Homeಮುಖಪುಟಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ...

ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

- Advertisement -
- Advertisement -

ಮುಸ್ಲಿಂ ಎನ್ನುವ ಒಂದೇ ಕಾರಣಕ್ಕೆ ಝೊಮಾಟೊ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಕೆಲವು ಹಿಂದೂತ್ವವಾದಿ ಗೂಂಡಾಗಳು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಸಂಬಂಧ ಮಹಾರಾಷ್ಟ್ರ ಪೊಲೀಸರು ನಾಲ್ವರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಾರ್ಚ್ 7ರಂದು ನಾಂದೇಡ್‌ನ ಭಜರಂಗ್ ನಗರದಲ್ಲಿ ಹೋಳಿ ಆಚರಣೆಯ ಸಂದರ್ಭದಲ್ಲಿ ಈ ಘಟನೆ ನಡದಿದೆ. ಕಾನೂನು ವಿದ್ಯಾರ್ಥಿಯಾಗಿರುವ ಅಮ್ರಾನ್ ತಾಂಬೋಲಿ ಎನ್ನುವವರು ಝೊಮಾಟೊದಲ್ಲಿ ಪಾರ್ಟ್‌ಟೈಮ್ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಫುಡ್ ಡೆಲಿವರಿ ಮಾಡಲು ಹೋದಾಗ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು, ಭಾನುವಾರ ಎಫ್ಐಆರ್‌ ದಾಖಲಿಸಲಾಗಿದೆ.

”ಭಜರಂಗ್ ನಗರ ಪ್ರದೇಶದಲ್ಲಿ ಫುಡ್ ಡೆಲಿವರ್ ಮಾಡಿದ ಬಳಿಕ ನಾಲ್ವರು ಧರ್ಮದ ಕಾರಣದಿಂದ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ತಾಂಬೋಲಿ ಹೇಳಿಕೊಂಡಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

”ಅವರು ಇದ್ದಕ್ಕಿದ್ದಂತೆ ಬಂದು ದಾಳಿ ಮಾಡಲು ಪ್ರಾರಂಭಿಸಿದರು. ನನಗೆ ಏನನ್ನೂ ಮಾತನಾಡಲು ಅವಕಾಶವನ್ನೇ ನೀಡಲಿಲ್ಲ. ನಾನು ಮುಸ್ಲಿಂ ಎನ್ನುವ ಕಾರಣಕ್ಕೆ ಮನಬಂದಂತೆ ಹಲ್ಲೆ ಮಾಡಿದರು” ಎಂದು ಅವರು ಹೇಳಿದ್ದಾರೆ. ”ಈ ಘಟನೆಯ ನಂತರ, ನನ್ನ ಜೊಮಾಟೊ ತಂಡದ ನಾಯಕ ನನ್ನನ್ನು ಆಸ್ಪತ್ರೆಗೆ ಕರೆದೊಯ್ದರು ಮತ್ತು ಅದೇ ಸಂಜೆ, ನಾನು ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದೆ” ಎಂದು ಅಮ್ರಾನ್ ತಾಂಬೋಲಿ ತಿಳಿಸಿದ್ದಾರೆ.

ಇದನ್ನೂ ಓದಿ:  ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

ಈ ಘಟನೆಯು ಸಿಸಿಟಿವಿಯಲ್ಲಿ ದಾಖಲಾಗಿದೆ. ಆ ವಿಡಿಯೋದಲ್ಲಿ ತಾಂಬೋಲಿಯ ಗಡ್ಡಕ್ಕೆ ಬಣ್ಣ ಹಚ್ಚಿ ಹಣೆಗೆ ತಿಲಕವನ್ನು ಬಲವಂತವಾಗಿ ಹಾಕುತ್ತಿದ್ದಾರೆ. ಆ ಬಳಿಕೆ ದೊನ್ನೆಯಿಂದ ಹೊಡೆದು ಅವರ ಮೇಲೆ ಚಪ್ಪಲಿಗಳನ್ನು ಎಸೆಯುತ್ತಿರುವುದ್ನು ದೃಶ್ಯಾವಳಿ ತೋರಿಸುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಧ್ಯ ಪೊಲೀಸರು ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 323 ಮತ್ತು 324 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಈ ಘಟನೆಯಲ್ಲಿ ಯಾವುದೇ ಕೋಮುವಾದಿ ಅಂಶ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.

”ನಾಲ್ವರು ಆರೋಪಿಗಳು ಕುಡಿದ ಮತ್ತಿನಲ್ಲಿ ಹಲ್ಲೆ ನಡೆಸಿದ್ದಾರೆ. ಆ ದುಷ್ಕರ್ಮಿಗಳನ್ನು ಈಗ ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬರು ನಮ್ಮ ದಾಖಲೆಗಳಲ್ಲಿ ಈಗಾಗಲೇ ಅಪರಾಧಿಯಾಗಿದ್ದಾರೆ. ಮುಂದೆ ನಾವು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುತ್ತೇವೆ” ಎಂದು ಪೊಲೀಸ್ ಅಧೀಕ್ಷಕ ಶ್ರೀಕೃಷ್ಣ ಕೊಕಾಟೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಅಭಿನಾಶ್ ಕುಮಾರ್ ಪತ್ರಿಕೆಗೆ ಮಾತನಾಡಿದ್ದು, ”ಪೊಲೀಸರು ಇನ್ನೂ ಸಾಕ್ಷಿಗಳಿಂದ ವಿವರವಾದ ಹೇಳಿಕೆಗಳನ್ನು ದಾಖಲಿಸಬೇಕಾಗಿದೆ ಮತ್ತು ಜೊಮಾಟೊ ಉದ್ಯೋಗಿಯ ಪೂರಕ ಹೇಳಿಕೆಗಳನ್ನು ಸಂಗ್ರಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...