Homeಕರ್ನಾಟಕರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ...

ರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಹೆಲಿಪ್ಯಾಡ್‍ಗೆ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಗಾರ್ಲೆಂಡ್ ಮಾಡಿ ಸ್ವಾಗತ ಕೋರಿದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಸಹ ಮೋದಿ ಅವರಿಗೆ ಸ್ವಾಗತಕೋರಿದ್ದಾರೆ.

ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್‌ ಠಾಣೆಯ ರೌಡಿಪಟ್ಟಿಯಲ್ಲಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಹೆಸರಿದೆ ಎಂದು ಪೊಲೀಸರು ತಿಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಫೈಟರ್ ರವಿ ಪರಸ್ಪರರು ಕೈಜೋಡಿಸಿ ನಮಸ್ಕಾರ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ಎಂಥವರಿಗೂ ಇದು ಪ್ರಧಾನಿ ಹುದ್ದೆಯ ಘನತೆ ಕುಗ್ಗಿಸುವ ದೃಶ್ಯ ಎನ್ನುವುದು ಮನವರಿಕೆಯಾಗುತ್ತದೆ.

ಇದೀಗ ಕಾಂಗ್ರೆಸ್, ಫೈಟರ್ ರವಿ ವಿಚಾರ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಮೋದಿ ಅವರು ಮಂಡ್ಯಕ್ಕೆ ಬಂದಾಗ ಫೈಟರ್ ರವಿ ಹಾಗೂ ಮೋದಿ ಪರಸ್ಪರ ಕೈಜೋಡಿಸಿ ನಮಸ್ಕರಿಸುವ ಫೋಟೋ ಹಂಚಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ‘ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ’: ಕಾಂಗ್ರೆಸ್

ಭಾನುವಾರ ದಶಪಥ ಉದ್ಘಾಟನೆಗೆ ಪಿಇಎಸ್‌ ಕಾಲೇಜು ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ವೇಳೆ ಮಲ್ಲಿಕಾರ್ಜುನ (ಫೈಟರ್ ರವಿ) ಕೂಡ ಇದ್ದರು. ಪ್ರಧಾನಿ ಮೋದಿ ಹಾಗೂ ಫೈಟರ್ ರವಿ ಪರಸ್ಪರ ನಮಸ್ಕಾರ ಮಾಡಿದರು. ಮಲ್ಲಿಕಾರ್ಜುನ ಮೇಲೆ ರೌಡಿಶೀಟರ್ ಆರೋಪ ಇದೆ ಎಂದು ಬಿಂಬಿತವಾಗಿರುವ ಹಿನ್ನೆಲೆಯಲ್ಲಿ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ”ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ..  ಇಲ್ಲ. ಫೈಟರ್ ರವಿ ಎಂಬ ರೌಡಿಶೀಟರ್ ಎದುರು ಕೈಮುಗಿದು ನಿಂತ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು” ಎಂದು ಟ್ವಿಟ್ ಮಾಡಿದೆ.

ಈ ಹಿಂದೆ ಕಾಂಗ್ರೆಸ್, ”ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿತ್ತು.

”ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು. ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ! ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

ಈಗ ರೌಡಿ ಶೀಟರ್ ಆಗಿದ್ದ ಫೈಟರ್ ರವಿ ಬಿಜೆಪಿ ನಾಯಕರೊಟ್ಟಿಗೆ ನಿಂತು ಪ್ರಧಾನಿ ಮೋದಿಗೆ ಸ್ವಾಗತ ಕೋರಿದ್ದಾರೆ. ಅಷ್ಟೇ ಅಲ್ಲದೇ ದೇಶದ ಪ್ರಧಾನಿಯೂ ರೈಡಿ ಶೀಟರ್‌ಗೆ ಕೈಮುಗಿದಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಅವರು ಪ್ರಧಾನಿ ಹುದ್ದೆಗೆ ಕಳಂಕ ತಂದಂತಾಗಿದೆ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...