Homeಮುಖಪುಟದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ಭಾನುವಾರ ಹಿಂದುತ್ವ ಸಂಘಟನೆಗಳು, ಮುಸ್ಲಿಮರ ವಿರುದ್ಧ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಿ ಮುಂಬೈ ಬಳಿ ರ್ಯಾಲಿ ನಡೆಸಿದವು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಲವಾರು ಹಿಂದುತ್ವ ಸಂಘಟನೆಗಳ ಸಮೂಹವಾದ ಸಕಲ್ ಹಿಂದೂ ಸಮಾಜವು ‘ಹಿಂದೂ ಜನ ಆಕ್ರೋಶ ಮೋರ್ಚಾ’ ರ್ಯಾಲಿಯನ್ನು ಮಹಾರಾಷ್ಟ್ರದ ಮೀರಾ ರಸ್ತೆಯಲ್ಲಿ ಆಯೋಜಿಸಲಾಗಿತ್ತು.

ಈ ವೇಳೆ ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುವುದರ ಜೊತೆಗೆ, ರ್ಯಾಲಿಯಲ್ಲಿ ಭಾಗವಹಿಸಿದ ಕೆಲವರು “ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ವಿಚಾರವಾಗಿ ಮುಸ್ಲಿಮರ ವಿರುದ್ಧ ವಿಷಕಾರಿದ್ದಾರೆ.

ಈ ರ್ಯಾಲಿಯ ಭಾಷಣಕಾರರಲ್ಲಿ ಒಬ್ಬರಾದ ಕಾಜಲ್, ”ಇಸ್ಲಾಮಿಕ್ ಆಕ್ರಮಣಶೀಲತೆಯಲ್ಲಿ ಮೂರು ಪ್ರಮುಖ ಅಂಶಗಳಿವೆ. ಮೊದಲನೆಯದು ಲವ್ ಜಿಹಾದ್, ಎರಡನೆಯದು ಭೂ ಜಿಹಾದ್ ಮತ್ತು ಅಂತಿಮವಾಗಿ, ಮತಾಂತರದ ಸಮಸ್ಯೆ ಇದೆ” ಎಂದು ಆರೋಪ ಮಾಡಿದ್ದಾರೆ ಎಂದು ಹಿಂದೂಸ್ತಾನಿ ಪತ್ರಿಕೆಯ ವರದಿ ಮಾಡಿದೆ.

”ಈ ಮೂರಕ್ಕೂ ರಾಮ್ ನೇತೃತ್ವದ ಪರಿಹಾರವಿದೆ, ಅದೇನೆಂದರೆ ‘ಆರ್ಥಿಕ ಬಹಿಷ್ಕಾರ’. ಇದಕ್ಕೆ ರಾಜಕೀಯ ನಾಯಕರು, ಸುಪ್ರೀಂ ಕೋರ್ಟ್ ಅಥವಾ ಮಾಧ್ಯಮಗಳು ನಿಮ್ಮನ್ನು ತಡೆಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

”ಲವ್ ಜಿಹಾದ್” ಎಂಬುದು ಇಸ್ಲಾಂಗೆ ಮತಾಂತರಿಸುವ ಸಲುವಾಗಿ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮೋಹಿಸಲು ಸಂಚು ಹೂಡುತ್ತಾರೆ. ಅಂತೆಯೇ, ”ಲ್ಯಾಂಡ್ ಜಿಹಾದ್” ಪ್ರತಿಪಾದಕರು ಮುಸ್ಲಿಮರು ಸಾರ್ವಜನಿಕ ಭೂಮಿ ಮತ್ತು ಹಿಂದೂಗಳ ಒಡೆತನದ ಆಸ್ತಿಯನ್ನು ಅತಿಕ್ರಮಿಸುವ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಕಾಜಲ್ ಆರೋಪಿಸಿದ್ದಾರೆ.

ರ್ಯಾಲಿಯಲ್ಲಿ ಶಾಸಕ ನಿತೇಶ್ ರಾಣೆ ಸೇರಿದಂತೆ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಂತಹ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಮೀರಾ ಭಯಂದರ್ ಸ್ವತಂತ್ರ ಶಾಸಕಿ ಗೀತಾ ಜೈನ್ ಧ್ವಜಾರೋಹಣ ಮಾಡಿದರು.

ಮಹಾರಾಷ್ಟ್ರದಾದ್ಯಂತ ನವೆಂಬರ್‌ನಿಂದ ಇಂತಹ ಅನೇಕ ರ್ಯಾಲಿಗಳು ನಡೆಯುತ್ತಿವೆ. ಬಹುತೇಕ ಎಲ್ಲ ರ್ಯಾಲಿಗಳಲ್ಲೂ ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ ಅಥವಾ ಸಮುದಾಯ ವಿರುದ್ಧ ಪಿತೂರಿ ನಡೆಸುವ ವಿಚಾರಗಳನ್ನು ಹರಿಬಿಡುತ್ತಿದ್ದಾರೆ.

ಫೆಬ್ರವರಿಯಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಆ ಪ್ರಕಾರ ”ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಸಂಘಟನೆಗಳ ರ್‍ಯಾಲಿಗೆ ಅನುಮತಿ ನೀಡಬಹುದು. ಗುಂಪಿನಿಂದ ಒಂದೇ ರ್ಯಾಲಿಗೆ ಅನುಮತಿ ನೀಡಬೇಕು ಮತ್ತು ಈ ವೇಳೆ ಯಾವುದೇ ದ್ವೇಷದ ಭಾಷಣ ಮಾಡಬಾರದು ಎಂದು ಷರತ್ತು ವಿಧಿಸಿತ್ತು.

”ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿತ್ತು. ಆದರೆ, ಮಹಾರಾಷ್ಟ್ರ ಸರ್ಕಾರ ಮತ್ತು ಹಿಂದೂ ಸಂಘಟನೆಗಳು ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಇಂತಹ ದ್ವೇ‍ಷ ಬಿತ್ತುವ ರ್ಯಾಲಿಗಳನ್ನು ನಡೆಸುತ್ತಿವೆ.

ಮುಸ್ಲಿಮರ ಆರ್ಥಿಕ ಬಹಿಷ್ಕಾರದ ಕರೆಯನ್ನು ಬೆಂಬಲಿಸುವುದಾಗಿ ಮಹಾರಾಷ್ಟ್ರದ ಮಾಜಿ ಸಿಎಂ ನಾರಾಯಣ ರಾಣೆ ಅವರು ತಿಳಿಸಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆ ಎಲ್ಲಾ ಹಣವನ್ನು ಅವರು ಹಿಂದೂ ಸಮುದಾಯದ ವಿರುದ್ಧ ಬಳಸುತ್ತಾರೆ. ಆ ಹಣವನ್ನು ಸಮುದಾಯದ ಏಳಿಗೆಗೆ ಬಳಸಿದರೆ ಯಾರಿಗೂ ಸಮಸ್ಯೆಯಾಗುವುದಿಲ್ಲ. ಆದರೆ ಅವರು ಹಿಂದೂಗಳ ವಿರುದ್ಧ ಭಯೋತ್ಪಾದನೆ, ಲವ್ ಜಿಹಾದ್ ಮತ್ತು ಇತರ ಹಲವು ವಿಷಯಗಳ ಹೆಸರಿನಲ್ಲಿ ಹಣವನ್ನು ಬಳಸುತ್ತಾರೆ” ಎಂದು ರಾಣೆ ಮುಸ್ಲಿಂ ಸಮುದಾಯದ ವಿರುದ್ಧ ದ್ವೇ‍ಷದ ಮಾತುಗಳನ್ನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...