Homeಮುಖಪುಟಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

ಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

- Advertisement -
- Advertisement -

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರ ಸಂಭ್ರಮಾಚರಣೆ ಜೋರಾಗಿತ್ತು. ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಸಮಾರಂಭದಲ್ಲಿ ನಿರೂಪಣೆ ಮಾಡಿದ ದೀಪಿಕಾ ಪಡುಕೋಣೆ ಅವರು,  RRR ಚಿತ್ರದ ನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿಯನ್ನು ಗೆದ್ದಿದೆ ಎಂದು ಅನೌನ್ಸ್‌ ಮಾಡುವಾಗ ಹಾಡಿನ ಬಗ್ಗೆ ಪರಿಚಯಿಸಿದರು. ಆಸ್ಕರ್‌ನಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವರ್ಗಕ್ಕೆ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಮೂಲ ಗೀತೆಯಾಗಿದೆ. ಈ ಕ್ಷಣವನ್ನು ನಾವು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದರು. ಈ ಐತಿಹಾಸಿಕ ಕ್ಷಣದಲ್ಲಿ ದೀಪಿಕಾ ಪಡುಕೋಣೆ ಅವರು ಭಾವುಕರಾದರು. ನಾಟು ನಾಟು ಹಾಡಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು.

ಈ ವೇಳೆ ವೇದಿಕೆ ಮೇಲೆ ನಾಟು ನಾಟು ಹಾಡು ಹಾಡುತ್ತ ನೃತ್ಯ ಮಾಡಿ ಸಂಭ್ರಮಿಸಿದರು. ಒಂದೆಡೆ ಭಾರತೀಯ ಚಿತ್ರರಂಗದ ಹೆಸರಾಂತ ನಟಿಯ ನಿರೂಪಣೆ ಮತ್ತೊಂದೆಡೆ ಎರಡು ಆಸ್ಕರ್ ಪ್ರಶಸ್ತಿಗಳು ಭಾರತಕ್ಕೆ ಬಂದಿವೆ. ಇದು ಇಡೀ ಭಾರತೀಯರ ಸಂಭ್ರಮಕ್ಕೆ ಕಾರಣವಾಗಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಆಸ್ಕರ್

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.

ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ. ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯ ವರ್ಣಿಸುವ ಕಥೆಯಾಗಿದೆ. ಇದು ನೆಟ್‌ಫ್ಲಿಕ್ಸ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಜೊತೆಗೆ ‘ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್’ ಫಿಲ್ಮ್’ ವಿಭಾಗದಲ್ಲಿ ‘ಹಾಲ್‌ ಔಟ್’, ‘ಹೌ ಡು ಯು ಮೆಷರ್‌ ಎ ಈಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’ ಸಾಕ್ಷ್ಯಚಿತ್ರಗಳು ನಾಮನಿರ್ದೇಶನಗೊಂಡಿದ್ದವು. ಅಂತಿಮವಾಗಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಿಚಿತ್ರವು ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ.

RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ

ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,’ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು, ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ  ಈ ಕಾರ್ಯಕ್ರಮದ ನಿರೂಪಣೆ ಮಾಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...