Homeಕರ್ನಾಟಕಸಮುದಾಯ ಬೆಸೆಯುವ ‘ಕೊಡವ ಹಾಕಿ ಹಬ್ಬ’ಕ್ಕೆ ದಿನಗಣನೆ; ‘ಅಪ್ಪಚೆಟ್ಟೋಳಂಡ’ ಕುಟುಂಬದಿಂದ ಆತಿಥ್ಯ

ಸಮುದಾಯ ಬೆಸೆಯುವ ‘ಕೊಡವ ಹಾಕಿ ಹಬ್ಬ’ಕ್ಕೆ ದಿನಗಣನೆ; ‘ಅಪ್ಪಚೆಟ್ಟೋಳಂಡ’ ಕುಟುಂಬದಿಂದ ಆತಿಥ್ಯ

- Advertisement -
- Advertisement -

ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುತ್ತಿರುವ, ಮಂಜು, ಮಳೆ ಮತ್ತು ವೀರ ಯೋಧರಿಗೆ ಹೆಸರಾದ ಕೊಡಗು ಜಿಲ್ಲೆ ಹಾಕಿಗೂ ಸುಪ್ರಸಿದ್ಧ. ಮುಖ್ಯವಾಗಿ ಇಲ್ಲಿ ಹಾಕಿ ಎಂಬುದು ಕೇವಲ ಕ್ರೀಡೆಯಲ್ಲ; ಕೊಡವ ಸಮುದಾಯವನ್ನು ಬೆಸೆಯುವ ಸಾಧನ.

ಕೊಡಗಿಗೂ ಹಾಕಿಗೂ ಅವಿನಾಭಾವ ಸಂಬಂಧ. ಕೊಡಗು ಜಿಲ್ಲೆಯನ್ನು ಭಾರತೀಯ ಹಾಕಿಯ ತೊಟ್ಟಿಲು ಎಂದೂ ಬಣ್ಣಿಸಲಾಗುತ್ತದೆ. 50ಕ್ಕೂ ಹೆಚ್ಚು ಕೊಡವರು ಅಂತಾರಾಷ್ಟ್ರೀಯ ಹಾಕಿ ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ, ಅವರಲ್ಲಿ 16 ಮಂದಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ. ಇಂತಹ ಕೊಡಗಿನಲ್ಲಿ ಮಾರ್ಚ್, ಏಪ್ರಿಲ್‌, ಮೇ ಬಂತೆಂದರೆ ಹಾಕಿ ಕ್ರೀಡೆಯ ಸಡಗರ ಮನೆಮಾಡುತ್ತದೆ. ‘ಕೊಡವ ಹಾಕಿ ಹಬ್ಬ’ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗುತ್ತದೆ. ವಿಶೇಷವೆಂದರೆ ಕೊಡವ ಕುಟುಂಬಗಳ ನಡುವೆ ನಡೆಯುವ ಸೌದಾರ್ಹಯುತ ಟೂರ್ನಿ ಇದಾಗಿದೆ. ಬಹುಶಃ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವ ಇಂತಹ ಹಾಕಿ ಟೂರ್ನಿ ಮತ್ತೆಲ್ಲೂ ಇರಲಾರದು.

ಪ್ರಪಂಚದ ಅತಿ ದೊಡ್ಡ ಸ್ಪರ್ಧೆ ಎಂದೇ ಪರಿಗಣಿಸಲ್ಪಟ್ಟಿರುವ ಈ ಹಾಕಿ ಹಬ್ಬವು ಗಿನ್ನಿಸ್‌ ದಾಖಲೆಗಳ ಪುಸ್ತಕದಲ್ಲಿ ಸೇರ್ಪಡೆಯಾಗಲು ನಿರ್ದೇಶಿಸಲ್ಪಟ್ಟಿದೆ. ಗಿನೆಸ್ ದಾಖಲೆಗಳ ಪುಸ್ತಕಕ್ಕೆ ಭಾರತೀಯ ಪರ್ಯಾಯವಾಗಿರುವ ಲಿಮ್ಕಾ ದಾಖಲೆಗಳ ಪುಸ್ತಕದಲ್ಲಿ ಈಗಾಗಲೇ ಉಲ್ಲೇಖಗೊಂಡಿದೆ. ಇಂತಹ ಅದ್ಭುತ ಕ್ಷಣಕ್ಕೆ ಮಾರ್ಚ್ 18ರಂದು ನಾಪೊಕ್ಲುವಿನಲ್ಲಿ ಚಾಲನೆ ನೀಡಲಾಗುತ್ತಿದೆ. ಏಪ್ರಿಲ್‌ 9ರವರೆಗೆ ಟೂರ್ನಿ ನಡೆಯಲಿದೆ.

ಪ್ರತಿ ವರ್ಷ ಒಂದೊಂದು ಕೊಡವ ಕುಟುಂಬ ಆತಿಥ್ಯ ವಹಿಸಿ ನಡೆಸಿಕೊಂಡು ಬರುತ್ತಿರುವ ‘ಕೊಡವ ಹಾಕಿ ಹಬ್ಬ’ದ ಜವಾಬ್ದಾರಿಯನ್ನು ಈ ವರ್ಷ ‘ಅಪ್ಪಚೆಟ್ಟೋಳಂಡ’ ಫ್ಯಾಮಿಲಿ ವಹಿಸಿಕೊಂಡಿದೆ. ಯಾವ ಕುಟುಂಬ ಟೂರ್ನಿಯ ಮುಂದಾಳತ್ವ ವಹಿಸಿರುತ್ತದೆಯೋ ಈ ಕುಟುಂಬದ ಹೆಸರಲ್ಲಿ ಕಪ್‌ ನೀಡಲಾಗುತ್ತದೆ.

ಕೊಡವ ಕುಟುಂಬಗಳನ್ನು ಬೆಸೆಯುವ ವಿನೂತನ ಹಬ್ಬವಿದು

ಭಾರತೀಯ ಸ್ಟೇಟ್ ಬ್ಯಾಂಕಿನ ನಿವೃತ್ತ ಉದ್ಯೋಗಿ ಹಾಗೂ ಪ್ರಥಮ ದರ್ಜೆಯ ಹಾಕಿ ಆಟದ ತೀರ್ಪುಗಾರರಾಗಿದ್ದ ಪಾಂಡಂಡ ಕುಟ್ಟಪ್ಪ- ಕಾಶಿ ಸಹೋದರರ ಕನಸಿನ ಕೂಸಾಗಿ ಕೊಡವ ಹಾಕಿ ಕಪ್‌ 1997ರಲ್ಲಿ ಆರಂಭವಾಯಿತು. ವಿರಾಜಪೇಟೆಯ ಸಮೀಪದ ಕರಡ ಗ್ರಾಮದ ಮೈದಾನದಲ್ಲಿ ನಡೆದ ‘ಪಾಡಂಡ ಕಪ್’ ಎಂದು ಕರೆಯಲ್ಪಟ್ಟ ಈ ಟೂರ್ನಿಯಲ್ಲಿ 60 ಕುಟುಂಬಗಳು ಪಾಲ್ಗೊಂಡಿದ್ದವು. ಈ ಸ್ಪರ್ಧೆಯ ಪ್ರಪ್ರಥಮ ಉದ್ಘಾಟನಾ ಸಮಾರಂಭದ ಆರ್ಥಿಕ ವೆಚ್ಚವನ್ನು ಕುಟ್ಟಪ್ಪನವರೇ ಭರಿಸಿದರು. ನಂತರದ ವರ್ಷಗಳಲ್ಲಿ 250-300ಕ್ಕೂ ಹೆಚ್ಚು ಕುಟುಂಬಗಳು ಈ ಹಬ್ಬದಲ್ಲಿ ಭಾಗವಹಿಸುತ್ತಾ ಬಂದಿವೆ.

ವರ್ಷದಿಂದ ವರ್ಷಕ್ಕೆ ಈ ಹಾಕಿ ಹಬ್ಬದಲ್ಲಿ ಪಾಲ್ಗೊಳ್ಳುವ ಕೊಡವ ಕುಟುಂಬಗಳ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಯ ಹೊರಗಿರುವ ಕೊಡವ ಸದಸ್ಯರೂ ತಮ್ಮ ಕುಟುಂಬದ ಆಟದಲ್ಲಿ ಭಾಗವಹಿಸಲು ತಮ್ಮ ನೌಕರಿಗೆ ರಜೆಯಿತ್ತು ಬರುತ್ತಾರೆ. ಹಬ್ಬದ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳು ಕೊಡವರ ವಿವಿಧ ನೃತ್ಯ ಮತ್ತು ಕೋಲಾಟಗಳಿಂದ ಕೂಡಿರುತ್ತದೆ.

ಪಾಂಡಂಡ, ಕೋಡಿರ, ಬಲ್ಲಚಂಡ, ಚೆಪ್ಪುಡಿರ, ನೆಲ್ಲಮಕ್ಕಡ, ಚೆಕ್ಕೆರ, ಕಲಿಯಂಡ, ಮಾಳೆಯಂಡ, ಬಿದ್ದಂಡ,  ಕಳ್ಳಿಚಂಡ, ಮಂಡೇಟಿರ, ಅಳಮೇಂಗಡ, ಮಂಡೇಪಂಡ, ಮನೆಯಪಂಡ, ಮಚ್ಚಾಮಾಡ, ಐಚೆಟ್ಟಿರ, ಮಾದಂಡ ಮೊದಲಾದ ಕೊಡವ ಕುಟುಂಬಗಳು ಈವರೆಗಿನ ಕೊಡವ ಹಾಕಿ ಟೂರ್ನಿಗಳ ಆತಿಥ್ಯ ವಹಿಸಿವೆ. ಪ್ರತಿ ವರ್ಷ ಟೂರ್ನಿ ಮುಗಿದ ನಂತರ ಮುಂದಿನ ವರ್ಷದ ಆತಿಥ್ಯವನ್ನು ಯಾರು ವಹಿಸಬೇಕೆಂಬ ನಿರ್ಣಯ ಮಾಡಲಾಗುತ್ತದೆ.

ಕರಡ, ಕಡಂಗ, ಕಾಕೋಟುಪರಂಬು, ಪೊನ್ನಂಪೇಟೆ, ಅಮ್ಮತ್ತಿ, ಹುದಿಕೇರಿ, ನಾಪ್ಲೊಕ್ಲು, ಮಾದಾಪುರ, ಮಡಿಕೇರಿ, ಬಾಳುಗೋಡು ಮೊದಲಾದ ಸ್ಥಳಗಳಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದೆ. ಕೂತಂಡ, ನೆಲ್ಲಮಕ್ಕಳ, ಚೆಪ್ಪುಡಿರ, ಕೋಣೇರಿರ, ಮಚ್ಚಾಮಾಡ, ಅಂಜಪರವಂಡ, ಮುಕ್ಕಾಟಿರ, ಕಲಿಯಂಡ ಇತರ ಕುಟುಂಬಗಳು ಟೂರ್ನಿಯಲ್ಲಿ ಕಪ್‌ ಗೆದ್ದಿವೆ.

ಈ ಟೂರ್ನಿಯ ವಿಶೇಷವೆಂದರೆ ಒಂದು ತಂಡದ ಆಟಗಾರರೆಲ್ಲರೂ ಒಂದೇ ಮನೆತನಕ್ಕೆ ಸೇರಿದವರಾಗಿರಬೇಕು; ಪ್ರತಿಯೊಬ್ಬರೂ ಆಟದ ಸಂಪೂರ್ಣ ಪೋಷಾಕು ಪರಿಕರಗಳನ್ನು ಧರಿಸಿರಬೇಕು; ಸ್ತ್ರೀಯರೂ ಆಟದಲ್ಲಿ ಭಾಗವಹಿಸಬಹುದು; ವಿವಾಹಿತ ಮಹಿಳೆಯರು ತಾವು ತವರು ಮನೆತನವನ್ನು ಪ್ರತಿನಿಧಿಸಬೇಕೋ ಅಥವಾ ಗಂಡನ ಮನೆಯನ್ನು ಪ್ರತಿನಿಧಿಸಬೇಕೋ ಎಂಬುದನ್ನು ಅವರೇ ನಿರ್ಧರಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿರುತ್ತದೆ.

ಕೋವಿಡ್ ಬಿಕ್ಕಟ್ಟಿನ ನಂತರ ಸಂಭ್ರಮ

ಕೋವಿಡ್‌ ಮತ್ತು ಪ್ರಾಕೃತಿಕ ಬಿಕ್ಕಟ್ಟಿನಿಂದ ನಲುಗು ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕೊಡವ ಹಾಕಿ ಉತ್ಸವ ಆಯೋಜನೆಯಾಗಿರಲಿಲ್ಲ. ಅಂತೂ ಮತ್ತೆ ಸಂಭ್ರಮ ಮನೆ ಮಾಡಿದೆ. ‘ಅಪ್ಪಚೆಟ್ಟೋಳಂಡ ಹಾಕಿ ಕಪ್‌’ಗೆ ಸೆಣಸಾಡಲು 336 ತಂಡಗಳು ಪಾಲ್ಗೊಳ್ಳುತ್ತಿವೆ. 22 ವರ್ಷಗಳ ಇತಿಹಾಸವಿರುವ ಈ ಟೂರ್ನಿಗೆ ದಿನಗಣನೆ ಆರಂಭವಾಗಲಿದ್ದು ಮಾರ್ಚ್ 18ರಿಂದ ಕೊಡಗು ಜಿಲ್ಲೆಯ ನಾಪೊಕ್ಲು ಈ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗಲಿದೆ.

ಇದನ್ನೂ ಓದಿರಿ: ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಎಲ್ಲಾ ಕೊಡವ ಕುಟುಂಬಗಳು ಇದರಲ್ಲಿ ಭಾಗಿಯಾಗುವಂತೆ ಅಪ್ಪಚೆಟ್ಟೋಳಂಡ ಫ್ಯಾಮಿಲಿ ಆಹ್ವಾನ ನೀಡಿದೆ. ಕರ್ನಾಟಕ ಸರ್ಕಾರದ ಸಹಕಾರವೂ ಈ ಟೂರ್ನಿಗಿದೆ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜು ಮಾಡಲಾಗಿದ್ದು ಕರ್ನಾಟಕ ಸರ್ಕಾರ 1 ಕೋಟಿ ರೂ. ಮಂಜೂರು ಮಾಡಿದೆ. ಸನ್‌ಫ್ಯೂರ್‌ ಸಂಸ್ಥೆ ಪ್ರಾಯೋಜಕತ್ವ ವಹಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿವಿಧ ಸಂಘಸಂಸ್ಥೆಗಳು, ದಾನಿಗಳು ಆರ್ಥಿಕ ನೆರವು ನೀಡಿದ್ದಾರೆ.

ಮಾರ್ಚ್ 18ರಂದು ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟೂರ್ನಿಗೆ ಚಾಲನೆ ನೀಡಲಿದ್ದಾರೆ. ನಾಪೊಕ್ಲುವಿನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ ವ್ಯಾಪ್ತಿಗೆ ಸೇರಿದ ಜನರಲ್ ಕೆ.ಎಸ್.ತಿಮ್ಮಯ್ಯ ತಾಲ್ಲೂಕು ಕ್ರೀಡಾಂಗಣದ 3 ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ.

“ಪ್ರವಾಹ ಮತ್ತು ಸಾಂಕ್ರಾಮಿಕ ರೋಗದ ಬಿಕ್ಕಟ್ಟು ಎದುರಾದ ನಾಲ್ಕು ವರ್ಷಗಳ ವಿರಾಮದ ನಂತರ, ಕೊಡವ ಹಾಕಿ ಉತ್ಸವವು ನಡೆಯುತ್ತಿದ್ದು ಹಿಂದೆಂದಿಗಿಂತಲೂ ಉತ್ತಮವಾಗಿರುತ್ತದೆ ಎಂದು ತಿಳಿಸಲು ನಾವು ಉತ್ಸುಕರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಟೂರ್ನಿಯು ಅದ್ಭುತವಾಗಿ ಆಯೋಜನೆಗೊಂಡಿದೆ ಎಂದು ಭರವಸೆ ನೀಡುತ್ತೇವೆ. ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು  ಅಪ್ಪಚೆಟ್ಟೋಳಂಡ ಹಾಕಿ ಹಬ್ಬದ ಕನ್ವೀನರ್‌ ಮನು ಮುತ್ತಪ್ಪ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...