Homeಕರ್ನಾಟಕಸಮುದಾಯ ಬೆಸೆಯುವ ‘ಕೊಡವ ಹಾಕಿ ಹಬ್ಬ’ಕ್ಕೆ ದಿನಗಣನೆ; ‘ಅಪ್ಪಚೆಟ್ಟೋಳಂಡ’ ಕುಟುಂಬದಿಂದ ಆತಿಥ್ಯ

ಸಮುದಾಯ ಬೆಸೆಯುವ ‘ಕೊಡವ ಹಾಕಿ ಹಬ್ಬ’ಕ್ಕೆ ದಿನಗಣನೆ; ‘ಅಪ್ಪಚೆಟ್ಟೋಳಂಡ’ ಕುಟುಂಬದಿಂದ ಆತಿಥ್ಯ

- Advertisement -
- Advertisement -

ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುತ್ತಿರುವ, ಮಂಜು, ಮಳೆ ಮತ್ತು ವೀರ ಯೋಧರಿಗೆ ಹೆಸರಾದ ಕೊಡಗು ಜಿಲ್ಲೆ ಹಾಕಿಗೂ ಸುಪ್ರಸಿದ್ಧ. ಮುಖ್ಯವಾಗಿ ಇಲ್ಲಿ ಹಾಕಿ ಎಂಬುದು ಕೇವಲ ಕ್ರೀಡೆಯಲ್ಲ; ಕೊಡವ ಸಮುದಾಯವನ್ನು ಬೆಸೆಯುವ ಸಾಧನ.

ಕೊಡಗಿಗೂ ಹಾಕಿಗೂ ಅವಿನಾಭಾವ ಸಂಬಂಧ. ಕೊಡಗು ಜಿಲ್ಲೆಯನ್ನು ಭಾರತೀಯ ಹಾಕಿಯ ತೊಟ್ಟಿಲು ಎಂದೂ ಬಣ್ಣಿಸಲಾಗುತ್ತದೆ. 50ಕ್ಕೂ ಹೆಚ್ಚು ಕೊಡವರು ಅಂತಾರಾಷ್ಟ್ರೀಯ ಹಾಕಿ ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ, ಅವರಲ್ಲಿ 16 ಮಂದಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ. ಇಂತಹ ಕೊಡಗಿನಲ್ಲಿ ಮಾರ್ಚ್, ಏಪ್ರಿಲ್‌, ಮೇ ಬಂತೆಂದರೆ ಹಾಕಿ ಕ್ರೀಡೆಯ ಸಡಗರ ಮನೆಮಾಡುತ್ತದೆ. ‘ಕೊಡವ ಹಾಕಿ ಹಬ್ಬ’ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗುತ್ತದೆ. ವಿಶೇಷವೆಂದರೆ ಕೊಡವ ಕುಟುಂಬಗಳ ನಡುವೆ ನಡೆಯುವ ಸೌದಾರ್ಹಯುತ ಟೂರ್ನಿ ಇದಾಗಿದೆ. ಬಹುಶಃ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವ ಇಂತಹ ಹಾಕಿ ಟೂರ್ನಿ ಮತ್ತೆಲ್ಲೂ ಇರಲಾರದು.

ಪ್ರಪಂಚದ ಅತಿ ದೊಡ್ಡ ಸ್ಪರ್ಧೆ ಎಂದೇ ಪರಿಗಣಿಸಲ್ಪಟ್ಟಿರುವ ಈ ಹಾಕಿ ಹಬ್ಬವು ಗಿನ್ನಿಸ್‌ ದಾಖಲೆಗಳ ಪುಸ್ತಕದಲ್ಲಿ ಸೇರ್ಪಡೆಯಾಗಲು ನಿರ್ದೇಶಿಸಲ್ಪಟ್ಟಿದೆ. ಗಿನೆಸ್ ದಾಖಲೆಗಳ ಪುಸ್ತಕಕ್ಕೆ ಭಾರತೀಯ ಪರ್ಯಾಯವಾಗಿರುವ ಲಿಮ್ಕಾ ದಾಖಲೆಗಳ ಪುಸ್ತಕದಲ್ಲಿ ಈಗಾಗಲೇ ಉಲ್ಲೇಖಗೊಂಡಿದೆ. ಇಂತಹ ಅದ್ಭುತ ಕ್ಷಣಕ್ಕೆ ಮಾರ್ಚ್ 18ರಂದು ನಾಪೊಕ್ಲುವಿನಲ್ಲಿ ಚಾಲನೆ ನೀಡಲಾಗುತ್ತಿದೆ. ಏಪ್ರಿಲ್‌ 9ರವರೆಗೆ ಟೂರ್ನಿ ನಡೆಯಲಿದೆ.

ಪ್ರತಿ ವರ್ಷ ಒಂದೊಂದು ಕೊಡವ ಕುಟುಂಬ ಆತಿಥ್ಯ ವಹಿಸಿ ನಡೆಸಿಕೊಂಡು ಬರುತ್ತಿರುವ ‘ಕೊಡವ ಹಾಕಿ ಹಬ್ಬ’ದ ಜವಾಬ್ದಾರಿಯನ್ನು ಈ ವರ್ಷ ‘ಅಪ್ಪಚೆಟ್ಟೋಳಂಡ’ ಫ್ಯಾಮಿಲಿ ವಹಿಸಿಕೊಂಡಿದೆ. ಯಾವ ಕುಟುಂಬ ಟೂರ್ನಿಯ ಮುಂದಾಳತ್ವ ವಹಿಸಿರುತ್ತದೆಯೋ ಈ ಕುಟುಂಬದ ಹೆಸರಲ್ಲಿ ಕಪ್‌ ನೀಡಲಾಗುತ್ತದೆ.

ಕೊಡವ ಕುಟುಂಬಗಳನ್ನು ಬೆಸೆಯುವ ವಿನೂತನ ಹಬ್ಬವಿದು

ಭಾರತೀಯ ಸ್ಟೇಟ್ ಬ್ಯಾಂಕಿನ ನಿವೃತ್ತ ಉದ್ಯೋಗಿ ಹಾಗೂ ಪ್ರಥಮ ದರ್ಜೆಯ ಹಾಕಿ ಆಟದ ತೀರ್ಪುಗಾರರಾಗಿದ್ದ ಪಾಂಡಂಡ ಕುಟ್ಟಪ್ಪ- ಕಾಶಿ ಸಹೋದರರ ಕನಸಿನ ಕೂಸಾಗಿ ಕೊಡವ ಹಾಕಿ ಕಪ್‌ 1997ರಲ್ಲಿ ಆರಂಭವಾಯಿತು. ವಿರಾಜಪೇಟೆಯ ಸಮೀಪದ ಕರಡ ಗ್ರಾಮದ ಮೈದಾನದಲ್ಲಿ ನಡೆದ ‘ಪಾಡಂಡ ಕಪ್’ ಎಂದು ಕರೆಯಲ್ಪಟ್ಟ ಈ ಟೂರ್ನಿಯಲ್ಲಿ 60 ಕುಟುಂಬಗಳು ಪಾಲ್ಗೊಂಡಿದ್ದವು. ಈ ಸ್ಪರ್ಧೆಯ ಪ್ರಪ್ರಥಮ ಉದ್ಘಾಟನಾ ಸಮಾರಂಭದ ಆರ್ಥಿಕ ವೆಚ್ಚವನ್ನು ಕುಟ್ಟಪ್ಪನವರೇ ಭರಿಸಿದರು. ನಂತರದ ವರ್ಷಗಳಲ್ಲಿ 250-300ಕ್ಕೂ ಹೆಚ್ಚು ಕುಟುಂಬಗಳು ಈ ಹಬ್ಬದಲ್ಲಿ ಭಾಗವಹಿಸುತ್ತಾ ಬಂದಿವೆ.

ವರ್ಷದಿಂದ ವರ್ಷಕ್ಕೆ ಈ ಹಾಕಿ ಹಬ್ಬದಲ್ಲಿ ಪಾಲ್ಗೊಳ್ಳುವ ಕೊಡವ ಕುಟುಂಬಗಳ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಯ ಹೊರಗಿರುವ ಕೊಡವ ಸದಸ್ಯರೂ ತಮ್ಮ ಕುಟುಂಬದ ಆಟದಲ್ಲಿ ಭಾಗವಹಿಸಲು ತಮ್ಮ ನೌಕರಿಗೆ ರಜೆಯಿತ್ತು ಬರುತ್ತಾರೆ. ಹಬ್ಬದ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳು ಕೊಡವರ ವಿವಿಧ ನೃತ್ಯ ಮತ್ತು ಕೋಲಾಟಗಳಿಂದ ಕೂಡಿರುತ್ತದೆ.

ಪಾಂಡಂಡ, ಕೋಡಿರ, ಬಲ್ಲಚಂಡ, ಚೆಪ್ಪುಡಿರ, ನೆಲ್ಲಮಕ್ಕಡ, ಚೆಕ್ಕೆರ, ಕಲಿಯಂಡ, ಮಾಳೆಯಂಡ, ಬಿದ್ದಂಡ,  ಕಳ್ಳಿಚಂಡ, ಮಂಡೇಟಿರ, ಅಳಮೇಂಗಡ, ಮಂಡೇಪಂಡ, ಮನೆಯಪಂಡ, ಮಚ್ಚಾಮಾಡ, ಐಚೆಟ್ಟಿರ, ಮಾದಂಡ ಮೊದಲಾದ ಕೊಡವ ಕುಟುಂಬಗಳು ಈವರೆಗಿನ ಕೊಡವ ಹಾಕಿ ಟೂರ್ನಿಗಳ ಆತಿಥ್ಯ ವಹಿಸಿವೆ. ಪ್ರತಿ ವರ್ಷ ಟೂರ್ನಿ ಮುಗಿದ ನಂತರ ಮುಂದಿನ ವರ್ಷದ ಆತಿಥ್ಯವನ್ನು ಯಾರು ವಹಿಸಬೇಕೆಂಬ ನಿರ್ಣಯ ಮಾಡಲಾಗುತ್ತದೆ.

ಕರಡ, ಕಡಂಗ, ಕಾಕೋಟುಪರಂಬು, ಪೊನ್ನಂಪೇಟೆ, ಅಮ್ಮತ್ತಿ, ಹುದಿಕೇರಿ, ನಾಪ್ಲೊಕ್ಲು, ಮಾದಾಪುರ, ಮಡಿಕೇರಿ, ಬಾಳುಗೋಡು ಮೊದಲಾದ ಸ್ಥಳಗಳಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದೆ. ಕೂತಂಡ, ನೆಲ್ಲಮಕ್ಕಳ, ಚೆಪ್ಪುಡಿರ, ಕೋಣೇರಿರ, ಮಚ್ಚಾಮಾಡ, ಅಂಜಪರವಂಡ, ಮುಕ್ಕಾಟಿರ, ಕಲಿಯಂಡ ಇತರ ಕುಟುಂಬಗಳು ಟೂರ್ನಿಯಲ್ಲಿ ಕಪ್‌ ಗೆದ್ದಿವೆ.

ಈ ಟೂರ್ನಿಯ ವಿಶೇಷವೆಂದರೆ ಒಂದು ತಂಡದ ಆಟಗಾರರೆಲ್ಲರೂ ಒಂದೇ ಮನೆತನಕ್ಕೆ ಸೇರಿದವರಾಗಿರಬೇಕು; ಪ್ರತಿಯೊಬ್ಬರೂ ಆಟದ ಸಂಪೂರ್ಣ ಪೋಷಾಕು ಪರಿಕರಗಳನ್ನು ಧರಿಸಿರಬೇಕು; ಸ್ತ್ರೀಯರೂ ಆಟದಲ್ಲಿ ಭಾಗವಹಿಸಬಹುದು; ವಿವಾಹಿತ ಮಹಿಳೆಯರು ತಾವು ತವರು ಮನೆತನವನ್ನು ಪ್ರತಿನಿಧಿಸಬೇಕೋ ಅಥವಾ ಗಂಡನ ಮನೆಯನ್ನು ಪ್ರತಿನಿಧಿಸಬೇಕೋ ಎಂಬುದನ್ನು ಅವರೇ ನಿರ್ಧರಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿರುತ್ತದೆ.

ಕೋವಿಡ್ ಬಿಕ್ಕಟ್ಟಿನ ನಂತರ ಸಂಭ್ರಮ

ಕೋವಿಡ್‌ ಮತ್ತು ಪ್ರಾಕೃತಿಕ ಬಿಕ್ಕಟ್ಟಿನಿಂದ ನಲುಗು ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕೊಡವ ಹಾಕಿ ಉತ್ಸವ ಆಯೋಜನೆಯಾಗಿರಲಿಲ್ಲ. ಅಂತೂ ಮತ್ತೆ ಸಂಭ್ರಮ ಮನೆ ಮಾಡಿದೆ. ‘ಅಪ್ಪಚೆಟ್ಟೋಳಂಡ ಹಾಕಿ ಕಪ್‌’ಗೆ ಸೆಣಸಾಡಲು 336 ತಂಡಗಳು ಪಾಲ್ಗೊಳ್ಳುತ್ತಿವೆ. 22 ವರ್ಷಗಳ ಇತಿಹಾಸವಿರುವ ಈ ಟೂರ್ನಿಗೆ ದಿನಗಣನೆ ಆರಂಭವಾಗಲಿದ್ದು ಮಾರ್ಚ್ 18ರಿಂದ ಕೊಡಗು ಜಿಲ್ಲೆಯ ನಾಪೊಕ್ಲು ಈ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗಲಿದೆ.

ಇದನ್ನೂ ಓದಿರಿ: ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಎಲ್ಲಾ ಕೊಡವ ಕುಟುಂಬಗಳು ಇದರಲ್ಲಿ ಭಾಗಿಯಾಗುವಂತೆ ಅಪ್ಪಚೆಟ್ಟೋಳಂಡ ಫ್ಯಾಮಿಲಿ ಆಹ್ವಾನ ನೀಡಿದೆ. ಕರ್ನಾಟಕ ಸರ್ಕಾರದ ಸಹಕಾರವೂ ಈ ಟೂರ್ನಿಗಿದೆ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜು ಮಾಡಲಾಗಿದ್ದು ಕರ್ನಾಟಕ ಸರ್ಕಾರ 1 ಕೋಟಿ ರೂ. ಮಂಜೂರು ಮಾಡಿದೆ. ಸನ್‌ಫ್ಯೂರ್‌ ಸಂಸ್ಥೆ ಪ್ರಾಯೋಜಕತ್ವ ವಹಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿವಿಧ ಸಂಘಸಂಸ್ಥೆಗಳು, ದಾನಿಗಳು ಆರ್ಥಿಕ ನೆರವು ನೀಡಿದ್ದಾರೆ.

ಮಾರ್ಚ್ 18ರಂದು ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟೂರ್ನಿಗೆ ಚಾಲನೆ ನೀಡಲಿದ್ದಾರೆ. ನಾಪೊಕ್ಲುವಿನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ ವ್ಯಾಪ್ತಿಗೆ ಸೇರಿದ ಜನರಲ್ ಕೆ.ಎಸ್.ತಿಮ್ಮಯ್ಯ ತಾಲ್ಲೂಕು ಕ್ರೀಡಾಂಗಣದ 3 ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ.

“ಪ್ರವಾಹ ಮತ್ತು ಸಾಂಕ್ರಾಮಿಕ ರೋಗದ ಬಿಕ್ಕಟ್ಟು ಎದುರಾದ ನಾಲ್ಕು ವರ್ಷಗಳ ವಿರಾಮದ ನಂತರ, ಕೊಡವ ಹಾಕಿ ಉತ್ಸವವು ನಡೆಯುತ್ತಿದ್ದು ಹಿಂದೆಂದಿಗಿಂತಲೂ ಉತ್ತಮವಾಗಿರುತ್ತದೆ ಎಂದು ತಿಳಿಸಲು ನಾವು ಉತ್ಸುಕರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಟೂರ್ನಿಯು ಅದ್ಭುತವಾಗಿ ಆಯೋಜನೆಗೊಂಡಿದೆ ಎಂದು ಭರವಸೆ ನೀಡುತ್ತೇವೆ. ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು  ಅಪ್ಪಚೆಟ್ಟೋಳಂಡ ಹಾಕಿ ಹಬ್ಬದ ಕನ್ವೀನರ್‌ ಮನು ಮುತ್ತಪ್ಪ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...