Homeಕರ್ನಾಟಕಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

- Advertisement -
- Advertisement -

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮೇಲಿಂದ ಮೇಲೆ ನಾಲಿಗೆ ಹರಿಬಿಟ್ಟು ಬೇಜವಾಬ್ದಾರಿ ಹೇಳಿಕೆ ನೀಡುವುದರಲ್ಲಿ ಖ್ಯಾತಿ ಗಳಿಸಿದ್ದಾರೆ. ಇದೀಗ ಮತ್ತೆ ವಿವಾದಾತ್ಮಕ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ. ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಆಝಾನ್‍ ಕೇಳಿಸಿದೆ. ಅದನ್ನು ಸಹಿಸದ ಈಶ್ವರಪ್ಪ ಅಲ್ಲಿಯೇ ಸಿಟ್ಟು ಹೊರಹಾಕಿದ್ದಾರೆ.

ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಈಶ್ವರಪ್ಪ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಮಸೀದಿಯಿಂದ ಆಝಾನ್  ಕೇಳಿಬಂದಿದೆ. ಇದಕ್ಕೆ ಸಿಟ್ಟಾದ ಈಶರಪ್ಪ ”ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನೆ ಮಾಡಿದ್ದಾರೆ.

”ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್‌ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

”ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕೇಳುತ್ತದೆ ಎನ್ನುವುದಾದರೆ, ಅವನು ಕಿವುಡನಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು” ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆ ಬಳಿಕ ಮಂಗಳೂರಿನಲ್ಲಿ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ”ಮುಸ್ಲಿಮರ ಅಝಾನ್‌ ಕುರಿತು ಹೇಳಿಕೆ ವಿವಾದವಲ್ಲ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಅಲ್ಲಾಹುವಿನ ಬಗ್ಗೆ ಅವಹೇಳನ ಮಾಡಿಲ್ಲ. ಆದರೆ ಅಝಾನ್‌ ವಿಚಾರದಲ್ಲಿ ಯಾರಾದರೂ ಮಾತನಾಡಲೇಬೇಕಿತ್ತು, ಮಾತನಾಡಿದ್ದೇನೆ. ಅದು ಶ್ರೀಸಾಮಾನ್ಯನ ಅನಿಸಿಕೆ, ನಾನು ಅದನ್ನು ವ್ಯಕ್ತಪಡಿಸಿದ್ದೇನೆ” ಎಂದು ಹೇಳಿದರು.

”ಲೌಡ್‌ ಸ್ಪೀಕರ್‌ ನಲ್ಲಿ ಅಝಾನ್‌ನಿಂದ ಅನೇಕರಿಗೆ ತೊಂದರೆಯಾಗುತ್ತಿದೆ. ಸುಪ್ರೀಂಕೋರ್ಟ್‌ ತೀರ್ಪು ಅದರ ವಿರುದ್ಧವೇ ಇದೆ. ಮುಸ್ಲಿಂ ನಾಯಕರು ಈ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಬೇಕು” ಎಂದರು.

”ನಾನು ಮುಸ್ಲಿಮರ ಮತಗಳು ಬೇಡವೇ ಬೇಡ ಎಂದಿಲ್ಲ, ರಾಷ್ಟ್ರೀಯವಾದಿ ಮುಸ್ಲಿಮರ ಮತ ಇರಲಿ. ಚುನಾವಣೆ ಸಂದರ್ಭದಲ್ಲಿ ಮಾತನಾಡಿ ವಿವಾದ ಮಾಡುವ ವಿಚಾರ ಇಲ್ಲಿ ಬರುವುದೇ ಇಲ್ಲ. ಗೋಹತ್ಯೆ ತಡೆ ಕಾಯ್ದೆ, ಮತಾಂತರ ತಡೆ ಕಾಯ್ದೆ, ತ್ರಿವಳಿ ತಲಾಖ್‌ ರದ್ದು ಇತ್ಯಾದಿಗಳೆಲ್ಲವೂ ನಮ್ಮ ಸರಕಾರದ ಸಾಧನೆಗಳು. ಎಲ್ಲಾ ರಾಷ್ಟ್ರೀಯವಾದಿ ಮುಸ್ಲಿಮರೂ ಅದನ್ನು ಸ್ವಾಗತಿಸಿದ್ದಾರೆ. ಕಾಂಗ್ರೆಸ್‌ ಇಂತಹ ವಿಚಾರದಲ್ಲಿ ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳಿಗೆ ವಂಚನೆ ಮಾಡುತ್ತಾ ಬಂದಿದೆ” ಎಂದು ಕೆಎಸ್ ಈಶ್ವರಪ್ಪ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...