Homeಕರ್ನಾಟಕಬೆನ್ನು ಬಿಡದ ಅಪರಾಧ

ಬೆನ್ನು ಬಿಡದ ಅಪರಾಧ

- Advertisement -
- Advertisement -

ಮಂಡ್ಯ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಿಂತ ಸುಮಲತಾ ಅಂಬರೀಶರ ಚುನಾವಣಾ ಪ್ರಚಾರ ಮಾಡಿ ಸುಸ್ತಾಗಿ ಬಂದು ಮನೆ ಮುಂದೆ ನಿಂತಿದ್ದೆ. ಆಗ ನಾಗಮಂಗಲದಲ್ಲಿ ನಡೆದ ದೇವೇಗೌಡರ ಸಭೆಯ ಬಗ್ಗೆ ಮನಸ್ಸು ಒಂದಿಷ್ಟು ಘಾಸಿಗೊಂಡಿತ್ತು. ಏಕೆಂದರೆ ಕಾಂಗ್ರೆಸ್ ಮತ್ತು ದಳದ ಘಟಾನುಘಟಿ ಲೀಡರುಗಳ ಸಮ್ಮುಖದಲ್ಲಿ ಮಾತನಾಡುತ್ತಿದ್ದ ಗೆಳೆಯ ಶಿವರಾಮೇಗೌಡ ಸುಮಲತಾರನ್ನು ‘ಮಾಯಾಂಗನೆ’ ಎಂದು ಮೂದಲಿಸಿದ್ದಲ್ಲದೆ, ‘ಕರ್ನಾಟಕದ ಜಯಲಲಿತ ಆಗಲು ಬಂದಿದ್ದಾಳೆ’ ಎಂದುಬಿಟ್ಟಿದ್ದ. ಇದು ಅವನ ವ್ಯಕ್ತಿತ್ವಕ್ಕೆ ಸರಿಯಾದ ಮಾತು, ಆದರೆ ಆ ಸಭೆಯಲ್ಲಿದ್ದ ಸಿದ್ದರಾಮಯ್ಯ ಮತ್ತು ದೇವೇಗೌಡರು ಸಭ್ಯತೆಯ ಎಲ್ಲೆ ಮೀರಿದ್ದ ಶಿವರಾಮೇಗೌಡನ ಮಾತಿಗೆ ಆಕ್ಷೇಪವೆತ್ತಿರಲಿಲ್ಲ. ಬದಲಿಗೆ ದೇವೇಗೌಡರ ಮಾತಿಗೆ ಅವಕಾಶ ದೊರೆತಾಗ ‘ನಾನು ಭಾಷಣ ಮಾಡಲ್ಲ. ಶಿವರಾಮೇಗೌಡರ ಮಾತೇ ಅಂತಿಮ’ ಎಂದು ಹೇಳಿ ದಂಗುಬಡಿಸಿದ್ದರು. ಅಂತು ಇವರಿಗೇನೂ ಕೇಡುಗಾಲ ಎಂದುಕೊಂಡು ಸುಮ್ಮನೆ ಊರಿಗೆ ಬಂದಿದ್ದೆ.

ಆ ದಿನ ಸಾಯಂಕಾಲ ಮನೆ ಮುಂದೆ ಒಂದು ಬೈಕ್ ಬಂದು ನಿಂತಿತು. ಅಲ್ಲದೆ ‘ನಮಸ್ಕಾರ ಕಣಣ್ಣಾ’ ಎಂದಿತು. ನಸುಗತ್ತಲಾದ್ದರಿಂದ ಯಾರೆಂದು ಅರಿವಾಗಲಿಲ್ಲ ಹತ್ತಿರ ಹೋದೆ. ‘ನಾನು ಕಣಣ್ಣ ಎಂದ’. ‘ನಾನು ಮತ್ತೂ ಅನುಮಾನಿಸಿ ಗೊತ್ತಾಗಲಿಲ್ಲ’ ಎಂದೆ. ‘ನಾನು ಕಣಣ್ಣ, ಅದೇ ಗಂಗಾಧರಮೂರ್ತಿ’ ಎಂದ. ಆಗ ತಿಳಿಯಿತು. ನಮ್ಮೂರ ಮಗಳ ಮಗನಾದ ಈತ ತನ್ನ ಪರಿಚಯ ಹೇಳಿಕೊಳ್ಳಲು ‘ನಾನು ಗಂಗಾಧರ ಮೂರ್ತಿ ಕೊಂದವನು’ ಎಂದು ಹೇಳಿಕೊಳ್ಳುತ್ತಿದ್ದಾನೆ’ ಎಂಬುದು ಅರಿವಿಗೆ ಬಂತು. ಒಂದುಕ್ಷಣ ಅಳುಕಾಗಿ ‘ಏನಪ್ಪ ಸಮಾಚಾರ’ ಎಂದೆ. ‘ಏನಿಲ್ಲ ಕಣಣ್ಣ ನಿಮ್ಮತ್ರ ಏನೋ ಹೇಳಬೇಕಾಗ್ಯದೆ’ ಎಂದ. ‘ಏನು ವಿಷಯ’ ಎಂದೆ. ‘ಅದೆ ಶಿವರಾಮೇಗೌಡನ ವಿಷಯ ಕಣಣ್ಣ’ ಎಂದೆ. ‘ಅಯ್ಯೊ ಅವುನ ವಿಷಯ ಬಂದೂ ಬಂದೂ ಸಾಕಾಗ್ಯದೆ ಕಣಪ್ಪ. ಈಗವುನ್ನೇನು ಮುಟ್ಟಂಗಿಲ್ಲ. ದೇವೇಗೌಡ್ರು ಕರಕಂಡು ಬಂದು ಎಂ.ಪಿ ಮಾಡ್ಯವುರೆ’ ಎಂದೆ. ಆದ್ರು ಬರಿಬೇಕು ಬುಡಬಾರ್ದು ಕಣಣ್ಣ’ ಎಂದ. ‘ಆಯ್ತು ಬರಿಯನ ಅದೇನೇಳು’ ಎಂದೆ. ನೀವೊಂದೆರಡು ದಿನ ಬಿಡುವಾಗಿ ಸಿಕ್ಕಬೇಕಲ್ಲಣ್ಣ’ ಎಂದ. ‘ಸಿಗನ ತಗೊ ನನಿಗೇನು ಕ್ಯಲ್ಸಿಲ್ಲ’ ಎಂದೆ. ಶಿವರಾಮೇಗೌಡ ಕೋರ್ಟಿಗೋಗಬಹುದು’ ಎಂದ. ‘ಯಾಕೆ!’ ಎಂದೆ. ‘ಗಂಗಾಧರ ಮೂರ್ತಿ ಕೊಲೇಲಿ ನಮ್ಮನ್ನ ಹ್ಯಂಗೆ ಬಳಸಿಗಂಡ ಅನ್ನದನ್ಯಲ್ಲ ಹೇಳತಿನಿ’ ಎಂದ.

‘ನೋಡ್ರಪ್ಪ ಈಚೆಗೆ ನಮ್ಮ ಕೋರ್ಟಿಗೆ ಯಾರೂ ಹೆದರತಾಯಿಲ್ಲ. ಕೇಸಿನ ತೀರ್ಪು ಬರಕ್ಕೆ ಕನಿಷ್ಟ ಇಪ್ಪತ್ತು ವರ್ಷ ಆಯ್ತಾ ಅದೆ. ಅಷ್ಟೊತ್ತಿಗೆ ಶಿವರಾಮ ನೀನು ನಾನು ಯಾರೂ ಇರದಿಲ್ಲ ಆದ್ರಿಂದ ಧೈರ್ಯವಾಗಿ ಹೇಳು ಬರಿಯನ’ ಎಂದೆ. ಬರಿಬೇಕು ಕಣಣ್ಣ. ಇವತ್ತು ನಾನು ಬಾಳ ಯಾತನೇಲಿದ್ದಿನಿ’ ಎಂದ. ಒಂದಿಷ್ಟು ಸುಮ್ಮನಾದ. ನಾನು ಗಂಗಾಧರ ಮೂರ್ತಿ ಕೊಲೆ ಕಾಡಿಸುತ್ತಿರಬಹುದೆ. ಈತ ಹೊಡೆದ ಮಚ್ಚಿನೇಟಿಗೆ ಮರು ಮಾತನಾಡದೆ ಬೈಕ್ ಸಮೇತ ಭೂಮಿಗೊರಗಿದ. ಆ ದೃಶ್ಯ ಜೀವ ಹಿಂಡುತ್ತಿರಬಹುದೆ. ಎಂದು ಒಂದುಕ್ಷಣ ಯೋಚಿಸಿ ‘ಯಾಕಪ್ಪ ಏನಾಯ್ತು’ ಎಂದೆ. ‘ನನಿಗೆ ಜೀವಾವಧಿ ಆಯ್ತು ಕಣಣ್ಣ. ಅದೇ ಟೈಮಿಗೆ ನನಿಗೆ ಮಗ ಹುಟ್ಟಿದ. ಇತ್ತಗೆ ಹೆರಿಗೆ ಆದ್ರೆ ಅತ್ತಗೆ ನಾನು ಜೈಲಿಗೋದೆ. ಹೋಗುವಾಗ ನನ್ನೆಡ್ತಿಗೆ ಧೈರ್ಯ ಹೇಳಿ ಹೋಗಿದ್ದೆ. ಪೆರೋಲ್ ಮ್ಯಾಲೆ ಬಿಡುಗಡೆ ಆಯ್ತು ಸಾ… ಅದು ಎಂಟು ದಿನಕ್ಕೆ ಮಾತ್ರ. ಊರಿಗೆ ಬಂದು ನೋಡ್ತಿನಿ. ಮಗನಿಗಾಗ್ಲೆ ಹನ್ನೆರಡೊರ್ಸ. ಅವುನ ಜೊತೆ ಅರಾಮಾಗಿದ್ದು ಪುನಃ ಜೈಲಿಗೋದೆ ಕಣಣ್ಣ. ಒಳ್ಳೆ ನಡವಳಿಕೆ ಕಾರಣಕ್ಕೆ ಬೇಗ ಬಿಡುಗಡೆಯಾಗಕ್ಕೆ ಕುಮಾರಸ್ವಾಮಿಗೆ ಹೇಳೋದಕ್ಕೆ ಯವಸ್ಥೆ ಮಾಡಿದ್ದೆ ಕಣಣ್ಣ. ಅಷ್ಟರಲ್ಲಿ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಅನ್ನ ಸುದ್ದಿ ಬಿತ್ತು ಕಣಣ್ಣ’ ಎಂದು ಹೇಳುವಷ್ಟರಲ್ಲಿ, ಲೋಕೇಶನ ಗಂಟಲು ಬಿಗಿದು ಬಂದು ಕಣ್ಣು ತುಂಬಿಕೊಂಡವು. ‘ಅಯ್ಯೊ ಯಂತ ದುರಂತನಯ್ಯ’ ಎಂದು ಉದ್ಘಾರ ತೆಗೆದ. ನಾನು, ಬರೋಬ್ಬರಿ 26 ವರ್ಷಕ್ಕೆ ಮಗುಚಿಕೊಂಡೆ. ಆಗ ಇದೇ ಲೋಕೇಶ್‍ನಂತೆ ನನಗೂ ದುಃಖ ಒತ್ತರಿಸಿ ಬಂದು ಗೆಳೆಯರು ಸುಮ್ಮನಿರಿಸಿದರೂ ಆಗದೇ ಗೊಳೋ ಎಂದು ಅತ್ತು ಬಿಟ್ಟಿದ್ದೆ. ಎದೆಯ ದುಃಖ ಬಸಿದ ನಂತರ ಸಮಾಧಾನ ಮಾಡಿಕೊಂಡು ಆಲಿಸಿದೆ. ನನ್ನ ಅಳುವಿಗೆ ಕಾರಣನಾಗಿದ್ದ ಗಂಗಾಧರ ಮೂರ್ತಿ ಮಗ ರವಿವರ್ಮನ ಅಳು ನಿಂತಿತ್ತು. ತನ್ನ ತಂದೆಯ ಶವಸಂಸ್ಕಾರ ಮುಗಿದ ಮೇಲೆ ಇದ್ದಕ್ಕಿದ್ದಂತೆ ಅಪ್ಪನನ್ನ ನೆನೆಸಿಕೊಂಡು ಯಾರೂ ಸುಮ್ಮನಿರಿಸಲಾಗದ ಅಳುವಿಗೆ ತುತ್ತಾಗಿತ್ತು. ಈಗ ಸುಸ್ತಾಗಿ ಸುಮ್ಮನಾಗಿತ್ತು. ಆ ದಾರುಣ ಸಂದರ್ಭ ನನ್ನ ಮನಸ್ಸಿನಲ್ಲಿ ಉಳಿದುಬಿಟ್ಟಿತ್ತು. ಆವತ್ತು ಅಪ್ಪನನ್ನು ಕಳೆದುಕೊಂಡು ಮಗು ರವಿವರ್ಮ ಅಳುತ್ತಿದ್ದರೆ, ಈಗ ಮಗನನ್ನು ಕಳೆದುಕೊಂಡು ಲೋಕೇಶ್ ದುಃಖಿತನಾಗಿದ್ದ. ಬಹುಶಃ ಇಂತಹ ದುಃಖವೇ ಆತನನ್ನ ಶಿವರಾಮೇಗೌಡನ ವಿರುದ್ಧ ಸೇಡಿಗೆ ಪ್ರಚೋದಿಸಿರಬಹುದು ಎಂದುಕೊಳ್ಳುತ್ತಿರುವಾಗ, ಲೋಕೇಶ್ ‘ಮಗನ ಸಾವಿನ ದುಃಖ ಮರಿಯಕ್ಕೆ ಆಗಾಗ್ಗೆ ಕುಡಿತಿನಿ ಕಣಣ್ಣ’ ಎಂದ. ಈ ಬಗ್ಗೆ ನಾನು ಏನೂ ಹೇಳಲಾಗಲಿಲ್ಲ. ಆದರೆ, ಜೈಲಿನಲ್ಲಿದ್ದ ಅಪ್ಪ ಪೆರೋಲ್ ಮೇಲೆ ಬಂದು ಮಗನನ್ನ ಮಾತನಾಡಿಸಿ ಮುದ್ದಾಡಿ ಮತ್ತೆ ಜೈಲಿಗೆ ಹೋದಾಗ, ಆ ಹುಡುಗ ಏನು ಯೋಚಿಸಿರಬಹುದು. ಶಾಲೆಯಲ್ಲಿ ಯಾರಾದರೂ ಹಂಗಿಸಿರಬಹುದೇ ಎಂದೆಲ್ಲ ಆ ಯೋಚಿಸುತ್ತಿರುವಾಗ ‘ಬರ್ತಿನಿ ಕಣಣ್ಣ ಬಿಡುವು ಮಾಡಿಕೊಂಡು ಸಿಕ್ಕಿ ಯಲ್ಲನು ಹೇಳ್ತಿನಿ’ ಎಂದು ಹೊರಟ. ಈಗ ಅದ್ಯಾವುದರಿಂದ ಏನೂ ಪ್ರಯೋಜನವಿಲ್ಲ ಎಂದುಕೊಂಡರೂ, ಗಂಗಾಧರ ಮೂರ್ತಿ ಕೊಲೆ ನಡೆದು ಇಪ್ಪತ್ತಾರು ವರ್ಷಗಳಾಗಿವೆ. ಈ ನಡುವೆ ರಾಜಕೀಯವಾಗಿ ಮತ್ತು ಮತೀಯವಾಗಿ ನೂರಾರು ಕೊಲೆಗಳಾಗಿವೆ. ಆದರೂ ಇದೊಂದು ಕೊಲೆಗೆ ಸಂಬಂಧಿಸಿದವರು ಅಶಾಂತಿ ಮತ್ತು ದುಃಖದಿಂದ ತತ್ತರಿಸುತ್ತಿರುವುದು ಗೋಚರವಾಗುತ್ತಿದ್ದಂತೆ ಆಶ್ಚರ್ಯವಾಗತೊಡಗಿತು. ನಿಜಕ್ಕೂ ಅದೊಂದು ಅಮಾಯಕನ ಕೊಲೆಯಾಗಿತ್ತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...