Homeಮುಖಪುಟದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ಭಾನುವಾರ ಹಿಂದುತ್ವ ಸಂಘಟನೆಗಳು, ಮುಸ್ಲಿಮರ ವಿರುದ್ಧ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಿ ಮುಂಬೈ ಬಳಿ ರ್ಯಾಲಿ ನಡೆಸಿದವು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಲವಾರು ಹಿಂದುತ್ವ ಸಂಘಟನೆಗಳ ಸಮೂಹವಾದ ಸಕಲ್ ಹಿಂದೂ ಸಮಾಜವು ‘ಹಿಂದೂ ಜನ ಆಕ್ರೋಶ ಮೋರ್ಚಾ’ ರ್ಯಾಲಿಯನ್ನು ಮಹಾರಾಷ್ಟ್ರದ ಮೀರಾ ರಸ್ತೆಯಲ್ಲಿ ಆಯೋಜಿಸಲಾಗಿತ್ತು.

ಈ ವೇಳೆ ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುವುದರ ಜೊತೆಗೆ, ರ್ಯಾಲಿಯಲ್ಲಿ ಭಾಗವಹಿಸಿದ ಕೆಲವರು “ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ವಿಚಾರವಾಗಿ ಮುಸ್ಲಿಮರ ವಿರುದ್ಧ ವಿಷಕಾರಿದ್ದಾರೆ.

ಈ ರ್ಯಾಲಿಯ ಭಾಷಣಕಾರರಲ್ಲಿ ಒಬ್ಬರಾದ ಕಾಜಲ್, ”ಇಸ್ಲಾಮಿಕ್ ಆಕ್ರಮಣಶೀಲತೆಯಲ್ಲಿ ಮೂರು ಪ್ರಮುಖ ಅಂಶಗಳಿವೆ. ಮೊದಲನೆಯದು ಲವ್ ಜಿಹಾದ್, ಎರಡನೆಯದು ಭೂ ಜಿಹಾದ್ ಮತ್ತು ಅಂತಿಮವಾಗಿ, ಮತಾಂತರದ ಸಮಸ್ಯೆ ಇದೆ” ಎಂದು ಆರೋಪ ಮಾಡಿದ್ದಾರೆ ಎಂದು ಹಿಂದೂಸ್ತಾನಿ ಪತ್ರಿಕೆಯ ವರದಿ ಮಾಡಿದೆ.

”ಈ ಮೂರಕ್ಕೂ ರಾಮ್ ನೇತೃತ್ವದ ಪರಿಹಾರವಿದೆ, ಅದೇನೆಂದರೆ ‘ಆರ್ಥಿಕ ಬಹಿಷ್ಕಾರ’. ಇದಕ್ಕೆ ರಾಜಕೀಯ ನಾಯಕರು, ಸುಪ್ರೀಂ ಕೋರ್ಟ್ ಅಥವಾ ಮಾಧ್ಯಮಗಳು ನಿಮ್ಮನ್ನು ತಡೆಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

”ಲವ್ ಜಿಹಾದ್” ಎಂಬುದು ಇಸ್ಲಾಂಗೆ ಮತಾಂತರಿಸುವ ಸಲುವಾಗಿ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮೋಹಿಸಲು ಸಂಚು ಹೂಡುತ್ತಾರೆ. ಅಂತೆಯೇ, ”ಲ್ಯಾಂಡ್ ಜಿಹಾದ್” ಪ್ರತಿಪಾದಕರು ಮುಸ್ಲಿಮರು ಸಾರ್ವಜನಿಕ ಭೂಮಿ ಮತ್ತು ಹಿಂದೂಗಳ ಒಡೆತನದ ಆಸ್ತಿಯನ್ನು ಅತಿಕ್ರಮಿಸುವ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಕಾಜಲ್ ಆರೋಪಿಸಿದ್ದಾರೆ.

ರ್ಯಾಲಿಯಲ್ಲಿ ಶಾಸಕ ನಿತೇಶ್ ರಾಣೆ ಸೇರಿದಂತೆ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಂತಹ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಮೀರಾ ಭಯಂದರ್ ಸ್ವತಂತ್ರ ಶಾಸಕಿ ಗೀತಾ ಜೈನ್ ಧ್ವಜಾರೋಹಣ ಮಾಡಿದರು.

ಮಹಾರಾಷ್ಟ್ರದಾದ್ಯಂತ ನವೆಂಬರ್‌ನಿಂದ ಇಂತಹ ಅನೇಕ ರ್ಯಾಲಿಗಳು ನಡೆಯುತ್ತಿವೆ. ಬಹುತೇಕ ಎಲ್ಲ ರ್ಯಾಲಿಗಳಲ್ಲೂ ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ ಅಥವಾ ಸಮುದಾಯ ವಿರುದ್ಧ ಪಿತೂರಿ ನಡೆಸುವ ವಿಚಾರಗಳನ್ನು ಹರಿಬಿಡುತ್ತಿದ್ದಾರೆ.

ಫೆಬ್ರವರಿಯಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಆ ಪ್ರಕಾರ ”ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಸಂಘಟನೆಗಳ ರ್‍ಯಾಲಿಗೆ ಅನುಮತಿ ನೀಡಬಹುದು. ಗುಂಪಿನಿಂದ ಒಂದೇ ರ್ಯಾಲಿಗೆ ಅನುಮತಿ ನೀಡಬೇಕು ಮತ್ತು ಈ ವೇಳೆ ಯಾವುದೇ ದ್ವೇಷದ ಭಾಷಣ ಮಾಡಬಾರದು ಎಂದು ಷರತ್ತು ವಿಧಿಸಿತ್ತು.

”ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿತ್ತು. ಆದರೆ, ಮಹಾರಾಷ್ಟ್ರ ಸರ್ಕಾರ ಮತ್ತು ಹಿಂದೂ ಸಂಘಟನೆಗಳು ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಇಂತಹ ದ್ವೇ‍ಷ ಬಿತ್ತುವ ರ್ಯಾಲಿಗಳನ್ನು ನಡೆಸುತ್ತಿವೆ.

ಮುಸ್ಲಿಮರ ಆರ್ಥಿಕ ಬಹಿಷ್ಕಾರದ ಕರೆಯನ್ನು ಬೆಂಬಲಿಸುವುದಾಗಿ ಮಹಾರಾಷ್ಟ್ರದ ಮಾಜಿ ಸಿಎಂ ನಾರಾಯಣ ರಾಣೆ ಅವರು ತಿಳಿಸಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆ ಎಲ್ಲಾ ಹಣವನ್ನು ಅವರು ಹಿಂದೂ ಸಮುದಾಯದ ವಿರುದ್ಧ ಬಳಸುತ್ತಾರೆ. ಆ ಹಣವನ್ನು ಸಮುದಾಯದ ಏಳಿಗೆಗೆ ಬಳಸಿದರೆ ಯಾರಿಗೂ ಸಮಸ್ಯೆಯಾಗುವುದಿಲ್ಲ. ಆದರೆ ಅವರು ಹಿಂದೂಗಳ ವಿರುದ್ಧ ಭಯೋತ್ಪಾದನೆ, ಲವ್ ಜಿಹಾದ್ ಮತ್ತು ಇತರ ಹಲವು ವಿಷಯಗಳ ಹೆಸರಿನಲ್ಲಿ ಹಣವನ್ನು ಬಳಸುತ್ತಾರೆ” ಎಂದು ರಾಣೆ ಮುಸ್ಲಿಂ ಸಮುದಾಯದ ವಿರುದ್ಧ ದ್ವೇ‍ಷದ ಮಾತುಗಳನ್ನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...