Homeಮುಖಪುಟಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

ಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

- Advertisement -
- Advertisement -

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರ ಸಂಭ್ರಮಾಚರಣೆ ಜೋರಾಗಿತ್ತು. ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಸಮಾರಂಭದಲ್ಲಿ ನಿರೂಪಣೆ ಮಾಡಿದ ದೀಪಿಕಾ ಪಡುಕೋಣೆ ಅವರು,  RRR ಚಿತ್ರದ ನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿಯನ್ನು ಗೆದ್ದಿದೆ ಎಂದು ಅನೌನ್ಸ್‌ ಮಾಡುವಾಗ ಹಾಡಿನ ಬಗ್ಗೆ ಪರಿಚಯಿಸಿದರು. ಆಸ್ಕರ್‌ನಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವರ್ಗಕ್ಕೆ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಮೂಲ ಗೀತೆಯಾಗಿದೆ. ಈ ಕ್ಷಣವನ್ನು ನಾವು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದರು. ಈ ಐತಿಹಾಸಿಕ ಕ್ಷಣದಲ್ಲಿ ದೀಪಿಕಾ ಪಡುಕೋಣೆ ಅವರು ಭಾವುಕರಾದರು. ನಾಟು ನಾಟು ಹಾಡಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು.

ಈ ವೇಳೆ ವೇದಿಕೆ ಮೇಲೆ ನಾಟು ನಾಟು ಹಾಡು ಹಾಡುತ್ತ ನೃತ್ಯ ಮಾಡಿ ಸಂಭ್ರಮಿಸಿದರು. ಒಂದೆಡೆ ಭಾರತೀಯ ಚಿತ್ರರಂಗದ ಹೆಸರಾಂತ ನಟಿಯ ನಿರೂಪಣೆ ಮತ್ತೊಂದೆಡೆ ಎರಡು ಆಸ್ಕರ್ ಪ್ರಶಸ್ತಿಗಳು ಭಾರತಕ್ಕೆ ಬಂದಿವೆ. ಇದು ಇಡೀ ಭಾರತೀಯರ ಸಂಭ್ರಮಕ್ಕೆ ಕಾರಣವಾಗಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಆಸ್ಕರ್

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.

ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ. ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯ ವರ್ಣಿಸುವ ಕಥೆಯಾಗಿದೆ. ಇದು ನೆಟ್‌ಫ್ಲಿಕ್ಸ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಜೊತೆಗೆ ‘ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್’ ಫಿಲ್ಮ್’ ವಿಭಾಗದಲ್ಲಿ ‘ಹಾಲ್‌ ಔಟ್’, ‘ಹೌ ಡು ಯು ಮೆಷರ್‌ ಎ ಈಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’ ಸಾಕ್ಷ್ಯಚಿತ್ರಗಳು ನಾಮನಿರ್ದೇಶನಗೊಂಡಿದ್ದವು. ಅಂತಿಮವಾಗಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಿಚಿತ್ರವು ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ.

RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ

ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,’ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು, ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ  ಈ ಕಾರ್ಯಕ್ರಮದ ನಿರೂಪಣೆ ಮಾಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...