Homeಮುಖಪುಟದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ಭಾನುವಾರ ಹಿಂದುತ್ವ ಸಂಘಟನೆಗಳು, ಮುಸ್ಲಿಮರ ವಿರುದ್ಧ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಿ ಮುಂಬೈ ಬಳಿ ರ್ಯಾಲಿ ನಡೆಸಿದವು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಲವಾರು ಹಿಂದುತ್ವ ಸಂಘಟನೆಗಳ ಸಮೂಹವಾದ ಸಕಲ್ ಹಿಂದೂ ಸಮಾಜವು ‘ಹಿಂದೂ ಜನ ಆಕ್ರೋಶ ಮೋರ್ಚಾ’ ರ್ಯಾಲಿಯನ್ನು ಮಹಾರಾಷ್ಟ್ರದ ಮೀರಾ ರಸ್ತೆಯಲ್ಲಿ ಆಯೋಜಿಸಲಾಗಿತ್ತು.

ಈ ವೇಳೆ ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುವುದರ ಜೊತೆಗೆ, ರ್ಯಾಲಿಯಲ್ಲಿ ಭಾಗವಹಿಸಿದ ಕೆಲವರು “ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ವಿಚಾರವಾಗಿ ಮುಸ್ಲಿಮರ ವಿರುದ್ಧ ವಿಷಕಾರಿದ್ದಾರೆ.

ಈ ರ್ಯಾಲಿಯ ಭಾಷಣಕಾರರಲ್ಲಿ ಒಬ್ಬರಾದ ಕಾಜಲ್, ”ಇಸ್ಲಾಮಿಕ್ ಆಕ್ರಮಣಶೀಲತೆಯಲ್ಲಿ ಮೂರು ಪ್ರಮುಖ ಅಂಶಗಳಿವೆ. ಮೊದಲನೆಯದು ಲವ್ ಜಿಹಾದ್, ಎರಡನೆಯದು ಭೂ ಜಿಹಾದ್ ಮತ್ತು ಅಂತಿಮವಾಗಿ, ಮತಾಂತರದ ಸಮಸ್ಯೆ ಇದೆ” ಎಂದು ಆರೋಪ ಮಾಡಿದ್ದಾರೆ ಎಂದು ಹಿಂದೂಸ್ತಾನಿ ಪತ್ರಿಕೆಯ ವರದಿ ಮಾಡಿದೆ.

”ಈ ಮೂರಕ್ಕೂ ರಾಮ್ ನೇತೃತ್ವದ ಪರಿಹಾರವಿದೆ, ಅದೇನೆಂದರೆ ‘ಆರ್ಥಿಕ ಬಹಿಷ್ಕಾರ’. ಇದಕ್ಕೆ ರಾಜಕೀಯ ನಾಯಕರು, ಸುಪ್ರೀಂ ಕೋರ್ಟ್ ಅಥವಾ ಮಾಧ್ಯಮಗಳು ನಿಮ್ಮನ್ನು ತಡೆಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

”ಲವ್ ಜಿಹಾದ್” ಎಂಬುದು ಇಸ್ಲಾಂಗೆ ಮತಾಂತರಿಸುವ ಸಲುವಾಗಿ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮೋಹಿಸಲು ಸಂಚು ಹೂಡುತ್ತಾರೆ. ಅಂತೆಯೇ, ”ಲ್ಯಾಂಡ್ ಜಿಹಾದ್” ಪ್ರತಿಪಾದಕರು ಮುಸ್ಲಿಮರು ಸಾರ್ವಜನಿಕ ಭೂಮಿ ಮತ್ತು ಹಿಂದೂಗಳ ಒಡೆತನದ ಆಸ್ತಿಯನ್ನು ಅತಿಕ್ರಮಿಸುವ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಕಾಜಲ್ ಆರೋಪಿಸಿದ್ದಾರೆ.

ರ್ಯಾಲಿಯಲ್ಲಿ ಶಾಸಕ ನಿತೇಶ್ ರಾಣೆ ಸೇರಿದಂತೆ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಂತಹ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಮೀರಾ ಭಯಂದರ್ ಸ್ವತಂತ್ರ ಶಾಸಕಿ ಗೀತಾ ಜೈನ್ ಧ್ವಜಾರೋಹಣ ಮಾಡಿದರು.

ಮಹಾರಾಷ್ಟ್ರದಾದ್ಯಂತ ನವೆಂಬರ್‌ನಿಂದ ಇಂತಹ ಅನೇಕ ರ್ಯಾಲಿಗಳು ನಡೆಯುತ್ತಿವೆ. ಬಹುತೇಕ ಎಲ್ಲ ರ್ಯಾಲಿಗಳಲ್ಲೂ ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ ಅಥವಾ ಸಮುದಾಯ ವಿರುದ್ಧ ಪಿತೂರಿ ನಡೆಸುವ ವಿಚಾರಗಳನ್ನು ಹರಿಬಿಡುತ್ತಿದ್ದಾರೆ.

ಫೆಬ್ರವರಿಯಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಆ ಪ್ರಕಾರ ”ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಸಂಘಟನೆಗಳ ರ್‍ಯಾಲಿಗೆ ಅನುಮತಿ ನೀಡಬಹುದು. ಗುಂಪಿನಿಂದ ಒಂದೇ ರ್ಯಾಲಿಗೆ ಅನುಮತಿ ನೀಡಬೇಕು ಮತ್ತು ಈ ವೇಳೆ ಯಾವುದೇ ದ್ವೇಷದ ಭಾಷಣ ಮಾಡಬಾರದು ಎಂದು ಷರತ್ತು ವಿಧಿಸಿತ್ತು.

”ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿತ್ತು. ಆದರೆ, ಮಹಾರಾಷ್ಟ್ರ ಸರ್ಕಾರ ಮತ್ತು ಹಿಂದೂ ಸಂಘಟನೆಗಳು ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಇಂತಹ ದ್ವೇ‍ಷ ಬಿತ್ತುವ ರ್ಯಾಲಿಗಳನ್ನು ನಡೆಸುತ್ತಿವೆ.

ಮುಸ್ಲಿಮರ ಆರ್ಥಿಕ ಬಹಿಷ್ಕಾರದ ಕರೆಯನ್ನು ಬೆಂಬಲಿಸುವುದಾಗಿ ಮಹಾರಾಷ್ಟ್ರದ ಮಾಜಿ ಸಿಎಂ ನಾರಾಯಣ ರಾಣೆ ಅವರು ತಿಳಿಸಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆ ಎಲ್ಲಾ ಹಣವನ್ನು ಅವರು ಹಿಂದೂ ಸಮುದಾಯದ ವಿರುದ್ಧ ಬಳಸುತ್ತಾರೆ. ಆ ಹಣವನ್ನು ಸಮುದಾಯದ ಏಳಿಗೆಗೆ ಬಳಸಿದರೆ ಯಾರಿಗೂ ಸಮಸ್ಯೆಯಾಗುವುದಿಲ್ಲ. ಆದರೆ ಅವರು ಹಿಂದೂಗಳ ವಿರುದ್ಧ ಭಯೋತ್ಪಾದನೆ, ಲವ್ ಜಿಹಾದ್ ಮತ್ತು ಇತರ ಹಲವು ವಿಷಯಗಳ ಹೆಸರಿನಲ್ಲಿ ಹಣವನ್ನು ಬಳಸುತ್ತಾರೆ” ಎಂದು ರಾಣೆ ಮುಸ್ಲಿಂ ಸಮುದಾಯದ ವಿರುದ್ಧ ದ್ವೇ‍ಷದ ಮಾತುಗಳನ್ನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...