Homeಮುಖಪುಟ‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ‘ಘೋಷಿತ ವಿದೇಶಿಯರು’ ಎಂದು ಗುರುತಿಸಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಗೋಲ್ಪಾರಾ ಜಿಲ್ಲೆಯ ಮಾಟಿಯಾ ‘ಟ್ರಾನ್ಸಿಟ್ ಕ್ಯಾಂಪ್‌’ಗೆ ಸ್ಥಳಾಂತರಿಸಲಾಗಿದೆ. ಇದು ರಾಜ್ಯದಲ್ಲಿನ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ ಎಂದು ಗುರುತಿಸಲ್ಪಟ್ಟಿದೆ.

ವಿದೇಶಿಯರೆಂದು ಗುರುತಿಸಲ್ಪಟ್ಟಿರುವ, ಗಡೀಪಾರು ಅಥವಾ ವಾಪಸ್‌‌ ಹೋಗಲು ನಿರೀಕ್ಷಿಸುತ್ತಿರುವ ವ್ಯಕ್ತಿಗಳನ್ನು; ಪೌರತ್ವದ ಹಕ್ಕುಗಳನ್ನು ಇತ್ಯರ್ಥಗೊಳಿಸಲು ಕಾಯುತ್ತಿರುವವರನ್ನು ಬಂಧಿಸಲು ಮಾಟಿಯಾ ಕೇಂದ್ರವನ್ನು ಬಳಸಲಾಗುತ್ತಿದೆ.

ಡಿಟೆನ್ಷನ್‌ ಸೆಂಟರ್‌ಗಳನ್ನು ಈಗ ‘ಟ್ರಾನ್ಸಿಸ್ಟ್‌ ಕ್ಯಾಂಪ್‌’ ಎಂದು ಕರೆಯಬೇಕೆಂದು ರಾಜ್ಯ ಸರ್ಕಾರದ ಅಧಿಸೂಚನೆ ತಿಳಿಸಿದೆ.

ಸಿಲ್ಚಾರ್ ಡಿಟೆನ್ಷನ್‌ ಸೆಂಟರ್‌ನಲ್ಲಿದ್ದ  87 ಮಂದಿ ಬಂಧಿತರ ಕೊನೆಯ ತಂಡವನ್ನು ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ಗೆ ಕರೆದೊಯ್ಯಲಾಯಿತು ಎಂದು ಅಸ್ಸಾಂ ಇನ್‌ಸ್ಪೆಕ್ಟರ್ ಜನರಲ್ ಆಫ್ ಪ್ರಿಸನ್ ಆಗಿರುವ ಪುಬಾಲಿ ಗೊಹೈನ್ ಪಿಟಿಐಗೆ ತಿಳಿಸಿದ್ದಾರೆ.

“ಇದರೊಂದಿಗೆ ಎಲ್ಲಾ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಸ್ಸಾಂನಲ್ಲಿ ಆರು ಡಿಟೆನ್ಷನ್‌ ಕೇಂದ್ರಗಳು ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ” ಎಂದು ಗೊಹೈನ್ ಮಾಹಿತಿ ನೀಡಿದ್ದಾರೆ.

ಗೋಲ್ಪಾರಾ, ಕೊಕ್ರಜಾರ್, ತೇಜ್ಪುರ್, ಜೋರ್ಹತ್, ದಿಬ್ರುಗಢ್ ಮತ್ತು ಸಿಲ್ಚಾರ್ ಜಿಲ್ಲಾ ಕಾರಾಗೃಹಗಳಲ್ಲಿ ಡಿಟೆನ್ಷನ್‌ ಸೆಂಟರ್‌ಗಳಿವೆ.

ಘೋಷಿತ ವಿದೇಶಿಯರನ್ನು ಸ್ಥಳಾಂತರಿಸುವ ಪ್ರಕ್ರಿಯೆಯು ಜನವರಿ 27ರಂದು ಗೋಲ್ಪಾರಾ ಡಿಟೆನ್ಷನ್‌ ಸೆಂಟರ್‌ನಿಂದ 68 ಬಂಧಿತರನ್ನು ವರ್ಗಾಯಿಸುವುದರೊಂದಿಗೆ ಪ್ರಕ್ರಿಯೆ ಪ್ರಾರಂಭವಾಯಿತು.

ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ 217 ಘೋಷಿತ ವಿದೇಶಿಯರು ಇದ್ದಾರೆ ಎಂದು ಗೋಲ್‌ಪಾರಾ ಡೆಪ್ಯೂಟಿ ಕಮಿಷನರ್ ಖನೀಂದ್ರ ಚೌಧರಿ ಹೇಳಿದ್ದಾರೆ.

“ಈ ಅಂಕಿ ಅಂಶವು ನ್ಯಾಯಾಲಯದ ತೀರ್ಪುಗಳು ಮತ್ತು ವಿದೇಶಿಯರನ್ನು ಗಡೀಪಾರು ಮಾಡುವುದರೊಂದಿಗೆ ಆಗಾಗ್ಗೆ ಬದಲಾಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಕೇವಲ ಮೂರು ದಿನಗಳ ಹಿಂದೆ, ಮೂರು ಬಾಂಗ್ಲಾದೇಶೀಯರನ್ನು ಮಾಟಿಯಾ ಶಿಬಿರದಿಂದ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ” ಎಂದಿದ್ದಾರೆ.

ವಿದೇಶಿಯರ ಬಂಧನಕ್ಕಾಗಿ ಒಂದು ವಿಶೇಷ ಡಿಟೆನ್ಷನ್‌ ಸೆಂಟರ್‌ ಸ್ಥಾಪಿಸುವಂತೆ ಅಸ್ಸಾಂ ಸರ್ಕಾರಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ನಿರ್ದೇಶನ ನೀಡಿತು. ಹೀಗಾಗಿ ವಿದೇಶಿ ಬಂಧಿತರನ್ನು ಜೈಲುಗಳಲ್ಲಿನ ಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳೊಂದಿಗೆ ಇರಿಸುತ್ತಿಲ್ಲ.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಯಿಂದ ಹೊರಗುಳಿಯುವ ಹೆಚ್ಚಿನ ಸಂಖ್ಯೆಯ ವ್ಯಕ್ತಿಗಳನ್ನು ಪರಿಗಣಿಸಿ ಅಸ್ಸಾಂ ಸರ್ಕಾರವು ಕನಿಷ್ಠ 10 ಇಂತಹ ಕೇಂದ್ರಗಳನ್ನು ನಿರ್ಮಿಸಲು ಯೋಜಿಸಿತ್ತು. ಪ್ರಸ್ತಾವಿತ 10 ಶಿಬಿರಗಳಲ್ಲಿ ಮಾಟಿಯಾ ಬಂಧನ ಕೇಂದ್ರವು ಮೊದಲನೆಯದು.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಗುರಿಯೊಂದಿಗೆ ಎನ್‌ಆರ್‌ಸಿ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರ ಆಗಸ್ಟ್ 2019 ರಲ್ಲಿ ಪ್ರಕಟಿಸಿದೆ.

ತಮ್ಮ ಪೂರ್ವಜರು ಮಾರ್ಚ್ 24, 1971ರ ಮಧ್ಯರಾತ್ರಿಗಿಂತ ಮೊದಲು ಅಸ್ಸಾಂಗೆ ಪ್ರವೇಶಿಸಿರುವ ಸಂಬಂಧ ದೃಢೀಕರಿಸಲು ಸಾಧ್ಯವಾಗದವರನ್ನು ನಾಗರಿಕ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಎನ್‌ಆರ್‌ಸಿ ನಿಬಂಧನೆಗಳು ಹೇಳುತ್ತವೆ.

ಇದನ್ನೂ ಓದಿರಿ: ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

19 ಲಕ್ಷಕ್ಕೂ ಹೆಚ್ಚು ಜನರು ಅಥವಾ ರಾಜ್ಯದ ಜನಸಂಖ್ಯೆಯ ಸುಮಾರು 6% ಜನರನ್ನು ಅಂತಿಮ ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿದೆ.

ರಾಜ್ಯ ಸರ್ಕಾರವು ಎನ್‌ಆರ್‌ಸಿಯ ಅಂತಿಮ ಕರಡನ್ನು ‘ದೋಷಪೂರಿತ’ ಎಂದು ಕರೆದಿದ್ದು, ಇದು ಅಸ್ಸಾಂನ ಹಲವಾರು ಸ್ಥಳೀಯ ಜನರನ್ನೂ ಹೊರಗಿಟ್ಟಿದೆ ಎಂದು ಆರೋಪಿಸಿದೆ. ಹೊರಗಿಡುವಿಕೆಯ ವಿರುದ್ಧದ ಮೇಲ್ಮನವಿಗಳನ್ನು ಆಲಿಸುವ ಕೆಲಸವನ್ನು ವಿದೇಶಿಯರ ನ್ಯಾಯಮಂಡಳಿಗಳಿಗೆ ವಹಿಸಲಾಯಿತು. ಎನ್‌ಆರ್‌ಸಿಯಿಂದ ಬಾಧಿತರಾದವರು ಬಂಧನದಲ್ಲಿ ಇರಬೇಕಾಗುತ್ತದೆ.

ಹೆಚ್ಚಿನ ವ್ಯಕ್ತಿಗಳು ವಿದೇಶಿಯರೆಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಶಿಬಿರಗಳಲ್ಲಿ ಇದ್ದಾರೆ. “ಪ್ರಾಥಮಿಕ ಕಾನೂನು ಪ್ರಾತಿನಿಧ್ಯವನ್ನು ಸಹ ಇವರು ಹೊಂದಿಲ್ಲ. ನ್ಯಾಯಮಂಡಳಿಗಳೂ ಆಲಿಸುತ್ತಿಲ್ಲ” ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಾಂದರ್ ಜುಲೈ 2019 ರಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...