದೂರದಲ್ಲಿರುವ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ನೆಹಲ್‌ಚಂದ್ರನಗರದಲ್ಲಿ ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆದಿದೆ” ಎಂದು ಇಬ್ಬರು ಸಂಸದರು ಸೇರಿದಂತೆ ಎಡ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿದ್ದ ತಂಡ ಹೇಳಿದೆ.

ಕಾಂಗ್ರೆಸ್‌ ಮತ್ತು ಎಡಪಕ್ಷದ ನಾಯಕರ ಮೇಲೆ ಮೇಲೆ ದಾಳಿ ನಡೆಸಿದಾಗ ಕನಿಷ್ಠ ಮೂರು ಕಾರುಗಳನ್ನು ಹಾನಿಗೊಳಿಸಲಾಗಿದೆ. ಹಲ್ಲೆ ನಡೆಸಿದವರು ‘ಜೈ ಶ್ರೀ ರಾಮ್’ ಎಂದು ಕೂಗಿದರು ಎಂದು ಆರೋಪಿಸಲಾಗಿದೆ. ನಿಯೋಗದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಜೊತೆಯಲ್ಲಿದ್ದ ಭದ್ರತಾ ಸಿಬ್ಬಂದಿಗಳೂ ಮಧ್ಯಪ್ರವೇಶಿಸಲಿಲ್ಲ ಎಂದು ಸಂಸದರೊಬ್ಬರು ಆರೋಪಿಸಿದ್ದಾರೆ. ಘಟನೆಯ ನಂತರ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಅವರು ಪ್ರತಿಕ್ರಿಯಿಸಿದ್ದು, “ಎರಡು ದಿನಗಳ ಪ್ರವಾಸ ಹಮ್ಮಿಕೊಳ್ಳಲಾಗಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಎಡ ಮತ್ತು ಕಾಂಗ್ರೆಸ್ ನಾಯಕರ ತಂಡವು ನೆಹಲ್‌ಚಂದ್ರನಗರಕ್ಕೆ ದಿಢೀರ್‌ ಭೇಟಿ ನೀಡಿತು ಎಂದು ಪೊಲೀಸರು ಹೇಳಿದ್ದಾರೆ. ಈ ಸಮಯದಲ್ಲಿ ಕೆಲವು ಘೋಷಣೆಗಳನ್ನು ಕೂಗಲಾಗಿದೆ.

ಸಹಾಯಕ ಪೊಲೀಸ್ ಮಹಾನಿರೀಕ್ಷಕ ಜ್ಯೋತಿಷ್ಮನ್ ದಾಸ್ ಚೌಧರಿ ಪ್ರತಿಕ್ರಿಯಿಸಿ,  “ತಂಡದ ಜೊತೆಗಿದ್ದ ಪೊಲೀಸ್ ಅಧಿಕಾರಿಗಳು ಕ್ರಮಕೈಗೊಳ್ಳಲಿಲ್ಲ ಎಂಬುದು ಸುಳ್ಳು” ಎಂದಿದ್ದಾರೆ.

“ಜೊತೆಗಿದ್ದ ಪೊಲೀಸ್ ಬೆಂಗಾವಲು ತಂಡವು ತ್ವರಿತವಾಗಿ ಸ್ಪಂದಿಸಿ ನಿಯೋಗವನ್ನು ರಕ್ಷಿಸಿತು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಸ್ಥಳೀಯವಾಗಿ ಯಾವುದೇ ವ್ಯಕ್ತಿಗೆ ಗಾಯವಾಗಿಲ್ಲ ಎಂದು ವರದಿಯಾಗಿದೆ. 2-3 ವಾಹನಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ. ಇತರ ದುಷ್ಕರ್ಮಿಗಳನ್ನು ಗುರುತಿಸಲು ಮತ್ತು ಬಂಧಿಸಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಿದಾಗಿನಿಂದ ಸಂಭವಿಸಿದ ಹಿಂಸಾಚಾರದ ಪ್ರಮಾಣವನ್ನು ತಿಳಿಯಲು ರಾಜ್ಯಕ್ಕೆ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ಎಡರಂಗ ಮತ್ತು ಕಾಂಗ್ರೆಸ್ ಸಂಸದರ ತಂಡ ಆಗಮಿಸಿತ್ತು. ಸೆಪಹಿಜಾಲಾ, ಗೋಮತಿ, ಪಶ್ಚಿಮ ತ್ರಿಪುರಾ, ಖೋವೈ ಮತ್ತು ಧಲೈ ಜಿಲ್ಲೆಗಳ ವಿವಿಧ ಭಾಗಗಳಿಗೆ ಭೇಟಿ ನೀಡಲಾಗಿತ್ತು.

ಸಿಪಿಐಎಂ ರಾಜ್ಯಸಭಾ ಸಂಸದ ಎಲರಾಮ್ ಕರೀಂ ಮತ್ತು ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರಿದ ತಂಡವು ಸಿಪಹಿಜಾಲಾದ ಬಿಶಾಲ್ಗಢ ಮತ್ತು ಪಶ್ಚಿಮ ತ್ರಿಪುರದ ಕೆಲವು ಭಾಗಗಳಿಗೆ ಭೇಟಿ ನೀಡಿದ್ದರು.

ಕಾಂಗ್ರೆಸ್ ಲೋಕಸಭಾ ಸಂಸದರಾದ ರಂಜಿತಾ ರಂಜನ್, ಸಿಪಿಐ(ಎಂ) ರಾಜ್ಯಸಭಾ ಸಂಸದರಾದ ಎ ಎ ರಹೀಮ್ ಮತ್ತು ಬಿಕಾಶ್ ರಂಜನ್ ಭಟ್ಟಾಚಾರ್ಯ ಅವರನ್ನೊಳಗೊಂಡ ಎರಡನೇ ತಂಡವು ಪಶ್ಚಿಮ ತ್ರಿಪುರಾದ ಕಲ್ಕಾಲಿಯಾ ಗ್ರಾಮಕ್ಕೆ ಭೇಟಿ ನೀಡಿತ್ತು.

ಸಿಪಿಐ(ಎಂ) ಲೋಕಸಭಾ ಸಂಸದ ಪಿ ಆರ್ ನಟರಾಜನ್ ಮತ್ತು ಬಿನೋಯ್ ಬಿಸ್ವಾಮ್ ಅವರ ಮೂರನೇ ತಂಡವು ಜಿಲ್ಲೆಯ ದುರ್ಗಬರಿ, ಉಷಾಬಜಾರ್, ಕಾಳಿಕಾಪುರ ಮತ್ತು ಇತರ ಕೆಲವು ಗ್ರಾಮಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿತು. ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ವಿಧಾನಸಭೆಯ ಮಾಜಿ ಉಪ ಸ್ಪೀಕರ್ ಪಬಿತ್ರಾ ಕರ್ ಇದ್ದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ತ್ರಿಪುರಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಡಾ ಅಜಯ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿರಾಜಿತ್ ಸಿನ್ಹಾ, ಹಿರಿಯ ಕಾಂಗ್ರೆಸ್ ನಾಯಕ ಗೋಪಾಲ್ ಚಂದ್ರ ರಾಯ್ ಮತ್ತು ಜಿತೇಂದ್ರ ಚೌಧರಿ ಮುಂತಾದ ನಾಯಕರು ಕರೀಂ ಮತ್ತು ಖಲೇಕ್ ಅವರೊಂದಿಗೆ ಇದ್ದರು.

ಸ್ಥಳದಿಂದ ಹಿಂತಿರುಗಿದ ನಂತರ, ಅಬ್ದುಲ್ ಖಲೇಕ್ ಅವರು ಪ್ರತಿಕ್ರಿಯಿಸಿ,“ನೆಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಯಿತು. ಮಧ್ಯಾಹ್ನ ನಿಯೋಗವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ತಲುಪಿದ ನಂತರ ದಾಳಿಗೆ ಒಳಗಾಯಿತು. ಬಿಶಾಲ್‌ಗಢದ ನೇಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಅವರನ್ನು ಭೇಟಿ ಮಾಡಲು ಮತ್ತು ಸಂತ್ರಸ್ತ ಜನರೊಂದಿಗೆ ಮಾತನಾಡಲು ಹೋಗಿದ್ದೆವು. ಇದ್ದಕ್ಕಿದ್ದಂತೆ ಕೆಲವರು ಬಂದು ತಾವು ಬಿಜೆಪಿ ಬೆಂಬಲಿಗರೆಂದು ಹೇಳಿಕೊಂಡು ಅಂಗಡಿಗಳಿಗೆ ಬೆಂಕಿ ಹಚ್ಚಿದರು. ನಾವು ಅವರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು. ಆದರೆ ಕೆಲವರು ಇದ್ದಕ್ಕಿದ್ದಂತೆ ನಮ್ಮ ವಾಹನಗಳ ಮೇಲೆ ಕಲ್ಲು ತೂರಿದರು. ನಮ್ಮ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ನಮಗೆ ಸಹಾಯ ಮಾಡಲು ಒಂದೇ ಒಂದು ಕೆಲಸವನ್ನು ಮಾಡದಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ದೂರಿದ್ದಾರೆ.

ಹಗಲು ಹೊತ್ತಿನಲ್ಲಿ ನಿಯೋಗಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿರುವಾಗ ಜನರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಮಾತನಾಡುವುದು ವ್ಯರ್ಥ ಎಂದು ಖಲೇಕ್ ಟೀಕಿಸಿದ್ದಾರೆ.

ರಂಜೀತಾ ರಂಜನ್ ಮಾತನಾಡಿ, “ಇಲ್ಲಿ ಹಗಲಿರುಳು ಗೂಂಡಾಗಿರಿ ನಡೆಯುತ್ತಿದ್ದು, ಪ್ರತಿಪಕ್ಷಗಳು ಒಗ್ಗಟ್ಟಾಗಿ ನಿಲ್ಲಲು ಬಯಸಿದರೆ ದಾಳಿ ನಡೆಸಲಾಗುತ್ತಿದೆ. ತ್ರಿಪುರಾದಲ್ಲಿ ಏಳು ಸಂಸದರು ಮತ್ತು ಹಲವಾರು ಶಾಸಕರು ಸುರಕ್ಷಿತವಾಗಿಲ್ಲದಿದ್ದರೆ, ಇಲ್ಲಿ ಸಾಮಾನ್ಯ ಜನರು ಎಷ್ಟು ಸುರಕ್ಷಿತವಾಗಿರಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...