Homeಕರ್ನಾಟಕನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

- Advertisement -
- Advertisement -

ಸಂಸದೆ ಸುಮಲತಾ ಅಂಬರೀಶ್​ ಅವರು ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ ತಮ್ಮ ಸಂಪೂರ್ಣ ಬೆಂಬಲ ಎಂದಿಗೂ ಬಿಜೆಪಿಗೆ ಇರುತ್ತದೆ ಎಂದು ಘೋಷಣೆ ಮಾಡಿದ್ದಾರೆ. ಇದು ಮಂಡ್ಯ ಜನತೆಗೆ ಆಘಾತ ತರಿಸಿದ್ದು, ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿನ ಲಂಕೇಶ್​ ರಂಗ ಮಂದಿರದಿಂದ ಸುಮಲತಾ ಅವರ ಫೋಟೋವನ್ನು ತೆರವುಗೊಳಿಸಿದ್ದಾರೆ.

ಹಿರಿಯ ನಟ ಅಂಬರೀಷ್ ಅವರು ಸಂಸದರಾಗಿದ್ದಾಗ ನೀಡಿದ್ದ ಅನುದಾನದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ನಿರ್ಮಿಸಿದ್ದ ರಂಗಮಂದಿರದಲ್ಲಿ ಸುಮಲತಾ ಅವರ ಫೋಟೊವನ್ನೂ ಅಳವಡಿಸಲಾಗಿತ್ತು. ಲಂಕೇಶ್ ಪತ್ರಿಕೆಯ‌ ಅಂಕಣಕಾರರಾಗಿದ್ದ ಬಿ.ಚಂದ್ರೇಗೌಡ ಅವರು ಪಿ.ಲಂಕೇಶ್‌ ಅವರ ಮೇಲಿನ ಪ್ರೀತಿ ಮತ್ತು ಅಭಿಮಾನದ ಪ್ರತೀಕವಾಗಿ ಗ್ರಾಮದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಿಸಿ ಗೌರಿ ಲಂಕೇಶ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಿದ್ದರು.

ಈ ರಂಗಮಂದಿರದಲ್ಲಿ ವರನಟ ಡಾ. ರಾಜ್​ಕುಮಾರ್​, ನಟ ಅಂಬರೀಶ್​ ಹಾಗೂ ಸುಮಲತಾರ ಫೋಟೋವನ್ನು ಅಳವಡಿಸಲಾಗಿತ್ತು. ಆದರೆ ಸುಮಲತಾ ಬಿಜೆಪಿಗೆ ಬೆಂಬಲ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ರಂಗಮಂದಿರದಲ್ಲಿದ್ದ ಸುಮಲತಾ ಫೋಟೋ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

ಕಳೆದ ಬಾರಿ ಸುಮಲತಾ ಅವರು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನು ಮಂಡ್ಯದ ಸ್ವಾಭಿಮಾನದ ಗೆಲುವು ಎಂದು ಬಣ್ಣಿಸಲಾಗಿತ್ತು. ಈ ಭಾಗದಲ್ಲಿ ಯಾವತ್ತೂ ಬಿಜೆಪಿ ಪಕ್ಷವನ್ನು ಒಪ್ಪಿಕೊಂಡಿರಲಿಲ್ಲ, ಇಲ್ಲಿಯ ಜನರು ಜೆಡಿಎಸ್ ಹಾಗೂ ಕಾಂಗ್ರೆಸ್‌ಗೆ ಒಲುವು ತೋರುತ್ತಾ ಬಂದಿದ್ದಾರೆ. ಆದರೆ ಇದೀಗ ಸುಮಲತಾ ಅವರು ಬಿಜೆಪಿಗೆ ಬೆಂಬಲ ಘೋಷಿಸಿದ ಬಳಿಕ ಮಂಡ್ಯದ ಜನರು ಸುಮಲತಾ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅಂಕಣಕಾರ ಬಿ ಚಂದ್ರೇಗೌಡ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅವರಿಗೆ ನಮ್ಮೂರಿನಿಂದಲೇ (ಬಿದರಕೆರೆ ಗ್ರಾಮ) ಹೆಚ್ಚಿನ ಮತಗಳು ಬಂದಿವೆ. ಅವರು ಗೆದ್ದ ಬಳಿಕ ನಮ್ಮೂರಿನ ಯುವಕರು ಸುಮಲತಾ ಭಾವಚಿತ್ರವನ್ನು ಲಂಕೇಶ್ ರಂಗಮಂದಿರದಲ್ಲಿ ಹಾಕಿದ್ದರು ಎಂದು ತಿಳಿಸಿದರು.

”ಅಂಬರೀಶ್ ಅವರು ಮಹಾನ್ ಸೆಕ್ಯೂಲರ್ ಮನುಷ್ಯ ಆಗಿದ್ದರು. ಸುಮಲತಾ ಕೂಡ ಅವರ ಹಾದಿಯಲ್ಲೇ ನಡೆಯುತ್ತಾರೆ ಎಂದು ಭಾವಿಸಿದ್ದೆವು. ಆದರೆ ಸುಮಲತಾ ಅವರು ಕೋಮುವಾದಿ ಪಕ್ಷವಾಗಿರುವ ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ, ಬೆಂಬಲ ಕೊಡುತ್ತೇನೆ ಎಂದು ಹೇಳಿರುವುದು ನಮ್ಮ ಊರಿನ ಜನರಿಗೆ ಬೇಸರ ತರಿಸಿತು. ಹಾಗಾಗಿ ಸುಮಲತಾ ಘೋಷಣೆ ಬೆನ್ನಲ್ಲೇ ನಮ್ಮೂರಿನ ಯುವಕರು ಅವರ ಫೋಟೋವನ್ನು ತಗೆದು ಬಿಸಾಕಿದ್ದಾರೆ. ಸುಮಲತಾ ಅವರು ಬಿಜೆಪಿಗೆ ಸೇರುವ ಮೂಲಕ ಮಂಡ್ಯ ಜನರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

”ಸುಮಲತಾ ಅವರು ಪಕ್ಷೇತರರಾಗಿ ಗೆಲುವು ಸಾಧಿಸಿದ್ದು ಒಂದು ಇತಿಹಾಸ, ಅವರು ಯಾವುದೇ ನಿರ್ಧಾರ ತಗೆದುಕೊಳ್ಳುವ ಮುನ್ನ ಕಾರ್ಯಕರ್ತರ ಅಭಿಪ್ರಾಯ ಕೇಳುತ್ತೇನೆ ಎಂದು ಹೇಳಿದ್ದರು. ಆದರೆ ಇಂದು ಆ ಮಾತು ಮರೆತಿದ್ದಾರೆ. ಮಂಡ್ಯ ಜನರ ನಂಬಿಕೆಗೆ ದ್ರೋಹ ಬಗೆದಿದ್ದಾರೆ. ಹಾಗಾಗಿ ರಂಗಮಂದಿರದಲ್ಲಿನ ಅವರ ಭಾವಚಿತ್ರವನ್ನು ತಗೆದುಬಿಸಾಕಿದ್ದಾರೆ. ಆ ಜಗಕ್ಕೆ ಪುನಿತ್ ರಾಜಕುಮಾರ್ ಫೋಟೋ ಹಾಕಲಾಗುತ್ತಿದೆ” ಎಂದು ಚಂದ್ರೇಗೌಡ ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...