Homeಮುಖಪುಟಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

ಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

- Advertisement -
- Advertisement -

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರ ಸಂಭ್ರಮಾಚರಣೆ ಜೋರಾಗಿತ್ತು. ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಸಮಾರಂಭದಲ್ಲಿ ನಿರೂಪಣೆ ಮಾಡಿದ ದೀಪಿಕಾ ಪಡುಕೋಣೆ ಅವರು,  RRR ಚಿತ್ರದ ನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿಯನ್ನು ಗೆದ್ದಿದೆ ಎಂದು ಅನೌನ್ಸ್‌ ಮಾಡುವಾಗ ಹಾಡಿನ ಬಗ್ಗೆ ಪರಿಚಯಿಸಿದರು. ಆಸ್ಕರ್‌ನಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವರ್ಗಕ್ಕೆ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಮೂಲ ಗೀತೆಯಾಗಿದೆ. ಈ ಕ್ಷಣವನ್ನು ನಾವು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದರು. ಈ ಐತಿಹಾಸಿಕ ಕ್ಷಣದಲ್ಲಿ ದೀಪಿಕಾ ಪಡುಕೋಣೆ ಅವರು ಭಾವುಕರಾದರು. ನಾಟು ನಾಟು ಹಾಡಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು.

ಈ ವೇಳೆ ವೇದಿಕೆ ಮೇಲೆ ನಾಟು ನಾಟು ಹಾಡು ಹಾಡುತ್ತ ನೃತ್ಯ ಮಾಡಿ ಸಂಭ್ರಮಿಸಿದರು. ಒಂದೆಡೆ ಭಾರತೀಯ ಚಿತ್ರರಂಗದ ಹೆಸರಾಂತ ನಟಿಯ ನಿರೂಪಣೆ ಮತ್ತೊಂದೆಡೆ ಎರಡು ಆಸ್ಕರ್ ಪ್ರಶಸ್ತಿಗಳು ಭಾರತಕ್ಕೆ ಬಂದಿವೆ. ಇದು ಇಡೀ ಭಾರತೀಯರ ಸಂಭ್ರಮಕ್ಕೆ ಕಾರಣವಾಗಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಆಸ್ಕರ್

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.

ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ. ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯ ವರ್ಣಿಸುವ ಕಥೆಯಾಗಿದೆ. ಇದು ನೆಟ್‌ಫ್ಲಿಕ್ಸ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಜೊತೆಗೆ ‘ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್’ ಫಿಲ್ಮ್’ ವಿಭಾಗದಲ್ಲಿ ‘ಹಾಲ್‌ ಔಟ್’, ‘ಹೌ ಡು ಯು ಮೆಷರ್‌ ಎ ಈಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’ ಸಾಕ್ಷ್ಯಚಿತ್ರಗಳು ನಾಮನಿರ್ದೇಶನಗೊಂಡಿದ್ದವು. ಅಂತಿಮವಾಗಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಿಚಿತ್ರವು ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ.

RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ

ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,’ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು, ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ  ಈ ಕಾರ್ಯಕ್ರಮದ ನಿರೂಪಣೆ ಮಾಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...