Homeಕರ್ನಾಟಕಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

- Advertisement -
- Advertisement -

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮೇಲಿಂದ ಮೇಲೆ ನಾಲಿಗೆ ಹರಿಬಿಟ್ಟು ಬೇಜವಾಬ್ದಾರಿ ಹೇಳಿಕೆ ನೀಡುವುದರಲ್ಲಿ ಖ್ಯಾತಿ ಗಳಿಸಿದ್ದಾರೆ. ಇದೀಗ ಮತ್ತೆ ವಿವಾದಾತ್ಮಕ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ. ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಆಝಾನ್‍ ಕೇಳಿಸಿದೆ. ಅದನ್ನು ಸಹಿಸದ ಈಶ್ವರಪ್ಪ ಅಲ್ಲಿಯೇ ಸಿಟ್ಟು ಹೊರಹಾಕಿದ್ದಾರೆ.

ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಈಶ್ವರಪ್ಪ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಮಸೀದಿಯಿಂದ ಆಝಾನ್  ಕೇಳಿಬಂದಿದೆ. ಇದಕ್ಕೆ ಸಿಟ್ಟಾದ ಈಶರಪ್ಪ ”ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನೆ ಮಾಡಿದ್ದಾರೆ.

”ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್‌ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

”ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕೇಳುತ್ತದೆ ಎನ್ನುವುದಾದರೆ, ಅವನು ಕಿವುಡನಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು” ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆ ಬಳಿಕ ಮಂಗಳೂರಿನಲ್ಲಿ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ”ಮುಸ್ಲಿಮರ ಅಝಾನ್‌ ಕುರಿತು ಹೇಳಿಕೆ ವಿವಾದವಲ್ಲ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಅಲ್ಲಾಹುವಿನ ಬಗ್ಗೆ ಅವಹೇಳನ ಮಾಡಿಲ್ಲ. ಆದರೆ ಅಝಾನ್‌ ವಿಚಾರದಲ್ಲಿ ಯಾರಾದರೂ ಮಾತನಾಡಲೇಬೇಕಿತ್ತು, ಮಾತನಾಡಿದ್ದೇನೆ. ಅದು ಶ್ರೀಸಾಮಾನ್ಯನ ಅನಿಸಿಕೆ, ನಾನು ಅದನ್ನು ವ್ಯಕ್ತಪಡಿಸಿದ್ದೇನೆ” ಎಂದು ಹೇಳಿದರು.

”ಲೌಡ್‌ ಸ್ಪೀಕರ್‌ ನಲ್ಲಿ ಅಝಾನ್‌ನಿಂದ ಅನೇಕರಿಗೆ ತೊಂದರೆಯಾಗುತ್ತಿದೆ. ಸುಪ್ರೀಂಕೋರ್ಟ್‌ ತೀರ್ಪು ಅದರ ವಿರುದ್ಧವೇ ಇದೆ. ಮುಸ್ಲಿಂ ನಾಯಕರು ಈ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಬೇಕು” ಎಂದರು.

”ನಾನು ಮುಸ್ಲಿಮರ ಮತಗಳು ಬೇಡವೇ ಬೇಡ ಎಂದಿಲ್ಲ, ರಾಷ್ಟ್ರೀಯವಾದಿ ಮುಸ್ಲಿಮರ ಮತ ಇರಲಿ. ಚುನಾವಣೆ ಸಂದರ್ಭದಲ್ಲಿ ಮಾತನಾಡಿ ವಿವಾದ ಮಾಡುವ ವಿಚಾರ ಇಲ್ಲಿ ಬರುವುದೇ ಇಲ್ಲ. ಗೋಹತ್ಯೆ ತಡೆ ಕಾಯ್ದೆ, ಮತಾಂತರ ತಡೆ ಕಾಯ್ದೆ, ತ್ರಿವಳಿ ತಲಾಖ್‌ ರದ್ದು ಇತ್ಯಾದಿಗಳೆಲ್ಲವೂ ನಮ್ಮ ಸರಕಾರದ ಸಾಧನೆಗಳು. ಎಲ್ಲಾ ರಾಷ್ಟ್ರೀಯವಾದಿ ಮುಸ್ಲಿಮರೂ ಅದನ್ನು ಸ್ವಾಗತಿಸಿದ್ದಾರೆ. ಕಾಂಗ್ರೆಸ್‌ ಇಂತಹ ವಿಚಾರದಲ್ಲಿ ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳಿಗೆ ವಂಚನೆ ಮಾಡುತ್ತಾ ಬಂದಿದೆ” ಎಂದು ಕೆಎಸ್ ಈಶ್ವರಪ್ಪ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...