Homeಮುಖಪುಟವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

ವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

- Advertisement -
- Advertisement -

ಮಸೀದಿಯ ಬಳಿ ಮದುವೆ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಿದ್ದಕ್ಕಾಗಿ ಶನಿವಾರ (ಮಾರ್ಚ್ 11) ಗುಜರಾತ್‌ನ ವಡೋದರಾ ತಾಲೂಕಿನ ಸಾಮಿಯಾಲ ಗ್ರಾಮದಲ್ಲಿ ಕೋಮು ಘರ್ಷಣೆ ಸಂಭವಿಸಿತ್ತು. ಈ ಘಟನೆಯಲ್ಲಿ ಒಟ್ಟು 37 ಜನರನ್ನು ಬಂಧಿಸಲಾಗಿತ್ತು. ಈಗ ಅವರ ಜಾಮೀನು ಪ್ರಕ್ರಿಯೆಯಲ್ಲಿ ಗ್ರಾಮಸ್ಥರು ಒಬ್ಬರಿಗೊಬ್ಬರು ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ.

ಭಾನುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಾಮಿಯಾಲ ಗ್ರಾಮದ ಎರಡೂ ಸಮುದಾಯದವರೊಂದಿಗೆ ಜತೆ ಶಾಂತಿ ಸಭೆ ಏರ್ಪಡಿಸಿದ್ದರು. ಜಾಮೀನು ಪ್ರಕ್ರಿಯೆಯಲ್ಲಿ ಪರಸ್ಪರ ಜಾಮೀನುದಾರರಾಗಿರಲು ಅಧಿಕಾರಿಗಳು ಮತ್ತು ಪೊಲೀಸರ ಶಿಫಾರಸನ್ನು ಗ್ರಾಮದ ಹಿರಿಯರು ಮತ್ತು ಸಮಾಜದ ಮುಖಂಡರು ಒಪ್ಪಿಕೊಂಡರು.

ಬಂಧಿತರಾಗಿದ್ದ 37ಜನರಿಗೆ (22 ಹಿಂದೂ ಸಮುದಾಯದಿಂದ ಮತ್ತು 15 ಮುಸ್ಲಿಂ) ಇತರ ಸಮುದಾಯದವರು ಪರಸ್ಪರ ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ. ಈ ಬೆಳವಣಿಗೆಯು “ಹಳೆಯ ತಲೆಮಾರಿನ” ನಡುವೆ ಅಸ್ತಿತ್ವದಲ್ಲಿದ್ದ “ಸೋದರತ್ವ”ದ ಮನೋಭಾವವನ್ನು ಮತ್ತೆ ಜಾರಿಗೆ ತಂದಂತಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಚ್.ಚಾವಡಾ, ತಾಲೂಕು ಪೊಲೀಸ್ ಠಾಣಾ ಪ್ರಭಾರ ಉಪನಿರೀಕ್ಷಕ ವಿ.ಜಿ.ಲಂಬಾರಿಯಾ ಹಾಗೂ ಇತರೆ ಪೊಲೀಸ್ ಆಡಳಿತ ಅಧಿಕಾರಿಗಳು, ಗ್ರಾಮದ ಎರಡೂ ಸಮುದಾಯದ ಸದಸ್ಯರನ್ನು ಭೇಟಿ ಮಾಡಿ, ಸಂಪೂರ್ಣ ಸಾಮರಸ್ಯದಿಂದ ಜೀವನ ನಡೆಸಬೇಕು ಎಂದು ಒತ್ತಾಯಿಸಿದರು.

ಹಿಂದು ಸಮುದಾಯದವರು ಶನಿವಾರ (ಮಾ.11) ಮಧ್ಯರಾತ್ರಿ ಡಿಜೆ ಸಂಗೀತದೊಂದಿಗೆ ವಿವಾಹದ ಮೆರವಣಿಗೆಯಲ್ಲಿ ಬಂದು ಮಸೀದಿಯ ಬಳಿ ಪಟಾಕಿ ಸಿಡಿಸಿರುವುದು ಪ್ರಚೋದನೆಗೆ ಕಾರಣವಾಗಿದೆ. ಆ ಬಳಿಕ ಎರಡು ಸಮುದಾಯಗಳ ಗುಂಪುಗಳ ನಡುವೆ ಸಂಘರ್ಷ ಆರಂಭವಾಗಿ, ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿ ಮತ್ತು ಹಲವರು ಹಾನಿಗೊಳಗಾದರು. ಈ ಘಟನೆ ನಡೆದ ಎರಡು ದಿನಗಳ ನಂತರ ಗ್ರಾಮವು ಸಹಜ ಸ್ಥಿತಿಗೆ ಮರಳಿತು ಎಂದು ಪೊಲೀಸರು ತಿಳಿಸಿದ್ದಾರೆ.

Fight over crackers sparks communal riot near Vadodara | Vadodara News -  Times of India

ಪೊಲೀಸರ ಮಧ್ಯಪ್ರವೇಶದ ನಂತರ, ಗ್ರಾಮಸ್ಥರು ಈ ವಾರಾಂತ್ಯದಲ್ಲಿ ಕೋಮು ಸೌಹಾರ್ದತೆಗಾಗಿ ಮತ್ತೊಂದು ಸಭೆ ಕರೆಯಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ಸಬ್-ಇನ್‌ಸ್ಪೆಕ್ಟರ್ ಲಂಬಾರಿಯಾ, ”2017ರಲ್ಲಿ ಎರಡು ಕೋಮಿನ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟ ನಂತರ ಅಹಿತಕರ ಘಟನೆಗಳನ್ನು ತಪ್ಪಿಸಲು ಗ್ರಾಮಸ್ಥರು ಮೆರವಣಿಗೆಗಳು, ಧಾರ್ಮಿಕ ಹಬ್ಬಗಳು ಮತ್ತು ಪೂಜಾ ಸ್ಥಳಗಳ ಬಗ್ಗೆ ನಿಯಮಗಳನ್ನು ರಚಿಸಿದ್ದರು. ಆದರೆ ಕೆಲ ವರ್ಷದಿಂದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಗ್ರಾಮಸ್ಥರು ನಮಗೆ ತಿಳಿಸಿದರು. ಈಗ ಅದೇ ನಿಯಮಗಳನ್ನು ಬಲಪಡಿಸಲು ಅವರು ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ” ಎಂದು ಲಂಬಾರಿಯಾ ಅವರು ತಿಳಿಸಿದರು.

ಸಾಮಿಯಾಲ ಗ್ರಾಮದಲ್ಲಿ ಒಟ್ಟು 6,000 ಜನಸಂಖ್ಯೆ ಇದ್ದು, ಸುಮಾರು 2,000 ಮುಸ್ಲಿಮರಿದ್ದಾರೆ. 12 ಪಂಚಾಯಿತಿ ಸದಸ್ಯರಲ್ಲಿ ಇಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...