Homeಕರ್ನಾಟಕಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

- Advertisement -
- Advertisement -

ಇಂದು ಮಂಡ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲೆಯನ್ನು ಭಾದಿಸುತ್ತಿರುವ ಸಮಸ್ಯೆಗಳ ಬಗೆಹರಿಸುವಂತೆ ಮನವಿ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯನ್ನು ಕಾಡುತ್ತಿರುವ ಬೆಲೆಯೇರಿಕೆ, ಮಹಿಳೆಯರ ಮೇಲಿನ ಅತ್ಯಾಚಾರಗಳು, ರೈತರ ಸಮಸ್ಯೆ ಮತ್ತು ಕಾರ್ಖಾನೆಗಳಲ್ಲಿ ದುಡಿವವರಿಗೆ ಕೆಲಸದ ಅವಧಿ ಹೆಚ್ಚಳದಂತಹ ಸಮಸ್ಯೆಗಳನ್ನು ಈ ಕೂಡಲೇ ನಿಯಂತ್ರಣಕ್ಕೆತರುವಂತೆ ಆಗ್ರಹ ಪತ್ರ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಸಿದ್ದರಾಜು, ಪೂರ್ಣಿಮ, ಶಿಲ್ಪ ಮತ್ತು ನಗರಗೆರೆ ಜಗದೀಶ್‌ರವರನ್ನು ಬಂಧಿಸಿಡಲಾಗಿದೆ.

ದಿನಬಳಕೆ ವಸ್ತುಗಳ ಬೆಲೆಗಳು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ದುಬಾರಿಯಾಗಿದೆ. ಜೀವನ ವೆಚ್ಚವನ್ನು ನಿರ್ವಹಿಸುವ ಹೊಣೆ ಹೊತ್ತ ಹೆಣ್ಣುಜೀವಗಳು ಇಂತಹ ಬೆಲೆಯೇರಿಕೆಯನ್ನು ಸಹಿಸಲಾಗದೆ ನಲುಗುತ್ತಿವೆ. ಬಡವರು, ದಲಿತ-ದಮನಿತರು ಮತ್ತು ಮಹಿಳೆಯರ ಬದುಕನ್ನು ನರಕವಾಗಿಸಿರುವ ಬೆಲೆಯೇರಿಕೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೆ ಎಕ್ಸ್‌ಪ್ರೆಸ್‌ನಿಂದಾಗಿ ಉದ್ಯೋಗ ಕಳೆದುಕೊಳ್ಳುವ ಜನರಿಗೆ ಪುನರ್‌ವಸತಿ ಕಲ್ಪಿಸಬೇಕು ಎನ್ನಲಾಗಿದೆ.

ಮಹಿಳೆಯರ ಮೇಲಿನ ಅತ್ಯಾಚಾರಗಳುಒಂದೆಡೆ ವಿಪರೀತ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅದರ ಬರ್ಬರತೆಯೂ ಹೆಚ್ಚುತ್ತಿದೆ. ಪುಟ್ಟ ಮಕ್ಕಳೂ ಈ ದೌರ್ಜನ್ಯದಿಂದ ಕೊಲೆಯಾಗುತ್ತಿರುವ ಕ್ರೂರವಾದ ಸಂದರ್ಭದಲ್ಲಿ, ಅತ್ಯಾಚಾರಿಗಳನ್ನು ನೀವು ಪ್ರತಿನಿಧಿಸುವ ಪಕ್ಷವು ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಶಿಕ್ಷೆಯಿಂದ ವಿನಾಯಿತಿ ನೀಡಿ ಬಿಡುಗಡೆ ಮಾಡುತ್ತಿರುವುದು, ಅತ್ಯಾಚಾರಿಗಳನ್ನುರಕ್ಷಣೆ ಮಾಡುತ್ತಿರುವುದು, ಜೊತೆಗೆ ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಕರೆಕೊಡುವ ವ್ಯಕ್ತಿಗಳೀಗೂ ಪಕ್ಷದ ಮುಖ್ಯ ಹುದ್ದೆಗಳಲ್ಲಿ ಮುಂದುವರೆಯುವ ಅವಕಾಶ ನೀಡುತ್ತಿರುವುದು ತೀವ್ರವಾಗಿ ಖಂಡನಾರ್ಹ. ವಿಶೇಷವಾಗಿ ದಲಿತ, ಅಲ್ಪಸಂಖ್ಯಾತ, ದುಡಿಯುವ ಮಹಿಳೆಯರ ಮೇಲಿನ ಅತ್ಯಾಚಾರಗಳ ವಿಚಾರದಲ್ಲಿ ಸರ್ಕಾರದ ಸಮ್ಮತಿಯು ನಿಚ್ಚಳವಾಗಿ ಕಾಣುತ್ತಿದೆ. ಭಾರತದ ಮಹಿಳೆಯರೂ ಕೂಡಾ ಈ ದೇಶದ ಪ್ರಜೆಗಳೇ. ಅವರಿಗೆ ಸಂವಿಧಾನ ಬದ್ಧವಾದ ರಕ್ಷಣೆಯ ಹಕ್ಕನ್ನು ನಾವು ಆಗ್ರಹಿಸುತ್ತೇವೆ ಎಂದ ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಮಂಡ್ಯ ಜಿಲ್ಲೆಯು ಎಲ್ಲಾ ರೀತಿಯ ಸಂಪತ್ತು ಹೊಂದಿದ್ದರೂ ಸಹ ಅದರ ಫಲ ಜಿಲ್ಲೆಯ ಜನರಿಗೆ ಸಿಗುತ್ತಿಲ್ಲ. ಮುಖ್ಯವಾಗಿ ರೈತರು ಎಷ್ಟೇ ಬೆಳೆದರೂ ಸಮರ್ಪಕ ಬೆಲೆ ಇಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಇನ್ನು ನೀವು ಜಾರಿಗೊಳಿಸಿದಂತಹ ಕರಾಳ ಕೃಷಿ ಕಾನೂನುಗಳನ್ನು ವಾಪಸ್ ಪಡೆದರೂ ಸಹ ರಾಜ್ಯ ಸರ್ಕಾರ ವಾಪಸ್ ಪಡೆಯದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯದ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ. ಜೊತೆಗೆ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಈಚೆಗೆ ತಮ್ಮದೇ ಪಕ್ಷ ಆಳ್ವಿಕೆಯಲ್ಲಿರುವ ನಮ್ಮ ರಾಜ್ಯದಲ್ಲಿ ಮಹಿಳೆಯರನ್ನೂ ಒಳಗೊಂಡಂತೆ ಎಲ್ಲ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವುದು, ಮಹಿಳಾ ಕಾರ್ಮಿಕರಿಗೆ ಯಾವುದೇ ವಿಶೇಷ ರಕ್ಷಣೆಯ ನೀತಿಯಿಲ್ಲದೆ ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಅವಕಾಶ ನೀಡಿರುವುದು ಅತಿದೊಡ್ಡ ಕಾರ್ಮಿಕ ವಿರೋಧೀತನವಾಗಿದೆ. ಎಲ್ಲ ಕಾರ್ಮಿಕರಿಗೂ ಇದು ಹಾನಿಕರವಾದರೂ ಮಹಿಳಾ ಕಾರ್ಮಿಕರು ಈಗಾಗಲೇ ಮನೆಗೆಲಸ ಮತ್ತು ಹೆಚ್ಚು ಶ್ರಮಹಾಕಬೇಕಾದ ಹೊರಗಿನ ಕೆಲಸ ಎರಡರ ಹೊರೆಯನ್ನೂ ಹೊತ್ತವರಾಗಿ, ಹೆಚ್ಚುವರಿ ಕೆಲಸದ ಅವಧಿಯು ಅವರ ಆರೋಗ್ಯ ಮತ್ತು ಬದುಕಿನ ಮೇಲೆ ಅತ್ಯಂತ ಗಂಭೀರವಾದ ದುಷ್ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಲಾಗಿದೆ.

ಈ ಎಲ್ಲ ವಿಷಯಗಳಲ್ಲೂ ಕೂಡಲೇ ನಿಯಂತ್ರಿಸಿ, ಮಹಿಳಾ ವಿರೋಧಿ, ಜನವಿರೋಧಿ ನೀತಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತೇವೆ. ಇವಿಷ್ಟೇ ಅಲ್ಲದೆ, ಬಡಜನರ ಭೂಮಿ ಮತ್ತು ವಸತಿಯ ಹಕ್ಕನ್ನು ಕಸಿಯುವ ಪ್ರಯತ್ನಗಳನ್ನು, ಅಲ್ಪಸಂಖ್ಯಾತರು ಮತ್ತು ಅಂಚಿಗೊತ್ತಲ್ಪಟ್ಟವೆ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಈ ತಕ್ಷಣದಲ್ಲೇ ನಿಲುಗಡೆಗೆ ತರಬೇಕು. ಸಂವಿಧಾನಬದ್ಧವಾದ, ಪ್ರಜಾತಾಂತ್ರಿಕ, ಜಾತ್ಯತೀತ, ನಾಗರೀಕವಾದ ಬದುಕಿನ ಪರಿಸ್ಥಿತಿಯನ್ನು ಕಲ್ಪಿಸಬೇಕೆಂದು ನೀವಿಂದು ಭೇಟಿಕೊಡುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲ ಜನತೆ ಮತ್ತು ಮಹಿಳೆಯರ ಪರವಾಗಿ ಈ ಮೂಲಕ ಆಗ್ರಹಿಸುತ್ತಿದ್ದೇವೆ.

ದೇಶದ ಪ್ರಜೆಗಳಾಗಿ ಗೌರವಯುತವಾಗಿ ಹಕ್ಕೊತ್ತಾಯ ಸಲ್ಲಿಸಲು ಬಂದ ನಮ್ಮನ್ನು ತಡೆದು ಪೊಲೀಸರು ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕೂಡನೇ ನಮ್ಮನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆಯಲ್ಲಿಯೇ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಬಂಧಿತ ಹೋರಾಟಗಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಠಾಣೆಯಿಂದಲೇ ಪತ್ರ ಬರೆದಿದ್ದಾರೆ.

ಪೊಲೀಸರು ಈ ಕೂಡಲೇ ಬಂಧಿತ ಮುಖಂಡರನ್ನು ಬಿಡುಗಡೆಗೊಳಿಸದಿದ್ದರೆ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಪ್ರತಿಭಟನಾಕಾರರ ಪರವಾಗಿ ಠಾಣೆಗೆ ಹಾಜರಾದ ಹಾಜರಾದ ಪ್ರಗತಿಪರ ವಕೀಲರಾದ ಬಿ ಟಿ ವಿಶ್ವನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...