Homeಮುಖಪುಟತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

ತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

- Advertisement -
- Advertisement -

ಚುನಾವಣೋತ್ತರ ಹಿಂಸಾಚಾರಗಳ ಕುರಿತು ತಿಳಿಯಲು ಹೋಗಿದ್ದ ಕಾಂಗ್ರೆಸ್ ಮತ್ತು ಎಡಪಕ್ಷದ ನಾಯಕರ ಮೇಲೆ ತ್ರಿಪುರಾದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

“ಅಗರ್ತಲಾದಿಂದ 30 ಕಿಮೀ ದೂರದಲ್ಲಿರುವ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ನೆಹಲ್‌ಚಂದ್ರನಗರದಲ್ಲಿ ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆದಿದೆ” ಎಂದು ಇಬ್ಬರು ಸಂಸದರು ಸೇರಿದಂತೆ ಎಡ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿದ್ದ ತಂಡ ಹೇಳಿದೆ.

ಕಾಂಗ್ರೆಸ್‌ ಮತ್ತು ಎಡಪಕ್ಷದ ನಾಯಕರ ಮೇಲೆ ಮೇಲೆ ದಾಳಿ ನಡೆಸಿದಾಗ ಕನಿಷ್ಠ ಮೂರು ಕಾರುಗಳನ್ನು ಹಾನಿಗೊಳಿಸಲಾಗಿದೆ. ಹಲ್ಲೆ ನಡೆಸಿದವರು ‘ಜೈ ಶ್ರೀ ರಾಮ್’ ಎಂದು ಕೂಗಿದರು ಎಂದು ಆರೋಪಿಸಲಾಗಿದೆ. ನಿಯೋಗದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಜೊತೆಯಲ್ಲಿದ್ದ ಭದ್ರತಾ ಸಿಬ್ಬಂದಿಗಳೂ ಮಧ್ಯಪ್ರವೇಶಿಸಲಿಲ್ಲ ಎಂದು ಸಂಸದರೊಬ್ಬರು ಆರೋಪಿಸಿದ್ದಾರೆ. ಘಟನೆಯ ನಂತರ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಅವರು ಪ್ರತಿಕ್ರಿಯಿಸಿದ್ದು, “ಎರಡು ದಿನಗಳ ಪ್ರವಾಸ ಹಮ್ಮಿಕೊಳ್ಳಲಾಗಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಎಡ ಮತ್ತು ಕಾಂಗ್ರೆಸ್ ನಾಯಕರ ತಂಡವು ನೆಹಲ್‌ಚಂದ್ರನಗರಕ್ಕೆ ದಿಢೀರ್‌ ಭೇಟಿ ನೀಡಿತು ಎಂದು ಪೊಲೀಸರು ಹೇಳಿದ್ದಾರೆ. ಈ ಸಮಯದಲ್ಲಿ ಕೆಲವು ಘೋಷಣೆಗಳನ್ನು ಕೂಗಲಾಗಿದೆ.

ಸಹಾಯಕ ಪೊಲೀಸ್ ಮಹಾನಿರೀಕ್ಷಕ ಜ್ಯೋತಿಷ್ಮನ್ ದಾಸ್ ಚೌಧರಿ ಪ್ರತಿಕ್ರಿಯಿಸಿ,  “ತಂಡದ ಜೊತೆಗಿದ್ದ ಪೊಲೀಸ್ ಅಧಿಕಾರಿಗಳು ಕ್ರಮಕೈಗೊಳ್ಳಲಿಲ್ಲ ಎಂಬುದು ಸುಳ್ಳು” ಎಂದಿದ್ದಾರೆ.

“ಜೊತೆಗಿದ್ದ ಪೊಲೀಸ್ ಬೆಂಗಾವಲು ತಂಡವು ತ್ವರಿತವಾಗಿ ಸ್ಪಂದಿಸಿ ನಿಯೋಗವನ್ನು ರಕ್ಷಿಸಿತು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಸ್ಥಳೀಯವಾಗಿ ಯಾವುದೇ ವ್ಯಕ್ತಿಗೆ ಗಾಯವಾಗಿಲ್ಲ ಎಂದು ವರದಿಯಾಗಿದೆ. 2-3 ವಾಹನಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ. ಇತರ ದುಷ್ಕರ್ಮಿಗಳನ್ನು ಗುರುತಿಸಲು ಮತ್ತು ಬಂಧಿಸಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಿದಾಗಿನಿಂದ ಸಂಭವಿಸಿದ ಹಿಂಸಾಚಾರದ ಪ್ರಮಾಣವನ್ನು ತಿಳಿಯಲು ರಾಜ್ಯಕ್ಕೆ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ಎಡರಂಗ ಮತ್ತು ಕಾಂಗ್ರೆಸ್ ಸಂಸದರ ತಂಡ ಆಗಮಿಸಿತ್ತು. ಸೆಪಹಿಜಾಲಾ, ಗೋಮತಿ, ಪಶ್ಚಿಮ ತ್ರಿಪುರಾ, ಖೋವೈ ಮತ್ತು ಧಲೈ ಜಿಲ್ಲೆಗಳ ವಿವಿಧ ಭಾಗಗಳಿಗೆ ಭೇಟಿ ನೀಡಲಾಗಿತ್ತು.

ಸಿಪಿಐಎಂ ರಾಜ್ಯಸಭಾ ಸಂಸದ ಎಲರಾಮ್ ಕರೀಂ ಮತ್ತು ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರಿದ ತಂಡವು ಸಿಪಹಿಜಾಲಾದ ಬಿಶಾಲ್ಗಢ ಮತ್ತು ಪಶ್ಚಿಮ ತ್ರಿಪುರದ ಕೆಲವು ಭಾಗಗಳಿಗೆ ಭೇಟಿ ನೀಡಿದ್ದರು.

ಕಾಂಗ್ರೆಸ್ ಲೋಕಸಭಾ ಸಂಸದರಾದ ರಂಜಿತಾ ರಂಜನ್, ಸಿಪಿಐ(ಎಂ) ರಾಜ್ಯಸಭಾ ಸಂಸದರಾದ ಎ ಎ ರಹೀಮ್ ಮತ್ತು ಬಿಕಾಶ್ ರಂಜನ್ ಭಟ್ಟಾಚಾರ್ಯ ಅವರನ್ನೊಳಗೊಂಡ ಎರಡನೇ ತಂಡವು ಪಶ್ಚಿಮ ತ್ರಿಪುರಾದ ಕಲ್ಕಾಲಿಯಾ ಗ್ರಾಮಕ್ಕೆ ಭೇಟಿ ನೀಡಿತ್ತು.

ಸಿಪಿಐ(ಎಂ) ಲೋಕಸಭಾ ಸಂಸದ ಪಿ ಆರ್ ನಟರಾಜನ್ ಮತ್ತು ಬಿನೋಯ್ ಬಿಸ್ವಾಮ್ ಅವರ ಮೂರನೇ ತಂಡವು ಜಿಲ್ಲೆಯ ದುರ್ಗಬರಿ, ಉಷಾಬಜಾರ್, ಕಾಳಿಕಾಪುರ ಮತ್ತು ಇತರ ಕೆಲವು ಗ್ರಾಮಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿತು. ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ವಿಧಾನಸಭೆಯ ಮಾಜಿ ಉಪ ಸ್ಪೀಕರ್ ಪಬಿತ್ರಾ ಕರ್ ಇದ್ದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ತ್ರಿಪುರಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಡಾ ಅಜಯ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿರಾಜಿತ್ ಸಿನ್ಹಾ, ಹಿರಿಯ ಕಾಂಗ್ರೆಸ್ ನಾಯಕ ಗೋಪಾಲ್ ಚಂದ್ರ ರಾಯ್ ಮತ್ತು ಜಿತೇಂದ್ರ ಚೌಧರಿ ಮುಂತಾದ ನಾಯಕರು ಕರೀಂ ಮತ್ತು ಖಲೇಕ್ ಅವರೊಂದಿಗೆ ಇದ್ದರು.

ಸ್ಥಳದಿಂದ ಹಿಂತಿರುಗಿದ ನಂತರ, ಅಬ್ದುಲ್ ಖಲೇಕ್ ಅವರು ಪ್ರತಿಕ್ರಿಯಿಸಿ,“ನೆಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಯಿತು. ಮಧ್ಯಾಹ್ನ ನಿಯೋಗವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ತಲುಪಿದ ನಂತರ ದಾಳಿಗೆ ಒಳಗಾಯಿತು. ಬಿಶಾಲ್‌ಗಢದ ನೇಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಅವರನ್ನು ಭೇಟಿ ಮಾಡಲು ಮತ್ತು ಸಂತ್ರಸ್ತ ಜನರೊಂದಿಗೆ ಮಾತನಾಡಲು ಹೋಗಿದ್ದೆವು. ಇದ್ದಕ್ಕಿದ್ದಂತೆ ಕೆಲವರು ಬಂದು ತಾವು ಬಿಜೆಪಿ ಬೆಂಬಲಿಗರೆಂದು ಹೇಳಿಕೊಂಡು ಅಂಗಡಿಗಳಿಗೆ ಬೆಂಕಿ ಹಚ್ಚಿದರು. ನಾವು ಅವರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು. ಆದರೆ ಕೆಲವರು ಇದ್ದಕ್ಕಿದ್ದಂತೆ ನಮ್ಮ ವಾಹನಗಳ ಮೇಲೆ ಕಲ್ಲು ತೂರಿದರು. ನಮ್ಮ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ನಮಗೆ ಸಹಾಯ ಮಾಡಲು ಒಂದೇ ಒಂದು ಕೆಲಸವನ್ನು ಮಾಡದಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ದೂರಿದ್ದಾರೆ.

ಹಗಲು ಹೊತ್ತಿನಲ್ಲಿ ನಿಯೋಗಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿರುವಾಗ ಜನರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಮಾತನಾಡುವುದು ವ್ಯರ್ಥ ಎಂದು ಖಲೇಕ್ ಟೀಕಿಸಿದ್ದಾರೆ.

ರಂಜೀತಾ ರಂಜನ್ ಮಾತನಾಡಿ, “ಇಲ್ಲಿ ಹಗಲಿರುಳು ಗೂಂಡಾಗಿರಿ ನಡೆಯುತ್ತಿದ್ದು, ಪ್ರತಿಪಕ್ಷಗಳು ಒಗ್ಗಟ್ಟಾಗಿ ನಿಲ್ಲಲು ಬಯಸಿದರೆ ದಾಳಿ ನಡೆಸಲಾಗುತ್ತಿದೆ. ತ್ರಿಪುರಾದಲ್ಲಿ ಏಳು ಸಂಸದರು ಮತ್ತು ಹಲವಾರು ಶಾಸಕರು ಸುರಕ್ಷಿತವಾಗಿಲ್ಲದಿದ್ದರೆ, ಇಲ್ಲಿ ಸಾಮಾನ್ಯ ಜನರು ಎಷ್ಟು ಸುರಕ್ಷಿತವಾಗಿರಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...