Homeಕರ್ನಾಟಕಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

- Advertisement -
- Advertisement -

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮೇಲಿಂದ ಮೇಲೆ ನಾಲಿಗೆ ಹರಿಬಿಟ್ಟು ಬೇಜವಾಬ್ದಾರಿ ಹೇಳಿಕೆ ನೀಡುವುದರಲ್ಲಿ ಖ್ಯಾತಿ ಗಳಿಸಿದ್ದಾರೆ. ಇದೀಗ ಮತ್ತೆ ವಿವಾದಾತ್ಮಕ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ. ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಆಝಾನ್‍ ಕೇಳಿಸಿದೆ. ಅದನ್ನು ಸಹಿಸದ ಈಶ್ವರಪ್ಪ ಅಲ್ಲಿಯೇ ಸಿಟ್ಟು ಹೊರಹಾಕಿದ್ದಾರೆ.

ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಈಶ್ವರಪ್ಪ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಮಸೀದಿಯಿಂದ ಆಝಾನ್  ಕೇಳಿಬಂದಿದೆ. ಇದಕ್ಕೆ ಸಿಟ್ಟಾದ ಈಶರಪ್ಪ ”ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನೆ ಮಾಡಿದ್ದಾರೆ.

”ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್‌ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

”ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕೇಳುತ್ತದೆ ಎನ್ನುವುದಾದರೆ, ಅವನು ಕಿವುಡನಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು” ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆ ಬಳಿಕ ಮಂಗಳೂರಿನಲ್ಲಿ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ”ಮುಸ್ಲಿಮರ ಅಝಾನ್‌ ಕುರಿತು ಹೇಳಿಕೆ ವಿವಾದವಲ್ಲ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಅಲ್ಲಾಹುವಿನ ಬಗ್ಗೆ ಅವಹೇಳನ ಮಾಡಿಲ್ಲ. ಆದರೆ ಅಝಾನ್‌ ವಿಚಾರದಲ್ಲಿ ಯಾರಾದರೂ ಮಾತನಾಡಲೇಬೇಕಿತ್ತು, ಮಾತನಾಡಿದ್ದೇನೆ. ಅದು ಶ್ರೀಸಾಮಾನ್ಯನ ಅನಿಸಿಕೆ, ನಾನು ಅದನ್ನು ವ್ಯಕ್ತಪಡಿಸಿದ್ದೇನೆ” ಎಂದು ಹೇಳಿದರು.

”ಲೌಡ್‌ ಸ್ಪೀಕರ್‌ ನಲ್ಲಿ ಅಝಾನ್‌ನಿಂದ ಅನೇಕರಿಗೆ ತೊಂದರೆಯಾಗುತ್ತಿದೆ. ಸುಪ್ರೀಂಕೋರ್ಟ್‌ ತೀರ್ಪು ಅದರ ವಿರುದ್ಧವೇ ಇದೆ. ಮುಸ್ಲಿಂ ನಾಯಕರು ಈ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಬೇಕು” ಎಂದರು.

”ನಾನು ಮುಸ್ಲಿಮರ ಮತಗಳು ಬೇಡವೇ ಬೇಡ ಎಂದಿಲ್ಲ, ರಾಷ್ಟ್ರೀಯವಾದಿ ಮುಸ್ಲಿಮರ ಮತ ಇರಲಿ. ಚುನಾವಣೆ ಸಂದರ್ಭದಲ್ಲಿ ಮಾತನಾಡಿ ವಿವಾದ ಮಾಡುವ ವಿಚಾರ ಇಲ್ಲಿ ಬರುವುದೇ ಇಲ್ಲ. ಗೋಹತ್ಯೆ ತಡೆ ಕಾಯ್ದೆ, ಮತಾಂತರ ತಡೆ ಕಾಯ್ದೆ, ತ್ರಿವಳಿ ತಲಾಖ್‌ ರದ್ದು ಇತ್ಯಾದಿಗಳೆಲ್ಲವೂ ನಮ್ಮ ಸರಕಾರದ ಸಾಧನೆಗಳು. ಎಲ್ಲಾ ರಾಷ್ಟ್ರೀಯವಾದಿ ಮುಸ್ಲಿಮರೂ ಅದನ್ನು ಸ್ವಾಗತಿಸಿದ್ದಾರೆ. ಕಾಂಗ್ರೆಸ್‌ ಇಂತಹ ವಿಚಾರದಲ್ಲಿ ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳಿಗೆ ವಂಚನೆ ಮಾಡುತ್ತಾ ಬಂದಿದೆ” ಎಂದು ಕೆಎಸ್ ಈಶ್ವರಪ್ಪ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...