Homeಕರ್ನಾಟಕಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

- Advertisement -
- Advertisement -

ಲಂಚ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಲೋಕಾಯುಕ್ತದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

ಇಂದು ಬೆಳಗ್ಗೆ ತುರ್ತು ವಿಚಾರಣೆಗಾಗಿ ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು. ಸಿಜೆಐ ಡಿವೈ ಚಂದ್ರಚೂಡ್ ಶುಕ್ರವಾರ ವಿಷಯವನ್ನು ಪಟ್ಟಿ ಮಾಡಲು ಒಪ್ಪಿದಾಗ, ಸಾಧ್ಯವಾದರೆ ಇಂದೇ ವಿಚಾರಣೆ ನಡೆಸುವಂತೆ ಲೋಕಾಯುಕ್ತ ಪರ ವಕೀಲರು ಕೋರಿದರು. ಆದರೆ, ಸಾಂವಿಧಾನಿಕ ಪೀಠದ ಪ್ರಕರಣಗಳ ಕುರಿತಂತೆ ವಿಚಾರಣೆ ನಡೆಸುತ್ತಿರುವುದರಿಂದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪಿಸಲು ಸಿಜೆಐ ಸೂಚಿಸಿದರು.

ತಕ್ಷಣ ನ್ಯಾಯಮೂರ್ತಿ ಕೌಲ್ ನೇತೃತ್ವದ ಪೀಠಕ್ಕೆ ಧಾವಿಸಿದ ಲೋಕಾಯುಕ್ತ ಪರ ವಕೀಲರು, ತುರ್ತು ವಿಚಾರಣಾ ಪಟ್ಟಿಗೆ ಸೇರಿಸಲು ಮನವಿ ಮಾಡಿದರು. ಆಗ ನ್ಯಾಯಮೂರ್ತಿ ಕೌಲ್ ಅವರು, ಅರ್ಜಿಯ ಶೀಘ್ರ ಇತ್ಯರ್ಥದ ಅಗತ್ಯ ಏನು ಎಂದು ವಕೀಲರನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಲೋಕಾಯುಕ್ತ ಪರ ವಕೀಲರು, ಆರೋಪಿಯು ಹಾಲಿ ಶಾಸಕರಾಗಿದ್ದು, ಪ್ರಭಾವಿ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು. ಆಗ ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೌಲ್, ಸಾಧ್ಯವಾದಷ್ಟು ಬೇಗ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಆದೇಶಿಸಿದರು.

ಮಧ್ಯಾಹ್ನ 2ಗಂಟೆಗೆ ವಿಚಾರಣೆ ನಡೆಸುವಂತೆ ವಕೀಲರು ಮರು ಮನವಿ ಮಾಡಿದಾಗ, ಇದು ಜಾಮೀನು ರದ್ದು ಅರ್ಜಿಯಾಗಿರುವುದರಿಂದ ಬಿಡುವಿನ ಸಮಯದಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಏನಿದು ಪ್ರಕರಣ?

ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ ಮಾಡಾಳ್ ಅವರು ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ ಪ್ರಕ್ರಿಯೆಯಲ್ಲಿ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಮಗನ ಮೂಲಕ ಮಾಡಾಳ್ ವಿರುಪಾಕ್ಷಪ್ಪ ಭ್ರಷ್ಟಾಚಾರ ನಡೆಸುತ್ತಿದ್ದನು ಎನ್ನುವ ಆರೋಪ ಕೇಳಿಬಂದಿದೆ.

ಇದಾದ ಬಳಿಕ ನಡೆದಿದ್ದ ದಾಳಿಯಲ್ಲಿ ಕೆಎಸ್‌ಡಿಎಲ್ ಕಚೇರಿಯಲ್ಲಿ ಸುಮಾರು 2 ಕೋಟಿ ರೂ. ಹಾಗೂ ಪ್ರಶಾಂತ್ ಮನೆಯಿಂದ 6 ಕೋಟಿ ರೂ. ಹೀಗೆ ಒಟ್ಟು 8.23 ​​ಕೋಟಿ ರೂಪಾಯಿ ನಗದು, ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಜಮೀನುಗಳಲ್ಲಿ ಹಣ ಹೂಡಿಕೆ ಮಾಡಿದ್ದ ದಾಖಲೆಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿದ್ದವು.

ಹಾಗಾಗಿ ಅವರ ವಿರುದ್ಧ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು ಮಾರ್ಚ್ 2ರಂದು ಎಫ್‌ಐಆರ್‌ ದಾಖಲಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯಿದೆ-1988ರ ಕಲಂ 7 (ಎ) ಮತ್ತು (ಬಿ), 7 ಎ, 8, 9 ಮತ್ತು 10ರ ಅಡಿಯಲ್ಲಿ ದಾಖಲಿಸಿರುವ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲ ಆರೋಪಿಯಾದರೆ, ಪ್ರಶಾಂತ್ ಮಾಡಾಳ್ ಎರಡನೇ ಆರೋಪಿ. ಪ್ರಶಾಂತ್ ಮಾಡಾಳ್ ಬಂಧನವಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಶಾಸಕ ಕೆ ಮಾಡಾಳ್‌ ವಿರೂಪಾಕ್ಷಪ್ಪಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು​ ಜಾರಿಗೊಳಿಸಿದೆ. 5 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಇದನ್ನು ನೀಡಲಾಗಿದ್ದು, ಆದೇಶ ತಲುಪಿದ 48 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್​ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...