Homeಮುಖಪುಟಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು...

ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

- Advertisement -
- Advertisement -

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ.  ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.

 

ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ. ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯ ವರ್ಣಿಸುವ ಕಥೆಯಾಗಿದೆ. ಇದು ನೆಟ್‌ಫ್ಲಿಕ್ಸ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಜೊತೆಗೆ ‘ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್’ ಫಿಲ್ಮ್’ ವಿಭಾಗದಲ್ಲಿ ‘ಹಾಲ್‌ ಔಟ್’, ‘ಹೌ ಡು ಯು ಮೆಷರ್‌ ಎ ಈಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’ ಸಾಕ್ಷ್ಯಚಿತ್ರಗಳು ನಾಮನಿರ್ದೇಶನಗೊಂಡಿದ್ದವು. ಅಂತಿಮವಾಗಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಿಚಿತ್ರವು ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ.

ಇದನ್ನೂ ಓದಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

‘ಹೌಲೌಟ್’, ‘ಹೌ ಡು ಯು ಮೆಷರ್ ಎ ಇಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’ ಮತ್ತು ‘ಸ್ಟ್ರೇಂಜರ್ ಅಟ್ ದಿ ಗೇಟ್’ ಕಿರು ಚಿತ್ರಗಳೊಡನೆ ಸ್ಪರ್ಧಿಸಿ, ‘ದಿ ಎಲಿಫೆಂಟ್ ವಿಸ್ಪರರ್ಸ್’ ಪ್ರಶಸ್ತಿ ಪಡೆದುಕೊಂಡಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಗೆ ನಿರ್ದೇಶನ ಮಾಡಿರುವ ಕಾರ್ತಿಕಿ ಗೊನ್ಸಾಲ್ವೆಸ್ ಅವರು ಮೂಲತಃ ತಮಿಳುನಾಡಿನ ಊಟಿಯವರು. ಡಾಕ್ಯುಮೆಂಟರಿ ಫಿಲ್ಮ್‌ ಮೇಕರ್ ಆಗಿರುವ ಕಾರ್ತಿಕಿ, ಉತ್ತಮ ಫೋಟೋಗ್ರಾಫರ್ ಕೂಡ ಹೌದು. ಈ ಹಿಂದೆ ಕ್ಯಾಮೆರಾ ಅಪರೇಟರ್ ಆಗಿ ಅನಿಮಲ್ ಪ್ಲಾನೆಟ್ ಮತ್ತು ಡಿಸ್ಕವರಿ ಚಾನೆಲ್‌ಗಳಿಗೆ ಕಾರ್ತಿಕಿ ಕೆಲಸ ಮಾಡಿದ್ದಾರೆ. ಇದೀಗ 41 ನಿಮಿಷಗಳ ‘ದಿ ಎಲಿಫೆಂಟ್ ವಿಸ್ಪರರ್ಸ್’ ಮೂಲಕ ಆಸ್ಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಆ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.

RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ

ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,’ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು, ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ಸಮಾರಂಭದಲ್ಲಿ ಈ ನಾಟು ನಾಟು ಹಾಡಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ  ಈ ಕಾರ್ಯಕ್ರಮದ ನಿರೂಪಣೆ ಮಾಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...