Homeಮುಖಪುಟದೇಶಾದ್ಯಂತ 'ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ' ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

ದೇಶಾದ್ಯಂತ ‘ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ’ ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

- Advertisement -
- Advertisement -

ದೇಶ ಹಿಂದೆಂದೂ ಕಂಡರಿಯದಂತಹ ನಿರುದ್ಯೋಗ, ಹಣದುಬ್ಬರ ಮತ್ತು ಆರ್ಥಿಕ ಅಸಮಾನತೆಯನ್ನು ಎದುರಿಸುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮತ್ತು ಉದ್ಯೋಗಗಳಿಲ್ಲದೆ ಯುವಕರು ಹತಾಶರಾಗಿದ್ದಾರೆ. ಈ ರೀತಿಯ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಸಂಘಟನೆಗಳು ಇಂದಿನಿಂದ (12 ಮಾರ್ಚ್ 2023ರಿಂದ) 14 ಏಪ್ರಿಲ್ 2023 ರವರೆಗೆ ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ (BSJAY) ಹೆಸರಿನಲ್ಲಿ ದೇಶಾದ್ಯಂತ ಒಂದು ತಿಂಗಳ ಮೆರವಣಿಗೆ ಪ್ರಾರಂಭಿಸಿವೆ.

ಈ ಯಾತ್ರೆಯನ್ನು ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ (RWPI), ನೌಜವಾನ್ ಭಾರತ್ ಸಭಾ, ದಿಶಾ ವಿದ್ಯಾರ್ಥಿಗಳ ಸಂಘಟನೆ, ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಮತ್ತು ಬಿಗುಲ್ ಮಜ್ದೂರ್ ದಸ್ತಾ ಎಂಬ ಹಲವಾರು ವಿದ್ಯಾರ್ಥಿಗಳು, ಯುವಕರು ಮತ್ತು ಕಾರ್ಮಿಕರ ಸಂಘಟನೆಗಳು ಆಯೋಜಿಸಿವೆ.

ಇಂದಿನಿಂದ ಆರಂಭವಾಗುವ ಯಾತ್ರೆಯು ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಬಿಹಾರ, ಉತ್ತರಾಖಂಡ, ಪಂಜಾಬ್, ಆಂಧ್ರಪ್ರದೇಶ, ಚಂಡೀಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಾಗಲಿದೆ. ಈ ರಾಜ್ಯಗಳ ಹಳ್ಳಿಗಳು ಮತ್ತು ನಗರಗಳಲ್ಲಿ ಸಾರ್ವಜನಿಕರೊಂದಿಗೆ ಅವರ ಸಮಸ್ಯಗಳ ಕುರಿತಾಗಿ ಸಂವಾದಗಳನ್ನು ನಡೆಸಲಾಗುತ್ತದೆ.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಈ ಬಗ್ಗೆ ವಾರದ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಸಧ್ಯ ಜಾರಿಯಲ್ಲಿರುವ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ಅಡಿಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಬಿಕ್ಕಟ್ಟನ್ನು ಎತ್ತಿ ತೋರಿಸಿದರು.

ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ ಪರವಾಗಿ ಮಾತನಾಡಿದ ಯೋಗೇಶ್, ”ಕೇಂದ್ರ ಸರ್ಕಾರ ‘ಧರ್ಮದ ಉನ್ಮಾದ’ವನ್ನು ಬಳಸಿಕೊಂಡು ಮೂಲಭೂತ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಹಕ್ಕುಗಳ ಬಗೆಗಿನ ಗಮನವನ್ನು ಬೆರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ” ಎಂದು ವಾದಿಸಿದರು.

”ಕೇಂದ್ರ ಬಿಜೆಪಿ ಸರ್ಕಾರ ಸುಳ್ಳು ಧಾರ್ಮಿಕ ಶತ್ರುವನ್ನು ಹುಟ್ಟುಹಾಕುವ ಮೂಲಕ, ಬ್ರಿಟಿಷರ ಒಡೆದು ಆಳುವ ನೀತಿಯನ್ನು ನಿಷ್ಠೆಯಿಂದ ಜಾರಿಗೆ ತರುತ್ತಿದೆ. ಬಿಜೆಪಿ, ಕಾಂಗ್ರೆಸ್, ಎಸ್‌ಪಿ, ಬಿಎಸ್‌ಪಿ, ಆರ್‌ಜೆಡಿ, ಜೆಡಿಯು ಮತ್ತು ಎಎಪಿ ದೊಡ್ಡ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈಗ ಕ್ರಾಂತಿಯ ಮನೋಭಾವವನ್ನು ಪುನಶ್ಚೇತನಗೊಳಿಸುವುದು ಮುಖ್ಯವಾಗಿದೆ. ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆಯು (BSJAY) ಆ ನಿಟ್ಟಿನಲ್ಲಿ ಒಂದು ಪ್ರಯತ್ನವಾಗಿದೆ” ಎಂದು ಅವರು ಹೇಳಿದರು.

ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒಕ್ಕೂಟದ ಅಧ್ಯಕ್ಷೆ ಶಿವಾನಿ ಕೌಲ್ ಮಾತನಾಡಿ, ”ಈ ಯಾತ್ರೆಯ ಉದ್ದೇಶವು ಜಾಗೃತಗೊಳಿಸುವುದು, ಜನರಲ್ಲಿ ಪ್ರಜ್ಞೆಯನ್ನು ಮೂಡಿಸುವುದು ಮತ್ತು ಅವರ ಮೂಲಭೂತ ಹಕ್ಕುಗಳಿಗಾಗಿ ಹೋರಾಡಲು ಅವರನ್ನು ಸಂಘಟಿಸುವುದಾಗಿದೆ” ಎಂದು ತಿಳಿಸಿದರು.

ದಿಶಾ ಸ್ಟೂಡೆಂಟ್ಸ್ ಆರ್ಗನೈಸೇಶನ್‌ನ ಪ್ರಿಯಂವದಾ, ”ಪ್ರಾಥಮಿಕ ಮತ್ತು ಉನ್ನತ ಶಿಕ್ಷಣದ ದುಃಸ್ಥಿತಿಯನ್ನು ವಿವರಿಸಿದರು. ದೇಶದಾದ್ಯಂತ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಶುಲ್ಕಗಳು ಹೆಚ್ಚಾಗುತ್ತಲೇ ಇವೆ ಆದರೆ ಬೋಧಕರ ಹುದ್ದೆಗಳು ಖಾಲಿ ಉಳಿದಿವೆ. ಮೋದಿ ಸರ್ಕಾರ ತಂದಿರುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ ಮತ್ತು ಕೋಮುವಾದವನ್ನು ಮಾತ್ರ ಮುಂದಿಡುತ್ತದೆ” ಎಂದು ಹೇಳಿದರು.

ನೌಜವಾನ್ ಭಾರತ್ ಸಭೆಯನ್ನು ಪ್ರತಿನಿಧಿಸುವ ವಿಶಾಲ್ ಅವರು ನಿರುದ್ಯೋಗದ ಬಗ್ಗೆ ಮಾತನಾಡಿ, ”ಮೋದಿ ಸರ್ಕಾರ ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯ ಮೇಲೆ ಅಧಿಕಾರಕ್ಕೆ ಬಂದಿದೆ. ಆದರೆ ದೇಶದ ಸುಮಾರು 32 ಕೋಟಿ ಜನಸಂಖ್ಯೆಯು ನಿರುದ್ಯೋಗದ ಸಂಕಷ್ಟವನ್ನು ಎದುರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

CMIE (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ದ ಅಂಕಿಅಂಶಗಳ ಪ್ರಕಾರ, ಪ್ರಸ್ತುತ, ದೇಶದಲ್ಲಿ ನಿರುದ್ಯೋಗ ದರವು COVID ಸಮಯದಲ್ಲಿ ಇದ್ದ ಮಟ್ಟವನ್ನು ತಲುಪಿದೆ. ಕೋವಿಡ್ ಸಮಯದಲ್ಲಿ ಕೆಲಸವನ್ನು ಕಳೆದುಕೊಂಡ ಪ್ರತಿ ಐದು ಯುವಕರಲ್ಲಿ ಒಬ್ಬರೂ ಇಲ್ಲಿಯವರೆಗೆ ಉದ್ಯೋಗವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಟ್ವಿಟರ್, ಅಮೆಜಾನ್, ಎಚ್‌ಪಿ, ಮೈಕ್ರೋಸಾಫ್ಟ್ ಮತ್ತು ನೆಟ್‌ಫ್ಲಿಕ್ಸ್‌ನಂತಹ ದೊಡ್ಡ ಮತ್ತು ಪ್ರತಿಷ್ಠಿತ ಕಂಪನಿಗಳು ಉದ್ಯೋಗಿಗಳನ್ನು ಕಡಿಮೆ ಮಾಡುತ್ತಿದೆ ಮತ್ತು ಹಿಂಬಡ್ತಿಯನ್ನು ನೀಡಲಾರಂಭಿಸಿವೆ. ಇದರಿಂದ ವೈಟ್-ಕಾಲರ್ ಟೆಕ್ ಮತ್ತು ಮ್ಯಾನೇಜರ್ ವರ್ಗಗಳು ಸಹ ಉದ್ಯೋಗ ನಷ್ಟ ಎದುರಿಸುತ್ತಿದೆ. ಇದೇ ರೀತಿ ಇಡೀ ದೇಶದ ಎಲ್ಲಾ ಕಾರ್ಖಾನೆಗಳು, ಕಚೇರಿಗಳು, ಅಂಗಡಿಗಳು, ವರ್ಕ್‌ಶಾಪ್‌ಗಳು ಇತ್ಯಾದಿಗಳಲ್ಲಿ ನಡೆಯುತ್ತಿದೆ. ಇದರಿಂದ ನಿರುದ್ಯೋಗ ಹೆಚ್ಚಾಗುತ್ತಲೇ ಇದೆ” ಎಂದು ವಿಶಾಲ್ ಅವರು ವಿವರಿಸಿದರು.

ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಳಗಿನ ಬೇಡಿಕೆಗಳನ್ನು ಮುಂದಿಟ್ಟು ಯಾತ್ರೆಯನ್ನು ಆಯೋಜಿಸಲಾಗಿದೆ:

1.) ಉದ್ಯೋಗದ ಮೂಲಭೂತ ಹಕ್ಕು: ಭಗತ್ ಸಿಂಗ್ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯಿದೆ (BASNEGA)ಯನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕು. ಅದರ ಅಡಿಯಲ್ಲಿ ಎಲ್ಲಾ ಅರ್ಹ ನಾಗರಿಕರಿಗೆ ಉದ್ಯೋಗಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಪ್ಪಿದಲ್ಲಿ ಕನಿಷ್ಠ 10,000 ರೂ. ನಿರುದ್ಯೋಗ ಭತ್ಯೆ ರೂಪದಲ್ಲಿ ನೀಡಬೇಕು.

2.) ಕಾರ್ಮಿಕರ ಪರವಾದ ಕಾನೂನುಗಳ ಕಟ್ಟುನಿಟ್ಟಾದ ಅನುಷ್ಠಾನ: ಎಲ್ಲಾ ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಹೊಸ ಉದ್ದೇಶಿತ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಕಾನೂನುಗಳು- 8ಗಂಟೆಗಳ ಕೆಲಸದ ದಿನ, ಸಾಪ್ತಾಹಿಕ ರಜೆ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಸಂಬಳ, ಒಕ್ಕೂಟವನ್ನು ರಚಿಸುವ ಹಕ್ಕು ಮತ್ತು ಭದ್ರತಾ ನಿಬಂಧನೆಗಳ ಹಕ್ಕು, ಅನೌಪಚಾರಿಕ ಕಾರ್ಖಾನೆಗಳ ಮೇಲೆ ಸರ್ಕಾರದ ನಿಯಂತ್ರಣ, ನಿರಂತರವಾಗಿ ಕೆಲಸ ಮಾಡುವವರ ಗುತ್ತಿಗೆ ಕೆಲಸವನ್ನು ರದ್ದುಗೊಳಿಸಿ ಖಾಯಂಗೊಳಿಸಬೇಕು ಮತ್ತು ಕಾರ್ಮಿಕ ಕಾನೂನುಗಳ ಉಲ್ಲಂಘನೆಯನ್ನು ಕ್ರಿಮಿನಲ್ ವರ್ಗದ ಅಡಿಯಲ್ಲಿ ತರಬೇಕು ಆ ಮೂಲಕ ಅದನ್ನು ಶಿಕ್ಷಾರ್ಹಗೊಳಿಸಬೇಕು.

3.) ಹಣದುಬ್ಬರ ನಿಯಂತ್ರಣ: ಕಾಳಧನ ಮತ್ತು ಬೆಟ್ಟಿಂಗ್‌ಅನ್ನು ಶಿಕ್ಷಾರ್ಹ ಅಪರಾಧಗಳೆಂದು ಘೋಷಿಸುವ ಕಾನೂನನ್ನು ತರಬೇಕು. ಮೂಲ ಸರಕು ಮತ್ತು ಸೇವೆಗಳ ವಿತರಣೆಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸಬೇಕು. ಎಲ್ಲಾ ನಾಗರಿಕರಿಗೆ ಆಹಾರ ಲಭ್ಯವಾಗುವಂತೆ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಬೇಕು. ಹಣದುಬ್ಬರವನ್ನು ಕಡಿಮೆ ಮಾಡಲು, ಪರೋಕ್ಷ ತೆರಿಗೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಆಸ್ತಿಯ ಆಧಾರದ ಮೇಲೆ ನೇರ ತೆರಿಗೆಗಳ ವ್ಯವಸ್ಥೆಯನ್ನು ಬಲಪಡಿಸಬೇಕು.

4.) ಶಿಕ್ಷಣ ಮೂಲಭೂತ ಹಕ್ಕು: ಜನವಿರೋಧಿ ಹೊಸ ಶಿಕ್ಷಣ ನೀತಿ 2020ನ್ನು ರದ್ದುಗೊಳಿಸಬೇಕು ಮತ್ತು ಪ್ರಾಥಮಿಕ ಮತ್ತು ಉನ್ನತ ಶಿಕ್ಷಣವನ್ನು ಬಲಪಡಿಸಬೇಕು.

5.) ಜಾತ್ಯತೀತ ದೇಶ: ‘ಸರ್ವ ಧರ್ಮ ಸಮಭವ’ದ ನಕಲಿ ಸೆಕ್ಯುಲರಿಸಂ ಬದಲಿಗೆ ನಿಜವಾದ ಜಾತ್ಯತೀತ ರಾಜ್ಯವನ್ನು ನಿರ್ಮಾಣ ಮಾಡಬೇಕು. ಯಾವುದೇ ಸಾರ್ವಜನಿಕ ನಾಯಕರು ಯಾವುದೇ ಧರ್ಮ, ಸಮುದಾಯ ಅಥವಾ ನಂಬಿಕೆಯ ಯಾವುದೇ ಉಲ್ಲೇಖ ಅಥವಾ ಬಳಕೆ ಮಾಡಿದರೆ ಅದನ್ನು ಶಿಕ್ಷಾರ್ಹ ಅಪರಾಧವೆಂದು ಕಾನೂನು ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...