Homeಕರ್ನಾಟಕ'ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ': ಕಾಂಗ್ರೆಸ್

‘ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ’: ಕಾಂಗ್ರೆಸ್

- Advertisement -
- Advertisement -

ಭಾನುವಾರ ಮಂಡ್ಯದಲ್ಲಿ ನಡೆದ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚು ಜನರನ್ನು ಸೇರಿಸುವ ಉದ್ದೇಶದಿಂದ ಸರ್ಕಾರ ಜಿಲ್ಲಾ ಪಂಚಾಯತ್ ಕಾರ್ಯಾಲಯದಿಂದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇದಕ್ಕೆ ಕಾಂಗ್ರೆಸ್, ಮೋದಿಮೋಸ ಟ್ಯಾಗ್ ಬಳಸಿ ಟ್ವಿಟರ್‌ನಲ್ಲಿ ಟೀಕೆ ಮಾಡಿದೆ.

”ಖಾಲಿ ಕುರ್ಚಿಗಳಿಂದ ನರೇಂದ್ರ ಮೋದಿ ಅವರಿಗೆ ಮುಜುಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತರುತ್ತಿರುವಿರಾ ಬಸವರಾಜ್ ಬೊಮ್ಮಾಯಿ ಅವರೇ..? ಜನರ ಹಣದಲ್ಲಿ ಪಕ್ಷದ ಮೆರವಣಿಗೆ ಮಾಡಲು ನಾಚಿಕೆ ಎನಿಸುವುದಿಲ್ಲವೇ..? ರಾಜ್ಯ ಬಿಜೆಪಿಯು ಜನರನ್ನು ಸೇರಿಸಲು ಇಷ್ಟೊಂದು ಪರದಾಡುತ್ತಿರುವುದು ಕರ್ನಾಟಕದಲ್ಲಿ ಮೋದಿ ಮುಖ ಹಳಸಿದೆ ಎಂಬುದನ್ನು ಸೂಚಿಸುತ್ತದೆ!” ಎಂದು ಕಾಂಗ್ರೆಸ್ ಟೀಕಿಸಿದೆ. ಜೊತೆಗೆ ಟ್ವೀಟ್ ನಲ್ಲಿ ‘ಮೋದಿ ಮೋಸ’ ಎಂದು ಟ್ಯಾಗ್ ಕೂಡ ಬಳಸಲಾಗಿದೆ.

ಜಿಲ್ಲಾ ಪಂಚಾಯತ್ ಕಾರ್ಯಲಯವು, ಮಾರ್ಚ್ 12ರಂದು ನಡೆಯುವ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಬೇಕು ಎಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಆ ಸುತ್ತೋಲೆಯಲ್ಲಿ,- ಸನ್ಮಾನ್ಯ ಪ್ರಧಾನ ಮಂತ್ರಿಗಳು ಮಂಡ್ಯ ಜಿಲ್ಲೆಗೆ ದಿನಾಂಕ:12-03-2023 ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕೇಂದ್ರ ಸರ್ಕಾರದ/ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಸಮಾರಂಭ ನಡೆಯುವ ಸ್ಥಳಕ್ಕೆ ಕರೆತರಲು ತಮ್ಮ ತಮ್ಮ ಗ್ರಾಮ ಪಂಚಾಯತಿ ಕೇಂದ್ರಸ್ಥಾನಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿದ್ದು, ನಿಮ್ಮ ವ್ಯಾಪ್ತಿಯ ಫಲಾನುಭವಿಗಳನ್ನು ಬೆಳಗ್ಗೆ 8.00 ಗಂಟೆಗೆ ಸಮಾರಂಭಕ್ಕೆ ಕರೆದುಕೊಂಡು ಹೋಗಿ, ಸಮಾರಂಭ ಮುಕ್ತಾಯದ ನಂತರ ಫಲಾನುಭವಿಗಳನ್ನು ಗ್ರಾಮ ಪಂಚಾಯಿತಿ ಕೇಂದ್ರಸ್ಥಾನದಲ್ಲಿ ಬಿಡಲು ಗ್ರಾಮ ಪಂಚಾಯತಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಎಲ್ಲಾ ಗ್ರಾಮ ಪಂಚಾಯತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುಟ್ಟಾಗಿ ಸೂಚಿಸಿದೆ ಹಾಗೂ ಈ ಸಂಬಂಧಪಟ್ಟ ಛಾಯಾಚಿತ್ರಗಳನ್ನು ವಾಲ್ಟಾಪ್‌ ಗ್ರೂಪ್‌ಗಳಲ್ಲಿ ಹಾಕಲು ಸೂಚಿಸುತ್ತಾ, ಮಾನ್ಯ ಜಿಲ್ಲಾಧಿಕಾರಿಗಳ ಪತ್ರವನ್ನು ಈ ಕೆಳಗೆ ಲಗತ್ತಿಸಿದೆ ಎಂದು ಹೇಳಲಾಗಿದೆ.

”ನೆರೆ ಬಂದಾಗ ಬರಲಿಲ್ಲ, ಬರ ಬಂದಾಗ ಬರಲಿಲ್ಲ, ಕರ್ನಾಟಕಕ್ಕೆ ಆಕ್ಸಿಜನ್ ಕೊಡಲಿಲ್ಲ, ವ್ಯಾಕ್ಸಿನ್ ನೀಡಲಿಲ್ಲ, GST ಪಾಲು ಸಿಗಲಿಲ್ಲ. ಬಿಎಸ್ ಯಡಿಯೂರಪ್ಪ ಅವರು ಪ್ರಧಾನಿ ಕಚೇರಿಯ ಬಾಗಿಲು ಕಾದರೂ ಭೇಟಿಯಾಗಿರಲಿಲ್ಲ. ಚುನಾವಣೆಗಾಗಿ ಹಲ್ಲು ಕಿಸಿದು, ಕೈಬೀಸಿ ಹೋಗಲು ಬರುವ ನರೇಂದ್ರ ಮೋದಿ ಕರ್ನಾಟಕಕ್ಕೆ ಮಾಡಿದ್ದು ಮಹಾ ವಂಚನೆ” ಎಂದು ‘ಮೋದಿ ಮೋಸ’ ಟ್ಯಾಗ್ ಬಳಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...